AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರು ಬಳಿ ನಾನ್​ವೆಜ್ ಅಡುಗೆಯ ರಿಸಿಪಿ ಕೇಳಿದ್ದ ಪುನೀತ್; ಹಳೆಯ ಆಡಿಯೋ ಕ್ಲಿಪ್ ವೈರಲ್

ನಟಿ ಮಾಲಾಶ್ರೀ ಅವರಿಗೆ ಚಂದ್ರು ಮೇಕಪ್​ಮ್ಯಾನ್ ಆಗಿದ್ದರು. ಚಂದ್ರು ಅವರು ಮಾಲಾಶ್ರೀ ಜೊತೆಗೆ ಬರೋಬ್ಬರಿ 72 ಸಿನಿಮಾಗಳಲ್ಲಿ ಮೇಕಪ್​ಮ್ಯಾನ್ ಆಗಿ ಕೆಲಸ ಮಾಡಿದ್ದರು. ರಾಜ್​ಕುಮಾರ್ ಕುಟುಂಬದ ಜೊತೆ ಚಂದ್ರುಗೆ ಒಳ್ಳೆಯ ಬಾಂಧವ್ಯ ಇದೆ. ಇದಕ್ಕೆ ಈಗ ವೈರಲ್ ಆಗಿರೋ ವಿಡಿಯೋ ಸಾಕ್ಷಿ.

ಚಂದ್ರು ಬಳಿ ನಾನ್​ವೆಜ್ ಅಡುಗೆಯ ರಿಸಿಪಿ ಕೇಳಿದ್ದ ಪುನೀತ್; ಹಳೆಯ ಆಡಿಯೋ ಕ್ಲಿಪ್ ವೈರಲ್
ಚಂದ್ರು-ಪುನೀತ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Feb 14, 2024 | 9:29 AM

Share

ಪುನೀತ್ ರಾಜ್​ಕುಮಾರ್ (Puneeth Rajkumar) ಅವರನ್ನು ಕಳೆದುಕೊಂಡು ಮೂರು ವರ್ಷ ಕಳೆಯುತ್ತಾ ಬಂದಿದೆ. ಅವರು ನಮ್ಮೊಂದಿಗೆ ಇಲ್ಲ ಎಂಬುದನ್ನು ಈಗಲೂ ಅನೇಕರ ಬಳಿ ಅರಗಿಸಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಅವರನ್ನು ನಾನಾ ರೀತಿಯಲ್ಲಿ ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ. ಪಾರ್ಕ್​, ರಸ್ತೆಗಳಿಗೆ ಪುನೀತ್ ಅವರ ಹೆಸರನ್ನು ಇಡಲಾಗಿದೆ. ಈ ಮೂಲಕ ಅವರ ಹೆಸರನ್ನು ಅಜರಾಮರವಾಗಿಸುವ ಕೆಲಸ ಆಗಿದೆ. ಪುನೀತ್ ನಟನೆಯ ಸಿನಿಮಾಗಳು ಈಗಲೂ ಅನೇಕರ ಫೇವರಿಟ್ ಎನಿಸಿಕೊಂಡಿವೆ. ಆಗಾಗ ಪುನೀತ್​ಗೆ ಸಂಬಂಧಿಸಿದ ಹಳೆಯ ವಿಡಿಯೋಗಳು ವೈರಲ್ ಆಗುತ್ತವೆ. ಈಗ ಪುನೀತ್ ಅವರ ಆಡಿಯೋ ಕ್ಲಿಪ್ ಒಂದು ವೈರಲ್ ಆಗಿದೆ.

ಹೋಟೆಲ್ ಮಾಲೀಕ ಹಾಗೂ ಬಾಣಸಿಗ ಚಂದ್ರು ಅವರು ಇತ್ತೀಚೆಗೆ ಸಖತ್ ಫೇಮಸ್ ಆಗಿದ್ದಾರೆ. ಅವರು ಹೇಳಿದ ಬೆಳ್ಳುಳ್ಳಿ ಕಬಾಬ್ ರೆಸಿಪಿ ಸಾಕಷ್ಟು ವೈರಲ್ ಆಗಿದೆ. ಇವರು ಮೊದಲು ಮೇಕಪ್ ಆರ್ಟಿಸ್ಟ್ ಆಗಿದ್ದರು. ನಂತರ ಹೋಟೆಲ್ ಉದ್ಯಮಕ್ಕೆ ಬಂದರು. ಅವರ ಹೆಸರು ಹಾಗೂ ಅವರ ರೆಸಿಪಿಗಳು ಸಾಕಷ್ಟು ವೈರಲ್ ಆಗಿವೆ. ಚಂದ್ರು ಜೊತೆ ಸಹಾಯಕನಾಗಿರುವ ರಾಹುಲ್ ಹೆಸರು ಕೂಡ ಪ್ರಚಲಿತದಲ್ಲಿದೆ. ರಾಜ್​ಕುಮಾರ್ ಕುಟುಂಬದ ಜೊತೆ ಚಂದ್ರುಗೆ ಒಳ್ಳೆಯ ಬಾಂಧವ್ಯ ಇದೆ. ಇದಕ್ಕೆ ಈಗ ವೈರಲ್ ಆಗಿರೋ ವಿಡಿಯೋ ಸಾಕ್ಷಿ.

ಪುನೀತ್ ರಾಜ್​ಕುಮಾರ್ ಅವರಿಗೆ ಆಹಾರದ ಬಗ್ಗೆ ವಿಶೇಷ ಪ್ರೀತಿ. ಅವರು ಒಮ್ಮೆ ಸೌದೆ ಒಲೆಯಲ್ಲಿ ಮಟನ್ ಸಾರು ಮಾಡೋದು ಹೇಗೆ ಎಂದು ಚಂದ್ರುಗೆ ಕರೆ ಮಾಡಿ ಕೇಳಿದ್ದರು. ಅವರು ಕಾಲ್ ಮಾಡಿದ್ದು ಕಾಶ್ಮೀರದಿಂದ ಎನ್ನಲಾಗಿದೆ. ಈ ಮೊದಲು ಕೂಡ ಈ ಆಡಿಯೋ ವೈರಲ್ ಆಗಿತ್ತು. ಆದರೆ, ಆಗ ಚಂದ್ರು ಯಾರು ಎಂಬುದು ಜನರಿಗೆ ಅಷ್ಟಾಗಿ ತಿಳಿದಿರಲಿಲ್ಲ. ಈಗ ಚಂದ್ರು ಕೂಡ ಫೇಮಸ್ ಆದ ಬಳಿಕ ಅವರ ಹಾಗೂ ಪುನೀತ್ ಮಧ್ಯೆ ನಡೆದ ಮಾತುಕತೆಯ ಆಡಿಯೋ ಕ್ಲಿಪ್ ವೈರಲ್ ಆಗಿದೆ.

ಇದನ್ನೂ ಓದಿ: ಚಂದ್ರು ಮಾಡಿದ ಅಡುಗೆ ಸವಿದು ಒನ್​ ಮೋರ್​ ಅಂತಿದ್ರು ಪುನೀತ್​ ರಾಜ್​ಕುಮಾರ್​

‘ನನಗೆ ನಾಳೆಗೆ ರೆಸಿಪಿ ಬೇಕು. ನಾನು 10 ಕೇಜಿ ಮಟನ್ ಸಾರು ಮಾಡಬೇಕು. ಅದಕ್ಕೆ ಏನೇನು ಬೇಕು ಎಂದು ಹೇಳಿ’ ಎಂಬುದಾಗಿ ಪುನೀತ್ ರಾಜ್​ಕುಮಾರ್ ಅವರು ಚಂದ್ರುಗೆ ಫೋನ್ ಮಾಡಿ ಕೇಳಿದ್ದರು. ‘ನಾನು ಬೆಳಿಗ್ಗೆ ವಿಡಿಯೋ ಮಾಡಿ ಕಳಿಸುತ್ತೇನೆ. ಅದನ್ನು ನೋಡಿದ್ರೆ ಸುಲಭವಾಗುತ್ತದೆ’ ಎಂದಿದ್ದರು ಚಂದ್ರು. ಈ ವಿಡಿಯೋ ಈ ವೈರಲ್ ಆಗುತ್ತಿದೆ. ಎಲ್ಲರೂ ಪುನೀತ್ ರಾಜ್​ಕುಮಾರ್ ಅವರನ್ನು ನೆನಪಿಸಿಕೊಳ್ಳುತ್ತಿದ್ದಾರೆ.

ವೈರಲ್ ಆದ ವಿಡಿಯೋ..

View this post on Instagram

A post shared by KA-07 (@kolar_ka_07)

ಖ್ಯಾತ ನಟಿ ಮಾಲಾಶ್ರೀ ಅವರಿಗೆ ಚಂದ್ರು ಮೇಕಪ್​ಮ್ಯಾನ್ ಆಗಿದ್ದರು. ಮಾಲಾಶ್ರೀ ಜೊತೆಗೆ ಬರೋಬ್ಬರಿ 72 ಸಿನಿಮಾಗಳಲ್ಲಿ ಚಂದ್ರು ಅವರ ಮೇಕಪ್​ಮ್ಯಾನ್ ಆಗಿ ಕೆಲಸ ಮಾಡಿದ್ದರು ಎನ್ನಲಾಗಿದೆ. ಆ ಬಳಿಕ ಅವರು ರಸ್ತೆ ಬದಿಯಲ್ಲಿ ಹೋಟೆಲ್ ಆರಂಭ ಮಾಡಿದರು. ರಾಜ್​ಕುಮಾರ್ ಅವರು ಕೂಡ ಚಂದ್ರು ಅವರ ಕೈರುಚಿ ಸವಿದು ಭೇಷ್ ಎಂದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:21 am, Wed, 14 February 24

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು