AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್​​ನಲ್ಲಿ ‘ಲಕ್ಕಿ ಮ್ಯಾನ್​’ ಸಿನಿಮಾ ತೆರೆಗೆ; ಪುನೀತ್ ನೋಡಲು ಕಾದಿದ್ದಾರೆ ಫ್ಯಾನ್ಸ್​

‘ಜೇಮ್ಸ್’ ಸಿನಿಮಾ ಮೊದಲು ರಿಲೀಸ್ ಆದಾಗ ಪುನೀತ್ ಪಾತ್ರಕ್ಕೆ ಶಿವರಾಜ್​ಕುಮಾರ್ ಧ್ವನಿ ನೀಡಿದ್ದರು. ಆದರೆ, ಈ ಚಿತ್ರದಲ್ಲಿ ಪುನೀತ್ ಅವರ ಧ್ವನಿಯನ್ನೇ ಬಳಕೆ ಮಾಡಿಕೊಳ್ಳಲಾಗಿದೆ.

ಆಗಸ್ಟ್​​ನಲ್ಲಿ ‘ಲಕ್ಕಿ ಮ್ಯಾನ್​’ ಸಿನಿಮಾ ತೆರೆಗೆ; ಪುನೀತ್ ನೋಡಲು ಕಾದಿದ್ದಾರೆ ಫ್ಯಾನ್ಸ್​
ಆಗಸ್ಟ್​​ನಲ್ಲಿ ‘ಲಕ್ಕಿ ಮ್ಯಾನ್​’ ಸಿನಿಮಾ ತೆರೆಗೆ
TV9 Web
| Edited By: |

Updated on: Jul 13, 2022 | 4:19 PM

Share

ಪುನೀತ್ ರಾಜ್​ಕುಮಾರ್ (Puneeth Rajkumar) ಅವರು ನಿಧನ ಹೊಂದುವುದಕ್ಕೂ ಮೊದಲು ಕೆಲ ಚಿತ್ರಗಳಲ್ಲಿ ನಟಿಸುತ್ತಿದ್ದರು. ಈ ಪೈಕಿ ಕೆಲ ಸಿನಿಮಾಗಳ ಕೆಲಸಗಳು ಅರ್ಧಕ್ಕೆ ನಿಂತಿವೆ. ಇನ್ನೂ ಕೆಲ ಚಿತ್ರಗಳ ಕೆಲಸಗಳು ಪೂರ್ಣಗೊಂಡಿವೆ. ಆ ಪೈಕಿ ‘ಜೇಮ್ಸ್​’ ಸಿನಿಮಾ ಈಗಾಗಲೇ ರಿಲೀಸ್ ಆಗಿದೆ. ಡಾರ್ಲಿಂಗ್ ಕೃಷ್ಣ ನಟನೆಯ ‘ಲಕ್ಕಿ ಮ್ಯಾನ್’ ಸಿನಿಮಾದಲ್ಲಿ (Lucky Man Movie) ಪುನೀತ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಆಗಸ್ಟ್​ನಲ್ಲಿ ತೆರೆಗೆ ಬರುತ್ತಿದೆ. ಈ ಬಗ್ಗೆ ಚಿತ್ರತಂಡ ಅಧಿಕೃತ ಘೋಷಣೆ ಮಾಡಿದೆ. ಪುನೀತ್ ಅವರನ್ನು ಮತ್ತೆ ತೆರೆಮೇಲೆ ನೋಡಲು ಫ್ಯಾನ್ಸ್ ಕಾದಿದ್ದಾರೆ.

ಪುನೀತ್ ಅವರು ಈ ಚಿತ್ರದಲ್ಲಿ ದೇವರ ರೂಪದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಅವರದ್ದೇ ಧ್ವನಿ ಇರಲಿದೆ ಅನ್ನೋದು ವಿಶೇಷ. ‘ಜೇಮ್ಸ್’ ಸಿನಿಮಾ ಮೊದಲು ರಿಲೀಸ್ ಆದಾಗ ಪುನೀತ್ ಪಾತ್ರಕ್ಕೆ ಶಿವರಾಜ್​ಕುಮಾರ್ ಧ್ವನಿ ನೀಡಿದ್ದರು. ಆದರೆ, ಈ ಚಿತ್ರದಲ್ಲಿ ಪುನೀತ್ ಅವರ ಧ್ವನಿಯನ್ನೇ ಬಳಕೆ ಮಾಡಿಕೊಳ್ಳಲಾಗಿದೆ.

ಈ ಚಿತ್ರದ ಸ್ಪೆಷಲ್ ಹಾಡಿನಲ್ಲಿ ಪುನೀತ್ ಜತೆ ತಮಿಳು ನಟ ಪ್ರಭುದೇವ ಅವರು ಸಖತ್ ಆಗಿ ಸ್ಟೆಪ್ ಹಾಕಿದ್ದಾರೆ. ಈ ಸಾಂಗ್​ಅನ್ನು ದೊಡ್ಡ ಪರದೆಮೇಲೆ ನೋಡಲು ಫ್ಯಾನ್ಸ್ ಕಾದಿದ್ದಾರೆ. ಜಾನಿ ಮಾಸ್ಟರ್ ಅವರ ನೃತ್ಯ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಹಾಡನ್ನು ಬೆಂಗಳೂರಿನಲ್ಲೇ ಸೆಟ್ ಹಾಕಿ ಚಿತ್ರೀಕರಣ ಮಾಡಲಾಗಿದೆ.  ಪುನೀತ್ ರಾಜಕುಮಾರ್ ಹಾಗೂ ಪ್ರಭುದೇವ ಅವರು ಮೊದಲ ಬಾರಿಗೆ ತೆರೆ ಹಂಚಿಕೊಂಡಿದ್ದಾರೆ. ಅದ್ಭುತವಾದ ಹಾಡಿಗೆ ಸಖತ್ ಸ್ಟೆಪ್ ಹಾಕಿದ್ದಾರೆ.

ಇದನ್ನೂ ಓದಿ
Image
‘ಕಿಶೋರ್ ಪತ್ತಿಕೊಂಡಗೆ ಮೆದುಳಿನ ಸರ್ಜರಿ ಆಗಿದೆ, ಅವರು ಔಟ್​ ಆಫ್​ ಡೇಂಜರ್​’; ಧೀರೇನ್ ರಾಮ್​ಕುಮಾರ್
Image
Kishore Pathikonda: ‘ಜೇಮ್ಸ್​’ ನಿರ್ಮಾಪಕ ಕಿಶೋರ್​ ಪತ್ತಿಕೊಂಡ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು
Image
ಆತ್ಮೀಯತೆಯಿಂದ ಮಾತನಾಡಿದ ಶಿವರಾಜ್​ಕುಮಾರ್ ಹಾಗೂ ಅಶ್ವಿನಿ ಪುನೀತ್​ರಾಜ್​ಕುಮಾರ್; ಇಲ್ಲಿದೆ ವಿಡಿಯೋ
Image
ಪುನೀತ್​ ನಟನೆಯ ‘ಜೇಮ್ಸ್’ ಮೂರು ದಿನಕ್ಕೆ ಗಳಿಸಿದ್ದೆಷ್ಟು? ಇಲ್ಲಿದೆ ಸಂಪೂರ್ಣ ರಿಪೋರ್ಟ್​

ಪ್ರಭುದೇವ ಸಹೋದರ ನಾಗೇಂದ್ರ ಪ್ರಸಾದ್ ಅವರು ‘ಲಕ್ಕಿ ಮ್ಯಾನ್’ ಚಿತ್ರಕ್ಕೆ ಆ್ಯಕ್ಷನ್​ ಕಟ್ ಹೇಳಿದ್ದಾರೆ. ಈಗಾಗಲೇ ಸಿನಿಮಾ ತಂಡ ಪೋಸ್ಟ್​​ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿಕೊಂಡಿದೆ. ಆಗಸ್ಟ್ ತಿಂಗಳಲ್ಲಿ ಚಿತ್ರವನ್ನು ತೆರೆಗೆ ತರಲು ನಿರ್ಮಾಪಕರು ಸಿದ್ಧತೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ‘ಒಂದೊಳ್ಳೆಯ ಸಿನಿಮಾ ನೋಡಿ ಈ ವರ್ಷ ಮುಗಿಸಿದ ಖುಷಿ ಇದೆ’; ಡಾರ್ಲಿಂಗ್ ಕೃಷ್ಣ

‌‌ತಮಿಳಿನ ‘ಓ ಮೈ ಕಡವುಲೆ’ ಚಿತ್ರವನ್ನು ಸ್ಫೂರ್ತಿಯಾಗಿಟ್ಟುಕೊಂಡು ನಿರ್ದೇಶಕ ನಾಗೇಂದ್ರ ಪ್ರಸಾದ್ ಅವರು ‘ಲಕ್ಕಿ ಮ್ಯಾನ್’ ಸಿನಿಮಾ ಮಾಡಿದ್ದಾರೆ. ಪಿ.ಆರ್. ಮೀನಾಕ್ಷಿ ಸುಂದರಂ, ಆರ್​. ಸುಂದರ ಕಾಮರಾಜ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ತಮಿಳಿನಲ್ಲಿ ಹಲವು ಸಿನಿಮಾಗಳನ್ನು ನಿರ್ಮಿಸಿರುವ ಇವರು ಕನ್ನಡದಲ್ಲಿ ಇದೇ ಮೊದಲ ಬಾರಿಗೆ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಡಾರ್ಲಿಂಗ್ ಕೃಷ್ಣ ಅವರ ಜೊತೆ ರೋಷನಿ ಪ್ರಕಾಶ್ ನಾಯಕಿಯಾಗಿ ನಟಿಸಿದ್ದಾರೆ.

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!