AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾದಲ್ಲಿ ಮಾಡಿದ ಕೆಲಸವನ್ನು ನಿಜ ಜೀವನದಲ್ಲಿಯೂ ಮಾಡಿ ತೋರಿಸಿದ ಪುನೀತ್ ರಾಜ್​ಕುಮಾರ್

ಇತ್ತೀಚೆಗೆ ಸ್ಯಾಂಡಲ್​ವುಡ್​​ನಲ್ಲಿ ಡ್ರಗ್ಸ್ ಜಾಲ ಪತ್ತೆ ಆಗಿತ್ತು. ಸಾಕಷ್ಟು ಸೆಲೆಬ್ರಿಟಿಗಳ ಹೆಸರು ಇದರಲ್ಲಿ ಕೇಳಿ ಬಂದಿತ್ತು. ಈ ಬೆಳವಣಿಗೆ ನಂತರದಲ್ಲಿ ಬೆಂಗಳೂರು ಪೊಲೀಸರು ಮಾದಕ ದ್ರವ್ಯ ವಸ್ತುಗಳನ್ನು ಮಟ್ಟಹಾಕಬೇಕು ಎಂದು ಸಾಕಷ್ಟು ಪ್ರಯತ್ನಿಸುತ್ತಿದ್ದಾರೆ. ಈಗ ಇದಕ್ಕೆ ಪುನೀತ್ ಕೂಡ ಧ್ವನಿಗೂಡಿಸಿದ್ದಾರೆ.

ಸಿನಿಮಾದಲ್ಲಿ ಮಾಡಿದ ಕೆಲಸವನ್ನು ನಿಜ ಜೀವನದಲ್ಲಿಯೂ ಮಾಡಿ ತೋರಿಸಿದ ಪುನೀತ್ ರಾಜ್​ಕುಮಾರ್
ಪುನೀತ್​ ರಾಜ್​ಕುಮಾರ್​
ರಾಜೇಶ್ ದುಗ್ಗುಮನೆ
|

Updated on: Jun 26, 2021 | 7:33 PM

Share

ಪುನೀತ್ ರಾಜ್​ಕುಮಾರ್ ನಟನೆಯ ‘ಯವರತ್ನ’ ಸಿನಿಮಾದಲ್ಲಿ ಡ್ರಗ್ ಮಟ್ಟ ಹಾಕಬೇಕು ಎನ್ನುವ ಸಂದೇಶವಿದೆ. ಶಿಕ್ಷಕ ವೃತ್ತಿ ಮಾಡುತ್ತಲೇ ಪುನೀತ್ ಡ್ರಗ್ಸ್ ಜಾಲವನ್ನು ನಾಶ ಮಾಡುವ ಕೆಲಸ ಮಾಡುತ್ತಾರೆ. ಈಗ ಅವರು ನಿಜ ಜೀವನದಲ್ಲೂ ಈ ಕಾರ್ಯ ಮಾಡುತ್ತಿದ್ದಾರೆ. ಡ್ರಗ್ಸ್ ವಿರುದ್ಧದ ಹೋರಾಟದಲ್ಲಿ ಪುನೀತ್ ರಾಜ್​ಕುಮಾರ್ ಬೆಂಗಳೂರು ನಗರ ಪೊಲೀಸರ ಜತೆ ಕೈ ಜೋಡಿಸಿದ್ದಾರೆ.

ಇತ್ತೀಚೆಗೆ ಸ್ಯಾಂಡಲ್​ವುಡ್​​ನಲ್ಲಿ ಡ್ರಗ್ಸ್ ಜಾಲ ಪತ್ತೆ ಆಗಿತ್ತು. ಸಾಕಷ್ಟು ಸೆಲೆಬ್ರಿಟಿಗಳ ಹೆಸರು ಇದರಲ್ಲಿ ಕೇಳಿ ಬಂದಿತ್ತು. ಈ ಬೆಳವಣಿಗೆ ನಂತರದಲ್ಲಿ ಬೆಂಗಳೂರು ಪೊಲೀಸರು ಮಾದಕ ದ್ರವ್ಯ ವಸ್ತುಗಳನ್ನು ಮಟ್ಟಹಾಕಬೇಕು ಎಂದು ಸಾಕಷ್ಟು ಪ್ರಯತ್ನಿಸುತ್ತಿದ್ದಾರೆ. ಈಗ ಇದಕ್ಕೆ ಪುನೀತ್ ಕೂಡ ಧ್ವನಿಗೂಡಿಸಿದ್ದಾರೆ.

ಬೆಂಗಳೂರು ಸಿಟಿ ಪೊಲೀಸ್ ಈ ಬಗ್ಗೆ ವಿಡಿಯೋ ಹಂಚಿಕೊಂಡಿದೆ. ಡ್ರಗ್ಸ್ ಇದು ನಮ್ಮ ಸಮಾಜಕ್ಕೆ ದೊಡ್ಡ ಕಂಟಕ. ಇದಕ್ಕೆ ಯಾರೂ ಬೇಕಿದ್ದರೂ ಬಲಿ ಆಗಬಹುದು. ಇದಕ್ಕೆ ಯಾರೂ ಬಲಿ ಆಗದಂತೆ ನೋಡಿಕೊಳ್ಳಲು ಪೊಲೀಸರ ಜತೆ ಕೈ ಜೋಡಿಸಿ ಇದರ ವಿರುದ್ಧ ನಾವೆಲ್ಲರೂ ಹೋರಾಡಬೇಕು. ಡ್ರಗ್ಸ್ ತೆಗೆದುಕೊಳ್ಳಬೇಡಿ. ಜೀವ ಬಹುಮುಖ್ಯ ಎಂದಿದ್ದಾರೆ ಪುನೀತ್​.

ಶಿಕ್ಷಣ ಹಾಗೂ ಡ್ರಗ್ಸ್ ಬಗ್ಗೆ ಜಾಗೃತಿ ಮೂಡಿಸುವ ‘ಯುವರತ್ನ’ ಸಿನಿಮಾ ಏಪ್ರಿಲ್ 1ರಂದು ತೆರೆಗೆ ಬಂದಿತ್ತು. ಆಗ ಕೊವಿಡ್ ಪ್ರಕರಣ ಹೆಚ್ಚಿತ್ತು. ಚಿತ್ರಮಂದಿರಗಳಲ್ಲಿ ಶೇ.50 ಭರ್ತಿಗೆ ಮಾತ್ರ ಸರ್ಕಾರ ಅವಕಾಶ ನೀಡಿತ್ತು. ಹೀಗಾಗಿ, ಸಿನಿಮಾ ಒಂದೇ ವಾರಕ್ಕೆ ಒಟಿಟಿಯಲ್ಲಿ ರಿಲೀಸ್ ಆಯಿತು. ಈ ಮೂಲಕ ಚಿತ್ರ ಹೆಚ್ಚು ಜನರನ್ನು ತಲುಪಿತು. ಸದ್ಯ, ಪುನೀತ್ ರಾಜ್​ಕುಮಾರ್ ‘ಜೇಮ್ಸ್’ ಚಿತ್ರದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಕೊವಿಡ್ ಲಾಕ್ಡೌನ್ ಇರುವ ಕಾರಣಕ್ಕೆ ಚಿತ್ರದ ಕೆಲಸಗಳು ನಿಂತಿವೆ.

ಇದನ್ನೂ ಓದಿ: ಕೊವಿಡ್​ ಬಗ್ಗೆ ಪುನೀತ್​ ರಾಜ್​ಕುಮಾರ್​ ಜಾಗೃತಿ; ಅಭಿಮಾನಿಗಳಿಗೆ ಕೊಟ್ರು ಒಂದಷ್ಟು ಟಿಪ್ಸ್​

 ವಿಶೇಷ ಹಾಡಿನ ಮೂಲಕ ಅಪ್ಪಾಜಿಯನ್ನು ನೆನಪಿಸಿಕೊಂಡ ‘ಭಾಗ್ಯವಂತ’ ಪುನೀತ್​ ರಾಜ್​ಕುಮಾರ್

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್