AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಒಂದೇ ದಿನಾಂಕದಲ್ಲಿ ಜನಿಸಿದ ವಿಜಯ್​, ಅಪ್ಪು, ಚಿರುಗೆ ಇದೆಂಥ ದುರ್ವಿಧಿ; ಕಂಟಕವಾಯ್ತಾ ಸಂಖ್ಯೆ 17?

Puneeth Rajkumar Heart Attack: ಕನ್ನಡ ಚಿತ್ರರಂಗದಲ್ಲಿ ಪುನೀತ್​ ರಾಜ್​ಕುಮಾರ್​, ಸಂಚಾರಿ ವಿಜಯ್​, ಚಿರಂಜೀವಿ ಸರ್ಜಾ ಅವರು ತಮ್ಮ ಪ್ರತಿಭೆಯಿಂದ ಗುರುತಿಸಿಕೊಂಡಿದ್ದರು. ಯಾವ ಪಾತ್ರ ಕೊಟ್ಟರೂ ನಿಭಾಯಿಸಬಲ್ಲ ಸಾಮರ್ಥ್ಯ ಹೊಂದಿದ್ದರು.

Puneeth Rajkumar: ಒಂದೇ ದಿನಾಂಕದಲ್ಲಿ ಜನಿಸಿದ ವಿಜಯ್​, ಅಪ್ಪು, ಚಿರುಗೆ ಇದೆಂಥ ದುರ್ವಿಧಿ; ಕಂಟಕವಾಯ್ತಾ ಸಂಖ್ಯೆ 17?
ಸಂಚಾರಿ ವಿಜಯ್​, ಪುನೀತ್​ ರಾಜ್​ಕುಮಾರ್​, ಚಿರಂಜೀವಿ ಸರ್ಜಾ
TV9 Web
| Updated By: ಮದನ್​ ಕುಮಾರ್​|

Updated on: Oct 30, 2021 | 2:08 PM

Share

ಕನ್ನಡ ಚಿತ್ರರಂಗಕ್ಕೆ ಕತ್ತಲು ಆವರಿಸಿದೆ. ಎಲ್ಲರ ಮೆಚ್ಚಿನ ನಟನಾಗಿದ್ದ ಪುನೀತ್​ ರಾಜ್​ಕುಮಾರ್​ ಅವರು ಶುಕ್ರವಾರ (ಅ.29) ಹೃದಯಾಘಾತದಿಂದ ನಿಧನರಾಗಿರುವುದು ತೀವ್ರ ನೋವಿನ ಸಂಗತಿ. ಅವರ ಅಪಾರ ಅಭಿಮಾನಿ ಬಳಗ ಕಣ್ಣೀರು ಸುರಿಸುತ್ತಿದೆ. ಅಂತಿಮ ದರ್ಶನ ಪಡೆಯಲು ಬಂದ ಅಭಿಮಾನಿಗಳು ಕರುಳು ಕಿತ್ತು ಬರುವಂತೆ ಅಳುತ್ತಿದ್ದಾರೆ. ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಪುನೀತ್​ಗಾಗಿ ಕಂಬನಿ ಮಿಡಿಯುತ್ತಿದ್ದಾರೆ. ಅಪ್ಪು ರೀತಿಯೇ ಚಿರಂಜೀವಿ ಸರ್ಜಾ ಮತ್ತು ಸಂಚಾರಿ ವಿಜಯ್​ ಅವರನ್ನು ಕೂಡ ಸ್ಯಾಂಡಲ್​ವುಡ್​ ಕಳೆದುಕೊಂಡಿದೆ. ಈ ಮೂವರ ಜನ್ಮದಿನಾಂಕದಲ್ಲಿ ಒಂದು ಸಾಮ್ಯತೆ ಇದೆ.

ಪುನೀತ್​ ರಾಜ್​ಕುಮಾರ್​ ಜನಿಸಿದ್ದು ಮಾರ್ಚ್​ 17ರಂದು. ಅವರ ರೀತಿಯೇ ಹೃದಯಾಘಾತದಲ್ಲಿ ನಿಧನರಾದ ಚಿರಂಜೀವಿ ಸರ್ಜಾ ಜನಿಸಿದ್ದು ಅಕ್ಟೋಬರ್​ 17ರಂದು. ಇತ್ತೀಚೆಗೆ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಸಂಚಾರಿ ವಿಜಯ್​ ಅವರ ಜನ್ಮ ದಿನಾಂಕ ಜುಲೈ 17. ಇವರೆಲ್ಲರಿಗೂ ಈ ಸಂಖ್ಯೆಯೇ ಕಂಟಕವಾಯ್ತೇ ಎಂದು ಸೋಶಿಯಲ್​ ಮೀಡಿಯಾದಲ್ಲಿ ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ. ಹಾಗೆಯೇ ಕನ್ನಡದ ಖ್ಯಾತ ನಟ ರಘುವೀರ್​ ಜನಿಸಿದ್ದು ಕೂಡ ಮೇ 17ರಂದು. ಅವರು ಸಹ ಹೃದಯಾಘಾತದಿಂದಲೇ ಮೃತಪಟ್ಟಿದ್ದು ಎಂಬುದು ಕಾಕತಾಳೀಯ.

ಕನ್ನಡ ಚಿತ್ರರಂಗದಲ್ಲಿ ಈ ಕಲಾವಿದರು ತಮ್ಮ ಪ್ರತಿಭೆಯಿಂದ ಗುರುತಿಸಿಕೊಂಡಿದ್ದರು. ಯಾವ ಪಾತ್ರ ಕೊಟ್ಟರೂ ನಿಭಾಯಿಸಬಲ್ಲ ಸಾಮರ್ಥ್ಯ ಹೊಂದಿದ್ದರು. ತಮ್ಮ ಅಭಿನಯದಿಂದ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿದ್ದರು. ಈ ಪ್ರತಿಭಾವಂತರು ರೀತಿ ಅಕಾಲಿಕ ಮರಣಕ್ಕೆ ಒಳಗಾಗುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಅದರಲ್ಲೂ ಫಿಟ್ನೆಸ್​ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಪುನೀತ್​ ರಾಜ್​ಕುಮಾರ್​ ಅವರು ಹೃದಯಾಘಾತದಲ್ಲಿ ನಿಧನರಾದರು ಎಂಬ ಸತ್ಯವನ್ನು ಯಾರಿಂದಲೂ ನಂಬಲಾಗುತ್ತಿಲ್ಲ. ಫಿಟ್ನೆಸ್​ ವಿಚಾರದಲ್ಲಿ ಅವರು ಯುವಕರಿಗೆ ಮಾದರಿ ಆಗಿದ್ದರು. ತಮ್ಮ ಜಿಮ್​ ವರ್ಕೌಟ್​ ವಿಡಿಯೋಗಳನ್ನು ಆಗಾಗ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದರು.

ಪುನೀತ್​ ನಿಧನಕ್ಕೆ ಕೋಟ್ಯಂತರ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ಅಕ್ಕ-ಪಕ್ಕದ ರಾಜ್ಯಗಳ ಸೆಲೆಬ್ರಿಟಿಗಳು ಆಗಮಿಸಿ ಅಂತಿಮ ದರ್ಶನ ಪಡೆದಿದ್ದಾರೆ. ನಟ, ನಿರ್ದೇಶಕ ಪ್ರಭುದೇವ, ಟಾಲಿವುಡ್​ನ ಸ್ಟಾರ್​ ನಟ ನಂದಮೂರಿ ಬಾಲಕೃಷ್ಣ, ಬಹುಭಾಷಾ ನಟ ಶರತ್​ ಕುಮಾರ್​ ಸೇರಿದಂತೆ ಅನೇಕರು ಪುನೀತ್​ಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಶನಿವಾರ (ಅ.30) ಕಂಠೀರವ ಸ್ಡುಡಿಯೋ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಸೋಶಿಯಲ್​ ಮೀಡಿಯಾ ಮೂಲಕ ಇಡೀ ಭಾರತೀಯ ಚಿತ್ರರಂಗವೇ ಅಪ್ಪುಗೆ ಶ್ರದ್ಧಾಂಜಲಿ ಅರ್ಪಿಸುತ್ತಿದೆ.

ಇದನ್ನೂ ಓದಿ:

ಪುನೀತ್​ಗೆ ಪಾಕಿಸ್ತಾನದ ಅಭಿಮಾನಿಯ ಗಾನ ನಮನ; ಕನ್ನಡದಲ್ಲಿ ಹಾಡು ಹೇಳುವ ಮೂಲಕ ಶ್ರದ್ಧಾಂಜಲಿ

Puneeth Rajkumar: ಪುನೀತ್​ ಹೃದಯಾಘಾತದ ವೈರಲ್​ ವಿಡಿಯೋ ಅಸಲಿಯೋ ನಕಲಿಯೋ? ಇಲ್ಲಿದೆ ಫ್ಯಾಕ್ಟ್​ ಚೆಕ್​

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ