AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ‘ಜೇಮ್ಸ್​’ ಸಿನಿಮಾ ಖಂಡಿತ ರಿಲೀಸ್​ ಆಗತ್ತೆ; ಬಿಗ್​ ಅಪ್​ಡೇಟ್​​ ​ನೀಡಿದ ನಿರ್ದೇಶಕ ಚೇತನ್​ ಕುಮಾರ್

Puneeth Rajkumar James Movie: ‘ಜೇಮ್ಸ್​’ ಚಿತ್ರಕ್ಕೆ ಬಹುತೇಕ ಶೂಟಿಂಗ್​ ಮುಕ್ತಾಯ ಆಗಿತ್ತು. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿ ಇತ್ತು. ಸಾಂಗ್​ ಶೂಟಿಂಗ್​ ಮಾಡಲು ನ.8ರಿಂದ ಪುನೀತ್​ ರಾಜ್​ಕುಮಾರ್​ ಅವರು ಡೇಟ್ಸ್​​ ನೀಡಿದ್ದರು.

Puneeth Rajkumar: ‘ಜೇಮ್ಸ್​’ ಸಿನಿಮಾ ಖಂಡಿತ ರಿಲೀಸ್​ ಆಗತ್ತೆ; ಬಿಗ್​ ಅಪ್​ಡೇಟ್​​ ​ನೀಡಿದ ನಿರ್ದೇಶಕ ಚೇತನ್​ ಕುಮಾರ್
ಚೇತನ್​ ಕುಮಾರ್​ - ಪುನೀತ್​ ರಾಜ್​ಕುಮಾರ್
TV9 Web
| Edited By: |

Updated on: Oct 30, 2021 | 1:12 PM

Share

ಪುನೀತ್​ ರಾಜ್​ಕುಮಾರ್​ ಅವರು ಬಹುಬೇಡಿಕೆಯ ನಟ ಆಗಿದ್ದರು. ಅವರ ಕಾಲ್​ಶೀಟ್​​ಗಾಗಿ ನಿರ್ಮಾಪಕರು ಸಾಲುಗಟ್ಟಿ ನಿಲ್ಲುತ್ತಿದ್ದರು. ನಿಧನರಾಗುವುದಕ್ಕೂ ಮುನ್ನ ಅಪ್ಪು ಹಲವು ಪ್ರಾಜೆಕ್ಟ್​ಗಳಲ್ಲಿ ತೊಡಗಿಕೊಂಡಿದ್ದರು. ಆ ಪೈಕಿ ‘ಜೇಮ್ಸ್​’ ಸಿನಿಮಾ ಹೆಚ್ಚು ನಿರೀಕ್ಷೆ ಮೂಡಿಸಿತ್ತು. ಚಂದನವನದ ಯಶಸ್ವಿ ನಿರ್ದೇಶಕ ಚೇತನ್​ ಕುಮಾರ್​ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರುತ್ತಿತ್ತು. ಚಿತ್ರದ ಕೆಲಸಗಳು ಪೂರ್ಣಗೊಳ್ಳುವುದಕ್ಕೂ ಮುನ್ನವೇ ಪುನೀತ್​ ರಾಜ್​ಕುಮಾರ್​ ಇಹಲೋಕ ತ್ಯಜಿಸಿದ್ದಾರೆ. ಆದರೂ ಕೂಡ ‘ಜೇಮ್ಸ್​’ ಬಿಡುಗಡೆ ಆಗಲಿದೆ ಎಂಬ ಮಾಹಿತಿ ಈಗ ಸಿಕ್ಕಿದೆ. ಈ ಕುರಿತು ಚೇತನ್​ ಕುಮಾರ್​ ಅವರು ಪ್ರತಿಕ್ರಿಯೆ ನೀಡಿದ್ದಾರೆ.

‘ಜೇಮ್ಸ್​ ಚಿತ್ರಕ್ಕೆ ಬಹುತೇಕ ಶೂಟಿಂಗ್​ ಮುಕ್ತಾಯ ಆಗಿತ್ತು. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿ ಇತ್ತು. ಸಾಂಗ್​ ಶೂಟಿಂಗ್​ ಮಾಡಲು ನ.8ರಿಂದ ಪುನೀತ್​ ರಾಜ್​ಕುಮಾರ್​ ಅವರು ಡೇಟ್ಸ್​​ ನೀಡಿದ್ದರು. ಅವರ ಪಾತ್ರದ ಡಬ್ಬಿಂಗ್​ ಅರ್ಧ ಬಾಕಿ ಉಳಿದಿದೆ. ಈ ಸಿನಿಮಾ ಖಂಡಿತ ರಿಲೀಸ್​ ಆಗಲಿದೆ’ ಎಂದು ಚೇತನ್​ ಕುಮಾರ್​ ಹೇಳಿದ್ದಾರೆ.

ಪುನೀತ್​ ಅವರ ಇನ್ನುಳಿದ ಭಾಗದ ದೃಶ್ಯಗಳಿಗೆ ಸಹೋದರ ಶಿವರಾಜ್​ಕುಮಾರ್​ ಧ್ವನಿ ನೀಡುವ ಸಾಧ್ಯತೆ ಇದೆ. ಶಿವಣ್ಣ ಧ್ವನಿ ನೀಡಿದರೆ ಡಬ್ಬಿಂಗ್​ ಕೆಲಸ ಪೂರ್ಣಗೊಳ್ಳಲಿದೆ. ಆಗ ಸಿನಿಮಾ ಬಿಡುಗಡೆ ಮಾಡಬಹುದು. ಈ ಸಿನಿಮಾವನ್ನು ಕಣ್ತುಂಬಿಕೊಳ್ಳಬೇಕು ಎಂಬುದು ಅಭಿಮಾನಿಗಳ ಬಯಕೆ. ಪುನೀತ್​ ಬದುಕಿದ್ದಾಗ ರಿಲೀಸ್​ ಆದ ಅವರ ಕೊನೇ ಸಿನಿಮಾ ‘ಯುವರತ್ನ’. ಆ ಚಿತ್ರಕ್ಕೆ ಸಂತೋಷ್​ ಆನಂದ್​ ರಾಮ್​ ನಿರ್ದೇಶನ ಮಾಡಿದ್ದರು. ಇನ್ನು, ‘ಲೂಸಿಯಾ’ ಖ್ಯಾತಿಯ ಪವನ್​ ಕುಮಾರ್​ ನಿರ್ದೇಶನದ ‘ದ್ವಿತ್ವ’ ಚಿತ್ರದಲ್ಲೂ ಪುನೀತ್​ ನಟಿಸಬೇಕಿತ್ತು. ಆ ಚಿತ್ರದ ಕೆಲಸಗಳು ಎಲ್ಲಿಯವರೆಗೆ ಬಂದಿದ್ದವು ಎಂಬ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ‘ದ್ವಿತ್ವ’ ಚಿತ್ರವನ್ನು ‘ಹೊಂಬಾಳೆ ಫಿಲ್ಸ್ಮ್​’ ಸಂಸ್ಥೆ ನಿರ್ಮಿಸುತ್ತಿತ್ತು.

ಪುನೀತ್​ ರಾಜ್​ಕುಮಾರ್​ ಅವರು ನಟನೆ ಜೊತೆಗೆ ನಿರ್ಮಾಣದಲ್ಲೂ ತೊಡಗಿಕೊಂಡಿದ್ದರು. ಅವರ ಹೋಮ್​ ಬ್ಯಾನರ್​ ‘ಪಿಆರ್​ಕೆ ಪ್ರೊಡಕ್ಷನ್ಸ್​’ ಮೂಲಕ ಅನೇಕ ಸಿನಿಮಾಗಳು ಸಿದ್ಧವಾಗುತ್ತಿದ್ದವು. ಆದರೆ ಆ ಎಲ್ಲ ಕೆಲಸಗಳನ್ನು ಅರ್ಧಕ್ಕೆ ನಿಲ್ಲಿಸಿ, ಪುನೀತ್​ ಸಾವಿನೂರಿನ ದಾರಿ ಹಿಡಿದಿದ್ದಾರೆ. ಬೆಂಗಳೂರಿನ ಕಂಠೀರವ ಸ್ಡುಡಿಯೋ ಆವರಣದಲ್ಲಿ ಶನಿವಾರ (ಅ.30) ಅಂತ್ಯಕ್ರಿಯೆ ನೆರವೇರಲಿದೆ.

ಇದನ್ನೂ ಓದಿ:

Puneeth Rajkumar: ಪುನೀತ್​ ಹೃದಯಾಘಾತದ ವೈರಲ್​ ವಿಡಿಯೋ ಅಸಲಿಯೋ ನಕಲಿಯೋ? ಇಲ್ಲಿದೆ ಫ್ಯಾಕ್ಟ್​ ಚೆಕ್​

‘ಪುನೀತ್​ ಸಾವಿನಿಂದ ಕಟು ಸತ್ಯ ಬಯಲಾಗಿದೆ’: ಆತಂಕದಲ್ಲೇ ಅನಿಸಿಕೆ ಹಂಚಿಕೊಂಡ ರಾಮ್​ ಗೋಪಾಲ್​ ವರ್ಮಾ

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು