AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಕೊಪ್ಪಳದ ಸ್ಥಳೀಯ ಕಲಾವಿದರ ಪ್ರದರ್ಶನಕ್ಕೆ ಮನಸೋತ ​ಅಪ್ಪು; ವಿಡಿಯೊ ನೋಡಿ

ಸ್ಯಾಂಡಲ್​ವುಡ್​ನ ಪವರ್​ಸ್ಟಾರ್ ಪುನೀತ್ ರಾಜ್​ಕುಮಾರ್ ಸದ್ಯ ಜಾಲಿ ಮೂಡ್​ನಲ್ಲಿದ್ದಾರೆ. ಕೊಪ್ಪಳದ ರೆಸಾರ್ಟ್ ಒಂದರಲ್ಲಿ ತಂಗಿರುವ ಅವರು, ಅಲ್ಲಿನ ಸ್ಥಳೀಯ ಪ್ರತಿಭೆಗಳೊಂದಿಗೆ ಸಮಯ ಕಳೆದಿದ್ದಾರೆ. ಈ ವಿಡಿಯೊ ಈಗ ಅಭಿಮಾನಿಗಳ ಮನಗೆದ್ದಿದ್ದು, ಅಪ್ಪು ಸರಳ ವ್ಯಕ್ತಿತ್ವಕ್ಕೆ ಮನಸೋತಿದ್ದಾರೆ.

Puneeth Rajkumar: ಕೊಪ್ಪಳದ ಸ್ಥಳೀಯ ಕಲಾವಿದರ ಪ್ರದರ್ಶನಕ್ಕೆ ಮನಸೋತ ​ಅಪ್ಪು; ವಿಡಿಯೊ ನೋಡಿ
ಕಲಾವಿದರೊಂದಿಗೆ ಪುನೀತ್ ರಾಜ್​ಕುಮಾರ್
TV9 Web
| Edited By: |

Updated on:Sep 05, 2021 | 6:24 PM

Share

ಸ್ಯಾಂಡಲ್​ವುಡ್ ನಟ ಪುನೀತ್ ರಾಜ್​ಕುಮಾರ್ ಪ್ರಸ್ತುತ ಕೊಪ್ಪಳ ತಾಲೂಕಿನ ನಾರಾಯಣ ಪೇಟೆ ಬಳಿಯ ಲೀ ವುಡನ್​ ರೆಸಾರ್ಟ್​ನಲ್ಲಿ ತಂಗಿದ್ದಾರೆ. ಈ ವೇಳೆ ಅವರು ಸ್ಥಳೀಯ ಕಲಾವಿದರಿಂದ ತಮಟೆ, ಡೋಲು ಪ್ರದರ್ಶನvನ್ನು ವೀಕ್ಷಿಸಿದ್ದು, ಅವರ ಪ್ರತಿಭೆಗೆ ಬೆನ್ನು ತಟ್ಟಿ ಪ್ರೋತ್ಸಾಹ ನೀಡಿದ್ದಾರೆ. ಕಲಾವಿದರು ಪ್ರದರ್ಶನ ಮಾಡುತ್ತಿರುವ ವೇಳೆ, ತಮ್ಮ ಕ್ಯಾಮೆರಾದಿಂದ ದೃಶ್ಯಗಳನ್ನು ಸೆರೆಹಿಡಿದು ಅಪ್ಪು ಸಂಭ್ರಮಿಸಿದ್ದಾರೆ. ತುಂಗಭದ್ರಾ ನದಿ ದಡದಲ್ಲಿರುವ ಲೀ ವುಡನ್​ ರೆಸಾರ್ಟ್​ನಲ್ಲಿ ಅಪ್ಪು ಅವರನ್ನು ಕಂಡು ಅಭಿಮಾನಿಗಳು ಪುಳಕಿತಗೊಂಡಿದ್ದು, ಚಿತ್ರ ತೆಗೆದುಕೊಂಡು ಸಂಭ್ರಮಿಸಿದ್ದಾರೆ.

ಕಲಾವಿದರ ನುಡಿಸುವಿಕೆಗೆ ಫಿದಾ ಆದ ಪುನೀತ್; ವಿಡಿಯೊ ವರದಿ ಇಲ್ಲಿದೆ:

ಇತ್ತೀಚೆಗಷ್ಟೇ ಸಕ್ರೆಬೈಲಿನಲ್ಲಿ ಡಾಕ್ಯುಮೆಂಟರಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಪುನೀತ್:

ಪುನೀತ್ ರಾಜ್​ಕುಮಾರ್​ ಸರ್ಕಾರದ ಅನೇಕ ಡಾಕ್ಯುಮೆಂಟರಿ ಕಾರ್ಯಗಳಲ್ಲಿ ಸಕ್ರಿಯರಾಗಿ ಕೈಜೋಡಿಸಿದ್ದಾರೆ. ಇತ್ತೀಚೆಗೆ ಅವರು ಆನೆಗೆ ಸಂಬಂಧಿಸಿದ ಸರ್ಕಾರಿ ಡಾಕ್ಯುಮೆಂಟರಿ ಶೂಟಿಂಗ್ ಹಿನ್ನೆಲೆಯಲ್ಲಿ ಸಕ್ರೆಬೈಲ್​ಗೆ ಭೇಟಿ ನೀಡಿದ್ದರು. ಪುನೀತ್​ ರಾಜ್​ಕುಮಾರ್​ ಆಗಮಿಸುತ್ತಿರುವ ವಿಚಾರವನ್ನು ತಿಳಿದಿದ್ದ ಅಭಿಮಾನಿಗಳು ನೂರಾರು ಸಂಖ್ಯೆಯಲ್ಲಿ ನೆರೆದು, ನಟನನ್ನು ನೋಡಿ ಸಂತಸಪಟ್ಟಿದ್ದರು.

ಪುನೀತ್ ಆನೆಗಳನ್ನು ಮುದ್ದಾಡುವ ದೃಶ್ಯ, ಕುಂತಿ ಹಾಗೂ ಧನುಷ್ ಹೆಸರಿನ ಆನೆಗೆ ಆಹಾರ ನೀಡುವ ದೃಶ್ಯಗಳನ್ನು ಸೆರೆಹಿಡಿಯಲಾಗಿತ್ತು. ಪುನೀತ್​ ಅವರನ್ನು ನೋಡಲು ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದರು. ಈ ವೇಳೆ ಅಭಿಮಾನಗಳ ಕೋರಿಕೆಗೆ ಅಪ್ಪು ಮಣಿದು, ಶೂಟಿಂಗ್​​ಗೆ ಬ್ರೇಕ್ ಕೊಟ್ಟು ಫ್ಯಾನ್ಸ್​ಗೆ ದರ್ಶನ ನೀಡಿದ್ದರು. ಆ ಸಮಯದಲ್ಲಿ ಅಭಿಮಾನಿಗಳಿಗೆ ಕೈಮುಗಿದು ಕೃತಜ್ಞತೆ ತೋರಿಸಿದ್ದರು ಅಪ್ಪು.

ಚಿತ್ರಗಳ ವಿಷಯಕ್ಕೆ ಬಂದರೆ ಪುನೀತ್ ಬತ್ತಳಿಕೆಯಲ್ಲಿ ಜೇಮ್ಸ್ ಹಾಗೂ ದ್ವಿತ್ವ ಚಿತ್ರಗಳಿವೆ. ಜೇಮ್ಸ್ ಚಿತ್ರದಲ್ಲಿ ಪ್ರಿಯಾ ಆನಂದ್ ಪುನೀತ್​ಗೆ ನಾಯಕಿಯಾಗಿ ನಟಿಸುತ್ತಿದ್ದು, ಚೇತನ್ ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ‘ದ್ವಿತ್ವ’ ಚಿತ್ರಕ್ಕೆ ಲೂಸಿಯಾ ಪವನ್ ಆಕ್ಷನ್ ಕಟ್ ಹೇಳುತ್ತಿದ್ದು, ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಲಿದೆ. ದಕ್ಷಿಣ ಭಾರತದ ಖ್ಯಾತ ನಟಿ ತ್ರಿಷಾ ಪುನೀತ್ ಜೊತೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದು, ಈ ಎರಡೂ ಚಿತ್ರಗಳ ಮೇಲೆ ಬಹಳಷ್ಟು ನಿರೀಕ್ಷೆಗಳಿವೆ.

ಇದನ್ನೂ ಓದಿ:

ಸೈಲೆಂಟ್​ ಆಗಿ ಎಂಗೇಜ್​ಮೆಂಟ್​ ಮುಗಿಸಿಕೊಂಡ ಬಾಲಿವುಡ್ ಖ್ಯಾತ​ ನಟ; ಸಾಕ್ಷ್ಯ ನೀಡಿದ ಫ್ಯಾನ್ಸ್​

ನಿನ್ನ ಬಳಿ ನನ್ನ ಹೃದಯವಿದೆ ಎಂದ ಕತ್ರಿನಾ ಕೈಫ್; ಫ್ಯಾನ್ಸ್ ಪ್ರತಿಕ್ರಿಯೆ ಹೇಗಿತ್ತು?

(Puneeth Rajkumar in Koppal and enjoyed folk music)

Published On - 6:22 pm, Sun, 5 September 21

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ