AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dvitva: ಪುನೀತ್ ರಾಜ್​ಕುಮಾರ್​​-ಪವನ್​ ಕುಮಾರ್​ ಚಿತ್ರಕ್ಕೆ ‘ದ್ವಿತ್ವ’ ಶೀರ್ಷಿಕೆ; ಬಿಗ್​ ನ್ಯೂಸ್​ ನೀಡಿದ ಹೊಂಬಾಳೆ

Hombale Films: ಪವನ್​ ಕುಮಾರ್​ ಮತ್ತು ಪುನೀತ್​ ರಾಜ್​ಕುಮಾರ್​ ಕಾಂಬಿನೇಷನ್​ ಮೇಲೆ ದೊಡ್ಡ ನಿರೀಕ್ಷೆ ಇದೆ. ಹೊಂಬಾಳೆ ಫಿಲ್ಸ್ಮ್​ ಸಂಸ್ಥೆ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದು, ಇಂದು (ಜು.1) ‘ದ್ವಿತ್ವ’ ಎಂದು ಟೈಟಲ್ ಘೋಷಣೆ ಮಾಡಲಾಗಿದೆ.​

Dvitva: ಪುನೀತ್ ರಾಜ್​ಕುಮಾರ್​​-ಪವನ್​ ಕುಮಾರ್​ ಚಿತ್ರಕ್ಕೆ ‘ದ್ವಿತ್ವ’ ಶೀರ್ಷಿಕೆ; ಬಿಗ್​ ನ್ಯೂಸ್​ ನೀಡಿದ ಹೊಂಬಾಳೆ
ಪುನೀತ್ ರಾಜ್​ಕುಮಾರ್​​-ಪವನ್​ ಕುಮಾರ್​ ಚಿತ್ರಕ್ಕೆ ‘ದ್ವಿತ್ವ’ ಶೀರ್ಷಿಕೆ
ಮದನ್​ ಕುಮಾರ್​
|

Updated on:Jul 01, 2021 | 12:10 PM

Share

ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಮತ್ತು ನಿರ್ದೇಶಕ ಪವನ್​ ಕುಮಾರ್​ ಜೊತೆಯಾಗಿ ಮಾಡಲಿರುವ ಹೊಸ ಚಿತ್ರಕ್ಕೆ ‘ದ್ವಿತ್ವ’ ಎಂದು ಶೀರ್ಷಿಕೆ ಇಡಲಾಗಿದೆ. ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಸ್ಮ್​ ಬ್ಯಾನರ್​ನಲ್ಲಿ ಈ ಸಿನಿಮಾ ಮೂಡಿಬರಲಿದ್ದು, ಗುರುವಾರ (ಜು.1) ಬೆಳಗ್ಗೆ ಟೈಟಲ್​ ಅನೌನ್ಸ್​ ಮಾಡಲಾಗಿದೆ. ಈ ಸುದ್ದಿ ಕೇಳಿ ಅಪ್ಪು ಫ್ಯಾನ್ಸ್​ ಥ್ರಿಲ್​ ಆಗಿದ್ದಾರೆ. ‘ಕೆಜಿಎಫ್: ಚಾಪ್ಟರ್​ 2​’, ‘ಸಲಾರ್’ ಮುಂತಾದ ದೈತ್ಯ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿರುವ ಹೊಂಬಾಳೆ ಫಿಲ್ಸ್ಮ್​ ಸಂಸ್ಥೆಯಿಂದ ತಯಾರಾಗಲಿರುವ 9ನೇ ಸಿನಿಮಾ ಇದಾಗಿದೆ.

ಸೈಕಲಾಜಿಕಲ್​ ಕಥಾಹಂದರ ಹೊಂದಿದ್ದ ‘ಲೂಸಿಯಾ’ ಚಿತ್ರಕ್ಕೆ ನಿರ್ದೇಶನ ಮಾಡುವ ಮೂಲಕ ಪವನ್​ ಕುಮಾರ್​ ಭಾರಿ ಜನಪ್ರಿಯತೆ ಪಡೆದುಕೊಂಡಿದ್ದರು. ಈಗ ಅವರು ‘ದ್ವಿತ್ವ’ ಸಿನಿಮಾದಲ್ಲಿ ಮತ್ತೆ ಸೈಕಲಾಜಿಕಲ್​ ಕಥೆಯನ್ನೇ ಆಯ್ಕೆ ಮಾಡಿಕೊಂಡಿರುವುದು ವಿಶೇಷ. ಶೀರ್ಷಿಕೆ ಜೊತೆಗೆ ಡಿಫರೆಂಟ್​ ಆದಂತಹ ಪೋಸ್ಟರ್​ ಕೂಡ ಬಿಡುಗಡೆ ಮಾಡಲಾಗಿದೆ.

2018ರಲ್ಲಿ ಬಂದ ‘ಯೂ ಟರ್ನ್​’ ಚಿತ್ರದ ಬಳಿಕ ಕನ್ನಡದಲ್ಲಿ ಬೇರೆ ಯಾವುದೇ ಸಿನಿಮಾವನ್ನು ಪವನ್​ ಕುಮಾರ್​ ನಿರ್ದೇಶನ ಮಾಡಿಲ್ಲ. ದೊಡ್ಡ ಗ್ಯಾಪ್​ ಬಳಿಕ ಅವರು ಕನ್ನಡ ಪ್ರಾಜೆಕ್ಟ್​ ಕೈಗೆತ್ತಿಕೊಂಡಿರುವುದರಿಂದ ನಿರೀಕ್ಷೆ ಜೋರಾಗಿದೆ. ಲೂಸಿಯಾ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿ ಜನಪ್ರಿಯರಾಗಿದ್ದ ಪೂರ್ಣಚಂದ್ರ ತೇಜಸ್ವಿ ಅವರೇ ‘ದ್ವಿತ್ವ’ ಚಿತ್ರಕ್ಕೂ ಸಂಗೀತ ಸಂಯೋಜನೆ ಮಾಡಲಿದ್ದಾರೆ.

ಪ್ರೀತಾ ಜಯರಾಮನ್​ ಛಾಯಾಗ್ರಹಣ ಮಾಡಲಿದ್ದಾರೆ. ಸೆಪ್ಟೆಂಬರ್​ನಲ್ಲಿ ಚಿತ್ರೀಕರಣ ಆರಂಭಿಸಲು ಪ್ಲ್ಯಾನ್​ ಮಾಡಿಕೊಳ್ಳಲಾಗಿದೆ. ಹೊಂಬಾಳೆ ಫಿಲ್ಸ್ಮ್​ ಬ್ಯಾನರ್​ನಲ್ಲಿ ವಿಜಯ್​ ಕಿರಗಂದೂರು ಅವರು ನಿರ್ಮಾಣ ಮಾಡುತ್ತಿರುವ ಎಲ್ಲ ಪ್ರಾಜೆಕ್ಟ್​ಗಳು ಅದ್ದೂರಿಯಾಗಿ ಮೂಡಿಬರುತ್ತಿವೆ. ಆ ಕಾರಣದಿಂದಲೂ ‘ದ್ವಿತ್ವ’ ಬಗ್ಗೆ ಕ್ರೇಜ್​ ಸೃಷ್ಟಿಯಾಗುವಂತಾಗಿದೆ.

ಇದನ್ನೂ ಓದಿ:

ಯಶ್​ ಬೆನ್ನಲ್ಲೇ ಸಿನಿಮಾ ಕಾರ್ಮಿಕರ ಸಹಾಯಕ್ಕೆ ನಿಂತ ಹೊಂಬಾಳೆ‌ ಫಿಲ್ಮ್ಸ್​

ಸಂಕಷ್ಟದಲ್ಲಿ ಇರುವವರಿಗೆ ಕೆಜಿಎಫ್​ ನಿರ್ಮಾಪಕ ವಿಜಯ್​ ಕಿರಗಂದೂರು ಸದ್ದಿಲ್ಲದೇ ಮಾಡಿದ ಸಹಾಯಗಳು ಒಂದೆರಡಲ್ಲ

Published On - 11:55 am, Thu, 1 July 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ