AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ‘ದೇವರು ಇವರೆಲ್ಲರಿಗೂ ಒಳ್ಳೆಯದು ಮಾಡಲಿ’; ಇದು ವೇದಿಕೆ ಮೇಲೆ ಪುನೀತ್​ ಕೊನೆಯ ಮಾತು

Puneeth Rajkumar Last Speech: ಶುಕ್ರವಾರ ಬೆಳಗ್ಗೆ ಜಿಮ್​ನಲ್ಲಿ ವರ್ಕೌಟ್ ಮಾಡುವಾಗ ಪುನೀತ್ ರಾಜ್​​ಕುಮಾರ್ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಯಿತು. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿತ್ತು.

Puneeth Rajkumar: ‘ದೇವರು ಇವರೆಲ್ಲರಿಗೂ ಒಳ್ಳೆಯದು ಮಾಡಲಿ’; ಇದು ವೇದಿಕೆ ಮೇಲೆ ಪುನೀತ್​ ಕೊನೆಯ ಮಾತು
ಶಿವರಾಜ್​ಕುಮಾರ್​, ಯಶ್​, ಪುನೀತ್​
TV9 Web
| Edited By: |

Updated on:Oct 29, 2021 | 3:08 PM

Share

ಪುನೀತ್​ ರಾಜ್​ಕುಮಾರ್​ ಕೇವಲ 46ನೇ ವಯಸ್ಸಿಗೆ ಮೃತಪಟ್ಟಿದ್ದಾರೆ. ಇದು ಇಡೀ ಕರ್ನಾಟಕದ ಜನತೆಗೆ ದೊಡ್ಡ ಶಾಕ್​ ಆಗಿದೆ. ಅವರ ಅಭಿಮಾನಿಗಳು ಈ ಸುದ್ದಿಯನ್ನು ನಂಬೋಕೆ ರೆಡಿ ಇಲ್ಲ. ಈ ಮಧ್ಯೆ ಅವರ ಕೊನೆಯ ಮಾತುಗಳು ಈಗ ವೈರಲ್ ​ಆಗುತ್ತಿದೆ.

ಶುಕ್ರವಾರ ಬೆಳಗ್ಗೆ ಜಿಮ್​ನಲ್ಲಿ ವರ್ಕೌಟ್ ಮಾಡುವಾಗ ಪುನೀತ್ ರಾಜ್​​ಕುಮಾರ್ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಯಿತು. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿತ್ತು. ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಅವರು ಆಸ್ಪತ್ರೆಯಿಂದ ಹೊರಬರಲೆ ಇಲ್ಲ.

ಇತ್ತೀಚೆಗೆ ‘ಭಜರಂಗಿ 2’ ಪ್ರೀರಿಲೀಸ್​ ಇವೆಂಟ್​ ನಡೆಸಲಾಗಿತ್ತು. ಈ ವೇಳೆ ಪುನೀತ್​ ಮಾತನಾಡಿದ್ದರು. ‘ತುಂಬಾ ಹೆಮ್ಮೆ ಪಡೋ ವಿಚಾರ ಏನೆಂದರೆ ಲಾಕ್​ಡೌನ್​ ನಂತರ ಸಿನಿಮಾಗಳು ರಿಲೀಸ್​ ಆಗುತ್ತಿವೆ. ಅದೇ ರೀತಿ ಇವತ್ತಿನ ಭಜರಂಗಿ 2 ಪ್ರೀ ರಿಲೀಸ್​ ಇವೆಂಟ್​ ಕಾರ್ಯಕ್ರಮದಲ್ಲಿದ್ದೇವೆ. ಅಕ್ಟೋಬರ್​ 29ರಂದು ಸಿನಿಮಾ ತೆರೆಗೆ ಬರುತ್ತಿದೆ. 2019ರಲ್ಲೇ ಸಿನಿಮಾ ಶುರುವಾಗಿತ್ತು. ಆದರೆ, ಕೊವಿಡ್ ಕಾರಣದಿಂದ ಮುಂದೂಡಲಾಗಿತ್ತು. ನಾನು ಸಿನಿಮಾದ ದೃಶ್ಯಗಳನ್ನು ನೋಡಿದ್ದೇನೆ. ಜಯಣ್ಣ ಹಾಗೂ ಭೋಗೇಂದ್ರ ಅವರು ಒಂದೊಳ್ಳೆಯ ಸಿನಿಮಾ ಕೊಡಲಿ. ದೇವರು ಇವರೆಲ್ಲರಿಗೂ ಒಳ್ಳೆದು ಮಾಡಲಿ. ಸಿನಿಮಾ ದೊಡ್ಡ ಸಕ್ಸಸ್​ ಕಾಣಲಿ’ ಎಂದಿದ್ದರು ಪುನೀತ್​.

(ಪುನೀತ್​ ಮಾತು, 2:19 ಗಂಟೆಯಿಂದ ಪ್ರಾರಂಭ)

ವೈದ್ಯರು ಏನಂದಿದ್ರು?

‘ಇವತ್ತು ಬೆಳಗ್ಗೆ 11:30ಕ್ಕೆ ಚೆಸ್ಟ್​ ಪೆನ್​ ಆಗಿ ಇಲ್ಲಿ ಬಂದಿದ್ದಾರೆ. ಬರುವಾಗ ಸ್ವಲ್ಪ ಸೀರಿಯಸ್​ ಆಗಿತ್ತು. ಗಂಭೀರ ಹೃದಯಾಘಾತವಾಗಿದೆ. ಇನ್ನೂ, ಆರೋಗ್ಯ ಗಂಭೀರವಾಗಿದೆ. ಏನನ್ನೂ ಹೇಳೋಕೆ ಆಗಲ್ಲ. ನಮ್ಮ ಪ್ರಯತ್ನ ನಾವು ಮಾಡುತ್ತಿದ್ದೇವೆ’ ಎಂದು ವೈದ್ಯರು ತಿಳಿಸಿದ್ದರು.

ಇದನ್ನೂ ಓದಿ: Puneeth Rajkumar: ಪುನೀತ್​ ರಾಜ್​ಕುಮಾರ್​ ಹೃದಯಾಘಾತದಿಂದ ನಿಧನ; ಕರ್ನಾಟಕದ ಪಾಲಿಗೆ ಕರಾಳ ಶುಕ್ರವಾರ

Published On - 2:48 pm, Fri, 29 October 21

ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ