AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಧನಕ್ಕೂ ಮುನ್ನ ಪುನೀತ್ ಮಾಡಿದ್ದ ಟ್ವೀಟ್​ ವೈರಲ್​; ಒಂದು ವರ್ಷದ ಬಳಿಕ ನನಸಾಗುತ್ತಿದೆ ಕನಸು

ಪುನೀತ್ ರಾಜ್​ಕುಮಾರ್ ಅವರು ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಮಾಡುತ್ತಾರೆ ಎಂಬುದು ಮೊದಲೇ ಚರ್ಚೆಯಲ್ಲಿತ್ತು. ಕಳೆದ ವರ್ಷ ಇದೇ ದಿನ (ಅಕ್ಟೋಬರ್ 27,2021) ಅಪ್ಪು ಈ ಬಗ್ಗೆ ಒಂದು ಅಪ್​ಡೇಟ್ ನೀಡಿದ್ದರು.

ನಿಧನಕ್ಕೂ ಮುನ್ನ ಪುನೀತ್ ಮಾಡಿದ್ದ ಟ್ವೀಟ್​ ವೈರಲ್​; ಒಂದು ವರ್ಷದ ಬಳಿಕ ನನಸಾಗುತ್ತಿದೆ ಕನಸು
ಪುನೀತ್
TV9 Web
| Edited By: |

Updated on:Oct 27, 2022 | 9:01 AM

Share

ಪುನೀತ್ ರಾಜ್​ಕುಮಾರ್ (Puneeth Rajkumar) ಅವರನ್ನು ಕಂಡರೆ ಮಕ್ಕಳಿಂದ ಹಿಡಿದು ವಯಸ್ಸಾದ ವ್ಯಕ್ತಿಗಳವರೆಗೂ ಅಚ್ಚುಮೆಚ್ಚು. ಈಗ ಅವರಿಲ್ಲ ಎಂಬ ನೋವು ಎಲ್ಲರನ್ನೂ ಕಾಡುತ್ತಿದೆ. ಪುನೀತ್ ನಮ್ಮ ಜೊತೆ ಇಲ್ಲ ಎಂಬ ಸತ್ಯವನ್ನು ಒಪ್ಪಿಕೊಳ್ಳೋಕೆ ಯಾರೊಬ್ಬರೂ ಸಿದ್ಧರಿಲ್ಲ. ಅವರಿಲ್ಲ ಎಂದರೂ ಅವರು ಮಾಡಿದ ಕೆಲಸಗಳು ನಮ್ಮ ಮುಂದಿವೆ. ಈಗ ಪುನೀತ್ ಅವರ ‘ಗಂಧದ ಗುಡಿ’ ಡಾಕ್ಯುಮೆಂಟರಿ ರಿಲೀಸ್​ಗೆ ರೆಡಿ ಇದೆ. ಶುಕ್ರವಾರ (ಅಕ್ಟೋಬರ್ 28) ಈ ಸಾಕ್ಷ್ಯಚಿತ್ರ ಬಿಡುಗಡೆ ಆಗುತ್ತಿದೆ. ಇಂದು (ಅಕ್ಟೋಬರ್ 27) ಹಲವು ಕಡೆಗಳಲ್ಲಿ ಇದರ ಪ್ರೀಮಿಯರ್ ​ಶೋಗಳನ್ನು ಆಯೋಜನೆ ಮಾಡಲಾಗಿದ್ದು, ಟಿಕೆಟ್​ಗಳು ಸೋಲ್ಡ್​ಔಟ್ ಆಗಿವೆ. ಈ ಮಧ್ಯೆ ಪುನೀತ್ ಅವರ ಹಳೆಯ ಟ್ವೀಟ್ ವೈರಲ್ ಆಗಿದೆ.

ಪುನೀತ್ ರಾಜ್​ಕುಮಾರ್ ಅವರು ಸಾಕಷ್ಟು ಕನಸುಗಳನ್ನು ಕಂಡಿದ್ದ ವ್ಯಕ್ತಿ. ಕೇವಲ ನಟನೆ ಮಾತ್ರವಲ್ಲದೆ ನಿರ್ಮಾಣದಲ್ಲೂ ಬ್ಯುಸಿ ಇದ್ದರು. ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ಸಾಮಾಜಿಕ ಕೆಲಸಗಳಲ್ಲಿ ತೊಡಗಿಕೊಂಡಿದ್ದರು. ಪುನೀತ್ ರಾಜ್​ಕುಮಾರ್ ಅವರು ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಮಾಡುತ್ತಾರೆ ಎಂಬುದು ಮೊದಲೇ ಚರ್ಚೆಯಲ್ಲಿತ್ತು. ಕಳೆದ ವರ್ಷ ಇದೇ ದಿನ (ಅಕ್ಟೋಬರ್ 27,2021) ಅಪ್ಪು ಈ ಬಗ್ಗೆ ಒಂದು ಅಪ್​ಡೇಟ್ ನೀಡಿದ್ದರು.

ಇದನ್ನೂ ಓದಿ
Image
‘ಗಂಧದ ಗುಡಿ’ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ
Image
Puneetha Parva: ‘ಮಿಸ್​ ಯೂ ಅಪ್ಪು’: ಪುನೀತ ಪರ್ವ ವೇದಿಕೆಯಲ್ಲಿ ‘ಪವರ್​ ಸ್ಟಾರ್​’ಗೆ ನುಡಿ ನಮನ ಸಲ್ಲಿಸಿದ ಗಣ್ಯರು
Image
‘ನಾನಿರುವವರೆಗೂ ಈ ಹಾಡು ನನ್ನ ಜತೆ ಇರುತ್ತದೆ’; ‘ಪುನೀತ ಪರ್ವ’ ವೇದಿಕೆ ಮೇಲೆ ರಾಘಣ್ಣ ಭಾವುಕ ನುಡಿ
Image
Puneetha Parva: ‘ಪುನೀತ ಪರ್ವ’ ಲೈವ್​ ನೋಡಲು ಇಲ್ಲಿ ಕ್ಲಿಕ್​ ಮಾಡಿ; ಅರಮನೆ ಮೈದಾನದಲ್ಲಿ ತಾರೆಯರ ಸಂಗಮ

‘ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು. ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು. ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು. ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು. ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ’ ಎಂದು ಪುನೀತ್ ಟ್ವೀಟ್ ಮಾಡಿದ್ದರು. ಇದರಲ್ಲಿ ನವೆಂಬರ್ 1ರಂದು ವಿಶೇಷ ಘೋಷಣೆ ಮಾಡುವ ವಿಚಾರ ತಿಳಿಸಿದ್ದರು. ಈ ಟ್ವೀಟ್ ಮಾಡಿದ ಎರಡೇ ದಿನಕ್ಕೆ ಪುನೀತ್ ನಿಧನ ಹೊಂದಿದರು.

ಇದನ್ನೂ ಓದಿ: ಅಂತೂ ಮೌನ ಮುರಿದ ಅಶ್ವಿನಿ ಪುನೀತ್​ ರಾಜ್​ಕುಮಾರ್​; ‘ಗಂಧದ ಗುಡಿ’ ಬಗ್ಗೆ ಇಲ್ಲಿದೆ ಮೊದಲ ಸಂದರ್ಶನ

ಅಕ್ಟೋಬರ್ 29ರಂದು ಪುನೀತ್​ಗೆ ಹೃದಯಾಘಾತವಾಯಿತು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಯಾವುದೇ ಪ್ರಯೋಜನ ಆಗಲಿಲ್ಲ. ಅವರು ಮೃತಪಟ್ಟ ವಿಚಾರ ಕಾಡ್ಗಿಚ್ಚಿನಂತೆ ಹಬ್ಬಿತು. ಅವರನ್ನು ಕಳೆದುಕೊಂಡ ಚಿತ್ರರಂಗ ಬಡವಾಯಿತು. ಈಗ ಅವರ ಕನಸಿನ ಪ್ರಾಜೆಕ್ಟ್ ‘ಗಂಧದ ಗುಡಿ’ ರಿಲೀಸ್ ಆಗುತ್ತಿದೆ. ಇದಕ್ಕೆ ಪ್ರೇಕ್ಷಕರಿಂದ ಒಳ್ಳೆಯ ರೆಸ್ಪಾನ್ಸ್ ಸಿಗುತ್ತಿದೆ. ಅಕ್ಟೋಬರ್ 29ರಂದು ಪುನೀತ್ ಪುಣ್ಯತಿಥಿ ಇರುವುದರಿಂದ ನಾನಾ ರೀತಿಯ ಸಮಾಜಿಮುಖಿ ಕಾರ್ಯಗಳನ್ನು ಮಾಡಲು ಪ್ಲ್ಯಾನ್ ರೂಪಿಸಲಾಗಿದೆ.

Published On - 8:57 am, Thu, 27 October 22

ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!