ಯಾವುದು ಕಾಪಿ? ಯಾವುದು ಅಸಲಿ? ‘ದ್ವಿತ್ವ’ ಚಿತ್ರದ ಪೋಸ್ಟರ್​ ಮೇಲೆ ಹೊಸ ಅನುಮಾನ

Dvitva Kannada Cinema: ಸದ್ಯ ಈ ಎರಡು ಪೋಸ್ಟರ್​ಗಳನ್ನು ಎದುರುಬದುರು ಇಟ್ಟುಕೊಂಡು ಹೋಲಿಕೆ ಮಾಡಲಾಗುತ್ತಿದೆ. ಇವುಗಳಲ್ಲಿ ಅಸಲಿ ಯಾರದ್ದು, ನಕಲಿ ಯಾರದ್ದು ಎಂಬ ಪ್ರಶ್ನೆಯನ್ನು ನೆಟ್ಟಿಗರು ಕೇಳುತ್ತಿದ್ದಾರೆ.

ಯಾವುದು ಕಾಪಿ? ಯಾವುದು ಅಸಲಿ? ‘ದ್ವಿತ್ವ’ ಚಿತ್ರದ ಪೋಸ್ಟರ್​ ಮೇಲೆ ಹೊಸ ಅನುಮಾನ
ಯಾವುದು ಕಾಪಿ? ಯಾವುದು ಅಸಲಿ?
Follow us
| Updated By: ರಾಜೇಶ್ ದುಗ್ಗುಮನೆ

Updated on: Jul 02, 2021 | 4:11 PM

ಪುನೀತ್​ ರಾಜ್​ಕುಮಾರ್​ ಮತ್ತು ಪವನ್​ ಕುಮಾರ್​ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ‘ದ್ವಿತ್ವ’ ಚಿತ್ರದ ಬಗ್ಗೆ ದೊಡ್ಡ ನಿರೀಕ್ಷೆ ಸೃಷ್ಟಿ ಆಗಿದೆ. ಜು.1ರಂದು ಅನಾವರಣಗೊಂಡ ಈ ಸಿನಿಮಾದ ಶೀರ್ಷಿಕೆ ಬಗ್ಗೆ ಜನರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅದರ ಜೊತೆಗೆ ಈ ಚಿತ್ರದ ಪೋಸ್ಟರ್​ ಅಸಲಿಯೋ ನಕಲಿಯೋ ಎಂಬ ಅನುಮಾನ ಕೂಡ ಕಾಡಲು ಶುರುವಾಗಿದೆ. ಗುರುವಾರ ಬಿಡುಗಡೆ ಆಗಿರುವ ಈ ಪೋಸ್ಟರ್​ ತುಂಬಾ ಭಿನ್ನ ಮತ್ತು ಕ್ರಿಯೇಟಿವ್​ ಆಗಿದೆ ಎಂಬುದೇನೋ ನಿಜ. ಅದನ್ನೇ ಹೋಲುವಂತಹ ಮತ್ತೊಂದು ಪೋಸ್ಟರ್​ನಿಂದಾಗಿ ಅನುಮಾನ ಹೊಗೆಯಾಡುವಂತಾಗಿದೆ.

‘ದ್ವಿತ್ವ’ ಸಿನಿಮಾದಲ್ಲಿ ಸೈಕಲಾಜಿಕಲ್​ ಕಥಾಹಂದರ ಇರಲಿದೆ. ಅದಕ್ಕೆ ತಕ್ಕಂತೆಯೇ ಪೋಸ್ಟರ್​ ವಿನ್ಯಾಸಗೊಂಡಿದೆ. ಆದರೆ ದ್ವಿತ್ವ ಪೋಸ್ಟರ್​ ಬಿಡುಗಡೆ ಆಗುವುದಕ್ಕಿಂತ 7 ತಿಂಗಳು ಮುನ್ನವೇ ಸೌಂಡ್​ಕ್ಲೌಡ್​ ವೆಬ್​ಸೈಟ್​ನಲ್ಲಿ ಅಪ್​ಲೋಡ್​ ಆಗಿರುವ ಒಂದು ಪೋಸ್ಟರ್​ ಕೂಡ ಅದನ್ನೇ ಹೋಲುವಂತಿದೆ. ಶೇ.95ರಷ್ಟು ಸಾಮ್ಯತೆ ಇರುವುದನ್ನು ಮೇಲ್ನೋಟಕ್ಕೆ ಕಾರಣಬಹುದು.

ಸದ್ಯ ಈ ಎರಡು ಪೋಸ್ಟರ್​ಗಳನ್ನು ಎದುರುಬದುರು ಇಟ್ಟುಕೊಂಡು ಹೋಲಿಕೆ ಮಾಡಲಾಗುತ್ತಿದೆ. ಇವುಗಳಲ್ಲಿ ಅಸಲಿ ಯಾರದ್ದು, ನಕಲಿ ಯಾರದ್ದು? ಸೌಂಡ್​ಕ್ಲೌಡ್​ನಲ್ಲಿ ಇರುವ ಪೋಸ್ಟರ್​ನಿಂದ ಸ್ಫೂರ್ತಿ ಪಡೆದು ‘ದ್ವಿತ್ವ’ ಪೋಸ್ಟರ್​ ವಿನ್ಯಾಸ ಮಾಡಲಾಗಿದೆಯೇ ಎಂಬಿತ್ಯಾದಿ ಪ್ರಶ್ನೆಗಳನ್ನು ನೆಟ್ಟಿಗರು ಕೇಳುತ್ತಿದ್ದಾರೆ. ಈ ಬಗ್ಗೆ ನಿರ್ದೇಶಕ ಪವನ್​ ಕುಮಾರ್​ ಸ್ಪಷ್ಟನೆ ನೀಡಿದ ಬಳಿಕವೇ ಸತ್ಯಾಸತ್ಯತೆ ಏನು ಎಂಬುದು ಗೊತ್ತಾಗಬೇಕಿದೆ. ಅಂದಹಾಗೆ, ಈ ರೀತಿ ಪೋಸ್ಟರ್​ ಕಾಪಿ ಆರೋಪ ಕೇಳಿಬಂದಿರುವುದು ಇದೇ ಮೊದಲೇನಲ್ಲ. ಈ ಹಿಂದೆ ‘ಬಾಹುಬಲಿ’, ‘ರಾಬರ್ಟ್​’ ಮುಂತಾದ ಸಿನಿಮಾಗಳ ಪೋಸ್ಟರ್​ಗಳ ಮೇಲೂ ಇಂಥದ್ದೇ ಆರೋಪ ಎದುರಾಗಿತ್ತು.

‘ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ನಲ್ಲಿ ನಿರ್ಮಾಪಕ ವಿಜಯ್​ ಕಿರಗಂದೂರು ಅವರು ದ್ವಿತ್ವ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಪುನೀತ್​ ರಾಜ್​ಕುಮಾರ್​ ಮತ್ತು ಪವನ್​ ಕುಮಾರ್​ ಒಂದಾಗಿರುವುದು ವಿಶೇಷ. ಪ್ರೀತಾ ಜಯರಾಮನ್​ ಛಾಯಾಗ್ರಹಣ, ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ ಮಾಡಲಿದ್ದಾರೆ. ಸೆಪ್ಟೆಂಬರ್​ನಲ್ಲಿ ಚಿತ್ರೀಕರಣ ಆರಂಭಿಸಲು ಯೋಜನೆ ಹಾಕಿಕೊಳ್ಳಲಾಗಿದೆ.

ಇದನ್ನೂ ಓದಿ:

‘ಮ್ಯಾನ್​ ಆಫ್​ ದಿ ಮ್ಯಾಚ್​’ ಚಿತ್ರಕ್ಕಾಗಿ ಕೈ ಜೋಡಿಸಿದ ಪುನೀತ್​ ರಾಜ್​ಕುಮಾರ್​ ಮತ್ತು ನಿರ್ದೇಶಕ ಸತ್ಯ ಪ್ರಕಾಶ್​

ಪುನೀತ್​ ರಾಜ್​ಕುಮಾರ್​ ಸಿನಿಮಾ ಹಾಡನ್ನು ಮಧುರವಾಗಿ ಹಾಡಿದ ಕೊರಿಯಾ ಯುವತಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ