AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuvarathnaa: ಮೃತ ಮಗನ ಫೋಟೋ ಜೊತೆ ಯುವರತ್ನ ನೋಡಿದ ಪಾಲಕರು; ಪುನೀತ್​ ಭಾವುಕ!

Puneeth Rajkumar: ಜನರು ಹಲವು ಬಗೆಯಲ್ಲಿ ತಮ್ಮ ಅಭಿಮಾನ ವ್ಯಕ್ತಪಡಿಸುತ್ತಾರೆ. ಆದರೆ ಮೈಸೂರಿನಲ್ಲಿ ನಡೆದ ಈ ಘಟನೆಯಿಂದ ಪುನೀತ್​ ರಾಜ್​ಕುಮಾರ್​ ಹೆಚ್ಚು ಎಮೋಷನಲ್​ ಆಗಿದ್ದಾರೆ.

Yuvarathnaa: ಮೃತ ಮಗನ ಫೋಟೋ ಜೊತೆ ಯುವರತ್ನ ನೋಡಿದ ಪಾಲಕರು; ಪುನೀತ್​ ಭಾವುಕ!
ಮಗನ ಫೋಟೋ ಜೊತೆ ಯುವರತ್ನ ಸಿನಿಮಾ ನೋಡಿದ ಹರಿಕೃಷ್ಣನ್​ ಪೋಷಕರು
ಮದನ್​ ಕುಮಾರ್​
|

Updated on:Apr 05, 2021 | 3:59 PM

Share

ನಟ ಪುನೀತ್​ ರಾಜ್​ಕುಮಾರ್​ ಅವರಿಗೆ ಫ್ಯಾಮಿಲಿ ಪ್ರೇಕ್ಷಕರು ಹೆಚ್ಚು. ಅವರ ಪ್ರತಿ ಸಿನಿಮಾಗಳನ್ನೂ ಕೌಟುಂಬಿಕ ಪ್ರೇಕ್ಷಕರು ಇಷ್ಟಪಡುತ್ತಾರೆ. ಅಂಥ ಆಡಿಯನ್ಸ್​ಗೆ ಇಷ್ಟ ಆಗುವಂತಹ ಕಥೆಗಳನ್ನೇ ಪುನೀತ್​ ಆಯ್ಕೆ ಮಾಡಿಕೊಳ್ಳುತ್ತಾರೆ. ಇತ್ತೀಚೆಗೆ ರಿಲೀಸ್​ ಆಗಿರುವ ಯುವರತ್ನ ಸಿನಿಮಾದಲ್ಲೂ ಆ ಟ್ರೆಂಡ್​ ಮುಂದುವರಿದಿದೆ. ಆದರೆ ಈ ಚಿತ್ರವನ್ನು ನೋಡುವ ಆಸೆ ಇಟ್ಟುಕೊಂಡಿದ್ದ ಅಭಿಮಾನಿಯೊಬ್ಬ ಕೆಲವೇ ದಿನಗಳ ಹಿಂದೆ ಮೃತಪಟ್ಟಿದ್ದ. ಆತನ ಪೋಷಕರು ಮಗನ ಫೋಟೋ ಇಟ್ಟುಕೊಂಡು ಚಿತ್ರಮಂದಿರದಲ್ಲಿ ಯುವರತ್ನ ಸಿನಿಮಾ ವೀಕ್ಷಿಸಿದ್ದಾರೆ. ಈ ಘಟನೆಗೆ ಪುನೀತ್​ ಭಾವುಕವಾಗಿ ಪ್ರತಿಕ್ರಿಯಿಸಿದ್ದಾರೆ.

ಜನರು ಹಲವು ಬಗೆಯಲ್ಲಿ ತಮ್ಮ ಅಭಿಮಾನ ವ್ಯಕ್ತಪಡಿಸುತ್ತಾರೆ. ಆದರೆ ಮೈಸೂರಿನಲ್ಲಿ ನಡೆದ ಈ ಘಟನೆಯಿಂದ ಪುನೀತ್​ ಹೆಚ್ಚು ಎಮೋಷನಲ್​ ಆಗಿದ್ದಾರೆ. ಮೂರು ತಿಂಗಳ ಹಿಂದೆ ಹರಿಕೃಷ್ಣನ್ ಎಂಬ ಬಾಲಕ ಮೃತಪಟ್ಟಿದ್ದ. ಆತನಿಗೆ ಪುನೀತ್​ ರಾಜ್​ಕುಮಾರ್ ಬಗ್ಗೆ ಅಪಾರ ಅಭಿಮಾನವಿತ್ತು. ಯುವರತ್ನ ಸಿನಿಮಾ ನೋಡಬೇಕೆಂದು ಆಸೆ ಪಟ್ಟಿದ್ದ. ಈ ಕಾರಣದಿಂದ, ಮಗನ ಆಸೆಯಂತೆ ಪೋಷಕರು ಆತನ ಫೊಟೋ ಇಟ್ಟುಕೊಂಡು ಮೈಸೂರಿನ ಡಿಆರ್​​ಸಿ‌ ಮಲ್ಟಿಪ್ಲೆಕ್ಸ್​ನಲ್ಲಿ ‘ಯುವರತ್ನ’ ಸಿನಿಮಾ ನೋಡಿದ್ದಾರೆ.

ಈ ಬಗ್ಗೆ ಪುನೀತ್​ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ‘ಮೈಸೂರಿನ ಮುರಳಿಧರ್ ಹಾಗು ಕುಟುಂಬದವರು ಅವರ ದಿವಂಗತ ಪುತ್ರ ಹರಿಕೃಷ್ಣನ್ ಫೋಟೋ ಜೊತೆಗೆ ಯುವರತ್ನ ಸಿನಿಮಾ ನೋಡಿರುವ ದೃಶ್ಯಗಳನ್ನು ನೋಡಿ ನನ್ನ ಮನಸ್ಸು ಭಾರವಾಯಿತು. ಬಾಲಕ ಹರಿಕೃಷ್ಣನ್ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಪವರ್​ ಸ್ಟಾರ್​ ಟ್ವೀಟ್​ ಮಾಡಿದ್ದಾರೆ. ಪುನೀತ್​ಗೆ ಮಾತ್ರವಲ್ಲದೇ ಅನೇಕ ಅಭಿಮಾನಿಗಳು ಈ ಘಟನೆಗೆ ಪ್ರತಿಕ್ರಿಯಿಸಿದ್ದಾರೆ.

ಸಂತೋಷ್​ ಆನಂದ್​ರಾಮ್​ ನಿರ್ದೇಶನದ ಈ ಸಿನಿಮಾದಲ್ಲಿ ಶಿಕ್ಷಣದ ಖಾಸಗೀಕರಣ, ಡ್ರಗ್ಸ್​ ಮಾಫಿಯಾ ಮತ್ತು ರ‍್ಯಾಗಿಂಗ್​ ಪಿಡುಗಿನ ಬಗ್ಗೆ ಸಂದೇಶ ನೀಡಲಾಗಿದೆ. ಹಾಗಾಗಿ ಯುವಜನತೆ ಮತ್ತು ಪೋಷಕರಿಗೆ ‘ಯುವರತ್ನ’ ಇಷ್ಟ ಆಗುತ್ತಿದೆ.

‘ಯುವರತ್ನ’ ಸಿನಿಮಾ ಏ.1ರಂದು ರಿಲೀಸ್​ ಆಗಿತ್ತು. ಆದರೆ ಬಿಡುಗಡೆಯಾದ ಎರಡೇ ದಿನಕ್ಕೆ ಶೇ.50 ಆಸನ ಮಿತಿ ಆದೇಶವನ್ನು ಸರ್ಕಾರ ಹೊರಡಿಸಿದ್ದರಿಂದ ಕೆಲವು ಸಮಯ ಗೊಂದಲ ಆಯಿತು. ನಂತರ ಆದೇಶ ಹಿಂಪಡೆದ ಸರ್ಕಾರ ಏ.7ರವರೆಗೂ ಹೌಸ್​ಫುಲ್​ ಪ್ರದರ್ಶನಕ್ಕೆ ಅವಕಾಶ ನೀಡಿದೆ. ಹಾಗಾಗಿ ಚಿತ್ರತಂಡ ನಿರಾಳ ಆಗಿದೆ. ಹೌಸ್​ ಫುಲ್​ ಪ್ರದರ್ಶನಕ್ಕೆ ಅವಕಾಶ ನೀಡಬೇಕು ಎಂದು ಮಹಿಳೆಯರು ಮತ್ತು ಮಕ್ಕಳು ಕೂಡ ಮುಖ್ಯಮಂತ್ರಿಗಳಿಗೆ ಸೋಷಿಯಲ್​ ಮೀಡಿಯಾ ಮೂಲಕ ಮನವಿ ಮಾಡಿಕೊಂಡಿದ್ದರು.

ಇದನ್ನೂ ಓದಿ: ಯುವರತ್ನನಿಗೆ ರಿಲೀಫ್: ಏಪ್ರಿಲ್ 7ರವರೆಗೂ ಥಿಯೇಟರ್​ ಹೌಸ್ ಫುಲ್​ಗೆ ಅವಕಾಶ

ಯುವರತ್ನ ಚಿತ್ರಕ್ಕೆ ತೊಂದರೆ: ಮೌನ ಮುರಿದ ಯಶ್​, ಶಿವರಾಜ್​ಕುಮಾರ್​!

Published On - 1:41 pm, Mon, 5 April 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು