Puneeth Rajkumar Obituary: ಹೃದಯ ಬಡಿತ ನಿಲ್ಲಿಸುವುದಕ್ಕೂ ಮುನ್ನ ಕೋಟ್ಯಂತರ ಜನರ ಹೃದಯ ಗೆದ್ದಿದ್ದ ಪುನೀತ್

Puneeth Rajkumar Heart Attack: ಪುನೀತ್​ ರಾಜ್​ಕುಮಾರ್​ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಎಲ್ಲರೂ ಕಂಬನಿ ಮಿಡಿಯುತ್ತಿದ್ದಾರೆ. ಬಣ್ಣದಲೋಕದಲ್ಲಿ ಅವರು ಸಾಗಿಬಂದ ಹಾದಿಯನ್ನು ಮರೆಯಲು ಸಾಧ್ಯವಿಲ್ಲ.

Puneeth Rajkumar Obituary: ಹೃದಯ ಬಡಿತ ನಿಲ್ಲಿಸುವುದಕ್ಕೂ ಮುನ್ನ ಕೋಟ್ಯಂತರ ಜನರ ಹೃದಯ ಗೆದ್ದಿದ್ದ ಪುನೀತ್
ಪುನೀತ್​ ರಾಜ್​ಕುಮಾರ್​
Follow us
| Updated By: ಮದನ್​ ಕುಮಾರ್​

Updated on: Oct 29, 2021 | 2:46 PM

ಪುನೀತ್​ ರಾಜ್​ಕುಮಾರ್​ (Puneeth Rajkumar) ಇನ್ನಿಲ್ಲ ಎಂಬ ಸುದ್ದಿಯನ್ನು ನಂಬಲು ಸಾಧ್ಯವಾಗುತ್ತಲೇ ಇಲ್ಲ. ಫಿಟ್ನೆಸ್​ಗೆ ಹೆಚ್ಚು ಕಾಳಜಿ ನೀಡುತ್ತಿದ್ದ ಅವರು ಹೃದಯಾಘಾತದಿಂದ ಶುಕ್ರವಾರ (ಅ.29) ಮೃತರಾಗಿದ್ದಾರೆ. ಇಡೀ ಕರುನಾಡಿಗೆ ಇದು ಕರಾಳ ದಿನ. ‘ಪವರ್​ ಸ್ಟಾರ್​’ ಅಭಿಮಾನಿಗಳು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಚಾಪು ಮೂಡಿಸಿದ್ದ ಅಪ್ಪು ಇಹಲೋಕ ತ್ಯಜಿಸಿರುವುದು ತೀವ್ರ ನೋವಿನ ಸಂಗತಿ. ಚಿಕ್ಕ ವಯಸ್ಸಿನಿಂದಲೂ ಬಣ್ಣದ ಲೋಕದಲ್ಲಿ ಸಕ್ರಿಯರಾಗಿದ್ದ ಪುನೀತ್​ ಅವರು ಸ್ಯಾಂಡಲ್​ವುಡ್​ಗೆ ನೀಡಿದ ಕೊಡುಗೆ ಅಪಾರ. ಅವರ ಸಿನಿಮಾ ಜರ್ನಿ ನೋಡಿದರೆ ಎಷ್ಟೋ ಜನರಿಗೆ ಸ್ಫೂರ್ತಿ ಆಗುವಂಥದ್ದು. ಅವರು ಸಾಗಿ ಬಂದ ಬಣ್ಣ ಬದುಕಿನ ಪಯಣ ಹೀಗಿತ್ತು..

ಅಂದು ಎಲ್ಲರ ಮೆಚ್ಚಿನ ಮಾಸ್ಟರ್​ ಲೋಹಿತ್​

ಡಾ. ರಾಜ್​ಕುಮಾರ್​ ಪುತ್ರನಾದ ಕಾರಣ ಪುನೀತ್​ ರಾಜ್​ಕುಮಾರ್​ ಅವರಿಗೆ ತುಂಬ ಚಿಕ್ಕ ವಯಸ್ಸಿನಲ್ಲಿಯೇ ಸಿನಿಮಾರಂಗದ ಒಡನಾಟ ಬೆಳೆಯಿತು. ಬಾಲಕನಾಗಿದ್ದಾಗಲೇ ಅವರು ಕ್ಯಾಮೆರಾ ಎದುರಿಸಿದರು. ಬಾಲನಟನಾಗಿ ಅನೇಕ ಸಿನಿಮಾಗಳಲ್ಲಿ ಬಣ್ಣ ಹಚ್ಚಿದರು. ಆಗಲೇ ಅವರು ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿದರು. 14ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ಬಾಲನಟನಾಗಿ ಅಭಿನಯಿಸಿದ್ದರು. ಸನಾದಿ ಅಪ್ಪಣ್ಣ, ತಾಯಿಗೆ ತಕ್ಕ ಮಗ, ವಸಂತ ಗೀತ, ಭಾಗ್ಯವಂತರು ಮುಂತಾದ ಸಿನಿಮಾಗಳಲ್ಲಿ ಪುನೀತ್​ ನಟನೆಗೆ ಜನ ಮೆಚ್ಚುಗೆ ಸೂಚಿಸಿದ್ದರು. ಆಗ ಅವರನ್ನು ಮಾಸ್ಟರ್​ ಲೋಹಿತ್​ ಎಂಬ ಹೆಸರಿನಿಂದ ಕರೆಯಲಾಗುತ್ತಿತ್ತು.

9ನೇ ವರ್ಷಕ್ಕೆ ನ್ಯಾಷನಲ್​ ಅವಾರ್ಡ್​!

ನಟನೆ ಎಂಬುದು ಪುನೀತ್​ ರಾಜ್​ಕುಮಾರ್​ ಅವರ ರಕ್ತದಲ್ಲೇ ಇತ್ತು. ಚಿಕ್ಕ ವಯಸ್ಸಿನಲ್ಲೇ ಅವರು ಯಾವ ಪಾತ್ರ ಕೊಟ್ಟರೂ ಲೀಲಾಜಾಲವಾಗಿ ನಿಭಾಯಿಸುವ ಕಲೆಯನ್ನು ಮೈಗೂಡಿಸಿಕೊಂಡಿದ್ದರು. ‘ಭಕ್ತ ಪ್ರಹ್ಲಾದ’ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಅವರ ನಟನೆಯನ್ನು ಸಿನಿಪ್ರಿಯರು ಎಂದಿಗೂ ಮರೆಯುವಂತಿಲ್ಲ. ‘ಬೆಟ್ಟದ ಹೂವು’ ಸಿನಿಮಾದಲ್ಲಿನ ಅವರ ನಟನೆಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿತ್ತು. ಅಲ್ಲದೇ, ಆ ಚಿತ್ರದಲ್ಲಿನ ನಟನೆಗಾಗಿ ಅವರಿಗೆ ಅತ್ಯುತ್ತಮ ಬಾಲನಟ ರಾಷ್ಟ್ರ ಪ್ರಶಸ್ತಿ ಕೂಡ ಸಿಕ್ಕಿತ್ತು.

ಮೊದಲ ಚಿತ್ರ ‘ಅಪ್ಪು’ ಸೂಪರ್​ ಹಿಟ್​

1989ರಲ್ಲಿ ತೆರೆಕಂಡ ‘ಪರಷುರಾಮ್​’ ಸಿನಿಮಾದ ಬಳಿಕ ಪುನೀತ್​ ರಾಜ್​ಕುಮಾರ್​ ಅವರು ನಟನೆಯಿಂದ ಒಂದಷ್ಟು ವರ್ಷ ಬ್ರೇಕ್​ ತೆಗೆದುಕೊಂಡರು. 2002ರಲ್ಲಿ ‘ಅಪ್ಪು’ ಸಿನಿಮಾ ಮೂಲಕ ಪುನೀತ್​ ಹೀರೋ ಆಗಿ ಸ್ಯಾಂಡಲ್​ವುಡ್​ನಲ್ಲಿ ಹೊಸ ಅಧ್ಯಾಯ ಶುರುಮಾಡಿದರು. ಮೊದಲ ಚಿತ್ರವೇ ಸೂಪರ್​ಹಿಟ್​ ಆಯಿತು. ಆ ಸಿನಿಮಾಗೆ ತೆಲುಗಿನ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್​ ಆ್ಯಕ್ಷನ್​-ಕಟ್​ ಹೇಳಿದ್ದರು. ನಂತರ ತೆರೆಕಂಡ ‘ಅಭಿ’, ‘ಆಕಾಶ್​’, ‘ಅರಸು’ ಸಿನಿಮಾಗಳೆಲ್ಲವೂ ಭಾರಿ ಯಶಸ್ಸು ತಂದುಕೊಟ್ಟವು.

ಇದನ್ನೂ ಓದಿ:

Puneeth Rajkumar: ಪುನೀತ್​ ರಾಜ್​ಕುಮಾರ್​ ಹೃದಯಾಘಾತದಿಂದ ನಿಧನ; ಕರ್ನಾಟಕದ ಪಾಲಿಗೆ ಕರಾಳ ಶುಕ್ರವಾರ

‘ನಮ್ಮ ಫ್ಯಾಮಿಲಿ ಅಂತಲ್ಲ.. ಫ್ಯಾಮಿಲಿ ಅಂದ್ರೆ ಚಿತ್ರರಂಗ’: ನಿನ್ನ ಸನಿಹಕೆ ಚಿತ್ರ ನೋಡಿದ ಬಳಿಕ ಪುನೀತ್​ ಮಾತು

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ