AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಹಲವು ರಸ್ತೆಗಳಿಗೆ ಚಿತ್ರರಂಗದವರ ಹೆಸರು; ಇಲ್ಲಿದೆ ವಿವರ

ಮಾರ್ಚ್​ 27ರಂದು ರೇಸ್​ಕೋರ್ಸ್​ ರಸ್ತೆಗೆ ಅಂಬರೀಷ್ ಹೆಸರು ಇಡಲಾಯಿತು. ಅದೇ ರೀತಿ ಬೆಂಗಳೂರಿನ ಅನೇಕ ರಸ್ತೆಗಳಿಗೆ ಚಿತ್ರರಂಗದವರ ಹೆಸರನ್ನು ನಾಮಕರಣ ಮಾಡಲಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಬೆಂಗಳೂರಿನ ಹಲವು ರಸ್ತೆಗಳಿಗೆ ಚಿತ್ರರಂಗದವರ ಹೆಸರು; ಇಲ್ಲಿದೆ ವಿವರ
ಬೆಂಗಳೂರಿನ ಅನೇಕ ರಸ್ತೆಗಳಿಗೆ ಚಿತ್ರರಂಗದವರ ಹೆಸರು
ರಾಜೇಶ್ ದುಗ್ಗುಮನೆ
| Edited By: |

Updated on:Mar 28, 2023 | 12:17 PM

Share

ಚಿತ್ರರಂಗದ ನಟ-ನಟಿಯರನ್ನು ಆರಾಧಿಸುವವರು ಅನೇಕರಿದ್ದಾರೆ. ನೆಚ್ಚಿನ ಸೆಲೆಬ್ರಿಟಿಗಾಗಿ ಏನನ್ನು ಮಾಡಲೂ  ಅಭಿಮಾನಿಗಳು ಸಿದ್ಧರಿರುತ್ತಾರೆ. ಒಂದೊಮ್ಮೆ ಅವರು ತೀರಿಕೊಂಡರೆ ಪಾರ್ಕ್, ರಸ್ತೆಗಳಿಗೆ ಅವರ ಹೆಸರು ಇಡುವ ಮೂಲಕ ನೆಚ್ಚಿನ ಸೆಲೆಬ್ರಿಟಿಯ ನೆನಪನ್ನು ಸದಾ ಜೀವಂತವಾಗಿರಿಸಲು ಪ್ರಯತ್ನಿಸುತ್ತಾರೆ. ಈಗ ರೇಸ್​ಕೋರ್ಸ್​ ರಸ್ತೆಗೆ ಅಂಬರೀಷ್ (Ambareesh) ಅವರ ಹೆಸರನ್ನು ಇಡಲಾಗಿದೆ. ಇದೇ ರೀತಿ ಬೆಂಗಳೂರಿನ ಅನೇಕ ರಸ್ತೆಗಳಿಗೆ ಚಿತ್ರರಂಗದವರ (Film Industry) ಹೆಸರನ್ನು ನಾಮಕರಣ ಮಾಡಲಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಅಂಬರೀಷ್ ರಸ್ತೆ

ಬೆಂಗಳೂರಿನ ರೇಸ್​ ಕೋರ್ಸ್​ ರಸ್ತೆಗೆ ‘ರೆಬೆಲ್​ ಸ್ಟಾರ್​ ಡಾ. ಎಂ.ಎಚ್​. ಅಂಬರೀಷ್​ ರಸ್ತೆ’ ಎಂದು ನಾಮಕರಣ ಮಾಡಲಾಗಿದೆ. ಈ ರಸ್ತೆಯ ಸಮೀಪ ಫಿಲ್ಮ್ ಚೇಂಬರ್ ಇದೆ. ಗಾಂಧಿ ನಗರ ಇದೆ. ರೇಸ್​ಕೋರ್ಸ್ ಕೂಡ ಇದೆ. ಇದೆಲ್ಲವೂ ಅಂಬಿ ಅವರು ಕೆಲಸ ಮಾಡುತ್ತಿದ್ದ ಜಾಗ ಆಗಿತ್ತು. ಹೀಗಾಗಿ, ಈ ಹೆಸರನ್ನು ಇಡಲಾಗಿದೆ.

ಡಾ. ಪುನೀತ್ ರಾಜ್​ಕುಮಾರ್ ರಸ್ತೆ

ನಾಯಂಡಹಳ್ಳಿ ಜಂಕ್ಷನ್​ನಿಂದ ವೆಗಾಸಿಟಿ ಮಾಲ್​ವರೆಗಿನ ರಸ್ತೆಗೆ ಪುನೀತ್ ರಾಜ್​ಕುಮಾರ್ ಅವರ ಹೆಸರನ್ನು ಇಡಲಾಗಿದೆ. ಪುನೀತ್ ರಾಜ್​ಕುಮಾರ್ ಅವರನ್ನು ಕಳೆದುಕೊಂಡ ಬಳಿಕ ರಸ್ತೆಗೆ ಅವರ ಹೆಸರು ಇಡಬೇಕು ಎನ್ನುವ ಆಗ್ರಹ ಕೇಳಿಬಂತು. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ರಸ್ತೆಗೆ ಅಪ್ಪು ಹೆಸರನ್ನು ಇಡಲಾಗಿದೆ.

ಡಾ. ರಾಜ್​ಕುಮಾರ್​ ರಸ್ತೆ

ರಾಜ್​ಕುಮಾರ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ತುಂಬಾನೇ ದೊಡ್ಡದು. ನೂರಾರು ಸಿನಿಮಾಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡರು. ಅವರ ನಟನೆಯ ಸಿನಿಮಾಗಳನ್ನು ಈಗಲೂ ಭಕ್ತಿಯಿಂದ ವೀಕ್ಷಿಸುವವರ ಸಂಖ್ಯೆ ದೊಡ್ಡದಿದೆ. ಅವರ ನೆನಪನ್ನು ಸದಾ ಜೀವಂತವಾಗಿಡಲು ಬೆಂಗಳೂರಿನ ಜಿಟಿ ವರ್ಡ್​ ಮಾಲ್​ನಿಂದ ಒರಾಯನ್ ಮಾಲ್ ವರೆಗಿನ ರಸ್ತೆಗೆ ಡಾ. ರಾಜ್​ಕುಮಾರ್ ರಸ್ತೆ ಎಂದು ಹೆಸರು ಇಡಲಾಗಿದೆ.

ಪಾರ್ವತಮ್ಮ ರಸ್ತೆ

ದಕ್ಷಿಣ ಬೆಂಗಳೂರಿನಲ್ಲಿರುವ ಯೆಡಿಯೂರು ಮುಖ್ಯ ರಸ್ತೆಗೆ ಪಾರ್ವತಮ್ಮ ರಾಜ್​ಕುಮಾರ್ ಹೆಸರು ಇಡಲಾಗಿದೆ. ಪಾರ್ವತಮ್ಮ ಅವರು ಖ್ಯಾತ ನಿರ್ಮಾಪಕಿ ಆಗಿ ಗುರುತಿಸಿಕೊಂಡಿದ್ದರು. ಕನ್ನಡದಲ್ಲಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ರಾಘವೇಂದ್ರ ರಾಜ್​ಕುಮಾರ್ ಅವರು ಈ ರಸ್ತೆಯನ್ನು ಉದ್ಘಾಟನೆ ಮಾಡಿದ್ದರು.

ವಿಷ್ಣುವರ್ಧನ್ ರಸ್ತೆ

ಬನಶಂಕರಿ ದೇವಸ್ಥಾನದಿಂದ ಕೆಂಗೇರಿ ಮಧ್ಯೆ ಇರುವ ರಸ್ತೆಗೆ ವಿಷ್ಣುವರ್ಧನ್ ಹೆಸರು ಇಡಲಾಗಿದೆ. ಈ ರಸ್ತೆ 14 ಕಿ.ಮೀ. ಉದ್ದವಿದೆ. ವಿಷ್ಣುವರ್ಧನ್ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರನ್ನು ನೆನಪಿನಲ್ಲಿಟ್ಟುಕೊಳ್ಳಲು ಈ ರಸ್ತೆಗೆ ವಿಷ್ಣು ಹೆಸರು ಇಡಲಾಗಿದೆ.

ಶಂಕರ್​ನಾಗ್ ರಸ್ತೆ

ಕನ್ನಡ ಚಿತ್ರರಂಗ ಕಂಡ ಖ್ಯಾತ ನಟ, ನಿರ್ದೇಶಕ ಶಂಕರ್​ ನಾಗ್. ಸಣ್ಣ ವಯಸ್ಸಿನಲ್ಲೇ ರಸ್ತೆ ಅಪಘಾತದಲ್ಲಿ ಮೃತಪಟ್ಟರು. ಅವರನ್ನು ಕಳೆದುಕೊಂಡಿದ್ದು ಚಿತ್ರರಂಗಕ್ಕೆ ದೊಡ್ಡ ನಷ್ಟ. ಬೊಮ್ಮನಹಳ್ಳಿ ರಸ್ತೆಗೆ ಶಂಕರ್​ನಾಗ್ ಹೆಸರನ್ನು ಇಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:53 am, Tue, 28 March 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್