AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಿದಾಯ್ತು ‘ರಾಜಕುಮಾರ’ ನಿವಾಸ; ಪುನೀತ್​ ಮನೆಯ ಫೋಟೋ ವೈರಲ್​

ಪುನೀತ್​ ಸಿನಿಮಾ ರಿಲೀಸ್ ಆಗುವಾಗ ಅಭಿಮಾನಿಗಳು ಅವರ ಕಟೌಟ್​ಗೆ ಹಾರಗಳನ್ನು ಹಾಕುತ್ತಿದ್ದರು. ಹಾಲಿನ ಅಭಿಷೇಕ ಮಾಡುತ್ತಿದ್ದರು. ಆದರೆ, ಈಗ ಅವರ ಫೋಟೋಗೆ ಮಾಲೆ ಹಾಕಿ ನೋಡೋದು ತುಂಬಾನೇ ಕಷ್ಟದ ಕೆಲಸ.

ಬರಿದಾಯ್ತು ‘ರಾಜಕುಮಾರ’ ನಿವಾಸ; ಪುನೀತ್​ ಮನೆಯ ಫೋಟೋ ವೈರಲ್​
ಪುನೀತ್​
TV9 Web
| Edited By: |

Updated on: Oct 31, 2021 | 8:05 PM

Share

ಪುನೀತ್ ರಾಜ್​ಕುಮಾರ್​ ಅವರು ಮೃತಪಟ್ಟಿದ್ದಾರೆ ಎನ್ನುವ ವಿಚಾರವನ್ನು ಅನೇಕರಿಗೆ ನಂಬೋಕೆ ಇಲ್ಲಿಯವರೆಗೂ ಸಾಧ್ಯವಾಗಿಲ್ಲ. ಅವರ ಅಂತ್ಯಸಂಸ್ಕಾರ ನಡೆದರೂ ಅಭಿಮಾನಿಗಳ ಬಳಿ ಇದನ್ನು ಒಪ್ಪಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಪುನೀತ್​ ಅಂತ್ಯಸಂಸ್ಕಾರದ ಫೋಟೋಗಳು ಹಾಗೂ ವಿಡಿಯೋಗಳು ಸಾಕಷ್ಟು ವೈರಲ್​ ಆಗಿದ್ದು ಅಭಿಮಾನಿಗಳ ದುಃಖವನ್ನು ಮತ್ತಷ್ಟು ಹೆಚ್ಚಿಸಿದೆ. ಈ ಮಧ್ಯೆ ಪುನೀತ್​ ಮನೆಯ ಫೋಟೋ ಒಂದು ವೈರಲ್​ ಆಗಿದ್ದು, ಅಭಿಮಾನಿಗಳ ಸಂಕಟವನ್ನು ಮತ್ತಷ್ಟು ಹೆಚ್ಚಿಸಿದೆ. ‘ರಾಜಕುಮಾರ’ ನಿವಾಸ ಬರಿದಾಗಿದೆ ಎಂದು ಅಭಿಮಾನಿಗಳು ಕಮೆಂಟ್ ಮಾಡುತ್ತಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅವರು ಸದಾಶಿವ ನಗರದ ಮನೆಯಲ್ಲಿ ವಾಸವಾಗಿದ್ದರು. ಇದು ದೊಡ್ಮನೆ ಎಂದೇ ಕರೆಯಲ್ಪಡುತ್ತಿತ್ತು. ಈ ಮನೆಯಲ್ಲಿ ಪುನೀತ್​ ಇಷ್ಟು ದಿನ ನಗುನಗುತ್ತಾ ಓಡಾಡಿಕೊಂಡಿದ್ದರು. ಆದರೆ, ಈಗ ಅವರು ಆ ಮನೆಯಲ್ಲಿ ಫೋಟೋವಾಗಿ, ಗೋಡೆಯ ಮೇಲಿದ್ದಾರೆ. ಈ ಚಿತ್ರ ಸೋಶಿಯಲ್​ ಮೀಡಿಯಾದಲ್ಲಿ ಸಾಕಷ್ಟು ವೈರಲ್​ ಆಗುತ್ತಿದೆ.

ಪುನೀತ್​ ಅವರು ನಗುತ್ತಾ ಇರುವ ಫೋಟೋ ಗೋಡೆಯ ಮೇಲಿದೆ. ಅದರ ಹಿಂಭಾಗದಲ್ಲಿ ರಾಜ್​ಕುಮಾರ್​ ಹಾಗೂ ಪಾರ್ವತಮ್ಮ ಅವರ ಫೋಟೋಗಳು ಇವೆ. ಪುನೀತ್​ ಫೋಟೋಗೆ ಹೂವಿನ ಹಾರ ಹಾಕಲಾಗಿದೆ. ಇದನ್ನು ನೋಡಿದ ಅನೇಕರು ‘ನಾವು ಇದನ್ನು ನಂಬೋಕೆ ಸಿದ್ಧರಿಲ್ಲ’ ಎಂದು ಹೇಳಿಕೊಂಡಿದ್ದಾರೆ. ಇನ್ನೂ ಕೆಲವರು, ‘ಪುನೀತ್​ ಅವರನ್ನು ಈ ರೀತಿ ನೋಡೋಕೆ ಸಾಧ್ಯವೇ ಇಲ್ಲ’ ಎಂದು ಹೇಳಿಕೊಂಡಿದ್ದಾರೆ. ಈ ದುಃಖದ ಘಟನೆಯಿಂದ ಹೊರ ಬರೋಕೆ ಅಭಿಮಾನಿಗಳಿಗೆ ಇನ್ನೂ ಹೆಚ್ಚಿನ ಸಮಯ ಬೇಕಾಗಬಹುದು. ​

ಪುನೀತ್​ ಸಿನಿಮಾ ರಿಲೀಸ್ ಆಗುವಾಗ ಅಭಿಮಾನಿಗಳು ಅವರ ಕಟೌಟ್​ಗೆ ಹಾರಗಳನ್ನು ಹಾಕುತ್ತಿದ್ದರು. ಹಾಲಿನ ಅಭಿಷೇಕ ಮಾಡುತ್ತಿದ್ದರು. ಆದರೆ, ಈಗ ಅವರ ಫೋಟೋಗೆ ಮಾಲೆ ಹಾಕಿ ನೋಡೋದು ತುಂಬಾನೇ ಕಷ್ಟದ ಕೆಲಸ.

ಇದನ್ನೂ ಓದಿ: 1985ರಲ್ಲಿ ಪುನೀತ್​​ ಹೆಸರು ಬದಲಾಯಿಸಿದ್ದಾಗ ನೀಡಿದ್ದ ಜಾಹೀರಾತು ವೈರಲ್​

‘ಪುನೀತ್​ ಆಸ್ಪತ್ರೆಗೆ ಬಂದಾಗ ಸಹಜವಾಗಿಯೇ ಇದ್ದರು’; ಹಾಗಿದ್ದರೆ ತಪ್ಪು ನಡೆದಿದ್ದೆಲ್ಲಿ? ವೈದ್ಯರು ವಿವರಿಸಿದ್ದು ಹೀಗೆ

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು