AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುನೀತ್​ ಸಾವಿನಿಂದ ಕಟು ಸತ್ಯ ಬಯಲಾಗಿದೆ’: ಆತಂಕದಲ್ಲೇ ಅನಿಸಿಕೆ ಹಂಚಿಕೊಂಡ ರಾಮ್​ ಗೋಪಾಲ್​ ವರ್ಮಾ

Puneeth Rajkumar Death: ಫಿಟ್ನೆಸ್​ ಕಾಪಾಡಿಕೊಂಡಿರುವವರಿಗೆ ಈ ರೀತಿ ಸಾವು ಸಂಭವಿಸುವುದಿಲ್ಲ ಎಂದು ಅನೇಕರು ಹೇಳುವುದುಂಟು. ಆದರೆ ಪುನೀತ್​ ರಾಜ್​ಕುಮಾರ್​ ನಿಧನದ ಬಳಿಕ ಆ ಮಾತನ್ನು ನಂಬಲಾಗುತ್ತಿಲ್ಲ. ಇದೇ ವಿಚಾರವಾಗಿ ರಾಮ್​ ಗೋಪಾಲ್​ ವರ್ಮಾ ಟ್ವೀಟ್​ ಮಾಡಿದ್ದಾರೆ.

‘ಪುನೀತ್​ ಸಾವಿನಿಂದ ಕಟು ಸತ್ಯ ಬಯಲಾಗಿದೆ’: ಆತಂಕದಲ್ಲೇ ಅನಿಸಿಕೆ ಹಂಚಿಕೊಂಡ ರಾಮ್​ ಗೋಪಾಲ್​ ವರ್ಮಾ
ರಾಮ್​ ಗೋಪಾಲ್​ ವರ್ಮಾ​​, ಪುನೀತ್​ ರಾಜ್​ಕುಮಾರ್
TV9 Web
| Edited By: |

Updated on: Oct 30, 2021 | 9:53 AM

Share

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರು ಕರ್ನಾಟಕ ಮಾತ್ರವಲ್ಲದೇ ದೇಶಾದ್ಯಂತ ಜನಪ್ರಿಯತೆ ಗಳಿಸಿದ್ದರು. ಪರಭಾಷೆಯ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳ ಜೊತೆಗೆ ಅವರು ಒಡನಾಟ ಇಟ್ಟುಕೊಂಡಿದ್ದರು. ಅಕ್ಕಪಕ್ಕದ ರಾಜ್ಯಗಳ ಚಿತ್ರರಂಗದ ಗಣ್ಯರು ಸೋಶಿಯಲ್​ ಮೀಡಿಯಾ ಮೂಲಕ ಪುನೀತ್​ ರಾಜ್​ಕುಮಾರ್​ ನಿಧನಕ್ಕೆ ಕಂಬನಿ ಮಿಡಿಯುತ್ತಿದ್ದಾರೆ. ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ (Ram Gopal Varma) ಅವರು ಅಪ್ಪು ಅಗಲಿಕೆಯ ಬಗ್ಗೆ ಸರಣಿ ಟ್ವೀಟ್​ ಮಾಡಿದ್ದಾರೆ. ಹೃದಯಾಘಾತದಿಂದ ಸಂಭವಿಸಿರುವ ಈ ಸಾವಿನ ಕುರಿತು ಅವರು ಆತಂಕದಲ್ಲೇ ಕೆಲವು ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಫಿಟ್ನೆಸ್​ ಕಾಪಾಡಿಕೊಂಡಿರುವವರಿಗೆ ಈ ರೀತಿ ಸಾವು ಸಂಭವಿಸುವುದಿಲ್ಲ ಎಂದು ಅನೇಕರು ಹೇಳುವುದುಂಟು. ಆದರೆ ಪುನೀತ್​ ರಾಜ್​ಕುಮಾರ್​ ನಿಧನದ ಬಳಿಕ ಆ ಮಾತನ್ನು ನಂಬಲಾಗುತ್ತಿಲ್ಲ. ಇದೇ ವಿಚಾರವಾಗಿ ರಾಮ್​ ಗೋಪಾಲ್​ ವರ್ಮಾ ಟ್ವೀಟ್​ ಮಾಡಿದ್ದಾರೆ. ‘ರೆಗ್ಯೂಲರ್​ ವರ್ಕೌಟ್​ ಜೊತೆಗೆ ಆರೋಗ್ಯಕರ ಅಭ್ಯಾಸ ಇಟ್ಟುಕೊಳ್ಳುವುದು ಹಾಗೂ ಸಡನ್​ ಸಾವು ಸಂಭವಿಸುವುದರ ನಡುವೆ ಯಾವುದೇ ಸಂಬಂಧ ಇಲ್ಲ ಎಂಬ ಕಟು ಸತ್ಯವು ಪುನೀತ್​ ಅವರ ದುರಂತ ನಿಧನನಿಂದ ಬಯಲಾಗಿದೆ. ತಾನು ಯಾರನ್ನು ಕೊಲ್ಲುತ್ತಿದ್ದೇನೆ ಎಂದು ಸಾವು ಯಾಕೆ ಕೇರ್​ ಮಾಡುವುದಿಲ್ಲ? ದೇವರು ಇರುವುದೇ ಹೌದಾದರೆ ಅವನೇ ಉತ್ತರಿಸಬೇಕು’ ಎಂದು ಆರ್​ಜಿವಿ ಬರೆದುಕೊಂಡಿದ್ದಾರೆ.

‘ಪುನೀತ್​ ರಾಜ್​ಕುಮಾರ್​ ಅವರ ಸಾವು ಈಗಲೂ ಒಂದು ಕೆಟ್ಟ ಕನಸಿನಂತೆ ಅನಿಸುತ್ತಿದೆ. ಅವರ ಆಪ್ತರ ಪರಿಸ್ಥಿತಿ ಏನಾಗಿರಬಹುದು ಅಂತ ಊಹಿಸಲೂ ಸಾಧ್ಯವಾಗುತ್ತಿಲ್ಲ. ಸಾವಿಗೆ ತಾರತಮ್ಯ ಇಲ್ಲ. ಅದು ಯಾರನ್ನು ಬೇಕಾದರೂ ಕೊಲ್ಲುತ್ತದೆ. ನಮ್ಮಲ್ಲಿ ಯಾರಾದರೂ ಯಾವಾಗ ಬೇಕಿದ್ದರೂ ಸಾಯಬಹುದು ಎಂಬುದು ಭಯಾನಕ ಸತ್ಯ. ಬದುಕಿರುವಾಗಲೇ ಫಾಸ್ಟ್​​ ಫಾರ್ವರ್ಡ್​​ ಮೋಡ್​ನಲ್ಲಿ ಜೀವಿಸಬೇಕು’ ಎಂದು ರಾಮ್​ ಗೋಪಾಲ್​ ವರ್ಮಾ ಸರಣಿ ಟ್ವೀಟ್​ ಮಾಡಿದ್ದಾರೆ. ಫಿಟ್ನೆಸ್​ ಬಗ್ಗೆ ಹೆಚ್ಚು ಕಾಳಜಿ ಹೊಂದಿದ್ದ ಬಿಗ್​ ಬಾಸ್​ ವಿನ್ನರ್​ ಸಿದ್ದಾರ್ಥ್​ ಶುಕ್ಲಾ ಕೂಡ ಇದೇ ರೀತಿ ಹೃದಯಾಘಾತದಿಂದ ಇತ್ತೀಚೆಗೆ ನಿಧನರಾಗಿದ್ದು ಈಗ ನೆನಪಾಗುತ್ತಿದೆ.

ಕಂಠೀರವ ಸ್ಟೇಡಿಯಂನಲ್ಲಿ ಅಪ್ಪು ಅಂತಿಮ ದರ್ಶನಕ್ಕೆ ಶನಿವಾರ (ಅ.30) ದಿನವಿಡೀ ಅಭಿಮಾನಿಗಳಿಗೆ ಅವಕಾಶ ಮಾಡಿಕೊಡಲಾಗುತ್ತಿದೆ. ದೂರದೂರದ ಊರುಗಳಿಂದ ಜನರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ಬಂದು ಕಣ್ಣೀರು ಸುರಿಸುತ್ತಿದ್ದಾರೆ. ಭಾನುವಾರ ಕಂಠೀರವ ಸ್ಡುಡಿಯೋ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಇದನ್ನೂ ಓದಿ:

Puneeth Rajkumar: ಶಿವಣ್ಣನ ಎದುರು ಪುನೀತ್​ ಹೇಳಿಕೊಂಡಿದ್ದ ಆಸೆ ಈಡೇರಲೇ ಇಲ್ಲ; ಅಭಿಮಾನಿಗಳ ಹೃದಯ ನುಚ್ಚುನೂರು

Puneeth Rajkumar: ‘ನನ್ನ ತಮ್ಮ ರಾಯಲ್​ ಆಗಿಯೇ ಇರುತ್ತಾನೆ’; ಕ್ರೂರ ವಿಧಿಯಿಂದ ಸುಳ್ಳಾಯ್ತು ಶಿವಣ್ಣನ ಈ ಮಾತು

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ