ಕಿಕ್ಕಿರಿದು ತುಂಬಿದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೊಳಗಿದ ‘ಬೊಂಬೆ ಹೇಳುತೈತೆ’; ರೋಮಾಂಚನಕಾರಿ ವಿಡಿಯೋ ಇಲ್ಲಿದೆ

Chinnaswamy Stadium | Puneeth Rajkumar: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತ ಹಾಗೂ ಶ್ರೀಲಂಕಾ ನಡುವಿನ ಟೆಸ್ಟ್ ಪಂದ್ಯ ನಡೆಯುತ್ತಿದೆ. ಪಂದ್ಯದ ವೇಳೆ ಪುನೀತ್ ನಟನೆಯ ‘ರಾಜಕುಮಾರ’ ಚಿತ್ರದ ‘ಬೊಂಬೆ ಹೇಳುತೈತೆ’ ಹಾಡನ್ನು ಹಾಕಲಾಗಿತ್ತು. ಇದಕ್ಕೆ ಜನರು ದನಿಗೂಡಿಸಿದ ಪರಿ ಅಮೋಘವಾಗಿತ್ತು. ಅದರ ವಿಡಿಯೋ ಇಲ್ಲಿದೆ.

ಕಿಕ್ಕಿರಿದು ತುಂಬಿದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೊಳಗಿದ ‘ಬೊಂಬೆ ಹೇಳುತೈತೆ’; ರೋಮಾಂಚನಕಾರಿ ವಿಡಿಯೋ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
Follow us
| Updated By: shivaprasad.hs

Updated on:Mar 12, 2022 | 9:29 PM

ಪುನೀತ್ ರಾಜ್​ಕುಮಾರ್ (Puneeth Rajkumar) ನಟನೆಯ ‘ರಾಜಕುಮಾರ’ (Rajakumara) ಚಿತ್ರ ಹಲವು ಕಾರಣಗಳಿಗಾಗಿ ಕನ್ನಡ ಚಿತ್ರರಂಗದ ಒಂದು ಅಪೂರ್ವ ಚಿತ್ರವಾಗಿ ದಾಖಲಾಗಿದೆ. ಪ್ರಸ್ತುತ ಈ ಚಿತ್ರವನ್ನು ಒಮ್ಮೆ ನೋಡಿದರೆ ಅಪ್ಪು ಜೀವನದಂತೆ ಆ ಚಿತ್ರವಿತ್ತೇನೋ ಎಂದು ಅಭಿಮಾನಿಗಳು ಅನಿಸಿಕೆ ಹೇಳಿಕೊಂಡಿದ್ದುಂಟು. ಅದೇನೇ ಇದ್ದರೂ ಒಂದು ಚಿತ್ರವಾಗಿ ‘ರಾಜಕುಮಾರ’ದ ಸಾಧನೆ ಅಪೂರ್ವ. 2017ರಲ್ಲಿ ತೆರೆಕಂಡ ಈ ಚಿತ್ರ ಬಾಕ್ಸಾಫೀಸ್​ನಲ್ಲೂ ದಾಖಲೆ ಬರೆದಿತ್ತು. ಸಂತೋಷ್ ಆನಂದ್​ರಾಮ್ ನಿರ್ದೇಶಿಸಿದ್ದ ಈ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿತ್ತು. ಬಿಡುಗಡೆಯಾಗಿ ಸುಮಾರು ಐದು ವರ್ಷ ಸಮೀಪಿಸುತ್ತಾ ಬಂದರೂ, ಚಿತ್ರದ ಕ್ರೇಜ್ ಇನ್ನೂ ಕಡಿಮೆಯಾಗಿಲ್ಲ. ವಿಶೇಷವಾಗಿ ‘ರಾಜಕುಮಾರ’ದ ಹಾಡುಗಳು. ಅಪ್ಪು ನೆನಪಾದ ತಕ್ಷಣ ‘‘ಬೊಂಬೆ ಹೇಳುತೈತೆ, ಮತ್ತೆ ಹೇಳುತೈತೆ.. ನೀನೆ ರಾಜಕುಮಾರ’’ (Bombe Helutaithe) ಎನ್ನುವ ಸಾಲುಗಳು ಕಿವಿಯಲ್ಲಿ ಅನುರಣಿಸುತ್ತವೆ. ಇದೇ ಧ್ವನಿ ಸಹಸ್ರಾರು ಜನರು ಕಿಕ್ಕಿರಿದು ತುಂಬಿರುವ ಕ್ರೀಡಾಂಗಣದಲ್ಲಿ ಮೊಳಗಿದರೆ ಹೇಗಿರಬೇಡ? ಇಂತಹ ಅಭೂತಪೂರ್ವ ಕ್ಷಣಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣ (Chinnaswamy Stadium) ಸಾಕ್ಷಿಯಾಗಿದೆ.

ಭಾರತ ಹಾಗೂ ಶ್ರೀಲಂಕಾ ನಡುವೆ ಎರಡನೇ ಟೆಸ್ಟ್ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಹಗಲು- ರಾತ್ರಿ ನಡೆಯುತ್ತಿರುವ ಈ ಪಿಂಕ್ ಟೆಸ್ಟ್ ಪಂದ್ಯಾವಳಿಯನ್ನು ವೀಕ್ಷಿಸಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಎರಡು ವರ್ಷಗಳ ನಂತರ ಬೆಂಗಳೂರಿನಲ್ಲಿ ಪಂದ್ಯ ನಡೆಯುತ್ತಿರುವುದೂ ಇದಕ್ಕೆ ಕಾರಣ. ಕ್ರಿಕೆಟ್ ಪಂದ್ಯದ ವೇಳೆ ಹಿಟ್ ಗೀತೆಗಳನ್ನು ಸಾಮಾನ್ಯವಾಗಿ ಹಾಕಲಾಗುತ್ತದೆ. ಇದಕ್ಕೆ ಜನರು ದನಿಗೂಡಿಸುತ್ತಾರೆ.

ಇಂದು ಕೂಡ ಹಾಗೆಯೇ ‘ರಾಜಕುಮಾರ’ ಚಿತ್ರದ ‘ಬೊಂಬೆ ಹೇಳುತೈತೆ’ ಹಾಡನ್ನು ಹಾಕಲಾಗಿತ್ತು. ಕ್ರೀಡಾಂಗಣದಲ್ಲಿ ಜನರು ಇದಕ್ಕೆ ತಮ್ಮ ಧ್ವನಿ ಗೂಡಿಸಿದ್ದಾರೆ. ಎಲ್ಲರೂ ಎದ್ದುನಿಂತು ಮೊಬೈಲ್ ಫ್ಲ್ಯಾಶ್ ಆನ್ ಮಾಡಿ ಸಂಭ್ರಮಿಸಿದ್ದು ವಿಶೇಷವಾಗಿತ್ತು. ಈ ವಿಡಿಯೋ ಸದ್ಯ ವೈರಲ್ ಆಗಿದೆ. ಹೊಂಬಾಳೆ ಫಿಲ್ಮ್ಸ್ ವಿಡಿಯೋವನ್ನು ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.

ಹೊಂಬಾಳೆ ಫಿಲ್ಮ್ಸ್ ಹಂಚಿಕೊಂಡಿರುವ ವಿಡಿಯೋ ಇಲ್ಲಿದೆ:

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ಪುನೀತ್ ಮೇಲಿನ ಅಭಿಮಾನವನ್ನು ಹಲವೆಡೆ ಕಣ್ತುಂಬಿಕೊಳ್ಳಬಹುದಿತ್ತು. ಕೆಲವು ಅಭಿಮಾನಿಗಳು ಅಪ್ಪು ಫೋಟೋ ಹಿಡಿದು ಸಂಭ್ರಮಿಸಿದರೆ, ಮತ್ತಷ್ಟು ಜನರು ಅಪ್ಪು ಕುರಿತ ಬರಹಗಳನ್ನು ಪ್ರದರ್ಶಿಸಿದರು. ಸ್ಯಾಂಡಲ್​ವುಡ್ ತಾರೆ ಕಿಚ್ಚ ಸುದೀಪ್ ಇಂದು ಕ್ರೀಡಾಂಗಣದಲ್ಲಿ ಉಪಸ್ಥಿತರಿದ್ದು ಪಂದ್ಯ ವೀಕ್ಷಿಸಿದರು. ಈ ವೇಳೆ ಅವರು ಅಭಿಮಾನಿಗಳೊಂದಿಗೆ ಪುನೀತ್ ಇರುವ ಫೋಟೋಕ್ಕೆ ಪೋಸ್ ನೀಡಿದ್ದರು.

ಅಭಿಮಾನಿಗಳು ಪುನೀತ್​ರನ್ನು ಬಹಳ ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಮಾರ್ಚ್ 17ರಂದು ಪುನೀತ್ ಜನ್ಮದಿನ. ಅಂದೇ ಅವರು ನಾಯಕರಾಗಿ ನಟಿಸಿದ್ದ ಕೊನೆಯ ಚಿತ್ರ ‘ಜೇಮ್ಸ್’ ರಿಲೀಸ್ ಆಗಲಿದೆ. ಅದನ್ನು ಹಬ್ಬದ ರೀತಿಯನ್ನು ಸಂಭ್ರಮಿಸಲು ಅಭಿಮಾನಿಗಳು ತಯಾರಿ ನಡೆಸಿದ್ದಾರೆ.

ಇದನ್ನೂ ಓದಿ:

Athiya Shetty: ಗೆಳತಿ ಆಥಿಯಾ ಜತೆ ಬೆಂಗಳೂರಿನಲ್ಲಿ ಕಾಣಿಸಿಕೊಂಡ ಕೆಎಲ್ ರಾಹುಲ್; ತಾರಾ ಜೋಡಿಯ ಫೋಟೋಗಳು ಇಲ್ಲಿವೆ

Jacqueline Fernandez: ‘ವಿಕ್ರಾಂತ್ ರೋಣ’ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ಮನಮೋಹಕ ಫೋಟೋಗಳು ಇಲ್ಲಿವೆ

Published On - 9:21 pm, Sat, 12 March 22

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ