Puneeth Rajkumar: ‘ದೇವರು ಇವರೆಲ್ಲರಿಗೂ ಒಳ್ಳೆಯದು ಮಾಡಲಿ’; ಇದು ವೇದಿಕೆ ಮೇಲೆ ಪುನೀತ್​ ಕೊನೆಯ ಮಾತು

Puneeth Rajkumar Last Speech: ಶುಕ್ರವಾರ ಬೆಳಗ್ಗೆ ಜಿಮ್​ನಲ್ಲಿ ವರ್ಕೌಟ್ ಮಾಡುವಾಗ ಪುನೀತ್ ರಾಜ್​​ಕುಮಾರ್ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಯಿತು. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿತ್ತು.

Puneeth Rajkumar: ‘ದೇವರು ಇವರೆಲ್ಲರಿಗೂ ಒಳ್ಳೆಯದು ಮಾಡಲಿ’; ಇದು ವೇದಿಕೆ ಮೇಲೆ ಪುನೀತ್​ ಕೊನೆಯ ಮಾತು
ಶಿವರಾಜ್​ಕುಮಾರ್​, ಯಶ್​, ಪುನೀತ್​
Follow us
| Updated By: ರಾಜೇಶ್ ದುಗ್ಗುಮನೆ

Updated on:Oct 29, 2021 | 3:08 PM

ಪುನೀತ್​ ರಾಜ್​ಕುಮಾರ್​ ಕೇವಲ 46ನೇ ವಯಸ್ಸಿಗೆ ಮೃತಪಟ್ಟಿದ್ದಾರೆ. ಇದು ಇಡೀ ಕರ್ನಾಟಕದ ಜನತೆಗೆ ದೊಡ್ಡ ಶಾಕ್​ ಆಗಿದೆ. ಅವರ ಅಭಿಮಾನಿಗಳು ಈ ಸುದ್ದಿಯನ್ನು ನಂಬೋಕೆ ರೆಡಿ ಇಲ್ಲ. ಈ ಮಧ್ಯೆ ಅವರ ಕೊನೆಯ ಮಾತುಗಳು ಈಗ ವೈರಲ್ ​ಆಗುತ್ತಿದೆ.

ಶುಕ್ರವಾರ ಬೆಳಗ್ಗೆ ಜಿಮ್​ನಲ್ಲಿ ವರ್ಕೌಟ್ ಮಾಡುವಾಗ ಪುನೀತ್ ರಾಜ್​​ಕುಮಾರ್ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಯಿತು. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿತ್ತು. ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಅವರು ಆಸ್ಪತ್ರೆಯಿಂದ ಹೊರಬರಲೆ ಇಲ್ಲ.

ಇತ್ತೀಚೆಗೆ ‘ಭಜರಂಗಿ 2’ ಪ್ರೀರಿಲೀಸ್​ ಇವೆಂಟ್​ ನಡೆಸಲಾಗಿತ್ತು. ಈ ವೇಳೆ ಪುನೀತ್​ ಮಾತನಾಡಿದ್ದರು. ‘ತುಂಬಾ ಹೆಮ್ಮೆ ಪಡೋ ವಿಚಾರ ಏನೆಂದರೆ ಲಾಕ್​ಡೌನ್​ ನಂತರ ಸಿನಿಮಾಗಳು ರಿಲೀಸ್​ ಆಗುತ್ತಿವೆ. ಅದೇ ರೀತಿ ಇವತ್ತಿನ ಭಜರಂಗಿ 2 ಪ್ರೀ ರಿಲೀಸ್​ ಇವೆಂಟ್​ ಕಾರ್ಯಕ್ರಮದಲ್ಲಿದ್ದೇವೆ. ಅಕ್ಟೋಬರ್​ 29ರಂದು ಸಿನಿಮಾ ತೆರೆಗೆ ಬರುತ್ತಿದೆ. 2019ರಲ್ಲೇ ಸಿನಿಮಾ ಶುರುವಾಗಿತ್ತು. ಆದರೆ, ಕೊವಿಡ್ ಕಾರಣದಿಂದ ಮುಂದೂಡಲಾಗಿತ್ತು. ನಾನು ಸಿನಿಮಾದ ದೃಶ್ಯಗಳನ್ನು ನೋಡಿದ್ದೇನೆ. ಜಯಣ್ಣ ಹಾಗೂ ಭೋಗೇಂದ್ರ ಅವರು ಒಂದೊಳ್ಳೆಯ ಸಿನಿಮಾ ಕೊಡಲಿ. ದೇವರು ಇವರೆಲ್ಲರಿಗೂ ಒಳ್ಳೆದು ಮಾಡಲಿ. ಸಿನಿಮಾ ದೊಡ್ಡ ಸಕ್ಸಸ್​ ಕಾಣಲಿ’ ಎಂದಿದ್ದರು ಪುನೀತ್​.

(ಪುನೀತ್​ ಮಾತು, 2:19 ಗಂಟೆಯಿಂದ ಪ್ರಾರಂಭ)

ವೈದ್ಯರು ಏನಂದಿದ್ರು?

‘ಇವತ್ತು ಬೆಳಗ್ಗೆ 11:30ಕ್ಕೆ ಚೆಸ್ಟ್​ ಪೆನ್​ ಆಗಿ ಇಲ್ಲಿ ಬಂದಿದ್ದಾರೆ. ಬರುವಾಗ ಸ್ವಲ್ಪ ಸೀರಿಯಸ್​ ಆಗಿತ್ತು. ಗಂಭೀರ ಹೃದಯಾಘಾತವಾಗಿದೆ. ಇನ್ನೂ, ಆರೋಗ್ಯ ಗಂಭೀರವಾಗಿದೆ. ಏನನ್ನೂ ಹೇಳೋಕೆ ಆಗಲ್ಲ. ನಮ್ಮ ಪ್ರಯತ್ನ ನಾವು ಮಾಡುತ್ತಿದ್ದೇವೆ’ ಎಂದು ವೈದ್ಯರು ತಿಳಿಸಿದ್ದರು.

ಇದನ್ನೂ ಓದಿ: Puneeth Rajkumar: ಪುನೀತ್​ ರಾಜ್​ಕುಮಾರ್​ ಹೃದಯಾಘಾತದಿಂದ ನಿಧನ; ಕರ್ನಾಟಕದ ಪಾಲಿಗೆ ಕರಾಳ ಶುಕ್ರವಾರ

Published On - 2:48 pm, Fri, 29 October 21

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ