AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಯುವರತ್ನ ರಿಲೀಸ್​ಗೂ ಮುನ್ನವೇ ಧಾರಾವಾಹಿ ಕಡೆಗೆ ಗಮನ ಹರಿಸಿದ ಪುನೀತ್​ ರಾಜ್​ಕುಮಾರ್​! ಅಭಿಮಾನಿಗಳಿಗೆ ಸರ್ಪ್ರೈಸ್​

Puneeth Rajkumar : ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಅಭಿಮಾನಿಗಳು "ಯುವರತ್ನ" ಸಿನಿಮಾದ ಬಿಡುಗಡೆಗಾಗಿ ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಅಷ್ಟರಲ್ಲಾಗಲೇ ಪುನೀತ್ ನಿರ್ಮಾಣದ ಹೊಸ ಧಾರಾವಾಹಿ ಬಗ್ಗೆ ಸುದ್ದಿಯೊಂದು ಕೇಳಿಬಂದಿದ್ದು, ಫ್ಯಾನ್ಸ್​ ನಿರೀಕ್ಷೆ ಹೆಚ್ಚಿಸಿಕೊಳ್ಳುವಂತಾಗಿದೆ.

Puneeth Rajkumar: ಯುವರತ್ನ ರಿಲೀಸ್​ಗೂ ಮುನ್ನವೇ ಧಾರಾವಾಹಿ ಕಡೆಗೆ ಗಮನ ಹರಿಸಿದ ಪುನೀತ್​ ರಾಜ್​ಕುಮಾರ್​! ಅಭಿಮಾನಿಗಳಿಗೆ ಸರ್ಪ್ರೈಸ್​
ಯುವರತ್ನ ರಿಲೀಸ್​ಗೂ ಮುನ್ನವೇ ಧಾರಾವಾಹಿ ಕಡೆಗೆ ಗಮನ ಹರಿಸಿದ ಪುನೀತ್​ ರಾಜ್​ಕುಮಾರ್​! ಅಭಿಮಾನಿಗಳಿಗೆ ಸರ್ಪ್ರೈಸ್
ಸಾಧು ಶ್ರೀನಾಥ್​
|

Updated on: Mar 02, 2021 | 5:10 PM

Share

ಸಿನಿಮಾ ಮಾತ್ರವಲ್ಲದೆ, ಕಿರುತೆರೆಯಲ್ಲೂ ಪುನೀತ್​ ರಾಜ್​ಕುಮಾರ್​ ತೊಡಗಿಕೊಂಡಿದ್ದಾರೆ. ಈಗ ಅವರೊಂದು ಧಾರಾವಾಹಿ ನಿರ್ಮಾಣ ಮಾಡುತ್ತಿರುವುದು ವಿಶೇಷ. ಆ ಧಾರಾವಾಹಿಗೆ “ನೇತ್ರಾವತಿ” ಎಂದು ಶೀರ್ಷಿಕೆ ಇಟ್ಟಿರುವುದರಿಂದ ಅಭಿಮಾನಿಗಳ ವಲಯದಲ್ಲಿ ದೊಡ್ಡಮಟ್ಟದ ಕುತೂಹಲ ಸೃಷ್ಟಿಯಾಗಿದೆ. “ಯುವರತ್ನ” ಸಿನಿಮಾ ಬಿಡುಗಡೆಗೂ ಮುನ್ನ ಈ ಸುದ್ದಿ ಹೊರಬಿದ್ದಿದ್ದು, ಕಿರುತೆರೆ ಪ್ರೇಕ್ಷಕರು ಹೊಸ ಸೀರಿಯಲ್​ಗಾಗಿ ಕಾಯುವಂತಾಗಿದೆ.

ಕನ್ನಡ ಕಿರುತೆರೆಯಲ್ಲಿ ಧಾರಾವಾಹಿಗಳಿಗೇನೂ ಕೊರತೆ ಇಲ್ಲ. ಅನೇಕ ಸೀರಿಯಲ್​ಗಳು ಈಗಾಗಲೇ ಪ್ರಸಾರ ಆಗುತ್ತಿವೆ. ಅವುಗಳ ನಡುವೆಯೂ ಪುನೀತ್​ ಒಂದು ಧಾರಾವಾಹಿಗೆ ಬಂಡವಾಳ ಹೂಡುತ್ತಾರೆ ಎಂದರೆ ಅದರಲ್ಲಿ ಏನಾದರೊಂದು ವಿಶೇಷ ಇರಲೇಬೇಕಲ್ಲವೇ? ಹೌದು. ಪುನೀತ್​ ನಿರ್ಮಾಣ ಮಾಡುತ್ತಿರುವ ಈ ಸೀರಿಯಲ್​ನಲ್ಲಿ ಭಕ್ತಿ ಪ್ರಧಾನ ಕಥೆ ಇರಲಿದೆ. “ನೇತ್ರಾವತಿ” ಎಂಬ ಹೆಸರೇ ಸೂಚಿಸುವಂತೆ ಇದೊಂದು ಮಹಿಳಾ ಪ್ರಧಾನ ಧಾರಾವಾಹಿ ಎಂಬ ಮಾಹಿತಿ ಲಭ್ಯವಾಗಿದೆ. ಉದಯ ಟಿವಿಯಲ್ಲಿ ಶೀಘ್ರದಲ್ಲೇ ಇದರ ಪ್ರಸಾರ ಆರಂಭ ಆಗಲಿದೆ.

ನೇತ್ರಾವತಿ ಎಂದರೆ ಧರ್ಮಸ್ಥಳದ ಮಂಜುನಾಥ ಸ್ವಾಮಿ ನೆನಪಾಗಲೇಬೇಕು. ಮಂಜುನಾಥನ ಅಪ್ಪಟ ಭಕ್ತೆಯ ಕಥೆ ಈ ಧಾರಾವಾಹಿಯಲ್ಲಿ ಇರಲಿದೆ. ಜೀವನದಲ್ಲಿ ಏನೇ ಕಷ್ಟ ಎದುರಾದರೂ ಮಂಜುನಾಥನ ಮೇಲೆ ನಂಬಿಕೆ ಇಟ್ಟಿರುವ ನೇತ್ರಾವತಿಯ ಬಗ್ಗೆ ತಿಳಿದುಕೊಳ್ಳಲು ಪ್ರೇಕ್ಷಕರು ಕಾಯುತ್ತಿದ್ದಾರೆ. ಆದರೆ ಈ ಧಾರಾವಾಹಿಯಲ್ಲಿ ಪ್ರಮುಖ ಪಾತ್ರ ಮಾಡುತ್ತಿರುವವರು ಯಾರು? ಯಾವ ಸಮಯಕ್ಕೆ “ನೇತ್ರಾವತಿ” ಪ್ರಸಾರ ಆಗಲಿದೆ ಎಂಬ ಬಗ್ಗೆ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

“ಕನ್ನಡದ ಕೋಟ್ಯಧಿಪತಿ”, “ಫ್ಯಾಮಿಲಿ ಪವರ್​” ಕಾರ್ಯಕ್ರಮಗಳನ್ನು ನಿರೂಪಣೆ ಮಾಡುವ ಮೂಲಕ ಕಿರುತೆರೆಯ ಜೊತೆಗೆ ಪುನೀತ್​ ರಾಜ್​ಕುಮಾರ್​ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಆ ಮೂಲಕವೂ ಅವರು ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಇನ್ನು, ಅವರ “ಯುವರತ್ನ” ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಏಪ್ರಿಲ್​ 1ರಂದು ರಿಲೀಸ್​ ಆಗಲಿರುವ ಈ ಚಿತ್ರಕ್ಕೆ ಸಂತೋಷ್​ ಆನಂದ್​ರಾಮ್​ ನಿರ್ದೇಶನ ಮಾಡಿದ್ದಾರೆ. ಪುನೀತ್​ಗೆ ನಾಯಕಿಯಾಗಿ ಸಾಯೆಷಾ ಸೈಗಲ್​ ನಟಿಸಿದ್ದಾರೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ