AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೇಮ್ಸ್​’ ಟೀಸರ್​ ಬಿಡುಗಡೆಗೆ ದಿನಾಂಕ ನಿಗದಿ; ಗುಡ್​ ನ್ಯೂಸ್​ ಕೇಳಿ ಖುಷಿಯಾದ ಪುನೀತ್​ ಫ್ಯಾನ್ಸ್​

James Movie Teaser: ಫೆ.11ರಂದು ಬೆಳಗ್ಗೆ 11.11ಕ್ಕೆ ‘ಜೇಮ್ಸ್​’ ಸಿನಿಮಾದ ಟೀಸರ್​ ಬಿಡುಗಡೆ ಆಗಲಿದೆ. ಪುನೀತ್​ ರಾಜ್​ಕುಮಾರ್​ ಅಭಿಮಾನಿಗಳು ಆ ಕ್ಷಣಕ್ಕಾಗಿ ಕಾಯುತ್ತಿದ್ದಾರೆ.

‘ಜೇಮ್ಸ್​’ ಟೀಸರ್​ ಬಿಡುಗಡೆಗೆ ದಿನಾಂಕ ನಿಗದಿ; ಗುಡ್​ ನ್ಯೂಸ್​ ಕೇಳಿ ಖುಷಿಯಾದ ಪುನೀತ್​ ಫ್ಯಾನ್ಸ್​
ಪುನೀತ್​ ರಾಜ್​ಕುಮಾರ್​ ಜೇಮ್ಸ್​ ಸಿನಿಮಾ
TV9 Web
| Updated By: ಮದನ್​ ಕುಮಾರ್​|

Updated on:Feb 05, 2022 | 12:29 PM

Share

ನಟ ಪುನೀತ್​ ರಾಜ್​ಕುಮಾರ್ (Puneeth Rajkumar)​ ಅಭಿನಯದ ‘ಜೇಮ್ಸ್​’ ಸಿನಿಮಾ ಸಖತ್​ ನಿರೀಕ್ಷೆ ಮೂಡಿಸಿದೆ. ಚೇತನ್​ ಕುಮಾರ್​ ನಿರ್ದೇಶನದ ಈ ಚಿತ್ರದ ಪೋಸ್ಟರ್​ಗಳನ್ನು ಕಂಡು ಫ್ಯಾನ್ಸ್​ ಥ್ರಿಲ್​ ಆಗಿದ್ದಾರೆ. ಈಗ ‘ಜೇಮ್ಸ್​’ ಟೀಸರ್​ (James Movie Teaser) ನೋಡುವ ಸಮಯ ಹತ್ತಿರ ಬಂದಿದೆ. ಟೀಸರ್​ ಬಿಡುಗಡೆಗಾಗಿ ಚಿತ್ರತಂಡ ದಿನಾಂಕ ನಿಗದಿ ಮಾಡಿದೆ. ಫೆ.11ರಂದು ಬೆಳಗ್ಗೆ 11.11ಕ್ಕೆ ಟೀಸರ್​ ರಿಲೀಸ್​ ಆಗಲಿದೆ. ಈ ಕುರಿತು ಅಶ್ವಿನಿ ಪುನೀತ್​ ರಾಜ್​ಕುಮಾರ್​ (Ashwini Puneeth Rajkumar) ಅವರು ಸೋಶಿಯಲ್​ ಮೀಡಿಯಾ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಕೆಲವೇ ದಿನಗಳ ಹಿಂದೆ ಗಣರಾಜ್ಯೋತ್ಸವದ ಪ್ರಯುಕ್ತ ಬಿಡುಗಡೆಯಾದ ಪೋಸ್ಟರ್​ನಲ್ಲಿ ಪುನೀತ್​ ರಾಜ್​ಕುಮಾರ್​ ಅವರು ಸೈನಿಕನ ಗೆಟಪ್​​ನಲ್ಲಿ ಕಾಣಿಸಿಕೊಂಡಿದ್ದರು. ಆ ಪೋಸ್ಟರ್​ ಸಖತ್​ ವೈರಲ್​ ಆಗಿತ್ತು. ಅದರ ಬೆನ್ನಲ್ಲೇ ಈಗ ಟೀಸರ್​ ಬರುತ್ತಿರುವುದು ಖುಷಿಯ ವಿಚಾರ. ಈ ಚಿತ್ರಕ್ಕೆ ಶೂಟಿಂಗ್​ ಮುಗಿದಿದ್ದು, ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ಭರದಿಂದ ಸಾಗುತ್ತಿವೆ. ಆದಷ್ಟು ಬೇಗ ಸಿನಿಮಾವನ್ನು ತೆರೆಕಾಣಿಸುವ ಗುರಿ ಇಟ್ಟುಕೊಂಡು ಚಿತ್ರತಂಡ ಕೆಲಸ ಮಾಡುತ್ತಿದೆ. ಬಿಡುಗಡೆ ಆಗಲಿರುವ ಟೀಸರ್​ನಲ್ಲಿ ‘ಜೇಮ್ಸ್​’ ರಿಲೀಸ್​ ದಿನಾಂಕ ಘೋಷಣೆ ಆಗಬಹುದು ಎಂಬ ನಿರೀಕ್ಷೆ ಇದೆ.

ಅಣ್ಣಾವ್ರ ಮಕ್ಕಳಾದ ಪುನೀತ್​ ರಾಜ್​ಕುಮಾರ್​, ಶಿವರಾಜ್​ಕುಮಾರ್​ ಹಾಗೂ ರಾಘವೇಂದ್ರ ರಾಜ್​ಕುಮಾರ್​ ಒಟ್ಟಿಗೆ ಅಭಿನಯಿಸಬೇಕು ಎಂಬುದು ಅಭಿಮಾನಿಗಳ ಆಸೆ ಆಗಿತ್ತು. ಆದರೆ ಆ ಆಸೆ ಈಡೇರುವುದಕ್ಕೂ ಮುನ್ನವೇ ಪುನೀತ್​ ರಾಜ್​ಕುಮಾರ್ ಅವರು ಹೃದಯಾಘಾತದಿಂದ ಕಳೆದ ವರ್ಷ ಅ.29ರಂದು​ ನಿಧನರಾಗಿದ್ದು ತೀವ್ರ ನೋವಿನ ಸಂಗತಿ. ಡಾ. ರಾಜ್​ಕುಮಾರ್​ ಕುಟುಂಬದ ಕುಡಿಗಳನ್ನು ಒಂದೇ ಸಿನಿಮಾದಲ್ಲಿ ನೋಡಬೇಕು ಎನ್ನುವ ಅಭಿಮಾನಿಗಳ ಕನಸನ್ನು ‘ಜೇಮ್ಸ್​’ ಚಿತ್ರತಂಡ ನನಸು ಮಾಡುತ್ತಿದೆ. ಕೆಲವೇ ದಿನಗಳ ಹಿಂದೆ ಶಿವರಾಜ್​ಕುಮಾರ್​ ಹಾಗೂ ರಾಘವೇಂದ್ರ ರಾಜ್​ಕುಮಾರ್ ಅವರು ಈ ಚಿತ್ರದಲ್ಲಿ ನಟಿಸಿದ್ದು, ತಮ್ಮ ಪಾಲಿನ ಡಬ್ಬಿಂಗ್​ ಕೂಡ ಮುಗಿಸಿದ್ದಾರೆ.

ಮಾ.17ರಂದು ಪುನೀತ್​ ರಾಜ್​ಕುಮಾರ್​ ಜನ್ಮದಿನ. ಅದೇ ದಿನದಂದು ‘ಜೇಮ್ಸ್​’ ರಿಲೀಸ್​ ಆಗಬೇಕು ಎಂಬುದು ಅಭಿಮಾನಿಗಳ ಬಯಕೆ. ಅದನ್ನು ಈಡೇರಿಸಲು ಚಿತ್ರತಂಡ ಪ್ರಯತ್ನಿಸುತ್ತಿದೆ. ‘ಜೇಮ್ಸ್​’ ರಿಲೀಸ್​ ಡೇಟ್​ ಬಗ್ಗೆ ಅಧಿಕೃತವಾಗಿ ಈವರೆಗೆ ಘೋಷಣೆ ಆಗಿಲ್ಲ. ಈ ಚಿತ್ರದ ಟೀಸರ್​ನಲ್ಲಿ ಈ ಬಿಡುಗಡೆ ದಿನಾಂಕ ಅನೌನ್ಸ್​ ಆಗಬಹುದು ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

ಇತ್ತೀಚೆಗೆ ರಾಘವೇಂದ್ರ ರಾಜ್​ಕುಮಾರ್​ ಅವರು ಈ ಸಿನಿಮಾ ಕುರಿತು ಮಾತನಾಡಿದ್ದರು. ‘ನಾನು ಒಂದು ದಿನದ ಪಾತ್ರ ಮಾಡಿದ್ದೇನೆ. ಅರ್ಧ ದಿನದಲ್ಲಿ ಡಬ್ಬಿಂಗ್ ಮುಗಿಯತ್ತೆ. ಸಿನಿಮಾ ಚೆನ್ನಾಗಿ ಮೂಡಿಬರುತ್ತಿದೆ ಅಂತ ನಿರ್ದೇಶಕ ಚೇತನ್​ ಕುಮಾರ್​ ಹೇಳುತ್ತಿದ್ದಾರೆ. ಕೊನೇ ಸಿನಿಮಾ ಎಂಬ ಕಾರಣಕ್ಕೋ ಏನೂ ಅಷ್ಟು ​ಚೆನ್ನಾಗಿ ಮಾಡಿಹೋಗಿದ್ದಾರೆ ಅಂತ ನಿರ್ದೇಶಕರು ಹೇಳುತ್ತಿದ್ದಾರೆ. ಅಪ್ಪು ನಮಗಾಗಿ ಬಿಟ್ಟು ಹೋಗಿರುವ ಆಸ್ತಿಯೇ ಜೇಮ್ಸ್​ ಸಿನಿಮಾ. ಈ ಸಿನಿಮಾ ಮತ್ತು ಕೆಲಸದ ಮೂಲಕ ನಿಮ್ಮೊಡನೆ ಬದುಕಿರುತ್ತೇನೆ ಅಂತ ತೋರಿಸಿಕೊಟ್ಟು ಹೋಗಿದ್ದಾರೆ’ ಎಂದು ಅವರು ಹೇಳಿದ್ದರು.

ಇದನ್ನೂ ಓದಿ:

ಈ ಶಾಲೆಯಲ್ಲಿ ಪುನೀತ್​ ಫೋಟೋಗೆ ದಿನವೂ ಪೂಜೆ! ಪ್ರತಿ ವರ್ಷ 15 ಮಕ್ಕಳ ದತ್ತು ಸ್ವೀಕಾರ

ಪುನೀತ್​​ ಮನೆಯಲ್ಲಿ ಅಪ್ಪು ಫೋಟೋ ಮುಂದೆ ಅಲ್ಲು ಅರ್ಜುನ್​ ಭಾವುಕ ಕ್ಷಣ; ವಿಡಿಯೋ ನೋಡಿ

Published On - 12:11 pm, Sat, 5 February 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!