AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1985ರಲ್ಲಿ ಪುನೀತ್​​ ಹೆಸರು ಬದಲಾಯಿಸಿದ್ದಾಗ ನೀಡಿದ್ದ ಜಾಹೀರಾತು ವೈರಲ್​

ಲೋಹಿತ್​ ಆಗಿದ್ದ ಅವರು ನಂತರ ಪುನೀತ್​ ರಾಜ್​ಕುಮಾರ್​ ಎಂಬ ಹೆಸರಿನಿಂದ ದೇಶಾದ್ಯಂತ ಖ್ಯಾತಿ ಗಳಿಸಿದರು.  ಹೆಸರನ್ನು ಬದಲಾವಣೆ ಮಾಡಿದ ಸಂದರ್ಭದಲ್ಲಿ ನೀಡಿದ ಜಾಹೀರಾತಿನ ಪ್ರತಿ ವೈರಲ್​ ಆಗುತ್ತಿದೆ.

1985ರಲ್ಲಿ ಪುನೀತ್​​ ಹೆಸರು ಬದಲಾಯಿಸಿದ್ದಾಗ ನೀಡಿದ್ದ ಜಾಹೀರಾತು ವೈರಲ್​
ಪುನೀತ್
TV9 Web
| Edited By: |

Updated on:Oct 31, 2021 | 10:13 PM

Share

ಪುನೀತ್​ ರಾಜ್​ಕುಮಾರ್​ ಅವರ ಮೊದಲ ಹೆಸರು ಲೋಹಿತ್​ ಎಂದಾಗಿತ್ತು. ನಂತರ ಇದನ್ನು ಪುನೀತ್​ ರಾಜ್​ಕುಮಾರ್​ ಎಂದು ಬದಲಾಯಿಸಲಾಗಿತ್ತು. ಹೆಸರು ಬದಲಾವಣೆ ಮಾಡಿದ ನಂತರ ಪತ್ರಿಕೆಗಳಲ್ಲಿ ಜಾಹೀರಾತು ನೀಡಬೇಕು. ಅದೇ ರೀತಿ ಲೋಹಿತ್​ ಎಂದು ಇದ್ದ ಹೆಸರನ್ನು ಪುನೀತ್​ ಎಂದು ಬದಲಾವಣೆ ಮಾಡಿದ್ದರ ಬಗ್ಗೆ ಜಾಹೀರಾತು ನೀಡಲಾಗಿತ್ತು. ಇದಕ್ಕೆ ಸಂಬಂಧಿಸಿ ಡಾ. ರಾಜ್​ಕುಮಾರ್​ ಅವರು ಪತ್ರಿಕೆಯಲ್ಲಿ ಜಾಹೀರಾತು ನೀಡಿದ್ದರು. ಅದು ಈಗ ವೈರಲ್​ ಆಗಿದೆ.

ಪುನೀತ್​ ರಾಜ್​ಕುಮಾರ್​ ಬಾಲನಟ ಆಗಿದ್ದಾಗಿನಿಂದಲೂ ಪ್ರೇಕ್ಷಕರ ಮನ ಗೆದ್ದಿದ್ದರು. ಆ ದಿನಗಳಲ್ಲಿ ಅವರನ್ನು ಲೋಹಿತ್​ ಎಂದು ಕರೆಯಲಾಗುತ್ತಿತ್ತು. ಮನೆಯಲ್ಲಿ ಪ್ರೀತಿಯಿಂದ ಅಪ್ಪು ಎಂದು ಕರೆಯುತ್ತಿದ್ದರು. ಬಳಿಕ ಪುನೀತ್​ ರಾಜ್​ಕುಮಾರ್​ ಎಂಬ ಹೆಸರಿನಿಂದ ದೇಶಾದ್ಯಂತ ಖ್ಯಾತಿ ಗಳಿಸಿದರು.  ಹೆಸರನ್ನು ಬದಲಾವಣೆ ಮಾಡಿದ ಸಂದರ್ಭದಲ್ಲಿ ನೀಡಿದ ಜಾಹೀರಾತಿನ ಪ್ರತಿ ವೈರಲ್​ ಆಗುತ್ತಿದೆ.

‘ಡಾ. ರಾಜ್​ಕುಮಾರ್​ ಉರುಫ್​ ಎಸ್​.ಪಿ. ಮುತ್ತುರಾಜ್​ ಆದ ನಾನು ನನ್ನ ಮಗ ಮಾಸ್ಟರ್​ ಲೋಹಿತ್​ ಹೆಸರನ್ನು ಇಂದಿನಿಂದ  ಅಂದರೆ ದಿನಾಂಕ 16-3-1985ರಂದು ಮಾಸ್ಟರ್​ ಪುನೀತ್​ ಎಂಬುದಾಗಿ ಬದಲಾಯಿಸುತ್ತೇನೆ. ಈ ಹೆಸರು ಬದಲಾವಣೆ ಬಗ್ಗೆ ನೋಟರಿ ಎಸ್​.ಬಿ. ಚಂದ್ರಶೇಖರ್​ ಅವರ ಸಮಕ್ಷಮದಲ್ಲಿ ಪ್ರಮಾಣ ಪತ್ರ ಮಾಡಿಸಿರುತ್ತೇನೆ’ ಎಂದು ಜಾಹೀರಾತು ನೀಡಲಾಗಿತ್ತು.

ಮೊದಲ ಬಾರಿಗೆ ಪುನೀತ್ ರಾಜ್​ಕುಮಾರ್​ ಅವರನ್ನು ಅಪ್ಪು ಎಂದು ಕರೆದಿದ್ದು ಅವರ ಅಜ್ಜಿ. ರಾಜ್​ಕುಮಾರ್ ಅವರ ತಾಯಿ ಲಕ್ಷ್ಮಮ್ಮ ಅವರಿಗೆ ಪುನೀತ್​ ಎಂದರೆ ಎಲ್ಲಿಲ್ಲದ ಪ್ರೀತಿ. ಹಾಗಾಗಿ ಅವರು ಮೊಮ್ಮಗನನ್ನು ಅಪ್ಪು ಅಂತ ಕರೆಯುತ್ತಿದ್ದರು. ಮನೆಮಂದಿಗೆಲ್ಲ ಆ ಪ್ರೀತಿಯ ಹೆಸರು ಅಚ್ಚುಮೆಚ್ಚಾಗಿತ್ತು. ಪುನೀತ್​ ಎಷ್ಟೇ ಎತ್ತರಕ್ಕೆ ಬೆಳೆದುನಿಂತರೂ ಆ ಪೆಟ್​ ನೇಮ್​ ಹೋಗಲೇ ಇಲ್ಲ. ಅವರು ಹೀರೋ ಆಗಿ ನಟಿಸಿದ ಮೊದಲ ಸಿನಿಮಾ ಹೆಸರು ಕೂಡ ‘ಅಪ್ಪು’. ಆದರೆ ಇಂದು ಆ ಹೆಸರಿನಿಂದ ಕರೆಸಿಕೊಳ್ಳಲು ಅವರೇ ನಮ್ಮೊಂದಿಗಿಲ್ಲ.

ಇದನ್ನೂ ಓದಿ: ‘ಪುನೀತ್​ ಆಸ್ಪತ್ರೆಗೆ ಬಂದಾಗ ಸಹಜವಾಗಿಯೇ ಇದ್ದರು’; ಹಾಗಿದ್ದರೆ ತಪ್ಪು ನಡೆದಿದ್ದೆಲ್ಲಿ? ವೈದ್ಯರು ವಿವರಿಸಿದ್ದು ಹೀಗೆ

ಪುನೀತ್​ ಸ್ಮರಣಾರ್ಥ ಸೋಮವಾರ ‘ರಾಜಕುಮಾರ’ ಸಿನಿಮಾ ಪ್ರದರ್ಶನ; ಅಭಿಮಾನಿಗಳಿಗೆ ಉಚಿತ ಪ್ರವೇಶ

Published On - 7:49 pm, Sun, 31 October 21

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?