AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಯುವರತ್ನ ರಿಲೀಸ್​ಗೂ ಮುನ್ನವೇ ಧಾರಾವಾಹಿ ಕಡೆಗೆ ಗಮನ ಹರಿಸಿದ ಪುನೀತ್​ ರಾಜ್​ಕುಮಾರ್​! ಅಭಿಮಾನಿಗಳಿಗೆ ಸರ್ಪ್ರೈಸ್​

Puneeth Rajkumar : ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಅಭಿಮಾನಿಗಳು "ಯುವರತ್ನ" ಸಿನಿಮಾದ ಬಿಡುಗಡೆಗಾಗಿ ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಅಷ್ಟರಲ್ಲಾಗಲೇ ಪುನೀತ್ ನಿರ್ಮಾಣದ ಹೊಸ ಧಾರಾವಾಹಿ ಬಗ್ಗೆ ಸುದ್ದಿಯೊಂದು ಕೇಳಿಬಂದಿದ್ದು, ಫ್ಯಾನ್ಸ್​ ನಿರೀಕ್ಷೆ ಹೆಚ್ಚಿಸಿಕೊಳ್ಳುವಂತಾಗಿದೆ.

Puneeth Rajkumar: ಯುವರತ್ನ ರಿಲೀಸ್​ಗೂ ಮುನ್ನವೇ ಧಾರಾವಾಹಿ ಕಡೆಗೆ ಗಮನ ಹರಿಸಿದ ಪುನೀತ್​ ರಾಜ್​ಕುಮಾರ್​! ಅಭಿಮಾನಿಗಳಿಗೆ ಸರ್ಪ್ರೈಸ್​
ಯುವರತ್ನ ರಿಲೀಸ್​ಗೂ ಮುನ್ನವೇ ಧಾರಾವಾಹಿ ಕಡೆಗೆ ಗಮನ ಹರಿಸಿದ ಪುನೀತ್​ ರಾಜ್​ಕುಮಾರ್​! ಅಭಿಮಾನಿಗಳಿಗೆ ಸರ್ಪ್ರೈಸ್
ಸಾಧು ಶ್ರೀನಾಥ್​
|

Updated on: Mar 02, 2021 | 5:10 PM

Share

ಸಿನಿಮಾ ಮಾತ್ರವಲ್ಲದೆ, ಕಿರುತೆರೆಯಲ್ಲೂ ಪುನೀತ್​ ರಾಜ್​ಕುಮಾರ್​ ತೊಡಗಿಕೊಂಡಿದ್ದಾರೆ. ಈಗ ಅವರೊಂದು ಧಾರಾವಾಹಿ ನಿರ್ಮಾಣ ಮಾಡುತ್ತಿರುವುದು ವಿಶೇಷ. ಆ ಧಾರಾವಾಹಿಗೆ “ನೇತ್ರಾವತಿ” ಎಂದು ಶೀರ್ಷಿಕೆ ಇಟ್ಟಿರುವುದರಿಂದ ಅಭಿಮಾನಿಗಳ ವಲಯದಲ್ಲಿ ದೊಡ್ಡಮಟ್ಟದ ಕುತೂಹಲ ಸೃಷ್ಟಿಯಾಗಿದೆ. “ಯುವರತ್ನ” ಸಿನಿಮಾ ಬಿಡುಗಡೆಗೂ ಮುನ್ನ ಈ ಸುದ್ದಿ ಹೊರಬಿದ್ದಿದ್ದು, ಕಿರುತೆರೆ ಪ್ರೇಕ್ಷಕರು ಹೊಸ ಸೀರಿಯಲ್​ಗಾಗಿ ಕಾಯುವಂತಾಗಿದೆ.

ಕನ್ನಡ ಕಿರುತೆರೆಯಲ್ಲಿ ಧಾರಾವಾಹಿಗಳಿಗೇನೂ ಕೊರತೆ ಇಲ್ಲ. ಅನೇಕ ಸೀರಿಯಲ್​ಗಳು ಈಗಾಗಲೇ ಪ್ರಸಾರ ಆಗುತ್ತಿವೆ. ಅವುಗಳ ನಡುವೆಯೂ ಪುನೀತ್​ ಒಂದು ಧಾರಾವಾಹಿಗೆ ಬಂಡವಾಳ ಹೂಡುತ್ತಾರೆ ಎಂದರೆ ಅದರಲ್ಲಿ ಏನಾದರೊಂದು ವಿಶೇಷ ಇರಲೇಬೇಕಲ್ಲವೇ? ಹೌದು. ಪುನೀತ್​ ನಿರ್ಮಾಣ ಮಾಡುತ್ತಿರುವ ಈ ಸೀರಿಯಲ್​ನಲ್ಲಿ ಭಕ್ತಿ ಪ್ರಧಾನ ಕಥೆ ಇರಲಿದೆ. “ನೇತ್ರಾವತಿ” ಎಂಬ ಹೆಸರೇ ಸೂಚಿಸುವಂತೆ ಇದೊಂದು ಮಹಿಳಾ ಪ್ರಧಾನ ಧಾರಾವಾಹಿ ಎಂಬ ಮಾಹಿತಿ ಲಭ್ಯವಾಗಿದೆ. ಉದಯ ಟಿವಿಯಲ್ಲಿ ಶೀಘ್ರದಲ್ಲೇ ಇದರ ಪ್ರಸಾರ ಆರಂಭ ಆಗಲಿದೆ.

ನೇತ್ರಾವತಿ ಎಂದರೆ ಧರ್ಮಸ್ಥಳದ ಮಂಜುನಾಥ ಸ್ವಾಮಿ ನೆನಪಾಗಲೇಬೇಕು. ಮಂಜುನಾಥನ ಅಪ್ಪಟ ಭಕ್ತೆಯ ಕಥೆ ಈ ಧಾರಾವಾಹಿಯಲ್ಲಿ ಇರಲಿದೆ. ಜೀವನದಲ್ಲಿ ಏನೇ ಕಷ್ಟ ಎದುರಾದರೂ ಮಂಜುನಾಥನ ಮೇಲೆ ನಂಬಿಕೆ ಇಟ್ಟಿರುವ ನೇತ್ರಾವತಿಯ ಬಗ್ಗೆ ತಿಳಿದುಕೊಳ್ಳಲು ಪ್ರೇಕ್ಷಕರು ಕಾಯುತ್ತಿದ್ದಾರೆ. ಆದರೆ ಈ ಧಾರಾವಾಹಿಯಲ್ಲಿ ಪ್ರಮುಖ ಪಾತ್ರ ಮಾಡುತ್ತಿರುವವರು ಯಾರು? ಯಾವ ಸಮಯಕ್ಕೆ “ನೇತ್ರಾವತಿ” ಪ್ರಸಾರ ಆಗಲಿದೆ ಎಂಬ ಬಗ್ಗೆ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

“ಕನ್ನಡದ ಕೋಟ್ಯಧಿಪತಿ”, “ಫ್ಯಾಮಿಲಿ ಪವರ್​” ಕಾರ್ಯಕ್ರಮಗಳನ್ನು ನಿರೂಪಣೆ ಮಾಡುವ ಮೂಲಕ ಕಿರುತೆರೆಯ ಜೊತೆಗೆ ಪುನೀತ್​ ರಾಜ್​ಕುಮಾರ್​ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಆ ಮೂಲಕವೂ ಅವರು ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಇನ್ನು, ಅವರ “ಯುವರತ್ನ” ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಏಪ್ರಿಲ್​ 1ರಂದು ರಿಲೀಸ್​ ಆಗಲಿರುವ ಈ ಚಿತ್ರಕ್ಕೆ ಸಂತೋಷ್​ ಆನಂದ್​ರಾಮ್​ ನಿರ್ದೇಶನ ಮಾಡಿದ್ದಾರೆ. ಪುನೀತ್​ಗೆ ನಾಯಕಿಯಾಗಿ ಸಾಯೆಷಾ ಸೈಗಲ್​ ನಟಿಸಿದ್ದಾರೆ.

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?