AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1985ರಲ್ಲಿ ಪುನೀತ್​​ ಹೆಸರು ಬದಲಾಯಿಸಿದ್ದಾಗ ನೀಡಿದ್ದ ಜಾಹೀರಾತು ವೈರಲ್​

ಲೋಹಿತ್​ ಆಗಿದ್ದ ಅವರು ನಂತರ ಪುನೀತ್​ ರಾಜ್​ಕುಮಾರ್​ ಎಂಬ ಹೆಸರಿನಿಂದ ದೇಶಾದ್ಯಂತ ಖ್ಯಾತಿ ಗಳಿಸಿದರು.  ಹೆಸರನ್ನು ಬದಲಾವಣೆ ಮಾಡಿದ ಸಂದರ್ಭದಲ್ಲಿ ನೀಡಿದ ಜಾಹೀರಾತಿನ ಪ್ರತಿ ವೈರಲ್​ ಆಗುತ್ತಿದೆ.

1985ರಲ್ಲಿ ಪುನೀತ್​​ ಹೆಸರು ಬದಲಾಯಿಸಿದ್ದಾಗ ನೀಡಿದ್ದ ಜಾಹೀರಾತು ವೈರಲ್​
ಪುನೀತ್
TV9 Web
| Edited By: |

Updated on:Oct 31, 2021 | 10:13 PM

Share

ಪುನೀತ್​ ರಾಜ್​ಕುಮಾರ್​ ಅವರ ಮೊದಲ ಹೆಸರು ಲೋಹಿತ್​ ಎಂದಾಗಿತ್ತು. ನಂತರ ಇದನ್ನು ಪುನೀತ್​ ರಾಜ್​ಕುಮಾರ್​ ಎಂದು ಬದಲಾಯಿಸಲಾಗಿತ್ತು. ಹೆಸರು ಬದಲಾವಣೆ ಮಾಡಿದ ನಂತರ ಪತ್ರಿಕೆಗಳಲ್ಲಿ ಜಾಹೀರಾತು ನೀಡಬೇಕು. ಅದೇ ರೀತಿ ಲೋಹಿತ್​ ಎಂದು ಇದ್ದ ಹೆಸರನ್ನು ಪುನೀತ್​ ಎಂದು ಬದಲಾವಣೆ ಮಾಡಿದ್ದರ ಬಗ್ಗೆ ಜಾಹೀರಾತು ನೀಡಲಾಗಿತ್ತು. ಇದಕ್ಕೆ ಸಂಬಂಧಿಸಿ ಡಾ. ರಾಜ್​ಕುಮಾರ್​ ಅವರು ಪತ್ರಿಕೆಯಲ್ಲಿ ಜಾಹೀರಾತು ನೀಡಿದ್ದರು. ಅದು ಈಗ ವೈರಲ್​ ಆಗಿದೆ.

ಪುನೀತ್​ ರಾಜ್​ಕುಮಾರ್​ ಬಾಲನಟ ಆಗಿದ್ದಾಗಿನಿಂದಲೂ ಪ್ರೇಕ್ಷಕರ ಮನ ಗೆದ್ದಿದ್ದರು. ಆ ದಿನಗಳಲ್ಲಿ ಅವರನ್ನು ಲೋಹಿತ್​ ಎಂದು ಕರೆಯಲಾಗುತ್ತಿತ್ತು. ಮನೆಯಲ್ಲಿ ಪ್ರೀತಿಯಿಂದ ಅಪ್ಪು ಎಂದು ಕರೆಯುತ್ತಿದ್ದರು. ಬಳಿಕ ಪುನೀತ್​ ರಾಜ್​ಕುಮಾರ್​ ಎಂಬ ಹೆಸರಿನಿಂದ ದೇಶಾದ್ಯಂತ ಖ್ಯಾತಿ ಗಳಿಸಿದರು.  ಹೆಸರನ್ನು ಬದಲಾವಣೆ ಮಾಡಿದ ಸಂದರ್ಭದಲ್ಲಿ ನೀಡಿದ ಜಾಹೀರಾತಿನ ಪ್ರತಿ ವೈರಲ್​ ಆಗುತ್ತಿದೆ.

‘ಡಾ. ರಾಜ್​ಕುಮಾರ್​ ಉರುಫ್​ ಎಸ್​.ಪಿ. ಮುತ್ತುರಾಜ್​ ಆದ ನಾನು ನನ್ನ ಮಗ ಮಾಸ್ಟರ್​ ಲೋಹಿತ್​ ಹೆಸರನ್ನು ಇಂದಿನಿಂದ  ಅಂದರೆ ದಿನಾಂಕ 16-3-1985ರಂದು ಮಾಸ್ಟರ್​ ಪುನೀತ್​ ಎಂಬುದಾಗಿ ಬದಲಾಯಿಸುತ್ತೇನೆ. ಈ ಹೆಸರು ಬದಲಾವಣೆ ಬಗ್ಗೆ ನೋಟರಿ ಎಸ್​.ಬಿ. ಚಂದ್ರಶೇಖರ್​ ಅವರ ಸಮಕ್ಷಮದಲ್ಲಿ ಪ್ರಮಾಣ ಪತ್ರ ಮಾಡಿಸಿರುತ್ತೇನೆ’ ಎಂದು ಜಾಹೀರಾತು ನೀಡಲಾಗಿತ್ತು.

ಮೊದಲ ಬಾರಿಗೆ ಪುನೀತ್ ರಾಜ್​ಕುಮಾರ್​ ಅವರನ್ನು ಅಪ್ಪು ಎಂದು ಕರೆದಿದ್ದು ಅವರ ಅಜ್ಜಿ. ರಾಜ್​ಕುಮಾರ್ ಅವರ ತಾಯಿ ಲಕ್ಷ್ಮಮ್ಮ ಅವರಿಗೆ ಪುನೀತ್​ ಎಂದರೆ ಎಲ್ಲಿಲ್ಲದ ಪ್ರೀತಿ. ಹಾಗಾಗಿ ಅವರು ಮೊಮ್ಮಗನನ್ನು ಅಪ್ಪು ಅಂತ ಕರೆಯುತ್ತಿದ್ದರು. ಮನೆಮಂದಿಗೆಲ್ಲ ಆ ಪ್ರೀತಿಯ ಹೆಸರು ಅಚ್ಚುಮೆಚ್ಚಾಗಿತ್ತು. ಪುನೀತ್​ ಎಷ್ಟೇ ಎತ್ತರಕ್ಕೆ ಬೆಳೆದುನಿಂತರೂ ಆ ಪೆಟ್​ ನೇಮ್​ ಹೋಗಲೇ ಇಲ್ಲ. ಅವರು ಹೀರೋ ಆಗಿ ನಟಿಸಿದ ಮೊದಲ ಸಿನಿಮಾ ಹೆಸರು ಕೂಡ ‘ಅಪ್ಪು’. ಆದರೆ ಇಂದು ಆ ಹೆಸರಿನಿಂದ ಕರೆಸಿಕೊಳ್ಳಲು ಅವರೇ ನಮ್ಮೊಂದಿಗಿಲ್ಲ.

ಇದನ್ನೂ ಓದಿ: ‘ಪುನೀತ್​ ಆಸ್ಪತ್ರೆಗೆ ಬಂದಾಗ ಸಹಜವಾಗಿಯೇ ಇದ್ದರು’; ಹಾಗಿದ್ದರೆ ತಪ್ಪು ನಡೆದಿದ್ದೆಲ್ಲಿ? ವೈದ್ಯರು ವಿವರಿಸಿದ್ದು ಹೀಗೆ

ಪುನೀತ್​ ಸ್ಮರಣಾರ್ಥ ಸೋಮವಾರ ‘ರಾಜಕುಮಾರ’ ಸಿನಿಮಾ ಪ್ರದರ್ಶನ; ಅಭಿಮಾನಿಗಳಿಗೆ ಉಚಿತ ಪ್ರವೇಶ

Published On - 7:49 pm, Sun, 31 October 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?