AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

James Special Poster: ‘ಜೇಮ್ಸ್’​ ಹೊಸ ಪೋಸ್ಟರ್​ ರಿಲೀಸ್​; ಪುನೀತ್​ ಫ್ಯಾನ್ಸ್​ಗೆ ಗಣರಾಜ್ಯೋತ್ಸವದ ಗಿಫ್ಟ್

Puneeth Rajkumar: ಬಹುನಿರೀಕ್ಷಿತ ‘ಜೇಮ್ಸ್’​ ಸಿನಿಮಾದಿಂದ ಹೊಸ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ಪುನೀತ್​ ರಾಜ್​ಕುಮಾರ್​ ಅಭಿಮಾನಿಗಳು ಈ ಪೋಸ್ಟರ್​ ಕಂಡು ಮೆಚ್ಚುಗೆ ಸೂಚಿಸಿದ್ದಾರೆ.

James Special Poster: ‘ಜೇಮ್ಸ್’​ ಹೊಸ ಪೋಸ್ಟರ್​ ರಿಲೀಸ್​; ಪುನೀತ್​ ಫ್ಯಾನ್ಸ್​ಗೆ ಗಣರಾಜ್ಯೋತ್ಸವದ ಗಿಫ್ಟ್
ಜೇಮ್ಸ್​ ಸಿನಿಮಾ ಹೊಸ ಪೋಸ್ಟರ್
TV9 Web
| Edited By: |

Updated on:Jan 26, 2022 | 2:17 PM

Share

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಇಂದು ಎಲ್ಲರೂ ಮಿಸ್​ ಮಾಡಿಕೊಳ್ಳುತ್ತಿದ್ದಾರೆ.​ ಅವರು ಅಭಿನಯಿಸಿರುವ ‘ಜೇಮ್ಸ್​’ (James Kannada Movie) ಸಿನಿಮಾದ ಹೊಸ ಪೋಸ್ಟರ್​ ಬಿಡುಗಡೆ ಆಗಿದೆ. ಗಣರಾಜ್ಯೋತ್ಸವದ ಪ್ರಯುಕ್ತ ರಿಲೀಸ್​ ಆಗಿರುವ ಈ ಪೋಸ್ಟರ್​ ಕಂಡು ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡುತ್ತ, ಈ ಸಿನಿಮಾ ಬಗ್ಗೆ ತಮಗಿರುವ ನಿರೀಕ್ಷೆ ಯಾವ ಮಟ್ಟದ್ದು ಎಂಬುದನ್ನು ತೋರಿಸುತ್ತಿದ್ದಾರೆ ಅಪ್ಪು ಫ್ಯಾನ್ಸ್​. ಈ ಚಿತ್ರಕ್ಕೆ ಚೇತನ್​ ಕುಮಾರ್​ (Chethan Kumar) ನಿರ್ದೇಶನ ಮಾಡುತ್ತಿದ್ದಾರೆ. ಹೃದಯಾಘಾತದಿಂದ ನಿಧನರಾಗುವುದಕ್ಕೂ ಮುನ್ನ ಪುನೀತ್ ರಾಜ್​ಕುಮಾರ್​ ಅವರು ತಮ್ಮ ಪಾಲಿನ ಚಿತ್ರೀಕರಣವನ್ನು ಮುಗಿಸಿದ್ದರು. ಅವರ ನಿಧನದ ಬಳಿಕ ಇನ್ನುಳಿದ ದೃಶ್ಯಗಳ ಶೂಟಿಂಗ್​ ಅನ್ನು ಪೂರ್ಣಗೊಳಿಸಲಾಯಿತು. ಈ ಸಿನಿಮಾದಲ್ಲಿ ಶಿವರಾಜ್​ಕುಮಾರ್​ ಮತ್ತು ರಾಘವೇಂದ್ರ ರಾಜ್​ಕುಮಾರ್​ ಕೂಡ ಬಣ್ಣ ಹಚ್ಚಿರುವುದು ವಿಶೇಷ. ‘ಜೇಮ್ಸ್​’ನಲ್ಲಿ ಪುನೀತ್​ ರಾಜ್​ಕುಮಾರ್​ ಅವರಿಗೆ ಜೋಡಿಯಾಗಿ ಪ್ರಿಯಾ ಆನಂದ್​ ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ಚರಣ್​ ರಾಜ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಇಂದು (ಜ.26) ಬಿಡುಗಡೆ ಆಗಿರುವ ಹೊಸ ಪೋಸ್ಟರ್​ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

ಆ್ಯಕ್ಷನ್​ ಸಿನಿಮಾಗಳ ಮೂಲಕ ಫೇಮಸ್​ ಆಗಿರುವವರು ನಿರ್ದೇಶಕ ಚೇತನ್​ ಕುಮಾರ್​. ಅದೇ ರೀತಿ, ಪುನೀತ್​ ರಾಜ್​ಕುಮಾರ್​ ಸಿನಿಮಾಗಳಲ್ಲೂ ಭರ್ಜರಿ ಆ್ಯಕ್ಷನ್​ ಇದ್ದೇ ಇರುತ್ತದೆ. ಇದೇ ಮೊದಲ ಬಾರಿಗೆ ಇವರಿಬ್ಬರ ಕಾಂಬಿನೇಷನ್​ನಲ್ಲಿ ‘ಜೇಮ್ಸ್​’ ಮೂಡಿಬರುತ್ತಿದೆ. ಹಾಗಾಗಿ ನಿರೀಕ್ಷೆ ಹೆಚ್ಚಿದೆ. ಸಿನಿಮಾದ ಮೇಕಿಂಗ್​ ಗುಣಮಟ್ಟ ಕೂಡ ಅದ್ದೂರಿಯಾಗಿ ಇರಲಿದೆ. ಈಗ ಗಣರಾಜ್ಯೋತ್ಸವದ ಪ್ರಯುಕ್ತ ಹೊಸ ಪೋಸ್ಟರ್​ ಬಿಡುಗಡೆ ಮಾಡುವ ಮೂಲಕ ಅಭಿಮಾನಿಗಳಿಗೆ ‘ಜೇಮ್ಸ್​’ ಚಿತ್ರತಂಡ ಖುಷಿ ನೀಡಿದೆ.

ಸೈನಿಕನ ಗೆಟಪ್​ನಲ್ಲಿ ಪುನೀತ್​ ರಾಜ್​ಕುಮಾರ್​:

ಗಣರಾಜ್ಯೋತ್ಸವದ ಪ್ರಯುಕ್ತ ಬಿಡುಗಡೆ ಆಗಿರುವ ಹೊಸ ಪೋಸ್ಟರ್​ನಲ್ಲಿ ಪುನೀತ್​ ರಾಜ್​ಕುಮಾರ್​ ಅವರು ಸೈನಿಕನ ಗೆಟಪ್​ ಧರಿಸಿದ್ದಾರೆ. ಗನ್​ ಹಿಡಿದು ಯುದ್ಧಕ್ಕೆ ಸಜ್ಜಾದ ಯೋಧನಾಗಿ ಅವರು ಕಾಣಿಸಿಕೊಂಡಿದ್ದಾರೆ. ‘ಸಲಾಂ ಸೋಲ್ಜರ್​, ದೇಶಕ್ಕೆ ನೀನೇ ಪವರ್​’ ಎಂಬ ಸ್ಲೋಗನ್​ ಈ ಪೋಸ್ಟರ್​ನಲ್ಲಿ ಗಮನ ಸೆಳೆಯುತ್ತಿದೆ. ಯಾಗಾದರೆ ಈ ಸಿನಿಮಾದಲ್ಲಿ ಪುನೀತ್​ ಅವರು ಸೈನಿಕನ ಪಾತ್ರ ಮಾಡಿದ್ದಾರಾ ಎಂಬ ಕೌತುಕ ಮೂಡಿದೆ.

ಅಶ್ವಿನಿ ಪುನೀತ್ ರಾಜ್​ಕುಮಾರ್​ ಅವರು ಈ ಪೋಸ್ಟರ್​ ಶೇರ್​ ಮಾಡಿಕೊಂಡಿದ್ದಾರೆ. ಆ ಮೂಲಕ ಅವರು ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ. ಅಭಿಮಾನಿಗಳು ಮಾತ್ರವಲ್ಲದೇ, ಎಲ್ಲ ಸೆಲೆಬ್ರಿಟಿಗಳು ಕೂಡ ‘ಜೇಮ್ಸ್​’ ಸಿನಿಮಾಗಾಗಿ ಕಾಯುತ್ತಿದ್ದಾರೆ. ಸ್ಯಾಂಡಲ್​ವುಡ್​ನ ಅನೇಕ ನಟ-ನಟಿಯರು ಮತ್ತು ತಂತ್ರಜ್ಞರು ಈ ಚಿತ್ರದ ಹೊಸ ಪೋಸ್ಟರ್​ ಹಂಚಿಕೊಂಡಿದ್ದಾರೆ. ಆ ಮೂಲಕ ಅಪ್ಪು ಅವರನ್ನು ನೆನಪು ಮಾಡಿಕೊಳ್ಳುತ್ತಿದ್ದಾರೆ.

‘ಜೇಮ್ಸ್’​ ಬಿಡುಗಡೆ ದಿನಾಂಕದ ಬಗ್ಗೆ ಚಿತ್ರತಂಡದಿಂದ ಈವರೆಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಮಾರ್ಚ್​ 17ರಂದು ಪುನೀತ್​ ರಾಜ್​ಕುಮಾರ್​ ಬರ್ತ್​ಡೇ. ಅದೇ ದಿನ ‘ಜೇಮ್ಸ್​’ ಬಿಡುಗಡೆ ಆಗಬೇಕು ಎಂದು ಅಪ್ಪು ಅಭಿಮಾನಿಗಳು ಬಯಸುತ್ತಿದ್ದಾರೆ.

ಇದನ್ನೂ ಓದಿ:

ಪುನೀತ್​ ನಟನೆಯ ‘ಜೇಮ್ಸ್​’ ಶೂಟಿಂಗ್​ ಮುಕ್ತಾಯ; ರಿಲೀಸ್​ ಡೇಟ್​ ತಿಳಿಯಲು ಕಾದಿರುವ ಅಭಿಮಾನಿಗಳು

ಅಮೇಜಾನ್​ ಪ್ರೈಮ್​​ನಲ್ಲಿ ರಿಲೀಸ್​ ಆಗುತ್ತಿದೆ ಪುನೀತ್​ ನಿರ್ಮಾಣದ ಮೂರು ಸಿನಿಮಾಗಳು

Published On - 11:15 am, Wed, 26 January 22

Follow Us
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ