AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಕೊಪ್ಪಳದ ಸ್ಥಳೀಯ ಕಲಾವಿದರ ಪ್ರದರ್ಶನಕ್ಕೆ ಮನಸೋತ ​ಅಪ್ಪು; ವಿಡಿಯೊ ನೋಡಿ

ಸ್ಯಾಂಡಲ್​ವುಡ್​ನ ಪವರ್​ಸ್ಟಾರ್ ಪುನೀತ್ ರಾಜ್​ಕುಮಾರ್ ಸದ್ಯ ಜಾಲಿ ಮೂಡ್​ನಲ್ಲಿದ್ದಾರೆ. ಕೊಪ್ಪಳದ ರೆಸಾರ್ಟ್ ಒಂದರಲ್ಲಿ ತಂಗಿರುವ ಅವರು, ಅಲ್ಲಿನ ಸ್ಥಳೀಯ ಪ್ರತಿಭೆಗಳೊಂದಿಗೆ ಸಮಯ ಕಳೆದಿದ್ದಾರೆ. ಈ ವಿಡಿಯೊ ಈಗ ಅಭಿಮಾನಿಗಳ ಮನಗೆದ್ದಿದ್ದು, ಅಪ್ಪು ಸರಳ ವ್ಯಕ್ತಿತ್ವಕ್ಕೆ ಮನಸೋತಿದ್ದಾರೆ.

Puneeth Rajkumar: ಕೊಪ್ಪಳದ ಸ್ಥಳೀಯ ಕಲಾವಿದರ ಪ್ರದರ್ಶನಕ್ಕೆ ಮನಸೋತ ​ಅಪ್ಪು; ವಿಡಿಯೊ ನೋಡಿ
ಕಲಾವಿದರೊಂದಿಗೆ ಪುನೀತ್ ರಾಜ್​ಕುಮಾರ್
TV9 Web
| Edited By: |

Updated on:Sep 05, 2021 | 6:24 PM

Share

ಸ್ಯಾಂಡಲ್​ವುಡ್ ನಟ ಪುನೀತ್ ರಾಜ್​ಕುಮಾರ್ ಪ್ರಸ್ತುತ ಕೊಪ್ಪಳ ತಾಲೂಕಿನ ನಾರಾಯಣ ಪೇಟೆ ಬಳಿಯ ಲೀ ವುಡನ್​ ರೆಸಾರ್ಟ್​ನಲ್ಲಿ ತಂಗಿದ್ದಾರೆ. ಈ ವೇಳೆ ಅವರು ಸ್ಥಳೀಯ ಕಲಾವಿದರಿಂದ ತಮಟೆ, ಡೋಲು ಪ್ರದರ್ಶನvನ್ನು ವೀಕ್ಷಿಸಿದ್ದು, ಅವರ ಪ್ರತಿಭೆಗೆ ಬೆನ್ನು ತಟ್ಟಿ ಪ್ರೋತ್ಸಾಹ ನೀಡಿದ್ದಾರೆ. ಕಲಾವಿದರು ಪ್ರದರ್ಶನ ಮಾಡುತ್ತಿರುವ ವೇಳೆ, ತಮ್ಮ ಕ್ಯಾಮೆರಾದಿಂದ ದೃಶ್ಯಗಳನ್ನು ಸೆರೆಹಿಡಿದು ಅಪ್ಪು ಸಂಭ್ರಮಿಸಿದ್ದಾರೆ. ತುಂಗಭದ್ರಾ ನದಿ ದಡದಲ್ಲಿರುವ ಲೀ ವುಡನ್​ ರೆಸಾರ್ಟ್​ನಲ್ಲಿ ಅಪ್ಪು ಅವರನ್ನು ಕಂಡು ಅಭಿಮಾನಿಗಳು ಪುಳಕಿತಗೊಂಡಿದ್ದು, ಚಿತ್ರ ತೆಗೆದುಕೊಂಡು ಸಂಭ್ರಮಿಸಿದ್ದಾರೆ.

ಕಲಾವಿದರ ನುಡಿಸುವಿಕೆಗೆ ಫಿದಾ ಆದ ಪುನೀತ್; ವಿಡಿಯೊ ವರದಿ ಇಲ್ಲಿದೆ:

ಇತ್ತೀಚೆಗಷ್ಟೇ ಸಕ್ರೆಬೈಲಿನಲ್ಲಿ ಡಾಕ್ಯುಮೆಂಟರಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಪುನೀತ್:

ಪುನೀತ್ ರಾಜ್​ಕುಮಾರ್​ ಸರ್ಕಾರದ ಅನೇಕ ಡಾಕ್ಯುಮೆಂಟರಿ ಕಾರ್ಯಗಳಲ್ಲಿ ಸಕ್ರಿಯರಾಗಿ ಕೈಜೋಡಿಸಿದ್ದಾರೆ. ಇತ್ತೀಚೆಗೆ ಅವರು ಆನೆಗೆ ಸಂಬಂಧಿಸಿದ ಸರ್ಕಾರಿ ಡಾಕ್ಯುಮೆಂಟರಿ ಶೂಟಿಂಗ್ ಹಿನ್ನೆಲೆಯಲ್ಲಿ ಸಕ್ರೆಬೈಲ್​ಗೆ ಭೇಟಿ ನೀಡಿದ್ದರು. ಪುನೀತ್​ ರಾಜ್​ಕುಮಾರ್​ ಆಗಮಿಸುತ್ತಿರುವ ವಿಚಾರವನ್ನು ತಿಳಿದಿದ್ದ ಅಭಿಮಾನಿಗಳು ನೂರಾರು ಸಂಖ್ಯೆಯಲ್ಲಿ ನೆರೆದು, ನಟನನ್ನು ನೋಡಿ ಸಂತಸಪಟ್ಟಿದ್ದರು.

ಪುನೀತ್ ಆನೆಗಳನ್ನು ಮುದ್ದಾಡುವ ದೃಶ್ಯ, ಕುಂತಿ ಹಾಗೂ ಧನುಷ್ ಹೆಸರಿನ ಆನೆಗೆ ಆಹಾರ ನೀಡುವ ದೃಶ್ಯಗಳನ್ನು ಸೆರೆಹಿಡಿಯಲಾಗಿತ್ತು. ಪುನೀತ್​ ಅವರನ್ನು ನೋಡಲು ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದರು. ಈ ವೇಳೆ ಅಭಿಮಾನಗಳ ಕೋರಿಕೆಗೆ ಅಪ್ಪು ಮಣಿದು, ಶೂಟಿಂಗ್​​ಗೆ ಬ್ರೇಕ್ ಕೊಟ್ಟು ಫ್ಯಾನ್ಸ್​ಗೆ ದರ್ಶನ ನೀಡಿದ್ದರು. ಆ ಸಮಯದಲ್ಲಿ ಅಭಿಮಾನಿಗಳಿಗೆ ಕೈಮುಗಿದು ಕೃತಜ್ಞತೆ ತೋರಿಸಿದ್ದರು ಅಪ್ಪು.

ಚಿತ್ರಗಳ ವಿಷಯಕ್ಕೆ ಬಂದರೆ ಪುನೀತ್ ಬತ್ತಳಿಕೆಯಲ್ಲಿ ಜೇಮ್ಸ್ ಹಾಗೂ ದ್ವಿತ್ವ ಚಿತ್ರಗಳಿವೆ. ಜೇಮ್ಸ್ ಚಿತ್ರದಲ್ಲಿ ಪ್ರಿಯಾ ಆನಂದ್ ಪುನೀತ್​ಗೆ ನಾಯಕಿಯಾಗಿ ನಟಿಸುತ್ತಿದ್ದು, ಚೇತನ್ ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ‘ದ್ವಿತ್ವ’ ಚಿತ್ರಕ್ಕೆ ಲೂಸಿಯಾ ಪವನ್ ಆಕ್ಷನ್ ಕಟ್ ಹೇಳುತ್ತಿದ್ದು, ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಲಿದೆ. ದಕ್ಷಿಣ ಭಾರತದ ಖ್ಯಾತ ನಟಿ ತ್ರಿಷಾ ಪುನೀತ್ ಜೊತೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದು, ಈ ಎರಡೂ ಚಿತ್ರಗಳ ಮೇಲೆ ಬಹಳಷ್ಟು ನಿರೀಕ್ಷೆಗಳಿವೆ.

ಇದನ್ನೂ ಓದಿ:

ಸೈಲೆಂಟ್​ ಆಗಿ ಎಂಗೇಜ್​ಮೆಂಟ್​ ಮುಗಿಸಿಕೊಂಡ ಬಾಲಿವುಡ್ ಖ್ಯಾತ​ ನಟ; ಸಾಕ್ಷ್ಯ ನೀಡಿದ ಫ್ಯಾನ್ಸ್​

ನಿನ್ನ ಬಳಿ ನನ್ನ ಹೃದಯವಿದೆ ಎಂದ ಕತ್ರಿನಾ ಕೈಫ್; ಫ್ಯಾನ್ಸ್ ಪ್ರತಿಕ್ರಿಯೆ ಹೇಗಿತ್ತು?

(Puneeth Rajkumar in Koppal and enjoyed folk music)

Published On - 6:22 pm, Sun, 5 September 21

Follow Us
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ