AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ‘ದೇವರು ಇವರೆಲ್ಲರಿಗೂ ಒಳ್ಳೆಯದು ಮಾಡಲಿ’; ಇದು ವೇದಿಕೆ ಮೇಲೆ ಪುನೀತ್​ ಕೊನೆಯ ಮಾತು

Puneeth Rajkumar Last Speech: ಶುಕ್ರವಾರ ಬೆಳಗ್ಗೆ ಜಿಮ್​ನಲ್ಲಿ ವರ್ಕೌಟ್ ಮಾಡುವಾಗ ಪುನೀತ್ ರಾಜ್​​ಕುಮಾರ್ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಯಿತು. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿತ್ತು.

Puneeth Rajkumar: ‘ದೇವರು ಇವರೆಲ್ಲರಿಗೂ ಒಳ್ಳೆಯದು ಮಾಡಲಿ’; ಇದು ವೇದಿಕೆ ಮೇಲೆ ಪುನೀತ್​ ಕೊನೆಯ ಮಾತು
ಶಿವರಾಜ್​ಕುಮಾರ್​, ಯಶ್​, ಪುನೀತ್​
TV9 Web
| Edited By: |

Updated on:Oct 29, 2021 | 3:08 PM

Share

ಪುನೀತ್​ ರಾಜ್​ಕುಮಾರ್​ ಕೇವಲ 46ನೇ ವಯಸ್ಸಿಗೆ ಮೃತಪಟ್ಟಿದ್ದಾರೆ. ಇದು ಇಡೀ ಕರ್ನಾಟಕದ ಜನತೆಗೆ ದೊಡ್ಡ ಶಾಕ್​ ಆಗಿದೆ. ಅವರ ಅಭಿಮಾನಿಗಳು ಈ ಸುದ್ದಿಯನ್ನು ನಂಬೋಕೆ ರೆಡಿ ಇಲ್ಲ. ಈ ಮಧ್ಯೆ ಅವರ ಕೊನೆಯ ಮಾತುಗಳು ಈಗ ವೈರಲ್ ​ಆಗುತ್ತಿದೆ.

ಶುಕ್ರವಾರ ಬೆಳಗ್ಗೆ ಜಿಮ್​ನಲ್ಲಿ ವರ್ಕೌಟ್ ಮಾಡುವಾಗ ಪುನೀತ್ ರಾಜ್​​ಕುಮಾರ್ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಯಿತು. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿತ್ತು. ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಅವರು ಆಸ್ಪತ್ರೆಯಿಂದ ಹೊರಬರಲೆ ಇಲ್ಲ.

ಇತ್ತೀಚೆಗೆ ‘ಭಜರಂಗಿ 2’ ಪ್ರೀರಿಲೀಸ್​ ಇವೆಂಟ್​ ನಡೆಸಲಾಗಿತ್ತು. ಈ ವೇಳೆ ಪುನೀತ್​ ಮಾತನಾಡಿದ್ದರು. ‘ತುಂಬಾ ಹೆಮ್ಮೆ ಪಡೋ ವಿಚಾರ ಏನೆಂದರೆ ಲಾಕ್​ಡೌನ್​ ನಂತರ ಸಿನಿಮಾಗಳು ರಿಲೀಸ್​ ಆಗುತ್ತಿವೆ. ಅದೇ ರೀತಿ ಇವತ್ತಿನ ಭಜರಂಗಿ 2 ಪ್ರೀ ರಿಲೀಸ್​ ಇವೆಂಟ್​ ಕಾರ್ಯಕ್ರಮದಲ್ಲಿದ್ದೇವೆ. ಅಕ್ಟೋಬರ್​ 29ರಂದು ಸಿನಿಮಾ ತೆರೆಗೆ ಬರುತ್ತಿದೆ. 2019ರಲ್ಲೇ ಸಿನಿಮಾ ಶುರುವಾಗಿತ್ತು. ಆದರೆ, ಕೊವಿಡ್ ಕಾರಣದಿಂದ ಮುಂದೂಡಲಾಗಿತ್ತು. ನಾನು ಸಿನಿಮಾದ ದೃಶ್ಯಗಳನ್ನು ನೋಡಿದ್ದೇನೆ. ಜಯಣ್ಣ ಹಾಗೂ ಭೋಗೇಂದ್ರ ಅವರು ಒಂದೊಳ್ಳೆಯ ಸಿನಿಮಾ ಕೊಡಲಿ. ದೇವರು ಇವರೆಲ್ಲರಿಗೂ ಒಳ್ಳೆದು ಮಾಡಲಿ. ಸಿನಿಮಾ ದೊಡ್ಡ ಸಕ್ಸಸ್​ ಕಾಣಲಿ’ ಎಂದಿದ್ದರು ಪುನೀತ್​.

(ಪುನೀತ್​ ಮಾತು, 2:19 ಗಂಟೆಯಿಂದ ಪ್ರಾರಂಭ)

ವೈದ್ಯರು ಏನಂದಿದ್ರು?

‘ಇವತ್ತು ಬೆಳಗ್ಗೆ 11:30ಕ್ಕೆ ಚೆಸ್ಟ್​ ಪೆನ್​ ಆಗಿ ಇಲ್ಲಿ ಬಂದಿದ್ದಾರೆ. ಬರುವಾಗ ಸ್ವಲ್ಪ ಸೀರಿಯಸ್​ ಆಗಿತ್ತು. ಗಂಭೀರ ಹೃದಯಾಘಾತವಾಗಿದೆ. ಇನ್ನೂ, ಆರೋಗ್ಯ ಗಂಭೀರವಾಗಿದೆ. ಏನನ್ನೂ ಹೇಳೋಕೆ ಆಗಲ್ಲ. ನಮ್ಮ ಪ್ರಯತ್ನ ನಾವು ಮಾಡುತ್ತಿದ್ದೇವೆ’ ಎಂದು ವೈದ್ಯರು ತಿಳಿಸಿದ್ದರು.

ಇದನ್ನೂ ಓದಿ: Puneeth Rajkumar: ಪುನೀತ್​ ರಾಜ್​ಕುಮಾರ್​ ಹೃದಯಾಘಾತದಿಂದ ನಿಧನ; ಕರ್ನಾಟಕದ ಪಾಲಿಗೆ ಕರಾಳ ಶುಕ್ರವಾರ

Published On - 2:48 pm, Fri, 29 October 21

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು