AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಹೊಸ ಚಿತ್ರ ‘ಲಕ್ಕಿ ಮ್ಯಾನ್​’ ಶೀಘ್ರವೇ ರಿಲೀಸ್​; ಅಪ್ಪು ಅಭಿಮಾನಿಗಳಿಗೆ ಗುಡ್​ ನ್ಯೂಸ್​

Puneeth Rajkumar | Prabhu Deva: ‘ಲಕ್ಕಿ ಮ್ಯಾನ್​’ ಚಿತ್ರದಲ್ಲಿ ಪುನೀತ್​ ರಾಜ್​ಕುಮಾರ್​, ಪ್ರಭುದೇವ, ಡಾರ್ಲಿಂಗ್ ಕೃಷ್ಣ, ಸಂಗೀತಾ ಶೃಂಗೇರಿ, ರೋಶಿನಿ ಪ್ರಕಾಶ್ ಮುಂತಾದವರು ನಟಿಸಿದ್ದಾರೆ. ಶೂಟಿಂಗ್​ ಮುಗಿದಿದ್ದು, ಡಬ್ಬಿಂಗ್​ ಕೆಲಸ ನಡೆಯುತ್ತಿದೆ.

ಪುನೀತ್​ ಹೊಸ ಚಿತ್ರ ‘ಲಕ್ಕಿ ಮ್ಯಾನ್​’ ಶೀಘ್ರವೇ ರಿಲೀಸ್​; ಅಪ್ಪು ಅಭಿಮಾನಿಗಳಿಗೆ ಗುಡ್​ ನ್ಯೂಸ್​
ಪ್ರಭುದೇವ, ಪುನೀತ್​ ರಾಜ್​ಕುಮಾರ್​
TV9 Web
| Updated By: ಮದನ್​ ಕುಮಾರ್​|

Updated on: Nov 25, 2021 | 7:20 PM

Share

ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಬಡವಾಗಿದೆ. ಹೃದಯಾಘಾತದಿಂದ ಮೃತರಾಗುವುದಕ್ಕೂ ಮುನ್ನ ಅವರು ಅನೇಕ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದರು. ಆದರೆ ಆ ಚಿತ್ರಗಳು ತೆರೆ ಕಾಣುವುದಕ್ಕೂ ಮೊದಲೇ ಅಪ್ಪು ಇಹಲೋಕ ತ್ಯಜಿಸಿದ್ದು ವಿಪರ್ಯಾಸ. ಪುನೀತ್​ ನಟಿಸುತ್ತಿದ್ದ ಒಂದೆರಡು ಚಿತ್ರದ ಕೆಲಸಗಳು ಪೂರ್ಣಗೊಂಡಿವೆ ಎಂಬುದು ಸಮಾಧಾನಕರ ಸಂಗತಿ. ಆ ಪೈಕಿ ‘ಜೇಮ್ಸ್​’ ಸಿನಿಮಾ ರಿಲೀಸ್​ ಆಗುವುದು ಖಚಿತ ಎಂಬುದು ಈಗಾಗಲೇ ಗೊತ್ತಾಗಿದೆ. ಅಷ್ಟೇ ಅಲ್ಲದೇ, ಅಪ್ಪು ಜತೆ ಪ್ರಭುದೇವ (Prabhu Deva) ಮತ್ತು ಡಾರ್ಲಿಂಗ್​ ಕೃಷ್ಣ (Darling Krishna) ನಟಿಸಿರುವ ‘ಲಕ್ಕಿ ಮ್ಯಾನ್​’ ಶೂಟಿಂಗ್​ ಕೂಡ ಪೂರ್ಣಗೊಂಡಿದೆ. ಆ ಸಿನಿಮಾ ಶೀಘ್ರದಲ್ಲೇ ಬಿಡುಗಡೆ ಆಗಲಿದೆ. ಈ ಬಗ್ಗೆ ಚಿತ್ರತಂಡದಿಂದ ಮಾಹಿತಿ ಹೊರಬಿದ್ದಿದೆ. ಡಿಸೆಂಬರ್​ ಅಥವಾ ಜನವರಿಯಲ್ಲಿ ‘ಲಕ್ಕಿ ಮ್ಯಾನ್​’  (Lucky Man Movie)ಬಿಡುಗಡೆ ಮಾಡುವ ಗುರಿ ಇರಿಸಿಕೊಳ್ಳಲಾಗಿದೆ. ಅದಕ್ಕೆ ಅನುಗುಣವಾಗಿ ಈಗ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ಭರದಿಂದ ಸಾಗುತ್ತಿವೆ.

ಪರ್ಸಾ ಪಿಕ್ಚರ್ಸ್ ಬ್ಯಾನರ್​ ಮೂಲಕ ನಿರ್ಮಾಣ ಆಗುತ್ತಿರುವ ಈ ಚಿತ್ರದ ಡಬ್ಬಿಂಗ್​ ಕೆಲಸಗಳು ಸಾಧು ಕೋಕಿಲ ಅವರ ಸ್ಟುಡಿಯೋದಲ್ಲಿ ನಡೆಯುತ್ತಿವೆ. ‘ಲಕ್ಕಿ ಮ್ಯಾನ್​’ ಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ಹೀರೋ ಆಗಿದ್ದರೂ ಕೂಡ ಪುನೀತ್ ರಾಜ್​ಕುಮಾರ್‌ ಅವರ ಪಾತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆಯಿದೆ. ವಿಶೇಷವಾಗಿ ಪುನೀತ್ ರಾಜ್​ಕುಮಾರ್ ಹಾಗೂ ಬಹುಭಾಷಾ ನಟ ಪ್ರಭುದೇವ ಅವರು ಹಾಡೊಂದರಲ್ಲಿ ಜೊತೆಯಾಗಿ ಹೆಜ್ಜೆ ಹಾಕಿದ್ದಾರೆ. ಡಾ. ರಾಜ್​ಕುಮಾರ್ ಅವರ ಮೇಲೆ ರಚಿಸಲಾದ ಈ ಹಾಡಿನಲ್ಲಿ ಅವರಿಬ್ಬರು ಡ್ಯಾನ್ಸ್​ ಮಾಡಿದ್ದು, ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಮೂಡುವಂತಾಗಿದೆ. ಇದೇ ಮೊದಲ ಬಾರಿಗೆ ಇವರಿಬ್ಬರೂ ಒಟ್ಟಿಗೆ ತೆರೆ ಹಂಚಿಕೊಂಡಿದ್ದಾರೆ ಎಂಬುದು ಗಮನಾರ್ಹ ಅಂಶ.

‘ಲಕ್ಕಿ ಮ್ಯಾನ್​’ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯಾಗಿ ಸಂಗೀತಾ ಶೃಂಗೇರಿ ನಟಿಸಿದ್ದಾರೆ. ರೋಶಿನಿ ಪ್ರಕಾಶ್ ದ್ವಿತೀಯ ನಾಯಕಿ ಪಾತ್ರ ನಿರ್ವಹಿಸಿದ್ದಾರೆ. ಆರ್ಯ, ರಂಗಾಯಣ ರಘು, ಸಾಧು ಕೋಕಿಲ, ನಾಗಭೂಷಣ್, ಸುಂದರ್ ರಾಜ್, ಸುಧಾ ಬೆಳವಾಡಿ, ಮಾಳವಿಕಾ ಅವಿನಾಶ್​ ಸೇರಿದಂತೆ ಅನೇಕ ಕಲಾವಿದರು ಅಭಿನಯಿಸಿದ್ದಾರೆ.

ಪಿ.ಆರ್. ಮೀನಾಕ್ಷಿ ಸುಂದರಮ್ ಹಾಗೂ ಸುಂದರ ಕಾಮರಾಜ್ ಅವರ ನಿರ್ಮಾಣದ ಈ ಚಿತ್ರಕ್ಕೆ ಎಸ್. ನಾಗೇಂದ್ರ ಪ್ರಸಾದ್ ನಿರ್ದೇಶನ ಮಾಡಿದ್ದಾರೆ. ಜೀವ ಶಂಕರ್ ಅವರ ಛಾಯಾಗ್ರಹಣ, ವಿಜಯ್ ಮತ್ತು ವಿಕ್ಕಿ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಧನಂಜಯ ರಂಜನ್ ಹಾಡುಗಳನ್ನು ಬರೆದಿದ್ದಾರೆ. ಕಾರ್ತಿಕೇಯನ್ ಕ್ರಿಯೇಟಿವ್ ಪ್ರೊಡ್ಯೂಸರ್‌ ಆಗಿ ಜವಾಬ್ದಾರಿ ನಿರ್ವಹಿಸಿದ್ದಾರೆ. ಬಾಲಾಜಿ ಅವರ ಸಂಕಲನ, ಅಶ್ವಥ್ ಮಾರಿಮುತ್ತು ಅವರ ಕಥೆ, ಮಂಜು ಮಾಂಡವ್ಯ, ಸಂಪತ್ ಸಿರಿಮನೆ ಹಾಗೂ ರಘುನಂದನ್ ಕಾನಡ್ಕ ಅವರ ಸಂಭಾಷಣೆ, ಶೃಂಗೇರಿ ಸುರೇಶ್ ಅವರ ಸಹ-ನಿರ್ದೇಶನ ಈ ಚಿತ್ರಕ್ಕಿದೆ. ಮೋಹನ್ ಬಿ. ಕೆ. ಅವರು ಕಲಾ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ:

ಅಂಬರೀಷ್​ ಫ್ಯಾನ್ಸ್​ ನಿರ್ಧಾರಕ್ಕೆ ಸುಮಲತಾ ಬೇಸರ; ಪುನೀತ್​ ಮತ್ತು ಪ್ರಶಸ್ತಿ ಬಗ್ಗೆ ಹೇಳಿದ್ದೇನು?

ದೇವರಿಗೆ ಮುಡಿ ಕೊಟ್ಟು, ಪುನೀತ್​ಗಾಗಿ ಹಾಡು ಹೇಳಿದ ನಟಿ ವಿಜಯಲಕ್ಷ್ಮೀ; ಇಲ್ಲಿದೆ ವಿಡಿಯೋ

ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು