AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಿದಾಯ್ತು ‘ರಾಜಕುಮಾರ’ ನಿವಾಸ; ಪುನೀತ್​ ಮನೆಯ ಫೋಟೋ ವೈರಲ್​

ಪುನೀತ್​ ಸಿನಿಮಾ ರಿಲೀಸ್ ಆಗುವಾಗ ಅಭಿಮಾನಿಗಳು ಅವರ ಕಟೌಟ್​ಗೆ ಹಾರಗಳನ್ನು ಹಾಕುತ್ತಿದ್ದರು. ಹಾಲಿನ ಅಭಿಷೇಕ ಮಾಡುತ್ತಿದ್ದರು. ಆದರೆ, ಈಗ ಅವರ ಫೋಟೋಗೆ ಮಾಲೆ ಹಾಕಿ ನೋಡೋದು ತುಂಬಾನೇ ಕಷ್ಟದ ಕೆಲಸ.

ಬರಿದಾಯ್ತು ‘ರಾಜಕುಮಾರ’ ನಿವಾಸ; ಪುನೀತ್​ ಮನೆಯ ಫೋಟೋ ವೈರಲ್​
ಪುನೀತ್​
TV9 Web
| Edited By: |

Updated on: Oct 31, 2021 | 8:05 PM

Share

ಪುನೀತ್ ರಾಜ್​ಕುಮಾರ್​ ಅವರು ಮೃತಪಟ್ಟಿದ್ದಾರೆ ಎನ್ನುವ ವಿಚಾರವನ್ನು ಅನೇಕರಿಗೆ ನಂಬೋಕೆ ಇಲ್ಲಿಯವರೆಗೂ ಸಾಧ್ಯವಾಗಿಲ್ಲ. ಅವರ ಅಂತ್ಯಸಂಸ್ಕಾರ ನಡೆದರೂ ಅಭಿಮಾನಿಗಳ ಬಳಿ ಇದನ್ನು ಒಪ್ಪಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಪುನೀತ್​ ಅಂತ್ಯಸಂಸ್ಕಾರದ ಫೋಟೋಗಳು ಹಾಗೂ ವಿಡಿಯೋಗಳು ಸಾಕಷ್ಟು ವೈರಲ್​ ಆಗಿದ್ದು ಅಭಿಮಾನಿಗಳ ದುಃಖವನ್ನು ಮತ್ತಷ್ಟು ಹೆಚ್ಚಿಸಿದೆ. ಈ ಮಧ್ಯೆ ಪುನೀತ್​ ಮನೆಯ ಫೋಟೋ ಒಂದು ವೈರಲ್​ ಆಗಿದ್ದು, ಅಭಿಮಾನಿಗಳ ಸಂಕಟವನ್ನು ಮತ್ತಷ್ಟು ಹೆಚ್ಚಿಸಿದೆ. ‘ರಾಜಕುಮಾರ’ ನಿವಾಸ ಬರಿದಾಗಿದೆ ಎಂದು ಅಭಿಮಾನಿಗಳು ಕಮೆಂಟ್ ಮಾಡುತ್ತಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅವರು ಸದಾಶಿವ ನಗರದ ಮನೆಯಲ್ಲಿ ವಾಸವಾಗಿದ್ದರು. ಇದು ದೊಡ್ಮನೆ ಎಂದೇ ಕರೆಯಲ್ಪಡುತ್ತಿತ್ತು. ಈ ಮನೆಯಲ್ಲಿ ಪುನೀತ್​ ಇಷ್ಟು ದಿನ ನಗುನಗುತ್ತಾ ಓಡಾಡಿಕೊಂಡಿದ್ದರು. ಆದರೆ, ಈಗ ಅವರು ಆ ಮನೆಯಲ್ಲಿ ಫೋಟೋವಾಗಿ, ಗೋಡೆಯ ಮೇಲಿದ್ದಾರೆ. ಈ ಚಿತ್ರ ಸೋಶಿಯಲ್​ ಮೀಡಿಯಾದಲ್ಲಿ ಸಾಕಷ್ಟು ವೈರಲ್​ ಆಗುತ್ತಿದೆ.

ಪುನೀತ್​ ಅವರು ನಗುತ್ತಾ ಇರುವ ಫೋಟೋ ಗೋಡೆಯ ಮೇಲಿದೆ. ಅದರ ಹಿಂಭಾಗದಲ್ಲಿ ರಾಜ್​ಕುಮಾರ್​ ಹಾಗೂ ಪಾರ್ವತಮ್ಮ ಅವರ ಫೋಟೋಗಳು ಇವೆ. ಪುನೀತ್​ ಫೋಟೋಗೆ ಹೂವಿನ ಹಾರ ಹಾಕಲಾಗಿದೆ. ಇದನ್ನು ನೋಡಿದ ಅನೇಕರು ‘ನಾವು ಇದನ್ನು ನಂಬೋಕೆ ಸಿದ್ಧರಿಲ್ಲ’ ಎಂದು ಹೇಳಿಕೊಂಡಿದ್ದಾರೆ. ಇನ್ನೂ ಕೆಲವರು, ‘ಪುನೀತ್​ ಅವರನ್ನು ಈ ರೀತಿ ನೋಡೋಕೆ ಸಾಧ್ಯವೇ ಇಲ್ಲ’ ಎಂದು ಹೇಳಿಕೊಂಡಿದ್ದಾರೆ. ಈ ದುಃಖದ ಘಟನೆಯಿಂದ ಹೊರ ಬರೋಕೆ ಅಭಿಮಾನಿಗಳಿಗೆ ಇನ್ನೂ ಹೆಚ್ಚಿನ ಸಮಯ ಬೇಕಾಗಬಹುದು. ​

ಪುನೀತ್​ ಸಿನಿಮಾ ರಿಲೀಸ್ ಆಗುವಾಗ ಅಭಿಮಾನಿಗಳು ಅವರ ಕಟೌಟ್​ಗೆ ಹಾರಗಳನ್ನು ಹಾಕುತ್ತಿದ್ದರು. ಹಾಲಿನ ಅಭಿಷೇಕ ಮಾಡುತ್ತಿದ್ದರು. ಆದರೆ, ಈಗ ಅವರ ಫೋಟೋಗೆ ಮಾಲೆ ಹಾಕಿ ನೋಡೋದು ತುಂಬಾನೇ ಕಷ್ಟದ ಕೆಲಸ.

ಇದನ್ನೂ ಓದಿ: 1985ರಲ್ಲಿ ಪುನೀತ್​​ ಹೆಸರು ಬದಲಾಯಿಸಿದ್ದಾಗ ನೀಡಿದ್ದ ಜಾಹೀರಾತು ವೈರಲ್​

‘ಪುನೀತ್​ ಆಸ್ಪತ್ರೆಗೆ ಬಂದಾಗ ಸಹಜವಾಗಿಯೇ ಇದ್ದರು’; ಹಾಗಿದ್ದರೆ ತಪ್ಪು ನಡೆದಿದ್ದೆಲ್ಲಿ? ವೈದ್ಯರು ವಿವರಿಸಿದ್ದು ಹೀಗೆ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ