AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ನಾಮಫಲಕ, ಕನ್ನಡ ಭಾವುಟಕ್ಕೆ ಅವಮಾನ; ಕಿಡಿಗೇಡಿಗಳ ಕೃತ್ಯಕ್ಕೆ ಸಿಸಿಟಿವಿ ದೃಶ್ಯವೇ ಸಾಕ್ಷಿ

Puneeth Rajkumar: ಕಿಡಿಗೇಡಿಗಳು ಪುನೀತ್​ ರಾಜ್​ಕುಮಾರ್ ಅವರ ನಾಮಫಲಕವನ್ನು ತೆಗೆದುಕೊಂಡು ಹೋಗಿ ಕೆರೆಯಲ್ಲಿ ಎಸೆದಿದ್ದಾರೆ. ಆ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಪುನೀತ್​ ನಾಮಫಲಕ, ಕನ್ನಡ ಭಾವುಟಕ್ಕೆ ಅವಮಾನ; ಕಿಡಿಗೇಡಿಗಳ ಕೃತ್ಯಕ್ಕೆ ಸಿಸಿಟಿವಿ ದೃಶ್ಯವೇ ಸಾಕ್ಷಿ
ಕನ್ನಡ ಭಾವುಟ, ಪುನೀತ್​ ನಾಮಫಲಕಕ್ಕೆ ಅವಮಾನ
TV9 Web
| Updated By: ಮದನ್​ ಕುಮಾರ್​|

Updated on:Mar 19, 2022 | 1:54 PM

Share

ನಟ ಪುನೀತ್​ ರಾಜ್​ಕುಮಾರ್ (Puneeth Rajkumar)​ ಬಗ್ಗೆ ಅಭಿಮಾನಿಗಳು ಅಪಾರವಾದ ಗೌರವ ಇಟ್ಟುಕೊಂಡಿದ್ದಾರೆ. ಅವರು ಮಾಡಿದ ಸಾಮಾಜಿಕ ಕೆಲಸಗಳು ಅನೇಕರಿಗೆ ಮಾದರಿ ಆಗಿದೆ. ಜನಪರ ಕಾರ್ಯಗಳ ಕಾರಣದಿಂದ ಪುನೀತ್​ಗೆ ಹಲವರು ದೇವರ ಸ್ಥಾನವನ್ನೇ ನೀಡಿದ್ದಾರೆ. ಮನೆಯಲ್ಲಿ ದೇವರ ಫೋಟೋ ಜೊತೆಗೆ ಪುನೀತ್​ ರಾಜ್​ಕುಮಾರ್​ ಫೋಟೋ (Puneeth Rajkumar Photo) ಇಟ್ಟು ಪೂಜೆ ಮಾಡಿದ ಎಷ್ಟೋ ಉದಾಹರಣೆಗಳು ಇವೆ. ವಿವಿಧ ಊರುಗಳ ಜಾತ್ರೆ, ದೇವರ ಉತ್ಸವಗಳಲ್ಲೂ ಅಪ್ಪು ಫೋಟೋ ರಾರಾಜಿಸುತ್ತದೆ. ಆದರೆ ಕೆಲವು ಕಿಡಿಗೇಡಿಗಳು ಅವರಿಗೆ ಅವಮಾನ ಮಾಡಿದ್ದಾರೆ. ಇದು ಅಪ್ಪು ಅಭಿಮಾನಿಗಳ ಆಕ್ರೋಶಕ್ಕೆ ಕಾರಣ ಆಗಿದೆ. ಕೊಪ್ಪಳ ತಾಲೂಕಿನ ಹುವಿನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ‘ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್​ ಅವರ ಜನ್ಮದಿನದ ಪ್ರಯುಕ್ತ ಗ್ರಾಮದಲ್ಲಿ ಅಪ್ಪು ನಾಮಫಲಕ ಮತ್ತು ಕನ್ನಡ ಭಾವುಟವನ್ನು (Karnataka Flag) ಹಾಕಲಾಗಿತ್ತು. ಕೆಲವು ಕಿಡಿಗೇಡಿಗಳು ಅದನ್ನು ಕಿತ್ತು ಹಾಕಿದ್ದಾರೆ. ಆ ಮೂಲಕ ಕನ್ನಡ ಭಾವುಟಕ್ಕೆ ಮತ್ತು ಪುನೀತ್​ ರಾಜ್​ಕುಮಾರ್​ ಅವರಿಗೆ ಅವಮಾನ ಮಾಡಲಾಗಿದೆ. ಈ ದೃಶ್ಯ ಸಿಸಿಟಿವಿಯಲ್ಲೂ ಸೆರೆಯಾಗಿದೆ.

ಹೂವಿನಾಳ ಗ್ರಾಮದಲ್ಲಿ ಶುಕ್ರವಾರ (ಮಾ.18) ತಡರಾತ್ರಿ ಈ ಘಟನೆ ನಡೆದಿದೆ. ಕಿಡಿಗೇಡಿಗಳು ಪುನೀತ್​ ರಾಜ್​ಕುಮಾರ್ ಅವರ ನಾಮಫಲಕವನ್ನು ತಗೆದುಕೊಂಡು ಹೋಗಿ ಕೆರೆಯಲ್ಲಿ ಎಸೆದಿದ್ದಾರೆ ಎನ್ನಲಾಗಿದೆ. ನಾಮಫಲಕ ತೆಗೆದುಕೊಂಡು ಹೋಗುತ್ತಿರುವ ದೃಶ್ಯ ಸಿ.ಸಿ. ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅದನ್ನು ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಗ್ರಾಪಂ ಸದಸ್ಯ ಪತ್ರಯ್ಯ ಶಾಂತವೀರಯ್ಯ ಸೇರಿ ಇಬ್ಬರ ಬಂಧ‌‌ನ ಮಾಡಲಾಗಿದೆ. ಪುನೀತ್​ ರಾಜ್​ಕುಮಾರ್​ ಅವರಿಗೆ ಅವಮಾನ ಮಾಡಿದ್ದಕ್ಕಾಗಿ ಅಭಿಮಾನಿಗಳು ಗ್ರಾಮದಲ್ಲಿ ಟೈರ್​ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ.

ಘಟನೆ ಸ್ಥಳಕ್ಕೆ ಕೊಪ್ಪಳ ಗ್ರಾಮೀಣ ಪೊಲೀಸರು ಆಗಮಿಸಿದ್ದಾರೆ. ‘ಅಭಿಮಾನಿಗಳು ಉದ್ವೇಗಕ್ಕೆ ಒಳಗಾಗಬಾರದು. ಈ ಕೃತ್ಯವನ್ನು ಎಷ್ಟೇ ಜನರು ಮಾಡಿದ್ದರೂ ಕೂಡ ಅವರನ್ನು ಕಾನೂನಿನ ಪ್ರಕಾರ ಕೆಲವೇ ಗಂಟೆಗಳಲ್ಲಿ ಬಂಧಿಸಲಾಗುವುದು’ ಎಂದು ಪೊಲೀಸರು ಭರವಸೆ ನೀಡಿದ್ದಾರೆ.

ಅನೇಕ ಕಡೆಗಳಲ್ಲಿ ಪುನೀತ್​ ರಾಜ್​ಕುಮಾರ್​ ಅವರ ಮೇಲಿನ ಭಕ್ತಿ-ಭಾವಕ್ಕಾಗಿ ಅಭಿಮಾನಿಗಳು ದೇವಸ್ಥಾನ ಕಟ್ಟಿದ್ದಾರೆ. ಪುನೀತ್​ ಅವರ ಪ್ರತಿಭೆ, ಪುತ್ಥಳಿ ನಿರ್ಮಿಸಿ ನಮಿಸುತ್ತಿದ್ದಾರೆ. ಹಲವು ರಸ್ತೆ, ವೃತ್ತ, ಪಾರ್ಕ್​ ಮುಂತಾದ ಸಾರ್ವಜನಿಕ ಸ್ಥಳಗಳಿಗೆ ಪುನೀತ್​ ರಾಜ್​ಕುಮಾರ್​ ಅವರ ಹೆಸರು ಇಡಲಾಗಿದೆ. ಪುನೀತ್​ ಅವರ ಹೆಸರಿನಲ್ಲಿ ನೂರಾರು ಸಮಾಜಮುಖಿ ಕೆಲಸಗಳು ನಡೆಯುತ್ತಿವೆ. ಕೆಲವೇ ದಿನಗಳ ಹಿಂದೆ ಅಯ್ಯಪ್ಪ ಸ್ವಾಮಿಯ ಅನೇಕ ಭಕ್ತರು ಪುನೀತ್​ ರಾಜ್​ಕುಮಾರ್ ಅವರ ಫೋಟೋ ಹಿಡಿದು ಶಬರಿಮಲೆ ಯಾತ್ರೆ ಮಾಡಿದ್ದರು. ಇರುಮುಡಿಯ ಜತೆಗೆ ಅಪ್ಪು ಅವರ​ ಫೋಟೋವನ್ನೂ ಹೊತ್ತುಕೊಂಡು ಅಯ್ಯಪ್ಪನ ದೇವಾಲಯದ 18 ಮೆಟ್ಟಿಲುಗಳನ್ನು ಭಕ್ತರು ಏರಿದ್ದರು. ಅನೇಕ ದಂಪತಿಗಳು ತಮ್ಮ ಮಕ್ಕಳಿಗೆ ಪುನೀತ್​ ರಾಜ್​ಕುಮಾರ್​ ಎಂದು ನಾಮಕರಣ ಮಾಡಿ ಅಭಿಮಾನ ಮೆರೆದಿದ್ದಾರೆ. ಈ ಎಲ್ಲ ಘಟನೆಗಳೆಗಳನ್ನು ನೋಡಿದರೆ ಅಪ್ಪು ಬಗ್ಗೆ ಜನರಿಗೆ ಯಾವ ರೀತಿಯ ಎಮೋಷನ್​ ಇದೆ ಎಂಬುದು ಗೊತ್ತಾಗುತ್ತದೆ. ಆದರೆ ಕೊಪ್ಪಳದಲ್ಲಿ ಕಿಡಿಗೇಡಿಗಳು ಪುನೀತ್​ ನಾಮಫಲಕ ಮತ್ತು ಕನ್ನಡ ಧ್ವಜಕ್ಕೆ ಅವಮಾನ ಮಾಡಿದ್ದಾರೆ. ಇದರಿಂದ ಅಭಿಮಾನಿಗಳು ಕೋಪಗೊಂಡು ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ:

ಜಗ್ಗೇಶ್​ ಜನ್ಮದಿನ: ಪುನೀತ್​ ವಿಶ್​ ಮಾಡಿದ್ದ ಆ ವಿಡಿಯೋ ಮತ್ತೆ ವೈರಲ್​; ಭಾವುಕರಾದ ‘ನವರಸ ನಾಯಕ’

ಶಿರಸಿ ಮಾರಿಕಾಂಬೆ ರಥದ ಬಳಿ ತಲುಪಿತು ಅಪ್ಪು ಫೋಟೋ; ಜಾತ್ರೆಯಲ್ಲಿ ಅಭಿಮಾನ ಮೆರೆದ ಪುನೀತ್​ ಫ್ಯಾನ್ಸ್

Published On - 1:33 pm, Sat, 19 March 22

ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ