AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​-ರಶ್ಮಿಕಾ ಮಂದಣ್ಣ ನಟನೆಯ ‘ಅಂಜನಿಪುತ್ರ’ ಮೇ 10ಕ್ಕೆ ಮರು ಬಿಡುಗಡೆ

ಮೇ 10ರಂದು ಪುನೀತ್​ ರಾಜ್​ಕುಮಾರ್​ ಅಭಿಮಾನಿಗಳಿಗೆ ಹಬ್ಬದ ವಾತಾವರಣ ಇರಲಿದೆ. ಚಿತ್ರಮಂದಿರಗಳಲ್ಲಿ ‘ಅಂಜನಿಪುತ್ರ’ ಸಿನಿಮಾ ರಾರಾಜಿಸಲಿದೆ. ‘ಜಾಕಿ’ ಸಿನಿಮಾ ಮರುಬಿಡುಗಡೆ ಆದಾಗ ಫ್ಯಾನ್ಸ್​ ಸಂಭ್ರಮಿಸಿದ್ದರು. ಈಗ ‘ಅಂಜನಿಪುತ್ರ’ ಸಿನಿಮಾವನ್ನು ಮತ್ತೊಮ್ಮೆ ದೊಡ್ಡ ಪರದೆಯಲ್ಲಿ ನೋಡುವ ಅವಕಾಶ ಅಭಿಮಾನಿಗಳಿಗೆ ಸಿಗುತ್ತಿದೆ.

ಪುನೀತ್​-ರಶ್ಮಿಕಾ ಮಂದಣ್ಣ ನಟನೆಯ ‘ಅಂಜನಿಪುತ್ರ’ ಮೇ 10ಕ್ಕೆ ಮರು ಬಿಡುಗಡೆ
ರಶ್ಮಿಕಾ ಮಂದಣ್ಣ, ಪುನೀತ್​ ರಾಜ್​ಕುಮಾರ್​
ಮದನ್​ ಕುಮಾರ್​
|

Updated on: Apr 30, 2024 | 9:55 PM

Share

ಈಗ ಎಲ್ಲೆಲ್ಲೂ ಚುನಾವಣೆಯ ಕಾವು ಜೋರಾಗಿದೆ. ಜನರ ಪೂರ್ತಿ ಗಮನ ಲೋಕಸಭಾ ಚುನಾವಣೆ ಮೇಲಿದೆ. ಹಾಗಾಗಿ ಸಿನಿಮಾ ಚಟುವಟಿಕೆಗಳು ಸ್ವಲ್ಪ ಮಂಕಾಗಿವೆ. ಕನ್ನಡದಲ್ಲಿ ದೊಡ್ಡ ಸಿನಿಮಾಗಳು ಯಾವುದೂ ರಿಲೀಸ್​ ಆಗುತ್ತಿಲ್ಲ. ಈ ಸಂದರ್ಭದಲ್ಲಿ ಹಳೇ ಸಿನಿಮಾವನ್ನು ಮತ್ತೆ ಬಿಡುಗಡೆ ಮಾಡುವ ಟ್ರೆಂಡ್​ ಬಂದಿದೆ. ‘ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್ (Puneeth Rajkumar)​ ಅಭಿಮಾನಿಗಳಿಗೆ ಇಲ್ಲೊಂದು ಗುಡ್​ ನ್ಯೂಸ್​ ಇದೆ. ಮೇ 10ರಂದು ‘ಅಂಜನಿಪುತ್ರ’ (Anjani Putra) ಸಿನಿಮಾವನ್ನು ಮರುಬಿಡುಗಡೆ ಮಾಡಲು ಸಿದ್ಧತೆ ನಡೆದಿದೆ. ಈ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಅವರಿಗೆ ರಶ್ಮಿಕಾ ಮಂದಣ್ಣ (Rashmika Mandanna) ನಾಯಕಿ.

‘ಎಂ.ಎನ್.ಕೆ‌ ಮೂವೀಸ್’ ಮೂಲಕ ಎಂ.ಎನ್. ಕುಮಾರ್ ಅವರು ‘ಅಂಜನಿಪುತ್ರ’ ಸಿನಿಮಾವನ್ನು ನಿರ್ಮಿಸಿದ್ದಾರೆ. ಎ. ಹರ್ಷ ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬಂದಿದೆ. ಪುನೀತ್ ರಾಜ್​ಕುಮಾರ್ ಹಾಗೂ ರಶ್ಮಿಕಾ ಮಂದಣ್ಣ ಅವರು ಜೋಡಿಯಾಗಿ ನಟಿಸಿದ್ದ ಈ ಸಿನಿಮಾ 2017ರ ಡಿಸೆಂಬರ್​ 21ರಂದು ಬಿಡುಗಡೆ ಆಗಿತ್ತು. ಈಗ ಮರು ಬಿಡುಗಡೆ ಆಗುತ್ತಿರುವುದು ಅಪ್ಪು ಫ್ಯಾನ್ಸ್​ಗೆ ಖುಷಿ ನೀಡಿದೆ.

‘ಅಂಜನಿಪುತ್ರ’ ಸಿನಿಮಾವನ್ನು ಮೇ 10ರಂದು ರಾಜ್ಯಾದ್ಯಂತ ಅಧಿಕ ಸಂಖ್ಯೆಯ ಥಿಯೇಟರ್​ಗಳಲ್ಲಿ ಅದ್ದೂರಿಯಾಗಿ ಮರು ಬಿಡುಗಡೆ ಮಾಡಲಾಗುವುದು ಎಂದು ನಿರ್ಮಾಪಕ ಎಂ.ಎನ್. ಕುಮಾರ್ ಅವರು ತಿಳಿಸಿದ್ದಾರೆ. ಪುನೀತ್​ ರಾಜ್​ಕುಮಾರ್​ ಅವರನ್ನು ಮತ್ತೊಮ್ಮೆ ದೊಡ್ಡ ಪರದೆ ಮೇಲೆ ನೋಡುವ ಅವಕಾಶ ಅಭಿಮಾನಿಗಳಿಗೆ ಸಿಗುತ್ತಿದೆ.

ಇದನ್ನೂ ಓದಿ: ‘ಆ ನಟನಿಗೆ ಎಲ್ಲವೂ ಗೊತ್ತು, ಆದ್ರೂ ಮಾತಾಡ್ತಿಲ್ಲ’: ಪುನೀತ್​ ಫ್ಯಾನ್ಸ್​ ಆರೋಪ

ರಶ್ಮಿಕಾ ಮಂದಣ್ಣ ಅವರು ನಟಿಸಿದ ಕೆಲವೇ ಕನ್ನಡ ಸಿನಿಮಾಗಳಲ್ಲಿ ‘ಅಂಜನಿಪುತ್ರ’ ಕೂಡ ಒಂದು. ‘ಕಿರಿಕ್​ ಪಾರ್ಟಿ’ ಸಿನಿಮಾದ ಯಶಸ್ವಿನ ಬಳಿಕ ಅವರಿಗೆ ಈ ಆಫರ್​ ಸಿಕ್ಕಿತ್ತು. ಈ ಚಿತ್ರಕ್ಕೆ ರವಿ ಬಸ್ರೂರ್​ ಅವರ‌ ಸಂಗೀತ ನಿರ್ದೇಶನವಿದೆ. ಆ ಸಿನಿಮಾದ ‘ಬಾರಿ ಖುಷಿ ಮಾರ್ರೆ ನಂಗೆ..’ ಹಾಡು ಸೂಪರ್​ ಹಿಟ್​ ಆಗಿತ್ತು. ಪುನೀತ್​ ರಾಜ್​ಕುಮಾರ್​ ಅವರನ್ನು ಅಭಿಮಾನಿಗಳು ಪ್ರತಿ ದಿನವೂ ಮಿಸ್​ ಮಾಡಿಕೊಳ್ಳುತ್ತಾರೆ. ಇಂದು ಅವರು ಭೌತಿಕವಾಗಿ ಇಲ್ಲದೇ ಇರಬಹುದು. ಆದರೆ ಸಿನಿಮಾಗಳ ಮೂಲಕ ಅವರು ಜೀವಂತವಾಗಿದ್ದಾರೆ. ಈ ವರ್ಷ ಅವರ ಜನ್ಮದಿನದ ಪ್ರಯುಕ್ತ ‘ಜಾಕಿ’ ಸಿನಿಮಾ ಮರುಬಿಡುಗಡೆಯಾಗಿ ಯಶಸ್ಸು ಕಂಡಿತ್ತು. ಈಗ ‘ಅಂಜನಿಪುತ್ರ’ ಸಿನಿಮಾ ಮತ್ತೆ ಚಿತ್ರಮಂದಿರಕ್ಕೆ ಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ