Lucky Man: ಒಂದು ದಿನ ಮೊದಲೇ ‘ಲಕ್ಕಿ ಮ್ಯಾನ್​’ ನೋಡುವ ಚಾನ್ಸ್; ಪುನೀತ್ ಚಿತ್ರದ ಟಿಕೆಟ್​ ಸೋಲ್ಡ್​ ಔಟ್​

Puneeth Rajkumar: ಸೆಪ್ಟೆಂಬರ್​ 8ರಂದು ಅನೇಕ ಕಡೆಗಳಲ್ಲಿ ‘ಲಕ್ಕಿ ಮ್ಯಾನ್​’ ಚಿತ್ರದ ಪ್ರೀಮಿಯರ್​ ಪ್ರದರ್ಶನ ಆಗುತ್ತಿದೆ. ಅದರ ಟಿಕೆಟ್​ಗಳ ಮುಂಗಡ ಬುಕಿಂಗ್​ಗೆ ಅವಕಾಶ ನೀಡಲಾಗಿದೆ.

Lucky Man: ಒಂದು ದಿನ ಮೊದಲೇ ‘ಲಕ್ಕಿ ಮ್ಯಾನ್​’ ನೋಡುವ ಚಾನ್ಸ್; ಪುನೀತ್ ಚಿತ್ರದ ಟಿಕೆಟ್​ ಸೋಲ್ಡ್​ ಔಟ್​
ಲಕ್ಕಿ ಮ್ಯಾನ್ ಸಿನಿಮಾ ಪೋಸ್ಟರ್​
Follow us
| Updated By: ಮದನ್​ ಕುಮಾರ್​

Updated on: Sep 07, 2022 | 10:55 AM

‘ಪವರ್ ಸ್ಟಾರ್​’ ಪುನೀತ್​ ರಾಜ್​ಕುಮಾರ್ (Puneeth Rajkumar)​ ಅವರನ್ನು ಅಭಿಮಾನಿಗಳು, ಸ್ನೇಹಿತರು, ಕುಟುಂಬದವರು ಸಖತ್​ ಮಿಸ್​ ಮಾಡಿಕೊಳ್ಳುತ್ತಿದ್ದಾರೆ. ಅವರನ್ನು ದೊಡ್ಡ ಪರದೆ ಮೇಲೆ ನೋಡಬೇಕು ಎಂಬುದು ಫ್ಯಾನ್ಸ್​ ಬಯಕೆ. ಅದಕ್ಕೆ ಉಳಿದಿರುವುದು ಕೆಲವೇ ಕೆಲವು ಅವಕಾಶಗಳು ಮಾತ್ರ. ಹೃದಯಾಘಾತದಿಂದ ನಿಧನರಾಗುವುದಕ್ಕೂ ಮುನ್ನ ಪುನೀತ್ ರಾಜ್​ಕುಮಾರ್​ ಅವರು ‘ಲಕ್ಕಿ ಮ್ಯಾನ್​’ (Lucky Man Movie) ಸಿನಿಮಾದಲ್ಲಿ ನಟಿಸಿದ್ದರು. ಆ ಚಿತ್ರವೀಗ ಬಿಡುಗಡೆಗೆ ಸಿದ್ಧವಾಗಿದೆ. ಸೆಪ್ಟೆಂಬರ್​ 9ರಂದು ‘ಲಕ್ಕಿ ಮ್ಯಾನ್​’ ರಿಲೀಸ್​ ಆಗಲಿದೆ. ಆದರೆ ಒಂದು ದಿನ ಮುನ್ನ, ಅಂದರೆ, ಸೆಪ್ಟೆಂಬರ್​ 8ರಂದು ಅನೇಕ ಕಡೆಗಳಲ್ಲಿ ಪೇಯ್ಡ್​ ಪ್ರೀಮಿಯರ್​ಗೆ​ ವ್ಯವಸ್ಥೆ ಮಾಡಲಾಗುತ್ತಿದೆ. ಆ ಶೋಗಳ ಟಿಕೆಟ್​ಗಳು ಸೋಲ್ಡ್​ ಔಟ್​ ಆಗುತ್ತಿವೆ. ಅಪ್ಪು ಜೊತೆ ಈ ಸಿನಿಮಾದಲ್ಲಿ ಡಾರ್ಲಿಂಗ್​ ಕೃಷ್ಣ, ಪ್ರಭುದೇವ (Prabhu Deva), ಸಂಗೀತಾ ಶೃಂಗೇರಿ, ರೋಷಿನಿ ಪ್ರಕಾಶ್​ ಮುಂತಾದವರು ನಟಿಸಿದ್ದಾರೆ.

ಪ್ರಭುದೇವ ಅವರ ಸಹೋದರ ಎಸ್​. ನಾಗೇಂದ್ರ ಪ್ರಸಾದ್​ ಅವರು ‘ಲಕ್ಕಿ ಮ್ಯಾನ್​’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಪುನೀತ್​ ರಾಜ್​ಕುಮಾರ್​ ಅವರಿಗೆ ದೇವರ ಪಾತ್ರವಿದೆ. ಅಭಿಮಾನಿಗಳ ಕಣ್ಣಲ್ಲಿ ಅವರ ದೇವರಾಗಿದ್ದಾರೆ. ಆ ರೀತಿ ದೇವರ ಪಾತ್ರದಲ್ಲಿಯೇ ಅವರನ್ನು ತೆರೆಮೇಲೆ ನೋಡಲು ಫ್ಯಾನ್ಸ್​ ಕಾಯುತ್ತಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟ್ರೇಲರ್​ ಗಮನ ಸೆಳೆಯುತ್ತಿದೆ.

ಸೆಪ್ಟೆಂಬರ್​ 8ರ ಗುರುವಾರ ಅನೇಕ ಕಡೆಗಳಲ್ಲಿ ಪ್ರೀಮಿಯರ್​ ಪ್ರದರ್ಶನ ನಡೆಯುತ್ತಿದೆ. ಅದರ ಟಿಕೆಟ್​ಗಳ ಮುಂಗಡ ಬುಕಿಂಗ್​ಗೆ ಅವಕಾಶ ನೀಡಲಾಗಿದೆ. ಈಗಾಗಲೇ ಅನೇಕ ಕಡೆಗಳಲ್ಲಿ ಟಿಕೆಟ್​ಗಳು ಸೋಲ್ಡ್​ ಔಟ್​ ಆಗಿವೆ. ಬೆಂಗಳೂರಿನ ಅನೇಕ ಮಲ್ಟಿಪ್ಲೆಕ್ಸ್​ನಲ್ಲಿ ಅಂದು ಸಂಜೆ 6 ಗಂಟೆ ನಂತರ ಪ್ರೀಮಿಯರ್​ ಪ್ರದರ್ಶನ ನಡೆಯಲಿದೆ.

ಇದನ್ನೂ ಓದಿ
Image
‘ಲಕ್ಕಿ ಮ್ಯಾನ್​​ ಸಿನಿಮಾವನ್ನು ಎಲ್ಲರೂ ತಬ್ಬಿಕೊಳ್ಳಿ,​ ಮತ್ತೆ ಬೇಕು ಅಂದ್ರೂ ಇದು ಸಿಗಲ್ಲ’; ಕಿಚ್ಚ ಸುದೀಪ್​
Image
‘ದೇವರ ಪಾತ್ರದಲ್ಲಿ ದೇವ್ರನ್ನೇ ನೋಡಲು ಕಾಯ್ತಿದೀನಿ’: ಪುನೀತ್​ ಬಗ್ಗೆ ಯುವ ರಾಜ್​ಕುಮಾರ್​ ಭಾವುಕ ನುಡಿ
Image
ಪುನೀತ್ ನಟನೆಯ ‘ಲಕ್ಕಿ ಮ್ಯಾನ್​’ ಚಿತ್ರದ ಆಡಿಯೋ ರಿಲೀಸ್ ಲೈವ್ ನೋಡಿ
Image
Puneeth Rajkumar: ‘ಲಕ್ಕಿ ಮ್ಯಾನ್​’ ಚಿತ್ರದಲ್ಲಿನ ಪುನೀತ್​ ಪೋಟೋಗಳು; ‘ನಮ್ಮ ಬಾಸ್​ ಸೂಪರ್​’ ಎಂದ ಫ್ಯಾನ್ಸ್​

ಕೆಲವೇ ದಿನಗಳ ಹಿಂದೆ ಈ ಸಿನಿಮಾದ ಇವೆಂಟ್​ ಬೆಂಗಳೂರಿನಲ್ಲಿ ನಡೆದಿತ್ತು. ಆ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್​ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ‘ಈ ಸಿನಿಮಾ ರಿಲೀಸ್​ ಆದಾಗ ಎಲ್ಲರೂ ಎರಡೂ ಕೈಗಳನ್ನು ಚಾಚಿ ತಬ್ಬಿಕೊಂಡು ನೋಡಿ. ಯಾಕೆಂದರೆ, ಮತ್ತೆ ಬೇಕು ಎಂದರೂ ಕೂಡ ಇದು ಸಿಗಲ್ಲ. ಇರುವಾಗ ನಾವು ಬೆಲೆ ಕೊಡುತ್ತೇವೆ. ಕಳೆದುಕೊಂಡ ನಂತರ ಅದಕ್ಕೆ ಇನ್ನೂ ಜಾಸ್ತಿ ಬೆಲೆ ಕೊಡುತ್ತೇವೆ. ಈ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಅವರು ದೇವರ ಪಾತ್ರ ಮಾಡಿದ್ದಾರೆ. ಅದೊಂದು ನಂಬಿಕೆ. ಅವರು ಬದುಕಿದ ರೀತಿಯೇ ಆಗಿತ್ತು. ನಾವೆಲ್ಲರೂ ಅವರನ್ನು ಮಿಸ್​ ಮಾಡಿಕೊಳ್ಳುತ್ತೇವೆ. ಆದರೆ ಟ್ರೇಲರ್​ ನೋಡುವಾಗ ನಾನು ಸ್ಮೈಲ್​ ಮಾಡುತ್ತಿದ್ದೆ. ಯಾಕೆಂದರೆ ಅವರಿಗೆ ಈ ಸಿನಿಮಾ ಹೆಚ್ಚು ಹೊಂದಿಕೆ ಆಗುತ್ತಿದೆ. ಎಲ್ಲರೂ ಈ ಸಿನಿಮಾವನ್ನು ತಬ್ಬಿಕೊಂಡು ಅನುಭವಿಸಿ’ ಎಂದು ಕಿಚ್ಚ ಸುದೀಪ್​ ಹೇಳಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ