AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದು ಕಾಪಿ? ಯಾವುದು ಅಸಲಿ? ‘ದ್ವಿತ್ವ’ ಚಿತ್ರದ ಪೋಸ್ಟರ್​ ಮೇಲೆ ಹೊಸ ಅನುಮಾನ

Dvitva Kannada Cinema: ಸದ್ಯ ಈ ಎರಡು ಪೋಸ್ಟರ್​ಗಳನ್ನು ಎದುರುಬದುರು ಇಟ್ಟುಕೊಂಡು ಹೋಲಿಕೆ ಮಾಡಲಾಗುತ್ತಿದೆ. ಇವುಗಳಲ್ಲಿ ಅಸಲಿ ಯಾರದ್ದು, ನಕಲಿ ಯಾರದ್ದು ಎಂಬ ಪ್ರಶ್ನೆಯನ್ನು ನೆಟ್ಟಿಗರು ಕೇಳುತ್ತಿದ್ದಾರೆ.

ಯಾವುದು ಕಾಪಿ? ಯಾವುದು ಅಸಲಿ? ‘ದ್ವಿತ್ವ’ ಚಿತ್ರದ ಪೋಸ್ಟರ್​ ಮೇಲೆ ಹೊಸ ಅನುಮಾನ
ಯಾವುದು ಕಾಪಿ? ಯಾವುದು ಅಸಲಿ?
TV9 Web
| Edited By: |

Updated on: Jul 02, 2021 | 4:11 PM

Share

ಪುನೀತ್​ ರಾಜ್​ಕುಮಾರ್​ ಮತ್ತು ಪವನ್​ ಕುಮಾರ್​ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ‘ದ್ವಿತ್ವ’ ಚಿತ್ರದ ಬಗ್ಗೆ ದೊಡ್ಡ ನಿರೀಕ್ಷೆ ಸೃಷ್ಟಿ ಆಗಿದೆ. ಜು.1ರಂದು ಅನಾವರಣಗೊಂಡ ಈ ಸಿನಿಮಾದ ಶೀರ್ಷಿಕೆ ಬಗ್ಗೆ ಜನರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅದರ ಜೊತೆಗೆ ಈ ಚಿತ್ರದ ಪೋಸ್ಟರ್​ ಅಸಲಿಯೋ ನಕಲಿಯೋ ಎಂಬ ಅನುಮಾನ ಕೂಡ ಕಾಡಲು ಶುರುವಾಗಿದೆ. ಗುರುವಾರ ಬಿಡುಗಡೆ ಆಗಿರುವ ಈ ಪೋಸ್ಟರ್​ ತುಂಬಾ ಭಿನ್ನ ಮತ್ತು ಕ್ರಿಯೇಟಿವ್​ ಆಗಿದೆ ಎಂಬುದೇನೋ ನಿಜ. ಅದನ್ನೇ ಹೋಲುವಂತಹ ಮತ್ತೊಂದು ಪೋಸ್ಟರ್​ನಿಂದಾಗಿ ಅನುಮಾನ ಹೊಗೆಯಾಡುವಂತಾಗಿದೆ.

‘ದ್ವಿತ್ವ’ ಸಿನಿಮಾದಲ್ಲಿ ಸೈಕಲಾಜಿಕಲ್​ ಕಥಾಹಂದರ ಇರಲಿದೆ. ಅದಕ್ಕೆ ತಕ್ಕಂತೆಯೇ ಪೋಸ್ಟರ್​ ವಿನ್ಯಾಸಗೊಂಡಿದೆ. ಆದರೆ ದ್ವಿತ್ವ ಪೋಸ್ಟರ್​ ಬಿಡುಗಡೆ ಆಗುವುದಕ್ಕಿಂತ 7 ತಿಂಗಳು ಮುನ್ನವೇ ಸೌಂಡ್​ಕ್ಲೌಡ್​ ವೆಬ್​ಸೈಟ್​ನಲ್ಲಿ ಅಪ್​ಲೋಡ್​ ಆಗಿರುವ ಒಂದು ಪೋಸ್ಟರ್​ ಕೂಡ ಅದನ್ನೇ ಹೋಲುವಂತಿದೆ. ಶೇ.95ರಷ್ಟು ಸಾಮ್ಯತೆ ಇರುವುದನ್ನು ಮೇಲ್ನೋಟಕ್ಕೆ ಕಾರಣಬಹುದು.

ಸದ್ಯ ಈ ಎರಡು ಪೋಸ್ಟರ್​ಗಳನ್ನು ಎದುರುಬದುರು ಇಟ್ಟುಕೊಂಡು ಹೋಲಿಕೆ ಮಾಡಲಾಗುತ್ತಿದೆ. ಇವುಗಳಲ್ಲಿ ಅಸಲಿ ಯಾರದ್ದು, ನಕಲಿ ಯಾರದ್ದು? ಸೌಂಡ್​ಕ್ಲೌಡ್​ನಲ್ಲಿ ಇರುವ ಪೋಸ್ಟರ್​ನಿಂದ ಸ್ಫೂರ್ತಿ ಪಡೆದು ‘ದ್ವಿತ್ವ’ ಪೋಸ್ಟರ್​ ವಿನ್ಯಾಸ ಮಾಡಲಾಗಿದೆಯೇ ಎಂಬಿತ್ಯಾದಿ ಪ್ರಶ್ನೆಗಳನ್ನು ನೆಟ್ಟಿಗರು ಕೇಳುತ್ತಿದ್ದಾರೆ. ಈ ಬಗ್ಗೆ ನಿರ್ದೇಶಕ ಪವನ್​ ಕುಮಾರ್​ ಸ್ಪಷ್ಟನೆ ನೀಡಿದ ಬಳಿಕವೇ ಸತ್ಯಾಸತ್ಯತೆ ಏನು ಎಂಬುದು ಗೊತ್ತಾಗಬೇಕಿದೆ. ಅಂದಹಾಗೆ, ಈ ರೀತಿ ಪೋಸ್ಟರ್​ ಕಾಪಿ ಆರೋಪ ಕೇಳಿಬಂದಿರುವುದು ಇದೇ ಮೊದಲೇನಲ್ಲ. ಈ ಹಿಂದೆ ‘ಬಾಹುಬಲಿ’, ‘ರಾಬರ್ಟ್​’ ಮುಂತಾದ ಸಿನಿಮಾಗಳ ಪೋಸ್ಟರ್​ಗಳ ಮೇಲೂ ಇಂಥದ್ದೇ ಆರೋಪ ಎದುರಾಗಿತ್ತು.

‘ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ನಲ್ಲಿ ನಿರ್ಮಾಪಕ ವಿಜಯ್​ ಕಿರಗಂದೂರು ಅವರು ದ್ವಿತ್ವ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಪುನೀತ್​ ರಾಜ್​ಕುಮಾರ್​ ಮತ್ತು ಪವನ್​ ಕುಮಾರ್​ ಒಂದಾಗಿರುವುದು ವಿಶೇಷ. ಪ್ರೀತಾ ಜಯರಾಮನ್​ ಛಾಯಾಗ್ರಹಣ, ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ ಮಾಡಲಿದ್ದಾರೆ. ಸೆಪ್ಟೆಂಬರ್​ನಲ್ಲಿ ಚಿತ್ರೀಕರಣ ಆರಂಭಿಸಲು ಯೋಜನೆ ಹಾಕಿಕೊಳ್ಳಲಾಗಿದೆ.

ಇದನ್ನೂ ಓದಿ:

‘ಮ್ಯಾನ್​ ಆಫ್​ ದಿ ಮ್ಯಾಚ್​’ ಚಿತ್ರಕ್ಕಾಗಿ ಕೈ ಜೋಡಿಸಿದ ಪುನೀತ್​ ರಾಜ್​ಕುಮಾರ್​ ಮತ್ತು ನಿರ್ದೇಶಕ ಸತ್ಯ ಪ್ರಕಾಶ್​

ಪುನೀತ್​ ರಾಜ್​ಕುಮಾರ್​ ಸಿನಿಮಾ ಹಾಡನ್ನು ಮಧುರವಾಗಿ ಹಾಡಿದ ಕೊರಿಯಾ ಯುವತಿ

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್