AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಪುನೀತ್ ರಾಜ್​ಕುಮಾರ್​ಗೆ ಸಂಗೀತದ ಮೂಲಕ ನುಡಿನಮನ ಸಲ್ಲಿಸಿದ ರಾಜೇಶ್ ಕೃಷ್ಣನ್

Puneeth Rajkumar: ಶಾಸಕ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪುನೀತ್ ನುಡಿನಮನ‌ ಕಾರ್ಯಕ್ರಮದಲ್ಲಿ ರೇಣುಕಾಚಾರ್ಯ ಕುಟುಂಬದ 62 ಜನರು ನೇತ್ರದಾನಕ್ಕೆ‌ ನಿರ್ಧಾರ ಮಾಡಿದರು.

ದಾವಣಗೆರೆ: ಪುನೀತ್ ರಾಜ್​ಕುಮಾರ್​ಗೆ ಸಂಗೀತದ ಮೂಲಕ ನುಡಿನಮನ ಸಲ್ಲಿಸಿದ ರಾಜೇಶ್ ಕೃಷ್ಣನ್
ಸಂಗೀತದ ಮೂಲಕ ಗಾಯಕ ರಾಜೇಶ್ ಕೃಷ್ಣನ್ ಅಪ್ಪುಗೆ ನುಡಿನಮನ ಸಲ್ಲಿಸಿದರು
TV9 Web
| Edited By: |

Updated on:Nov 09, 2021 | 10:07 AM

Share

ದಾವಣಗೆರೆ: ಪುನೀತ್ ರಾಜ್​ಕುಮಾರ್​ಗೆ (Puneeth Rajkumar) ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ನುಡಿನಮನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹೊನ್ನಾಳಿ ಪಟ್ಟಣದಲ್ಲಿ ನಿನ್ನೆ (ನವೆಂಬರ್ 8) ತಡರಾತ್ರಿ ವರೆಗೆ ನುಡಿನಮನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ತಮ್ಮ ಮಧುರ ಸಂಗೀತದ ಮೂಲಕ ಗಾಯಕ ರಾಜೇಶ್ ಕೃಷ್ಣನ್, ಅಪ್ಪುಗೆ ನುಡಿನಮನ ಸಲ್ಲಿಸಿದರು. ಶಾಸಕ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪುನೀತ್ ನುಡಿನಮನ‌ ಕಾರ್ಯಕ್ರಮದಲ್ಲಿ ರೇಣುಕಾಚಾರ್ಯ ಕುಟುಂಬದ 62 ಜನರು ನೇತ್ರದಾನಕ್ಕೆ‌ ನಿರ್ಧಾರ ಮಾಡಿದರು. ಜತೆಗೆ ಶಾಸಕರಿಗೆ ಅವಳಿ ತಾಲೂಕಿನ 500 ಜನರು‌ ಸಾಥ್ ನೀಡಿದ್ದು, ನೇತ್ರದಾನಕ್ಕೆ ಕೈಜೋಡಿಸಿದ್ದಾರೆ.

ಮುಂದಿನ ದಿನಗಳಲ್ಲಿ ಅವಳಿ ತಾಲೂಕಿನಲ್ಲಿ ಐದು ಸಾವಿರ ಜನರು ನೇತ್ರಾದಾನ ಮಾಡಿಸಲು ಸಚಿವ‌ ರೇಣುಕಾಚಾರ್ಯರು ಸಂಕಲ್ಪ ಮಾಡಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ನೇತ್ರದಾನದಿಂದ ಪ್ರೇರಣೆಗೊಂಡ‌ ರೇಣುಕಾಚಾರ್ಯ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಿದ್ದಾರೆ.

ಹೊನ್ನಾಳಿ ಶಾಸಕ ರೇಣುಕಾಚಾರ್ಯರ ಇಡೀ ಕುಟುಂಬ ನೇತ್ರದಾನ ಮಾಡಲು ನಿರ್ಧಾರ ಈಗಾಗಲೇ ಮರಣೋತ್ತರವಾಗಿ ನೇತ್ರದಾನ ಮಾಡಲು ರೇಣುಕಾಚಾರ್ಯ ಕುಟುಂಬ ಶಿವಮೊಗ್ಗ ಮೂಲದ ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ ನೋಂದಣಿ ಮಾಡಿಸಿದ್ದಾರೆ. ಶಾಸಕರ ಅವಿಭಕ್ತ ಕುಟುಂಬದಲ್ಲಿ ಒಟ್ಟು 62 ಜನರಿದ್ದಾರೆ. ಈ 62 ಮಂದಿ ನೇತ್ರದಾನ ಮಾಡಲು ನೋಂದಣಿ ಮಾಡಿಸಿದ್ದಾರೆ ಎಂದು ರೇಣುಕಾರ್ಚಾರ್ಯರ ಪತ್ನಿ ಸುಮಾ ತಿಳಿಸಿದ್ದಾರೆ. ಹೊನ್ನಾಳಿಯಲ್ಲಿ ನಟ ಪುನೀತ್‌ಗೆ ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನೇತ್ರದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ವಿಶೇಷ ನಮನ ಸಲ್ಲಿಸಲಾಯಿತು. ಇದೇ ಕಾರ್ಯಕ್ರಮದಲ್ಲಿ ಹಿರಿಯ ನಟ ಹೊನ್ನವಳ್ಳಿ ಕೃಷ್ಣ ಹಾಗೂ ಟೆನ್ನಿಸ್ ಕೃಷ್ಣ ಭಾಗಿಯಾಗಿ ಪುನೀತ್ ಜೊತೆ ಕೆಲಸ ಮಾಡಿದ ನೆನಪುಗಳನ್ನು ಮೆಲುಕು ಹಾಕಿದರು. ವೇದಿಕೆ ಮೇಲೆ ಶಾಸಕ ರೇಣುಕಾಚಾರ್ಯ, ಪತ್ನಿ ಸುಮಾ, ಪುತ್ರ ಚಂದನ, ಪುತ್ರಿ ಚೇತನಾ ನೇತ್ರದಾನಕ್ಕೆ ಸಹಿ ಹಾಕಿದರು‌. ಇದೇ ವೇಳೆ ಗಾಯಕ ರಾಜೇಶ್ ಕೃಷ್ಣನ್ ಸೇರಿದಂತೆ ನೂರಾರು ಜನ ನೇತ್ರದಾನದ ಪತ್ರಕ್ಕೆ ಸಹಿ ಹಾಕಿದರು.

ಇದನ್ನೂ ಓದಿ: ಪುನೀತ್​ ರಾಜ್​ಕುಮಾರ್​ ಸಮಾಧಿಗೆ ಪೂಜೆ ಸಲ್ಲಿಸಿ, ಗಳಗಳನೆ ಅತ್ತ ಕಾಲಿವುಡ್​ ನಟ ಸಿದ್ದಾರ್ಥ್​

ನಿನ್ನ ಚಿಂತನೆಗಳಿಂದಲೇ ಎಂದಿಗೂ ನಮ್ಮ ಜತೆ ಇರುತ್ತೀಯಾ, ತಮ್ಮ ಪುನೀತ್​ನನ್ನು ನೆನೆದು ಭಾವನಾತ್ಮಕ ಪೋಸ್ಟ್ ಮಾಡಿದ ರಾಘಣ್ಣ

Published On - 9:50 am, Tue, 9 November 21

ಎಐನಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್
ಎಐನಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್
ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಬೆಂಗಳೂರಿನಲ್ಲಿ ಕಸದ ಸಮಸ್ಯೆ: ನಿಂತಲ್ಲೇ ನಿಂತ ತ್ಯಾಜ್ಯ ಸಂಗ್ರಹಣೆ ವಾಹನಗಳು
ಬೆಂಗಳೂರಿನಲ್ಲಿ ಕಸದ ಸಮಸ್ಯೆ: ನಿಂತಲ್ಲೇ ನಿಂತ ತ್ಯಾಜ್ಯ ಸಂಗ್ರಹಣೆ ವಾಹನಗಳು
KSRTC ಬಸ್​​ನ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದ ಕಳ್ಳ!
KSRTC ಬಸ್​​ನ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದ ಕಳ್ಳ!
ಮೆಜೆಸ್ಟಿಕ್ ರೈಲ್ವೆ ಪಾರ್ಕಿಂಗ್ ಲಾಟ್‌ನಲ್ಲಿ ಕಾರಿಗೆ ಬೆಂಕಿ
ಮೆಜೆಸ್ಟಿಕ್ ರೈಲ್ವೆ ಪಾರ್ಕಿಂಗ್ ಲಾಟ್‌ನಲ್ಲಿ ಕಾರಿಗೆ ಬೆಂಕಿ
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ