AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದ್ವಿತ್ವ’ ಪೋಸ್ಟರ್​ ಹಿಂದಿನ ಸತ್ಯ ತೆರೆದಿಟ್ಟು, ಫ್ಯಾನ್ಸ್​ ಬಳಿ ಕ್ಷಮೆ ಕೇಳಿದ ಪವನ್​ ಕುಮಾರ್​

Dvitva Poster: ಪುನೀತ್​ ರಾಜ್​ಕುಮಾರ್​ ನಟಿಸಲಿರುವ ‘ದ್ವಿತ್ವ’ ಪೋಸ್ಟರ್​ ಕಾಪಿ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಅದಕ್ಕೆ ಚಿತ್ರತಂಡದಿಂದ ಸ್ಪಷ್ಟನೆ ಸಿಕ್ಕಿದೆ. ನಿರ್ದೇಶಕ ಪವನ್​ ಕುಮಾರ್​ ಅವರು ಹಲವು ವಿಚಾರಗಳನ್ನು ವಿವರಿಸಿ, ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದಾರೆ.

‘ದ್ವಿತ್ವ’ ಪೋಸ್ಟರ್​ ಹಿಂದಿನ ಸತ್ಯ ತೆರೆದಿಟ್ಟು, ಫ್ಯಾನ್ಸ್​ ಬಳಿ ಕ್ಷಮೆ ಕೇಳಿದ ಪವನ್​ ಕುಮಾರ್​
ಪವನ್​ ಕುಮಾರ್​
TV9 Web
| Edited By: |

Updated on: Jul 04, 2021 | 7:58 AM

Share

‘ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್​ ಮತ್ತು ಪವನ್​ ಕುಮಾರ್​ ಕಾಂಬಿನೇಷನ್​ನಲ್ಲಿ ತಯಾರಾಗಲಿರುವ ‘ದ್ವಿತ್ವ’ ಚಿತ್ರದ ಪೋಸ್ಟರ್​ ಈಗ ಭಾರೀ ಚರ್ಚೆ ಹುಟ್ಟುಹಾಕಿದೆ. ಇದು ಕಾಪಿ ಮಾಡಿರುವ ಪೋಸ್ಟರ್​ ಎಂಬ ಅಭಿಪ್ರಾಯ ಹಲವರಿಂದ ಕೇಳಿಬಂದಿದೆ. ಆ ಮಾತನ್ನು ಸಾಬೀತುಪಡಿಸುವಂತಹ ಮೂಲ ಪೋಸ್ಟರ್​ ಕೂಡ ಲಭ್ಯವಾಗಿದೆ. ಈ ಬಗ್ಗೆ ಸ್ವತಃ ನಿರ್ದೇಶಕ ಪವನ್​ ಕುಮಾರ್​ ಕೂಡ ಬೇಸರ ವ್ಯಕ್ತಪಡಿಸಿದ್ದಾರೆ. ಅಷ್ಟಕ್ಕೂ ಈ ಪೋಸ್ಟರ್​ ಮೇಲೆ ಕಳಂಕ ಬರಲು ಕಾರಣ ಏನು? ಇದರ ಹಿಂದಿರುವ ಸತ್ಯ ಏನು ಎಂದು ಅವರು ವಿವರಿಸಿದ್ದಾರೆ.

‘ಪೋಸ್ಟರ್ ಡಿಸೈನರ್​ ಆದರ್ಶ್​ ಅವರು ದ್ವಿತ್ವ ಪೋಸ್ಟರ್​ ವಿನ್ಯಾಸ ಮಾಡಿ ತೋರಿಸಿದಾಗ ನಾನು ಮೂಲ ಪೋಸ್ಟರ್​ ನೋಡಿರಲಿಲ್ಲ. ಲೈಸೆನ್ಸ್​ ಇರುವ ಒಂದು ಇಮೇಜ್​ ಬಳಸಿಕೊಂಡು ಆದರ್ಶ್​ ಅವರು ಈ ಪೋಸ್ಟರ್​ ವಿನ್ಯಾಸ ಮಾಡಿದ್ದರು. ಅದು ನನಗೆ ಆಗಲೇ ಗೊತ್ತಾಗಿದ್ದರೆ ನಾನು ಈ ಡಿಸೈನ್​ ಬಳಸುತ್ತಿರಲಿಲ್ಲ. ಮೂಲ ಇಮೇಜ್​ ಅನ್ನು ಕಾನೂನಿನ ಪ್ರಕಾರವೇ ಅದರ್ಶ್​ ಅವರು ಬಳಕೆ ಮಾಡಿದ್ದರೂ ಕೂಡ, ಈ ರೀತಿ ಆಗಿದ್ದು ದುರದೃಷ್ಟಕರ’ ಎಂದು ಪವನ್​ ಹೇಳಿದ್ದಾರೆ.

‘ಕದ್ದು ಪೋಸ್ಟರ್​ ಮಾಡಬೇಕು ಎಂಬ ಉದ್ದೇಶ ನಮಗೆ ಇರಲಿಲ್ಲ. ನನ್ನ ಮತ್ತು ಪೋಸ್ಟರ್​ ಡಿಸೈನರ್​ ಆದರ್ಶ್​ ನಡುವೆ ಆದ ಸಣ್ಣ ಕಮ್ಯುನಿಕೇಷನ್​ ಗ್ಯಾಪ್​ನ ಕಾರಣದಿಂದಾಗಿ ಈ ರೀತಿ ಆಯಿತು’ ಎಂದು ಪವನ್​ ಕುಮಾರ್​ ಕಾರಣ ನೀಡಿದ್ದಾರೆ.

‘ನಾನು ಪ್ರೇಕ್ಷಕರ ಜಾಗದಲ್ಲಿ ಇದ್ದಿದ್ದರೆ ನನಗೂ ಕೂಡ ಪೋಸ್ಟರ್​ ಬಗ್ಗೆ ಕಾಪಿ ಎಂಬ ಅಭಿಪ್ರಾಯ ಮೂಡುವುದು ಸಹಜ. ಇಂದಿಗೂ ನಮ್ಮ ಸ್ಕ್ರಿಪ್ಟ್​ ಮೇಲೆ ನಮಗೆ ನಂಬಿಕೆ ಇದೆ. ಪೋಸ್ಟರ್​ ಬಿಡುಗಡೆ ಆದ ನಂತರ ಕಾಪಿ ಎಂಬುದನ್ನೇ ಇಟ್ಟುಕೊಂಡು ಅನೇಕರು ಸೋಶಿಯಲ್​ ಮೀಡಿಯಾದಲ್ಲಿ ದೊಡ್ಡ ಚರ್ಚೆ ಮಾಡಿದರು. ನೆಗೆಟಿವಿಟಿ ಯಾಕೆ ಹೆಚ್ಚು ಹರಡುತ್ತದೆ ಎಂಬುದು ನನಗೆ ಅರ್ಥ ಆಗುತ್ತಿಲ್ಲ’ ಎಂದಿದ್ದಾರೆ ಪವನ್​.

‘ಇನ್ಮುಂದೆ ಪೋಸ್ಟರ್​ ವಿನ್ಯಾಸಕರು ಈ ರೀತಿ ಲೈಸೆನ್ಸ್​ ಇರುವ ಸ್ಟಾಕ್​ ಇಮೇಜ್​ಗಳನ್ನು ಬಳಸಿಕೊಂಡಿದ್ದರೆ ದಯವಿಟ್ಟು ನಿರ್ಮಾಪಕರಿಗೆ ಮತ್ತು ನಿರ್ದೇಶಕರಿಗೆ ಮೊದಲೇ ತಿಳಿಸಿ. ಆಗ ಇಂಥ ದುರದೃಷ್ಟಕರ ಸಂಗತಿಯನ್ನು ತಪ್ಪಿಸಬಹುದು. ಇದು ಈಗ ನಾನು ಕಲಿತ ಪಾಠ. ನಾನೇ ಕಾಪಿ ಮಾಡಿಸಿದ್ದೇನೆ ಅಂತ ತುಂಬ ಜನರು ಅಂದುಕೊಂಡಿದ್ದಾರೆ. ಆದರೆ ಅದು ಸತ್ಯವಲ್ಲ. ಆದರ್ಶ್​ ಮೇಲೆ ನಮಗೆ ನಂಬಿಕೆ ಇದೆ. ಶೂಟಿಂಗ್​ ಶುರು ಮಾಡುವುದರೊಳಗೆ ಅವರು ಇನ್ನೂ ಒಳ್ಳೆಯ ಪೋಸ್ಟರ್​ ವಿನ್ಯಾಸ ಮಾಡುತ್ತಾರೆ ಎನ್ನುವ ನಂಬಿಕೆ ಇದೆ. ಯಾರಿಗಾದರೂ ಬೇಜಾರು ಆಗಿದ್ದರೆ ಕ್ಷಮಿಸಿ’ ಎಂದು ಪವನ್​ ಅವರು ವಿಡಿಯೋ ಮೂಲಕ ಹೇಳಿದ್ದಾರೆ.

‘ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ನಲ್ಲಿ ನಿರ್ಮಾಪಕ ವಿಜಯ್​ ಕಿರಗಂದೂರು ಅವರು ದ್ವಿತ್ವ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಪ್ರೀತಾ ಜಯರಾಮನ್​ ಛಾಯಾಗ್ರಹಣ, ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ ಮಾಡಲಿದ್ದಾರೆ.

ಇದನ್ನೂ ಓದಿ:

‘ಮ್ಯಾನ್​ ಆಫ್​ ದಿ ಮ್ಯಾಚ್​’ ಚಿತ್ರಕ್ಕಾಗಿ ಕೈ ಜೋಡಿಸಿದ ಪುನೀತ್​ ರಾಜ್​ಕುಮಾರ್​ ಮತ್ತು ನಿರ್ದೇಶಕ ಸತ್ಯ ಪ್ರಕಾಶ್​

ಪುನೀತ್​ ರಾಜ್​ಕುಮಾರ್​ ಸಿನಿಮಾ ಹಾಡನ್ನು ಮಧುರವಾಗಿ ಹಾಡಿದ ಕೊರಿಯಾ ಯುವತಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್