AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1985ರಲ್ಲಿ ಪುನೀತ್​​ ಹೆಸರು ಬದಲಾಯಿಸಿದ್ದಾಗ ನೀಡಿದ್ದ ಜಾಹೀರಾತು ವೈರಲ್​

ಲೋಹಿತ್​ ಆಗಿದ್ದ ಅವರು ನಂತರ ಪುನೀತ್​ ರಾಜ್​ಕುಮಾರ್​ ಎಂಬ ಹೆಸರಿನಿಂದ ದೇಶಾದ್ಯಂತ ಖ್ಯಾತಿ ಗಳಿಸಿದರು.  ಹೆಸರನ್ನು ಬದಲಾವಣೆ ಮಾಡಿದ ಸಂದರ್ಭದಲ್ಲಿ ನೀಡಿದ ಜಾಹೀರಾತಿನ ಪ್ರತಿ ವೈರಲ್​ ಆಗುತ್ತಿದೆ.

1985ರಲ್ಲಿ ಪುನೀತ್​​ ಹೆಸರು ಬದಲಾಯಿಸಿದ್ದಾಗ ನೀಡಿದ್ದ ಜಾಹೀರಾತು ವೈರಲ್​
ಪುನೀತ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Oct 31, 2021 | 10:13 PM

Share

ಪುನೀತ್​ ರಾಜ್​ಕುಮಾರ್​ ಅವರ ಮೊದಲ ಹೆಸರು ಲೋಹಿತ್​ ಎಂದಾಗಿತ್ತು. ನಂತರ ಇದನ್ನು ಪುನೀತ್​ ರಾಜ್​ಕುಮಾರ್​ ಎಂದು ಬದಲಾಯಿಸಲಾಗಿತ್ತು. ಹೆಸರು ಬದಲಾವಣೆ ಮಾಡಿದ ನಂತರ ಪತ್ರಿಕೆಗಳಲ್ಲಿ ಜಾಹೀರಾತು ನೀಡಬೇಕು. ಅದೇ ರೀತಿ ಲೋಹಿತ್​ ಎಂದು ಇದ್ದ ಹೆಸರನ್ನು ಪುನೀತ್​ ಎಂದು ಬದಲಾವಣೆ ಮಾಡಿದ್ದರ ಬಗ್ಗೆ ಜಾಹೀರಾತು ನೀಡಲಾಗಿತ್ತು. ಇದಕ್ಕೆ ಸಂಬಂಧಿಸಿ ಡಾ. ರಾಜ್​ಕುಮಾರ್​ ಅವರು ಪತ್ರಿಕೆಯಲ್ಲಿ ಜಾಹೀರಾತು ನೀಡಿದ್ದರು. ಅದು ಈಗ ವೈರಲ್​ ಆಗಿದೆ.

ಪುನೀತ್​ ರಾಜ್​ಕುಮಾರ್​ ಬಾಲನಟ ಆಗಿದ್ದಾಗಿನಿಂದಲೂ ಪ್ರೇಕ್ಷಕರ ಮನ ಗೆದ್ದಿದ್ದರು. ಆ ದಿನಗಳಲ್ಲಿ ಅವರನ್ನು ಲೋಹಿತ್​ ಎಂದು ಕರೆಯಲಾಗುತ್ತಿತ್ತು. ಮನೆಯಲ್ಲಿ ಪ್ರೀತಿಯಿಂದ ಅಪ್ಪು ಎಂದು ಕರೆಯುತ್ತಿದ್ದರು. ಬಳಿಕ ಪುನೀತ್​ ರಾಜ್​ಕುಮಾರ್​ ಎಂಬ ಹೆಸರಿನಿಂದ ದೇಶಾದ್ಯಂತ ಖ್ಯಾತಿ ಗಳಿಸಿದರು.  ಹೆಸರನ್ನು ಬದಲಾವಣೆ ಮಾಡಿದ ಸಂದರ್ಭದಲ್ಲಿ ನೀಡಿದ ಜಾಹೀರಾತಿನ ಪ್ರತಿ ವೈರಲ್​ ಆಗುತ್ತಿದೆ.

‘ಡಾ. ರಾಜ್​ಕುಮಾರ್​ ಉರುಫ್​ ಎಸ್​.ಪಿ. ಮುತ್ತುರಾಜ್​ ಆದ ನಾನು ನನ್ನ ಮಗ ಮಾಸ್ಟರ್​ ಲೋಹಿತ್​ ಹೆಸರನ್ನು ಇಂದಿನಿಂದ  ಅಂದರೆ ದಿನಾಂಕ 16-3-1985ರಂದು ಮಾಸ್ಟರ್​ ಪುನೀತ್​ ಎಂಬುದಾಗಿ ಬದಲಾಯಿಸುತ್ತೇನೆ. ಈ ಹೆಸರು ಬದಲಾವಣೆ ಬಗ್ಗೆ ನೋಟರಿ ಎಸ್​.ಬಿ. ಚಂದ್ರಶೇಖರ್​ ಅವರ ಸಮಕ್ಷಮದಲ್ಲಿ ಪ್ರಮಾಣ ಪತ್ರ ಮಾಡಿಸಿರುತ್ತೇನೆ’ ಎಂದು ಜಾಹೀರಾತು ನೀಡಲಾಗಿತ್ತು.

ಮೊದಲ ಬಾರಿಗೆ ಪುನೀತ್ ರಾಜ್​ಕುಮಾರ್​ ಅವರನ್ನು ಅಪ್ಪು ಎಂದು ಕರೆದಿದ್ದು ಅವರ ಅಜ್ಜಿ. ರಾಜ್​ಕುಮಾರ್ ಅವರ ತಾಯಿ ಲಕ್ಷ್ಮಮ್ಮ ಅವರಿಗೆ ಪುನೀತ್​ ಎಂದರೆ ಎಲ್ಲಿಲ್ಲದ ಪ್ರೀತಿ. ಹಾಗಾಗಿ ಅವರು ಮೊಮ್ಮಗನನ್ನು ಅಪ್ಪು ಅಂತ ಕರೆಯುತ್ತಿದ್ದರು. ಮನೆಮಂದಿಗೆಲ್ಲ ಆ ಪ್ರೀತಿಯ ಹೆಸರು ಅಚ್ಚುಮೆಚ್ಚಾಗಿತ್ತು. ಪುನೀತ್​ ಎಷ್ಟೇ ಎತ್ತರಕ್ಕೆ ಬೆಳೆದುನಿಂತರೂ ಆ ಪೆಟ್​ ನೇಮ್​ ಹೋಗಲೇ ಇಲ್ಲ. ಅವರು ಹೀರೋ ಆಗಿ ನಟಿಸಿದ ಮೊದಲ ಸಿನಿಮಾ ಹೆಸರು ಕೂಡ ‘ಅಪ್ಪು’. ಆದರೆ ಇಂದು ಆ ಹೆಸರಿನಿಂದ ಕರೆಸಿಕೊಳ್ಳಲು ಅವರೇ ನಮ್ಮೊಂದಿಗಿಲ್ಲ.

ಇದನ್ನೂ ಓದಿ: ‘ಪುನೀತ್​ ಆಸ್ಪತ್ರೆಗೆ ಬಂದಾಗ ಸಹಜವಾಗಿಯೇ ಇದ್ದರು’; ಹಾಗಿದ್ದರೆ ತಪ್ಪು ನಡೆದಿದ್ದೆಲ್ಲಿ? ವೈದ್ಯರು ವಿವರಿಸಿದ್ದು ಹೀಗೆ

ಪುನೀತ್​ ಸ್ಮರಣಾರ್ಥ ಸೋಮವಾರ ‘ರಾಜಕುಮಾರ’ ಸಿನಿಮಾ ಪ್ರದರ್ಶನ; ಅಭಿಮಾನಿಗಳಿಗೆ ಉಚಿತ ಪ್ರವೇಶ

Published On - 7:49 pm, Sun, 31 October 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ