AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಯುವ ಕೆಲವೇ ಗಂಟೆಗಳ ಮುನ್ನ ಪುನೀತ್​ ರಾಜ್​ಕುಮಾರ್​ ಮಾತನಾಡಿದ್ದೇನು? ಆಡಿಯೋ ಕ್ಲಿಪ್ ವೈರಲ್​

ಪುನೀತ್ ಮೃತಪಟ್ಟ ದಿನ ಶಿವರಾಜ್​ಕುಮಾರ್​ ನಟನೆಯ ‘ಭಜರಂಗಿ 2’ ಸಿನಿಮಾ ರಿಲೀಸ್​ ಆಗಿತ್ತು.ಈ ಸಿನಿಮಾ ಬಗ್ಗೆ ಪುನೀತ್​ ಕೂಡ ಸಾಕಷ್ಟು ಭರವಸೆ ಇಟ್ಟುಕೊಂಡಿದ್ದರು.

ಸಾಯುವ ಕೆಲವೇ ಗಂಟೆಗಳ ಮುನ್ನ ಪುನೀತ್​ ರಾಜ್​ಕುಮಾರ್​ ಮಾತನಾಡಿದ್ದೇನು? ಆಡಿಯೋ ಕ್ಲಿಪ್ ವೈರಲ್​
ಮಂಜುನಾಥ್​ ಮತ್ತು ಪುನೀತ್​
TV9 Web
| Edited By: |

Updated on: Oct 30, 2021 | 5:39 PM

Share

ಪುನೀತ್​ ರಾಜ್​ಕುಮಾರ್​ ಅವರು ಇನ್ನಿಲ್ಲ ಎಂಬ ವಿಚಾರವನ್ನು ಯಾರೆಂದರೆ ಯಾರ ಬಳಿಯೂ ಒಪ್ಪಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಕನ್ನಡ ನಾಡಿನ ಬಗ್ಗೆ, ಕನ್ನಡ ಜನತೆ ಬಗ್ಗೆ ಅವರು ಇಟ್ಟುಕೊಂಡಿದ್ದ ಪ್ರೀತಿಯನ್ನು ಯಾರು ಕೂಡ ಮರೆಯೋಕೆ ಸಾಧ್ಯವಿಲ್ಲ. ಪುನೀತ್​ ಅವರು ಏಕಾಏಕಿ ಕೋಟ್ಯಂತರ ಅಭಿಮಾನಿಗಳನ್ನು ತೊರೆದು ಹೋಗಿದ್ದಾರೆ. ಅವರ ಅಂತಿಮ ದರ್ಶನ ಪಡೆಯೋಕೆ ಕೋಟ್ಯಂತರ ಅಭಿಮಾನಿಗಳು ಆಗಮಿಸಿದ್ದಾರೆ. ಈ ಮಧ್ಯೆ ಸಾಯುವುದಕ್ಕೂ ಮೊದಲು ಅವರು ದೂರವಾಣಿ ಮೂಲಕ  ಮಾತನಾಡಿದ್ದ ಆಡಿಯೋ ಕ್ಲಿಪ್​ ಒಂದು ವೈರಲ್​ ಆಗಿದೆ. ಈ ಆಡಿಯೋ ಕ್ಲಿಪ್​ನಲ್ಲಿ ಸಾಕಷ್ಟು ವಿಚಾರಗಳಿವೆ.

ಪುನೀತ್ ಮೃತಪಟ್ಟ ದಿನ ಶಿವರಾಜ್​ಕುಮಾರ್​ ನಟನೆಯ ‘ಭಜರಂಗಿ 2’ ಸಿನಿಮಾ ರಿಲೀಸ್​ ಆಗಿತ್ತು.ಈ ಸಿನಿಮಾ ಬಗ್ಗೆ ಪುನೀತ್​ ಕೂಡ ಸಾಕಷ್ಟು ಭರವಸೆ ಇಟ್ಟುಕೊಂಡಿದ್ದರು. ಈ ಕಾರಣಕ್ಕೆ ಅವರು, ಈ ಚಿತ್ರದ ಪ್ರೀ ರಿಲೀಸ್ ಇವೆಂಟ್​ಗೆ ತೆರಳಿ ಶುಭ ಕೋರಿದ್ದರು. ಸಾಯುವ ಕೆಲವೇ ಗಂಟೆಗಳ ಮೊದಲು ಸಿನಿಮಾ ವಿತರಕ ಮಂಜುನಾಥ್​​ಗೆ ಕರೆ ಮಾಡಿ ಮಾತನಾಡಿದ್ದರು ಅಪ್ಪು. ಈ ವೇಳೆ ಸಿನಿಮಾ ಹೇಗಿತ್ತು ಎಂದು ಮಂಜುನಾಥ್​ ಬಳಿ ಅವರು ಪ್ರಶ್ನೆ ಮಾಡಿದ್ದರು. ಅವರ ಸಂಭಾಷಣೆ ಹೀಗಿದೆ.

ಮಂಜುನಾಥ್​: ಬಾಸ್​, ಗುಡ್​ ಮಾರ್ನಿಂಗ್​. ಪುನೀತ್​: ಗುಡ್​ ಮಾರ್ನಿಂಗ್​, ಸಿನಿಮಾ ಹೇಗಿದೆ? ಮಂಜುನಾಥ್: ಫಸ್ಟ್​ ಹಾಫ್​ ನಿಧಾನ ಎನಿಸಿತು. ಸಿಜಿ ಹಾಗೂ ದೃಶ್ಯಗಳು ಅದ್ದೂರಿಯಾಗಿ ಮೂಡಿ ಬಂದಿವೆ. ಸಿನಿಮಾ ಚೆನ್ನಾಗಿದೆ. ಪುನೀತ್​: ಶಂಕರ್​ನಾಗ್​ ಅಲ್ಲಿ ಯಾವುದು ಹಾಕಿದ್ದೀರಿ? ಮಂಜುನಾಥ್​: ‘ಭಜರಂಗಿ 2’ ಸಿನಿಮಾನೇ ಹಾಕಿದ್ದೇವೆ. ಮೂರು ಶೋ ಇದೆ. ಪುನೀತ್​: ಗುಡ್, ನವೆಂಬರ್​ 1ನೇ ತಾರೀಕಿನ ನಂತರ ಟೀಸರ್​ ಕಳುಹಿಸಿ ಕೊಡುತ್ತೇನೆ. ಅದನ್ನು ಚಿತ್ರಮಂದಿರದಲ್ಲಿ ಪ್ಲೇ ಮಾಡಿ. ಮಂಜುನಾಥ್​: ಮೊನ್ನೆ ತೋರಿಸಿದೀರಲ್ಲ. ಖಂಡಿತವಾಗಿಯೂ ಪ್ಲೇ ಮಾಡ್ತೀವಿ. ಕಳುಹಿಸಿಕೊಡಿ. ಪುನೀತ್​: ಥ್ಯಾಂಕ್​ಯೂ

ಇದನ್ನೂ ಓದಿ: ‘ಪುನೀತ್ ಜಿಮ್​ಗೆ ತೆರಳಿರಲಿಲ್ಲ’; ಮೃತಪಡುವುದಕ್ಕೂ ಮೊದಲು ನಡೆದಿದ್ದೇನು? ಕಣ್ಣೀರಿಡುತ್ತಲೇ ವಿವರಿಸಿದ ಅಪ್ಪು ಅಂಗರಕ್ಷಕ

‘ಆ ದೃಶ್ಯ ಇನ್ನೂ ನನ್ನನ್ನು ಕಾಡುತ್ತಿದೆ’; ಪುನೀತ್​ ರಾಜ್​ಕುಮಾರ್​ಗೆ ಸುದೀಪ್​ ಭಾವುಕ ನುಡಿ ನಮನ

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!