AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1985ರಲ್ಲಿ ಪುನೀತ್​​ ಹೆಸರು ಬದಲಾಯಿಸಿದ್ದಾಗ ನೀಡಿದ್ದ ಜಾಹೀರಾತು ವೈರಲ್​

ಲೋಹಿತ್​ ಆಗಿದ್ದ ಅವರು ನಂತರ ಪುನೀತ್​ ರಾಜ್​ಕುಮಾರ್​ ಎಂಬ ಹೆಸರಿನಿಂದ ದೇಶಾದ್ಯಂತ ಖ್ಯಾತಿ ಗಳಿಸಿದರು.  ಹೆಸರನ್ನು ಬದಲಾವಣೆ ಮಾಡಿದ ಸಂದರ್ಭದಲ್ಲಿ ನೀಡಿದ ಜಾಹೀರಾತಿನ ಪ್ರತಿ ವೈರಲ್​ ಆಗುತ್ತಿದೆ.

1985ರಲ್ಲಿ ಪುನೀತ್​​ ಹೆಸರು ಬದಲಾಯಿಸಿದ್ದಾಗ ನೀಡಿದ್ದ ಜಾಹೀರಾತು ವೈರಲ್​
ಪುನೀತ್
TV9 Web
| Edited By: |

Updated on:Oct 31, 2021 | 10:13 PM

Share

ಪುನೀತ್​ ರಾಜ್​ಕುಮಾರ್​ ಅವರ ಮೊದಲ ಹೆಸರು ಲೋಹಿತ್​ ಎಂದಾಗಿತ್ತು. ನಂತರ ಇದನ್ನು ಪುನೀತ್​ ರಾಜ್​ಕುಮಾರ್​ ಎಂದು ಬದಲಾಯಿಸಲಾಗಿತ್ತು. ಹೆಸರು ಬದಲಾವಣೆ ಮಾಡಿದ ನಂತರ ಪತ್ರಿಕೆಗಳಲ್ಲಿ ಜಾಹೀರಾತು ನೀಡಬೇಕು. ಅದೇ ರೀತಿ ಲೋಹಿತ್​ ಎಂದು ಇದ್ದ ಹೆಸರನ್ನು ಪುನೀತ್​ ಎಂದು ಬದಲಾವಣೆ ಮಾಡಿದ್ದರ ಬಗ್ಗೆ ಜಾಹೀರಾತು ನೀಡಲಾಗಿತ್ತು. ಇದಕ್ಕೆ ಸಂಬಂಧಿಸಿ ಡಾ. ರಾಜ್​ಕುಮಾರ್​ ಅವರು ಪತ್ರಿಕೆಯಲ್ಲಿ ಜಾಹೀರಾತು ನೀಡಿದ್ದರು. ಅದು ಈಗ ವೈರಲ್​ ಆಗಿದೆ.

ಪುನೀತ್​ ರಾಜ್​ಕುಮಾರ್​ ಬಾಲನಟ ಆಗಿದ್ದಾಗಿನಿಂದಲೂ ಪ್ರೇಕ್ಷಕರ ಮನ ಗೆದ್ದಿದ್ದರು. ಆ ದಿನಗಳಲ್ಲಿ ಅವರನ್ನು ಲೋಹಿತ್​ ಎಂದು ಕರೆಯಲಾಗುತ್ತಿತ್ತು. ಮನೆಯಲ್ಲಿ ಪ್ರೀತಿಯಿಂದ ಅಪ್ಪು ಎಂದು ಕರೆಯುತ್ತಿದ್ದರು. ಬಳಿಕ ಪುನೀತ್​ ರಾಜ್​ಕುಮಾರ್​ ಎಂಬ ಹೆಸರಿನಿಂದ ದೇಶಾದ್ಯಂತ ಖ್ಯಾತಿ ಗಳಿಸಿದರು.  ಹೆಸರನ್ನು ಬದಲಾವಣೆ ಮಾಡಿದ ಸಂದರ್ಭದಲ್ಲಿ ನೀಡಿದ ಜಾಹೀರಾತಿನ ಪ್ರತಿ ವೈರಲ್​ ಆಗುತ್ತಿದೆ.

‘ಡಾ. ರಾಜ್​ಕುಮಾರ್​ ಉರುಫ್​ ಎಸ್​.ಪಿ. ಮುತ್ತುರಾಜ್​ ಆದ ನಾನು ನನ್ನ ಮಗ ಮಾಸ್ಟರ್​ ಲೋಹಿತ್​ ಹೆಸರನ್ನು ಇಂದಿನಿಂದ  ಅಂದರೆ ದಿನಾಂಕ 16-3-1985ರಂದು ಮಾಸ್ಟರ್​ ಪುನೀತ್​ ಎಂಬುದಾಗಿ ಬದಲಾಯಿಸುತ್ತೇನೆ. ಈ ಹೆಸರು ಬದಲಾವಣೆ ಬಗ್ಗೆ ನೋಟರಿ ಎಸ್​.ಬಿ. ಚಂದ್ರಶೇಖರ್​ ಅವರ ಸಮಕ್ಷಮದಲ್ಲಿ ಪ್ರಮಾಣ ಪತ್ರ ಮಾಡಿಸಿರುತ್ತೇನೆ’ ಎಂದು ಜಾಹೀರಾತು ನೀಡಲಾಗಿತ್ತು.

ಮೊದಲ ಬಾರಿಗೆ ಪುನೀತ್ ರಾಜ್​ಕುಮಾರ್​ ಅವರನ್ನು ಅಪ್ಪು ಎಂದು ಕರೆದಿದ್ದು ಅವರ ಅಜ್ಜಿ. ರಾಜ್​ಕುಮಾರ್ ಅವರ ತಾಯಿ ಲಕ್ಷ್ಮಮ್ಮ ಅವರಿಗೆ ಪುನೀತ್​ ಎಂದರೆ ಎಲ್ಲಿಲ್ಲದ ಪ್ರೀತಿ. ಹಾಗಾಗಿ ಅವರು ಮೊಮ್ಮಗನನ್ನು ಅಪ್ಪು ಅಂತ ಕರೆಯುತ್ತಿದ್ದರು. ಮನೆಮಂದಿಗೆಲ್ಲ ಆ ಪ್ರೀತಿಯ ಹೆಸರು ಅಚ್ಚುಮೆಚ್ಚಾಗಿತ್ತು. ಪುನೀತ್​ ಎಷ್ಟೇ ಎತ್ತರಕ್ಕೆ ಬೆಳೆದುನಿಂತರೂ ಆ ಪೆಟ್​ ನೇಮ್​ ಹೋಗಲೇ ಇಲ್ಲ. ಅವರು ಹೀರೋ ಆಗಿ ನಟಿಸಿದ ಮೊದಲ ಸಿನಿಮಾ ಹೆಸರು ಕೂಡ ‘ಅಪ್ಪು’. ಆದರೆ ಇಂದು ಆ ಹೆಸರಿನಿಂದ ಕರೆಸಿಕೊಳ್ಳಲು ಅವರೇ ನಮ್ಮೊಂದಿಗಿಲ್ಲ.

ಇದನ್ನೂ ಓದಿ: ‘ಪುನೀತ್​ ಆಸ್ಪತ್ರೆಗೆ ಬಂದಾಗ ಸಹಜವಾಗಿಯೇ ಇದ್ದರು’; ಹಾಗಿದ್ದರೆ ತಪ್ಪು ನಡೆದಿದ್ದೆಲ್ಲಿ? ವೈದ್ಯರು ವಿವರಿಸಿದ್ದು ಹೀಗೆ

ಪುನೀತ್​ ಸ್ಮರಣಾರ್ಥ ಸೋಮವಾರ ‘ರಾಜಕುಮಾರ’ ಸಿನಿಮಾ ಪ್ರದರ್ಶನ; ಅಭಿಮಾನಿಗಳಿಗೆ ಉಚಿತ ಪ್ರವೇಶ

Published On - 7:49 pm, Sun, 31 October 21

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ