Puneeth Rajkumar: ಪುನೀತ್​ ಆಸ್ಪತ್ರೆಗೆ ಹೊರಟಾಗ ಮನೆಯಲ್ಲಿ ಮೂಡಿತ್ತು ಆತಂಕದ ವಾತಾವರಣ; ಇಲ್ಲಿದೆ ಸಿಸಿಟಿವಿ ದೃಶ್ಯಾವಳಿ

Puneeth Rajkumar House CCTV Footage: ಸಿಸಿಟಿವಿ ದೃಶ್ಯವಾಳಿಗಳಲ್ಲಿ ಪುನೀತ್​ ರಾಜ್​ಕುಮಾರ್​ ಅವರು ಮೊದಲು ಮನೆಯಿಂದ ಹೊರ ಬಂದು ಕಾಯುತ್ತಿರುತ್ತಾರೆ. ಇದಾದ ಬೆನ್ನಲ್ಲೇ ಅವರ ಪತ್ನಿ ಮನೆಯಿಂದ ಹೊರ ಬರುತ್ತಾರೆ.

Puneeth Rajkumar: ಪುನೀತ್​ ಆಸ್ಪತ್ರೆಗೆ ಹೊರಟಾಗ ಮನೆಯಲ್ಲಿ ಮೂಡಿತ್ತು ಆತಂಕದ ವಾತಾವರಣ; ಇಲ್ಲಿದೆ ಸಿಸಿಟಿವಿ ದೃಶ್ಯಾವಳಿ
ಪುನೀತ್​
Follow us
| Updated By: Digi Tech Desk

Updated on:Nov 02, 2021 | 3:15 PM

ಪುನೀತ್​ ರಾಜ್​ಕುಮಾರ್ (Puneeth Rajkumar)​ ಮೃತಪಟ್ಟು ಐದು ದಿನಗಳು ಕಳೆದಿವೆ. ಇಂದು (ನವೆಂಬರ್​ 2) ಅವರ ಸಮಾಧಿಗೆ ಹಾಲುತುಪ್ಪ ಬಿಡುವ ಕಾರ್ಯ ಕೂಡ ನಡೆದಿದೆ. ಅವರನ್ನು ಕಳೆದುಕೊಂಡು ಇಷ್ಟು ದಿನವಾದರೂ ಅಭಿಮಾನಿಗಳ ನೋವು ಕಿಂಚಿತ್ತೂ ಕಡಿಮೆ ಆಗಿಲ್ಲ. ಅವರು ಕಂಡಿದ್ದ ಕನಸು ಅವರ ಜತೆಗೆ ಮಣ್ಣಾಗಿದೆ. ಇದು ಸಾಕಷ್ಟು ನೋವು ತರಿಸಿದೆ. ಪುನೀತ್​ (Puneeth) ಮೃತಪಡುವ ದಿನ ಬೆಳಗ್ಗೆ ಜಿಮ್​ ಮಾಡಿದ್ದರು ಎಂದು ಕೆಲವರು ಹೇಳುತ್ತಾರೆ. ಇನ್ನೂ ಕೆಲವರು ಅವರು ಜಿಮ್​ ಮಾಡಿಲ್ಲ ಎಂದು ಹೇಳುತ್ತಿದ್ದಾರೆ. ಈ ಗೊಂದಲಕ್ಕೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಈ ಮಧ್ಯೆ ಅವರು ಆಸ್ಪತ್ರೆಗೆ ತೆರಳುವುದಕ್ಕೂ ಮೊದಲು ಮನೆಯಿಂದ ಕಾರು ಹತ್ತಿ ಹೊರಡುತ್ತಿರುವ ಸಿಸಿಟಿವಿ ದೃಶ್ಯಾವಳಿಗಳು ಈಗ ಟಿವಿ9ಗೆ ಲಭ್ಯವಾಗಿದೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಪುನೀತ್​ ರಾಜ್​ಕುಮಾರ್ (Puneeth Rajkumar House CCTV Footage)​ ಅವರು ಮೊದಲು ಮನೆಯಿಂದ ಹೊರ ಬಂದು ಕಾಯುತ್ತಿರುತ್ತಾರೆ. ಇದಾದ ಬೆನ್ನಲ್ಲೇ ಅವರ ಪತ್ನಿ ಮನೆಯಿಂದ ಹೊರ ಬರುತ್ತಾರೆ. ಇಬ್ಬರೂ ಕಾರು ಏರಿ ಮನೆಯಿಂದ ಹೊರಡುತ್ತಾರೆ. ಕಾರು ಹೊರಡುತ್ತಿದ್ದಂತೆ ಸೆಕ್ಯುರಿಟಿ ಸಿಬ್ಬಂದಿ ಮನೆಯ ಗೇಟ್​ ತೆರೆಯುತ್ತಾರೆ. ಇದಿಷ್ಟು ಸಿಸಿಟಿವಿ ದೃಶ್ಯಗಳಲ್ಲಿ ಕಂಡು ಬಂದಿದೆ. ಈ ದೃಶ್ಯಗಳಲ್ಲಿ ಎಲ್ಲರೂ ಆತಂಕ ಗೊಂಡಿದ್ದು ಸ್ಪಷ್ಟವಾಗಿ ಕಾಣುತ್ತಿತ್ತು.

ಇತ್ತೀಚೆಗೆ ಟಿವಿ9 ಕನ್ನಡದ ಜತೆ ಮಾತನಾಡಿದ್ದ ಪುನೀತ್​ ಅಂಗರಕ್ಷಕ ಛಲಪತಿ ಅವರು ಇದೇ ಘಟನೆಯನ್ನು ವಿವರಿಸಿದ್ದರು. ‘ಅಕ್ಕ (ಪುನೀತ್​ ಪತ್ನಿ ಅಶ್ವಿನಿ) ಮತ್ತು ಪುನೀತ್​ ಹೊರಹೋಗುತ್ತಿದ್ದೇವೆ ಎಂದರು. ನಾನು ಕಾರು ಹತ್ತಿಸಿ ನಾನೂ ಹತ್ತೋಕೆ ಹೋದೆ. ನೀವು ಇಲ್ಲೇ ಇರಿ ನಾವು ಬರುತ್ತೇವೆ ಎಂದು ಬಾಸ್​ ಹೇಳಿದರು. ಹಾಗಾಗಿ ನಾನು ಮನೆಯಲ್ಲೇ ಇದ್ದೆ. ನಂತರ ಅವರು ಬರಲೇ ಇಲ್ಲ’ ಎಂದು ಕಣ್ಣೀರು ಹಾಕಿದ್ದರು. ಸಿಸಿಟಿವಿ ದೃಶ್ಯಾವಳಿಗಳಿಗೂ ಛಲಪತಿ ಹೇಳಿದ ಮಾತಿಗೂ ತಾಳೆ ಆಗಿದೆ.

ಇನ್ನು, ಪುನೀತ್​ ಆಸ್ಪತ್ರೆಗೆ ಬಂದಾಗ ಸಹಜವಾಗಿದ್ದರು ಎಂದು ವೈದ್ಯರು ತಿಳಿಸಿದ್ದರು. ಸಿಸಿಟಿವಿ ದೃಶ್ಯಗಳಲ್ಲೂ ಅವರು ಸಹಜವಾಗಿದ್ದಿದ್ದು ಕಂಡು ಬಂದಿತ್ತು. ಆದರೆ ಎಲ್ಲರೂ ತರಾತುರಿಯಲ್ಲಿದ್ದರು. ‘ಪುನೀತ್ ಅವರು ತಮ್ಮ ನಿಯಮಿತ ಜಿಮ್ ಸೆಷನ್ ಅನ್ನು ಪೂರ್ಣಗೊಳಿಸಿ, ನಂತರ ಬಾಕ್ಸಿಂಗ್ ಮತ್ತು ಸ್ಟೀಮ್ ಸೆಷನ್​ ಪೂರ್ಣಗೊಳಿಸಿದರು. ಇದಾದ ನಂತರ ಅವರಿಗೆ ತುಂಬಾನೇ ದಣಿವಾದಂತೆ ಭಾಸವಾಗಿತ್ತು. ತೀವ್ರ ಹೃದಯ ಸ್ತಂಭನದಿಂದ ಅವರು ಮೃತಪಟ್ಟಿರಬಹುದು. ಏಕಾಏಕಿ ಈ ರೀತಿ ಸಾವು ಸಂಭವಿಸುವ ಸಾಧ್ಯತೆ ದೈಹಿಕ ಚಟುವಟಿಕೆಯ ಸಮಯದಲ್ಲಿ, ಆಟ ಆಡುವ ಸಂದರ್ಭದಲ್ಲಿ ಅಥವಾ ದೈಹಿಕವಾಗಿ ಕೆಲಸ ಮಾಡುವ ಸಂದರ್ಭದಲ್ಲಿ ಹೆಚ್ಚಿರುತ್ತದೆ’ ಎಂದು ಡಾ. ರಮಣ್ ರಾವ್​ ಹೇಳಿದ್ದರು​.

ಇದನ್ನೂ ಓದಿ: ‘ಪುನೀತ್ ಜಿಮ್​ಗೆ ತೆರಳಿರಲಿಲ್ಲ’; ಮೃತಪಡುವುದಕ್ಕೂ ಮೊದಲು ನಡೆದಿದ್ದೇನು? ಕಣ್ಣೀರಿಡುತ್ತಲೇ ವಿವರಿಸಿದ ಅಪ್ಪು ಅಂಗರಕ್ಷಕ

Published On - 2:36 pm, Tue, 2 November 21

ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು