AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ‘ದೇವರು ಇವರೆಲ್ಲರಿಗೂ ಒಳ್ಳೆಯದು ಮಾಡಲಿ’; ಇದು ವೇದಿಕೆ ಮೇಲೆ ಪುನೀತ್​ ಕೊನೆಯ ಮಾತು

Puneeth Rajkumar Last Speech: ಶುಕ್ರವಾರ ಬೆಳಗ್ಗೆ ಜಿಮ್​ನಲ್ಲಿ ವರ್ಕೌಟ್ ಮಾಡುವಾಗ ಪುನೀತ್ ರಾಜ್​​ಕುಮಾರ್ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಯಿತು. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿತ್ತು.

Puneeth Rajkumar: ‘ದೇವರು ಇವರೆಲ್ಲರಿಗೂ ಒಳ್ಳೆಯದು ಮಾಡಲಿ’; ಇದು ವೇದಿಕೆ ಮೇಲೆ ಪುನೀತ್​ ಕೊನೆಯ ಮಾತು
ಶಿವರಾಜ್​ಕುಮಾರ್​, ಯಶ್​, ಪುನೀತ್​
TV9 Web
| Edited By: |

Updated on:Oct 29, 2021 | 3:08 PM

Share

ಪುನೀತ್​ ರಾಜ್​ಕುಮಾರ್​ ಕೇವಲ 46ನೇ ವಯಸ್ಸಿಗೆ ಮೃತಪಟ್ಟಿದ್ದಾರೆ. ಇದು ಇಡೀ ಕರ್ನಾಟಕದ ಜನತೆಗೆ ದೊಡ್ಡ ಶಾಕ್​ ಆಗಿದೆ. ಅವರ ಅಭಿಮಾನಿಗಳು ಈ ಸುದ್ದಿಯನ್ನು ನಂಬೋಕೆ ರೆಡಿ ಇಲ್ಲ. ಈ ಮಧ್ಯೆ ಅವರ ಕೊನೆಯ ಮಾತುಗಳು ಈಗ ವೈರಲ್ ​ಆಗುತ್ತಿದೆ.

ಶುಕ್ರವಾರ ಬೆಳಗ್ಗೆ ಜಿಮ್​ನಲ್ಲಿ ವರ್ಕೌಟ್ ಮಾಡುವಾಗ ಪುನೀತ್ ರಾಜ್​​ಕುಮಾರ್ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಯಿತು. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿತ್ತು. ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಅವರು ಆಸ್ಪತ್ರೆಯಿಂದ ಹೊರಬರಲೆ ಇಲ್ಲ.

ಇತ್ತೀಚೆಗೆ ‘ಭಜರಂಗಿ 2’ ಪ್ರೀರಿಲೀಸ್​ ಇವೆಂಟ್​ ನಡೆಸಲಾಗಿತ್ತು. ಈ ವೇಳೆ ಪುನೀತ್​ ಮಾತನಾಡಿದ್ದರು. ‘ತುಂಬಾ ಹೆಮ್ಮೆ ಪಡೋ ವಿಚಾರ ಏನೆಂದರೆ ಲಾಕ್​ಡೌನ್​ ನಂತರ ಸಿನಿಮಾಗಳು ರಿಲೀಸ್​ ಆಗುತ್ತಿವೆ. ಅದೇ ರೀತಿ ಇವತ್ತಿನ ಭಜರಂಗಿ 2 ಪ್ರೀ ರಿಲೀಸ್​ ಇವೆಂಟ್​ ಕಾರ್ಯಕ್ರಮದಲ್ಲಿದ್ದೇವೆ. ಅಕ್ಟೋಬರ್​ 29ರಂದು ಸಿನಿಮಾ ತೆರೆಗೆ ಬರುತ್ತಿದೆ. 2019ರಲ್ಲೇ ಸಿನಿಮಾ ಶುರುವಾಗಿತ್ತು. ಆದರೆ, ಕೊವಿಡ್ ಕಾರಣದಿಂದ ಮುಂದೂಡಲಾಗಿತ್ತು. ನಾನು ಸಿನಿಮಾದ ದೃಶ್ಯಗಳನ್ನು ನೋಡಿದ್ದೇನೆ. ಜಯಣ್ಣ ಹಾಗೂ ಭೋಗೇಂದ್ರ ಅವರು ಒಂದೊಳ್ಳೆಯ ಸಿನಿಮಾ ಕೊಡಲಿ. ದೇವರು ಇವರೆಲ್ಲರಿಗೂ ಒಳ್ಳೆದು ಮಾಡಲಿ. ಸಿನಿಮಾ ದೊಡ್ಡ ಸಕ್ಸಸ್​ ಕಾಣಲಿ’ ಎಂದಿದ್ದರು ಪುನೀತ್​.

(ಪುನೀತ್​ ಮಾತು, 2:19 ಗಂಟೆಯಿಂದ ಪ್ರಾರಂಭ)

ವೈದ್ಯರು ಏನಂದಿದ್ರು?

‘ಇವತ್ತು ಬೆಳಗ್ಗೆ 11:30ಕ್ಕೆ ಚೆಸ್ಟ್​ ಪೆನ್​ ಆಗಿ ಇಲ್ಲಿ ಬಂದಿದ್ದಾರೆ. ಬರುವಾಗ ಸ್ವಲ್ಪ ಸೀರಿಯಸ್​ ಆಗಿತ್ತು. ಗಂಭೀರ ಹೃದಯಾಘಾತವಾಗಿದೆ. ಇನ್ನೂ, ಆರೋಗ್ಯ ಗಂಭೀರವಾಗಿದೆ. ಏನನ್ನೂ ಹೇಳೋಕೆ ಆಗಲ್ಲ. ನಮ್ಮ ಪ್ರಯತ್ನ ನಾವು ಮಾಡುತ್ತಿದ್ದೇವೆ’ ಎಂದು ವೈದ್ಯರು ತಿಳಿಸಿದ್ದರು.

ಇದನ್ನೂ ಓದಿ: Puneeth Rajkumar: ಪುನೀತ್​ ರಾಜ್​ಕುಮಾರ್​ ಹೃದಯಾಘಾತದಿಂದ ನಿಧನ; ಕರ್ನಾಟಕದ ಪಾಲಿಗೆ ಕರಾಳ ಶುಕ್ರವಾರ

Published On - 2:48 pm, Fri, 29 October 21

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್