AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar Obituary: ಹೃದಯ ಬಡಿತ ನಿಲ್ಲಿಸುವುದಕ್ಕೂ ಮುನ್ನ ಕೋಟ್ಯಂತರ ಜನರ ಹೃದಯ ಗೆದ್ದಿದ್ದ ಪುನೀತ್

Puneeth Rajkumar Heart Attack: ಪುನೀತ್​ ರಾಜ್​ಕುಮಾರ್​ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಎಲ್ಲರೂ ಕಂಬನಿ ಮಿಡಿಯುತ್ತಿದ್ದಾರೆ. ಬಣ್ಣದಲೋಕದಲ್ಲಿ ಅವರು ಸಾಗಿಬಂದ ಹಾದಿಯನ್ನು ಮರೆಯಲು ಸಾಧ್ಯವಿಲ್ಲ.

Puneeth Rajkumar Obituary: ಹೃದಯ ಬಡಿತ ನಿಲ್ಲಿಸುವುದಕ್ಕೂ ಮುನ್ನ ಕೋಟ್ಯಂತರ ಜನರ ಹೃದಯ ಗೆದ್ದಿದ್ದ ಪುನೀತ್
ಪುನೀತ್​ ರಾಜ್​ಕುಮಾರ್​
TV9 Web
| Updated By: ಮದನ್​ ಕುಮಾರ್​|

Updated on: Oct 29, 2021 | 2:46 PM

Share

ಪುನೀತ್​ ರಾಜ್​ಕುಮಾರ್​ (Puneeth Rajkumar) ಇನ್ನಿಲ್ಲ ಎಂಬ ಸುದ್ದಿಯನ್ನು ನಂಬಲು ಸಾಧ್ಯವಾಗುತ್ತಲೇ ಇಲ್ಲ. ಫಿಟ್ನೆಸ್​ಗೆ ಹೆಚ್ಚು ಕಾಳಜಿ ನೀಡುತ್ತಿದ್ದ ಅವರು ಹೃದಯಾಘಾತದಿಂದ ಶುಕ್ರವಾರ (ಅ.29) ಮೃತರಾಗಿದ್ದಾರೆ. ಇಡೀ ಕರುನಾಡಿಗೆ ಇದು ಕರಾಳ ದಿನ. ‘ಪವರ್​ ಸ್ಟಾರ್​’ ಅಭಿಮಾನಿಗಳು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಚಾಪು ಮೂಡಿಸಿದ್ದ ಅಪ್ಪು ಇಹಲೋಕ ತ್ಯಜಿಸಿರುವುದು ತೀವ್ರ ನೋವಿನ ಸಂಗತಿ. ಚಿಕ್ಕ ವಯಸ್ಸಿನಿಂದಲೂ ಬಣ್ಣದ ಲೋಕದಲ್ಲಿ ಸಕ್ರಿಯರಾಗಿದ್ದ ಪುನೀತ್​ ಅವರು ಸ್ಯಾಂಡಲ್​ವುಡ್​ಗೆ ನೀಡಿದ ಕೊಡುಗೆ ಅಪಾರ. ಅವರ ಸಿನಿಮಾ ಜರ್ನಿ ನೋಡಿದರೆ ಎಷ್ಟೋ ಜನರಿಗೆ ಸ್ಫೂರ್ತಿ ಆಗುವಂಥದ್ದು. ಅವರು ಸಾಗಿ ಬಂದ ಬಣ್ಣ ಬದುಕಿನ ಪಯಣ ಹೀಗಿತ್ತು..

ಅಂದು ಎಲ್ಲರ ಮೆಚ್ಚಿನ ಮಾಸ್ಟರ್​ ಲೋಹಿತ್​

ಡಾ. ರಾಜ್​ಕುಮಾರ್​ ಪುತ್ರನಾದ ಕಾರಣ ಪುನೀತ್​ ರಾಜ್​ಕುಮಾರ್​ ಅವರಿಗೆ ತುಂಬ ಚಿಕ್ಕ ವಯಸ್ಸಿನಲ್ಲಿಯೇ ಸಿನಿಮಾರಂಗದ ಒಡನಾಟ ಬೆಳೆಯಿತು. ಬಾಲಕನಾಗಿದ್ದಾಗಲೇ ಅವರು ಕ್ಯಾಮೆರಾ ಎದುರಿಸಿದರು. ಬಾಲನಟನಾಗಿ ಅನೇಕ ಸಿನಿಮಾಗಳಲ್ಲಿ ಬಣ್ಣ ಹಚ್ಚಿದರು. ಆಗಲೇ ಅವರು ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿದರು. 14ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ಬಾಲನಟನಾಗಿ ಅಭಿನಯಿಸಿದ್ದರು. ಸನಾದಿ ಅಪ್ಪಣ್ಣ, ತಾಯಿಗೆ ತಕ್ಕ ಮಗ, ವಸಂತ ಗೀತ, ಭಾಗ್ಯವಂತರು ಮುಂತಾದ ಸಿನಿಮಾಗಳಲ್ಲಿ ಪುನೀತ್​ ನಟನೆಗೆ ಜನ ಮೆಚ್ಚುಗೆ ಸೂಚಿಸಿದ್ದರು. ಆಗ ಅವರನ್ನು ಮಾಸ್ಟರ್​ ಲೋಹಿತ್​ ಎಂಬ ಹೆಸರಿನಿಂದ ಕರೆಯಲಾಗುತ್ತಿತ್ತು.

9ನೇ ವರ್ಷಕ್ಕೆ ನ್ಯಾಷನಲ್​ ಅವಾರ್ಡ್​!

ನಟನೆ ಎಂಬುದು ಪುನೀತ್​ ರಾಜ್​ಕುಮಾರ್​ ಅವರ ರಕ್ತದಲ್ಲೇ ಇತ್ತು. ಚಿಕ್ಕ ವಯಸ್ಸಿನಲ್ಲೇ ಅವರು ಯಾವ ಪಾತ್ರ ಕೊಟ್ಟರೂ ಲೀಲಾಜಾಲವಾಗಿ ನಿಭಾಯಿಸುವ ಕಲೆಯನ್ನು ಮೈಗೂಡಿಸಿಕೊಂಡಿದ್ದರು. ‘ಭಕ್ತ ಪ್ರಹ್ಲಾದ’ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಅವರ ನಟನೆಯನ್ನು ಸಿನಿಪ್ರಿಯರು ಎಂದಿಗೂ ಮರೆಯುವಂತಿಲ್ಲ. ‘ಬೆಟ್ಟದ ಹೂವು’ ಸಿನಿಮಾದಲ್ಲಿನ ಅವರ ನಟನೆಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿತ್ತು. ಅಲ್ಲದೇ, ಆ ಚಿತ್ರದಲ್ಲಿನ ನಟನೆಗಾಗಿ ಅವರಿಗೆ ಅತ್ಯುತ್ತಮ ಬಾಲನಟ ರಾಷ್ಟ್ರ ಪ್ರಶಸ್ತಿ ಕೂಡ ಸಿಕ್ಕಿತ್ತು.

ಮೊದಲ ಚಿತ್ರ ‘ಅಪ್ಪು’ ಸೂಪರ್​ ಹಿಟ್​

1989ರಲ್ಲಿ ತೆರೆಕಂಡ ‘ಪರಷುರಾಮ್​’ ಸಿನಿಮಾದ ಬಳಿಕ ಪುನೀತ್​ ರಾಜ್​ಕುಮಾರ್​ ಅವರು ನಟನೆಯಿಂದ ಒಂದಷ್ಟು ವರ್ಷ ಬ್ರೇಕ್​ ತೆಗೆದುಕೊಂಡರು. 2002ರಲ್ಲಿ ‘ಅಪ್ಪು’ ಸಿನಿಮಾ ಮೂಲಕ ಪುನೀತ್​ ಹೀರೋ ಆಗಿ ಸ್ಯಾಂಡಲ್​ವುಡ್​ನಲ್ಲಿ ಹೊಸ ಅಧ್ಯಾಯ ಶುರುಮಾಡಿದರು. ಮೊದಲ ಚಿತ್ರವೇ ಸೂಪರ್​ಹಿಟ್​ ಆಯಿತು. ಆ ಸಿನಿಮಾಗೆ ತೆಲುಗಿನ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್​ ಆ್ಯಕ್ಷನ್​-ಕಟ್​ ಹೇಳಿದ್ದರು. ನಂತರ ತೆರೆಕಂಡ ‘ಅಭಿ’, ‘ಆಕಾಶ್​’, ‘ಅರಸು’ ಸಿನಿಮಾಗಳೆಲ್ಲವೂ ಭಾರಿ ಯಶಸ್ಸು ತಂದುಕೊಟ್ಟವು.

ಇದನ್ನೂ ಓದಿ:

Puneeth Rajkumar: ಪುನೀತ್​ ರಾಜ್​ಕುಮಾರ್​ ಹೃದಯಾಘಾತದಿಂದ ನಿಧನ; ಕರ್ನಾಟಕದ ಪಾಲಿಗೆ ಕರಾಳ ಶುಕ್ರವಾರ

‘ನಮ್ಮ ಫ್ಯಾಮಿಲಿ ಅಂತಲ್ಲ.. ಫ್ಯಾಮಿಲಿ ಅಂದ್ರೆ ಚಿತ್ರರಂಗ’: ನಿನ್ನ ಸನಿಹಕೆ ಚಿತ್ರ ನೋಡಿದ ಬಳಿಕ ಪುನೀತ್​ ಮಾತು

ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ