AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಹಲವು ರಸ್ತೆಗಳಿಗೆ ಚಿತ್ರರಂಗದವರ ಹೆಸರು; ಇಲ್ಲಿದೆ ವಿವರ

ಮಾರ್ಚ್​ 27ರಂದು ರೇಸ್​ಕೋರ್ಸ್​ ರಸ್ತೆಗೆ ಅಂಬರೀಷ್ ಹೆಸರು ಇಡಲಾಯಿತು. ಅದೇ ರೀತಿ ಬೆಂಗಳೂರಿನ ಅನೇಕ ರಸ್ತೆಗಳಿಗೆ ಚಿತ್ರರಂಗದವರ ಹೆಸರನ್ನು ನಾಮಕರಣ ಮಾಡಲಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಬೆಂಗಳೂರಿನ ಹಲವು ರಸ್ತೆಗಳಿಗೆ ಚಿತ್ರರಂಗದವರ ಹೆಸರು; ಇಲ್ಲಿದೆ ವಿವರ
ಬೆಂಗಳೂರಿನ ಅನೇಕ ರಸ್ತೆಗಳಿಗೆ ಚಿತ್ರರಂಗದವರ ಹೆಸರು
ರಾಜೇಶ್ ದುಗ್ಗುಮನೆ
| Edited By: |

Updated on:Mar 28, 2023 | 12:17 PM

Share

ಚಿತ್ರರಂಗದ ನಟ-ನಟಿಯರನ್ನು ಆರಾಧಿಸುವವರು ಅನೇಕರಿದ್ದಾರೆ. ನೆಚ್ಚಿನ ಸೆಲೆಬ್ರಿಟಿಗಾಗಿ ಏನನ್ನು ಮಾಡಲೂ  ಅಭಿಮಾನಿಗಳು ಸಿದ್ಧರಿರುತ್ತಾರೆ. ಒಂದೊಮ್ಮೆ ಅವರು ತೀರಿಕೊಂಡರೆ ಪಾರ್ಕ್, ರಸ್ತೆಗಳಿಗೆ ಅವರ ಹೆಸರು ಇಡುವ ಮೂಲಕ ನೆಚ್ಚಿನ ಸೆಲೆಬ್ರಿಟಿಯ ನೆನಪನ್ನು ಸದಾ ಜೀವಂತವಾಗಿರಿಸಲು ಪ್ರಯತ್ನಿಸುತ್ತಾರೆ. ಈಗ ರೇಸ್​ಕೋರ್ಸ್​ ರಸ್ತೆಗೆ ಅಂಬರೀಷ್ (Ambareesh) ಅವರ ಹೆಸರನ್ನು ಇಡಲಾಗಿದೆ. ಇದೇ ರೀತಿ ಬೆಂಗಳೂರಿನ ಅನೇಕ ರಸ್ತೆಗಳಿಗೆ ಚಿತ್ರರಂಗದವರ (Film Industry) ಹೆಸರನ್ನು ನಾಮಕರಣ ಮಾಡಲಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಅಂಬರೀಷ್ ರಸ್ತೆ

ಬೆಂಗಳೂರಿನ ರೇಸ್​ ಕೋರ್ಸ್​ ರಸ್ತೆಗೆ ‘ರೆಬೆಲ್​ ಸ್ಟಾರ್​ ಡಾ. ಎಂ.ಎಚ್​. ಅಂಬರೀಷ್​ ರಸ್ತೆ’ ಎಂದು ನಾಮಕರಣ ಮಾಡಲಾಗಿದೆ. ಈ ರಸ್ತೆಯ ಸಮೀಪ ಫಿಲ್ಮ್ ಚೇಂಬರ್ ಇದೆ. ಗಾಂಧಿ ನಗರ ಇದೆ. ರೇಸ್​ಕೋರ್ಸ್ ಕೂಡ ಇದೆ. ಇದೆಲ್ಲವೂ ಅಂಬಿ ಅವರು ಕೆಲಸ ಮಾಡುತ್ತಿದ್ದ ಜಾಗ ಆಗಿತ್ತು. ಹೀಗಾಗಿ, ಈ ಹೆಸರನ್ನು ಇಡಲಾಗಿದೆ.

ಡಾ. ಪುನೀತ್ ರಾಜ್​ಕುಮಾರ್ ರಸ್ತೆ

ನಾಯಂಡಹಳ್ಳಿ ಜಂಕ್ಷನ್​ನಿಂದ ವೆಗಾಸಿಟಿ ಮಾಲ್​ವರೆಗಿನ ರಸ್ತೆಗೆ ಪುನೀತ್ ರಾಜ್​ಕುಮಾರ್ ಅವರ ಹೆಸರನ್ನು ಇಡಲಾಗಿದೆ. ಪುನೀತ್ ರಾಜ್​ಕುಮಾರ್ ಅವರನ್ನು ಕಳೆದುಕೊಂಡ ಬಳಿಕ ರಸ್ತೆಗೆ ಅವರ ಹೆಸರು ಇಡಬೇಕು ಎನ್ನುವ ಆಗ್ರಹ ಕೇಳಿಬಂತು. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ರಸ್ತೆಗೆ ಅಪ್ಪು ಹೆಸರನ್ನು ಇಡಲಾಗಿದೆ.

ಡಾ. ರಾಜ್​ಕುಮಾರ್​ ರಸ್ತೆ

ರಾಜ್​ಕುಮಾರ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ತುಂಬಾನೇ ದೊಡ್ಡದು. ನೂರಾರು ಸಿನಿಮಾಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡರು. ಅವರ ನಟನೆಯ ಸಿನಿಮಾಗಳನ್ನು ಈಗಲೂ ಭಕ್ತಿಯಿಂದ ವೀಕ್ಷಿಸುವವರ ಸಂಖ್ಯೆ ದೊಡ್ಡದಿದೆ. ಅವರ ನೆನಪನ್ನು ಸದಾ ಜೀವಂತವಾಗಿಡಲು ಬೆಂಗಳೂರಿನ ಜಿಟಿ ವರ್ಡ್​ ಮಾಲ್​ನಿಂದ ಒರಾಯನ್ ಮಾಲ್ ವರೆಗಿನ ರಸ್ತೆಗೆ ಡಾ. ರಾಜ್​ಕುಮಾರ್ ರಸ್ತೆ ಎಂದು ಹೆಸರು ಇಡಲಾಗಿದೆ.

ಪಾರ್ವತಮ್ಮ ರಸ್ತೆ

ದಕ್ಷಿಣ ಬೆಂಗಳೂರಿನಲ್ಲಿರುವ ಯೆಡಿಯೂರು ಮುಖ್ಯ ರಸ್ತೆಗೆ ಪಾರ್ವತಮ್ಮ ರಾಜ್​ಕುಮಾರ್ ಹೆಸರು ಇಡಲಾಗಿದೆ. ಪಾರ್ವತಮ್ಮ ಅವರು ಖ್ಯಾತ ನಿರ್ಮಾಪಕಿ ಆಗಿ ಗುರುತಿಸಿಕೊಂಡಿದ್ದರು. ಕನ್ನಡದಲ್ಲಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ರಾಘವೇಂದ್ರ ರಾಜ್​ಕುಮಾರ್ ಅವರು ಈ ರಸ್ತೆಯನ್ನು ಉದ್ಘಾಟನೆ ಮಾಡಿದ್ದರು.

ವಿಷ್ಣುವರ್ಧನ್ ರಸ್ತೆ

ಬನಶಂಕರಿ ದೇವಸ್ಥಾನದಿಂದ ಕೆಂಗೇರಿ ಮಧ್ಯೆ ಇರುವ ರಸ್ತೆಗೆ ವಿಷ್ಣುವರ್ಧನ್ ಹೆಸರು ಇಡಲಾಗಿದೆ. ಈ ರಸ್ತೆ 14 ಕಿ.ಮೀ. ಉದ್ದವಿದೆ. ವಿಷ್ಣುವರ್ಧನ್ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರನ್ನು ನೆನಪಿನಲ್ಲಿಟ್ಟುಕೊಳ್ಳಲು ಈ ರಸ್ತೆಗೆ ವಿಷ್ಣು ಹೆಸರು ಇಡಲಾಗಿದೆ.

ಶಂಕರ್​ನಾಗ್ ರಸ್ತೆ

ಕನ್ನಡ ಚಿತ್ರರಂಗ ಕಂಡ ಖ್ಯಾತ ನಟ, ನಿರ್ದೇಶಕ ಶಂಕರ್​ ನಾಗ್. ಸಣ್ಣ ವಯಸ್ಸಿನಲ್ಲೇ ರಸ್ತೆ ಅಪಘಾತದಲ್ಲಿ ಮೃತಪಟ್ಟರು. ಅವರನ್ನು ಕಳೆದುಕೊಂಡಿದ್ದು ಚಿತ್ರರಂಗಕ್ಕೆ ದೊಡ್ಡ ನಷ್ಟ. ಬೊಮ್ಮನಹಳ್ಳಿ ರಸ್ತೆಗೆ ಶಂಕರ್​ನಾಗ್ ಹೆಸರನ್ನು ಇಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:53 am, Tue, 28 March 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?