AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dvitva: ಪುನೀತ್ ರಾಜ್​ಕುಮಾರ್​​-ಪವನ್​ ಕುಮಾರ್​ ಚಿತ್ರಕ್ಕೆ ‘ದ್ವಿತ್ವ’ ಶೀರ್ಷಿಕೆ; ಬಿಗ್​ ನ್ಯೂಸ್​ ನೀಡಿದ ಹೊಂಬಾಳೆ

Hombale Films: ಪವನ್​ ಕುಮಾರ್​ ಮತ್ತು ಪುನೀತ್​ ರಾಜ್​ಕುಮಾರ್​ ಕಾಂಬಿನೇಷನ್​ ಮೇಲೆ ದೊಡ್ಡ ನಿರೀಕ್ಷೆ ಇದೆ. ಹೊಂಬಾಳೆ ಫಿಲ್ಸ್ಮ್​ ಸಂಸ್ಥೆ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದು, ಇಂದು (ಜು.1) ‘ದ್ವಿತ್ವ’ ಎಂದು ಟೈಟಲ್ ಘೋಷಣೆ ಮಾಡಲಾಗಿದೆ.​

Dvitva: ಪುನೀತ್ ರಾಜ್​ಕುಮಾರ್​​-ಪವನ್​ ಕುಮಾರ್​ ಚಿತ್ರಕ್ಕೆ ‘ದ್ವಿತ್ವ’ ಶೀರ್ಷಿಕೆ; ಬಿಗ್​ ನ್ಯೂಸ್​ ನೀಡಿದ ಹೊಂಬಾಳೆ
ಪುನೀತ್ ರಾಜ್​ಕುಮಾರ್​​-ಪವನ್​ ಕುಮಾರ್​ ಚಿತ್ರಕ್ಕೆ ‘ದ್ವಿತ್ವ’ ಶೀರ್ಷಿಕೆ
ಮದನ್​ ಕುಮಾರ್​
|

Updated on:Jul 01, 2021 | 12:10 PM

Share

ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಮತ್ತು ನಿರ್ದೇಶಕ ಪವನ್​ ಕುಮಾರ್​ ಜೊತೆಯಾಗಿ ಮಾಡಲಿರುವ ಹೊಸ ಚಿತ್ರಕ್ಕೆ ‘ದ್ವಿತ್ವ’ ಎಂದು ಶೀರ್ಷಿಕೆ ಇಡಲಾಗಿದೆ. ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಸ್ಮ್​ ಬ್ಯಾನರ್​ನಲ್ಲಿ ಈ ಸಿನಿಮಾ ಮೂಡಿಬರಲಿದ್ದು, ಗುರುವಾರ (ಜು.1) ಬೆಳಗ್ಗೆ ಟೈಟಲ್​ ಅನೌನ್ಸ್​ ಮಾಡಲಾಗಿದೆ. ಈ ಸುದ್ದಿ ಕೇಳಿ ಅಪ್ಪು ಫ್ಯಾನ್ಸ್​ ಥ್ರಿಲ್​ ಆಗಿದ್ದಾರೆ. ‘ಕೆಜಿಎಫ್: ಚಾಪ್ಟರ್​ 2​’, ‘ಸಲಾರ್’ ಮುಂತಾದ ದೈತ್ಯ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿರುವ ಹೊಂಬಾಳೆ ಫಿಲ್ಸ್ಮ್​ ಸಂಸ್ಥೆಯಿಂದ ತಯಾರಾಗಲಿರುವ 9ನೇ ಸಿನಿಮಾ ಇದಾಗಿದೆ.

ಸೈಕಲಾಜಿಕಲ್​ ಕಥಾಹಂದರ ಹೊಂದಿದ್ದ ‘ಲೂಸಿಯಾ’ ಚಿತ್ರಕ್ಕೆ ನಿರ್ದೇಶನ ಮಾಡುವ ಮೂಲಕ ಪವನ್​ ಕುಮಾರ್​ ಭಾರಿ ಜನಪ್ರಿಯತೆ ಪಡೆದುಕೊಂಡಿದ್ದರು. ಈಗ ಅವರು ‘ದ್ವಿತ್ವ’ ಸಿನಿಮಾದಲ್ಲಿ ಮತ್ತೆ ಸೈಕಲಾಜಿಕಲ್​ ಕಥೆಯನ್ನೇ ಆಯ್ಕೆ ಮಾಡಿಕೊಂಡಿರುವುದು ವಿಶೇಷ. ಶೀರ್ಷಿಕೆ ಜೊತೆಗೆ ಡಿಫರೆಂಟ್​ ಆದಂತಹ ಪೋಸ್ಟರ್​ ಕೂಡ ಬಿಡುಗಡೆ ಮಾಡಲಾಗಿದೆ.

2018ರಲ್ಲಿ ಬಂದ ‘ಯೂ ಟರ್ನ್​’ ಚಿತ್ರದ ಬಳಿಕ ಕನ್ನಡದಲ್ಲಿ ಬೇರೆ ಯಾವುದೇ ಸಿನಿಮಾವನ್ನು ಪವನ್​ ಕುಮಾರ್​ ನಿರ್ದೇಶನ ಮಾಡಿಲ್ಲ. ದೊಡ್ಡ ಗ್ಯಾಪ್​ ಬಳಿಕ ಅವರು ಕನ್ನಡ ಪ್ರಾಜೆಕ್ಟ್​ ಕೈಗೆತ್ತಿಕೊಂಡಿರುವುದರಿಂದ ನಿರೀಕ್ಷೆ ಜೋರಾಗಿದೆ. ಲೂಸಿಯಾ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿ ಜನಪ್ರಿಯರಾಗಿದ್ದ ಪೂರ್ಣಚಂದ್ರ ತೇಜಸ್ವಿ ಅವರೇ ‘ದ್ವಿತ್ವ’ ಚಿತ್ರಕ್ಕೂ ಸಂಗೀತ ಸಂಯೋಜನೆ ಮಾಡಲಿದ್ದಾರೆ.

ಪ್ರೀತಾ ಜಯರಾಮನ್​ ಛಾಯಾಗ್ರಹಣ ಮಾಡಲಿದ್ದಾರೆ. ಸೆಪ್ಟೆಂಬರ್​ನಲ್ಲಿ ಚಿತ್ರೀಕರಣ ಆರಂಭಿಸಲು ಪ್ಲ್ಯಾನ್​ ಮಾಡಿಕೊಳ್ಳಲಾಗಿದೆ. ಹೊಂಬಾಳೆ ಫಿಲ್ಸ್ಮ್​ ಬ್ಯಾನರ್​ನಲ್ಲಿ ವಿಜಯ್​ ಕಿರಗಂದೂರು ಅವರು ನಿರ್ಮಾಣ ಮಾಡುತ್ತಿರುವ ಎಲ್ಲ ಪ್ರಾಜೆಕ್ಟ್​ಗಳು ಅದ್ದೂರಿಯಾಗಿ ಮೂಡಿಬರುತ್ತಿವೆ. ಆ ಕಾರಣದಿಂದಲೂ ‘ದ್ವಿತ್ವ’ ಬಗ್ಗೆ ಕ್ರೇಜ್​ ಸೃಷ್ಟಿಯಾಗುವಂತಾಗಿದೆ.

ಇದನ್ನೂ ಓದಿ:

ಯಶ್​ ಬೆನ್ನಲ್ಲೇ ಸಿನಿಮಾ ಕಾರ್ಮಿಕರ ಸಹಾಯಕ್ಕೆ ನಿಂತ ಹೊಂಬಾಳೆ‌ ಫಿಲ್ಮ್ಸ್​

ಸಂಕಷ್ಟದಲ್ಲಿ ಇರುವವರಿಗೆ ಕೆಜಿಎಫ್​ ನಿರ್ಮಾಪಕ ವಿಜಯ್​ ಕಿರಗಂದೂರು ಸದ್ದಿಲ್ಲದೇ ಮಾಡಿದ ಸಹಾಯಗಳು ಒಂದೆರಡಲ್ಲ

Published On - 11:55 am, Thu, 1 July 21

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ