AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಮಗ ಸತ್ತರೂ ಇಷ್ಟು ಬೇಜಾರು ಆಗುತ್ತಿರಲಿಲ್ಲ’; ‘ರಾಜಕುಮಾರ’ ಚಿತ್ರ ನೋಡಿ ಮಹಿಳಾ ಅಭಿಮಾನಿ ಕಣ್ಣೀರು

Puneeth Rajkumar: ಬೆಂಗಳೂರಿನ ‘ಶ್ರೀನಿವಾಸ’ ಚಿತ್ರಮಂದಿರದಲ್ಲಿ ‘ರಾಜಕುಮಾರ’ ಸಿನಿಮಾ ವೀಕ್ಷಣೆ ನಂತರ ಮಹಿಳಾ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿತ್ತು. ಅಪ್ಪು ಬೇಕು ಎಂದು ಮಹಿಳೆಯರು ಕಣ್ಣೀರು ಹಾಕಿದ್ದಾರೆ.

‘ನನ್ನ ಮಗ ಸತ್ತರೂ ಇಷ್ಟು ಬೇಜಾರು ಆಗುತ್ತಿರಲಿಲ್ಲ’; ‘ರಾಜಕುಮಾರ’ ಚಿತ್ರ ನೋಡಿ ಮಹಿಳಾ ಅಭಿಮಾನಿ ಕಣ್ಣೀರು
‘ರಾಜಕುಮಾರ’ ಚಿತ್ರ ನೋಡಿ ಕಣ್ಣೀರು ಹಾಕಿದ ಮಹಿಳಾ ಅಭಿಮಾನಿ
TV9 Web
| Edited By: |

Updated on: Nov 01, 2021 | 11:36 AM

Share

ಪುನೀತ್​ ರಾಜ್​ಕುಮಾರ್​ ಅವರನ್ನು ಕರ್ನಾಟಕದ ಜನರು ಮನೆ ಮಗನಂತೆ ಪ್ರೀತಿಸುತ್ತಿದ್ದರು. ಮಹಿಳೆಯರಿಗೂ ಅಪ್ಪು ಮೇಲೆ ಅಪಾರ ಅಭಿಮಾನ. ಕೌಟುಂಬಿಕ ಪ್ರೇಕ್ಷಕರು ಪುನೀತ್​ ನಟನೆಯ ಸಿನಿಮಾಗಳನ್ನು ಬಹುವಾಗಿ ಮೆಚ್ಚಿಕೊಳ್ಳುತ್ತಿದ್ದರು. ಆದರೆ ಈಗ ಇಡೀ ಕನ್ನಡ ಚಿತ್ರರಂಗಕ್ಕೆ ಕತ್ತಲು ಆವರಿಸಿದೆ. ಪುನೀತ್​ ರಾಜ್​ಕುಮಾರ್​ ನಿಧನದಿಂದ ಅವರ ಇಡೀ ಕುಟುಂಬ ಮತ್ತು ಅಭಿಮಾನಿ ಬಳಗ ಶೋಕ ಸಾಗರದಲ್ಲಿ ಮುಳುಗಿದೆ. ಇಂದು (ನ.1) ಪುನೀತ್​ ಸ್ಮರಣಾರ್ಥ ‘ರಾಜಕುಮಾರ’ ಚಿತ್ರದ ಉಚಿತ ಪ್ರದರ್ಶನ ಏರ್ಪಡಿಸಲಾಗಿತ್ತು. ಸಿನಿಮಾ ನೋಡಿ ಹೊರಬಂದ ಮಹಿಳೆಯರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಬೆಂಗಳೂರಿನ ‘ಶ್ರೀನಿವಾಸ’ ಚಿತ್ರಮಂದಿರದಲ್ಲಿ ‘ರಾಜಕುಮಾರ’ ಸಿನಿಮಾ ವೀಕ್ಷಣೆ ನಂತರ ಮಹಿಳಾ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿದೆ. ಅಪ್ಪು ಬೇಕು ಎಂದು ಮಹಿಳೆಯರು ಕಣ್ಣೀರು ಹಾಕಿದ್ದಾರೆ. ‘ನಾನು ಚಾಮುಂಡೇಶ್ವರಿಗೆ ಪೂಜೆ ಮಾಡ್ತಿದ್ದೆ. ಚಾಮುಂಡೇಶ್ವರಿ ಇಲ್ಲ. ನನ್ನ ಮಗ ಸತ್ತರೂ ಕೂಡ ನನಗೆ ಇಷ್ಟು ಬೇಜಾರು ಆಗುತ್ತಿರಲಿಲ್ಲ. ನನ್ನ ಮಗನ ಚಿತ್ರ ವೀಕ್ಷಣೆ ಮಾಡಲು ನಾನು ನೀರು ಕುಡಿಯದೆ ಶ್ರೀನಿವಾಸ ಥಿಯೇಟರ್​ಗೆ ಬಂದಿದ್ದೆ’ ಎಂದು ಮಹಿಳಾ ಅಭಿಮಾನಿಗಳು ಕಣ್ಣೀರು ಹಾಕಿದ್ದಾರೆ.

ಕನ್ನಡಿಗರ ಪಾಲಿಗೆ ಇದೊಂದು ಸಂದಿಗ್ಧ ಪರಿಸ್ಥಿತಿ. ಒಂದು ಕಡೆ ಪುನೀತ್​ ರಾಜ್​ಕುಮಾರ್​ ಅವರನ್ನು ಕಳೆದುಕೊಂಡ ನೋವು ಎದುರಾಗಿದೆ. ಇನ್ನೊಂದು ಕಡೆ ಕನ್ನಡ ರಾಜ್ಯೋತ್ಸವ ಕೂಡ ಬಂದಿದೆ. ಬಂಗಾರದಂತಹ ಮನುಷ್ಯನನ್ನು ಕಳೆದುಕೊಂಡಿದ್ದಕ್ಕೆ ಅಳಬೇಕೋ ಅಥವಾ ನೋವು ಬದಿಗಿಟ್ಟು ಕನ್ನಡ ರಾಜ್ಯೋತ್ಸವವನ್ನು ಆಚರಿಸಬೇಕೋ ತಿಳಿಯುತ್ತಿಲ್ಲ. ಪುನೀತ್​ ಅವರಿಗೆ ಕನ್ನಡ ಭಾಷೆ ಮತ್ತು ಸಂಸ್ಕೃತಿ ಮೇಲೆ ಇದ್ದ ಗೌರವ ಅಪಾರ.

ಪುನೀತ್​ ರಾಜ್​ಕುಮಾರ್​ ಅವರ ಅಂತ್ಯಕ್ರಿಯೆಯನ್ನು ಭಾನುವಾರ (ಅ.31) ಮುಂಜಾನೆ ನೆರವೇರಿಸಲಾಯಿತು. ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಅಣ್ಣ ಶಿವರಾಜ್​ಕುಮಾರ್​, ಪತ್ನಿ ಅಶ್ವಿನಿ, ಮಕ್ಕಳಾದ ಧೃತಿ ಹಾಗೂ ವಂದಿತಾ ಕಣ್ಣೀರು ಹಾಕುತ್ತಿರುವ ದೃಶ್ಯ ಮನ ಕಲಕುವಂತಿತ್ತು. ಪುನೀತ್​ ಅವರಿಗೆ ಗಂಡು ಮಕ್ಕಳಿಲ್ಲ. ಆ ಕಾರಣದಿಂದ ಅವರ ಸಹೋದರ ರಾಘವೇಂದ್ರ ರಾಜ್​ಕುಮಾರ್​ ಅವರ ಪುತ್ರ ವಿನಯ್​ ರಾಜ್​ಕುಮಾರ್​ ಅವರಿಂದ ಅಂತಿಮ ವಿಧಿವಿಧಾನಗಳನ್ನು ಮಾಡಿಸಲಾಯಿತು. ಬಳಿಕ ಪುನೀತ್​ ಪುತ್ರಿಯರು ಅಪ್ಪನ ಸಮಾಧಿಗೆ ಪೂಜೆ ಸಲ್ಲಿಸಿದರು.

‘ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಬರುತ್ತಲೇ ಇದ್ದಾರೆ. ಆದರೆ ಸಮಾಧಿ ನೋಡಲು ಯಾರಿಗೂ ಈಗ ಅವಕಾಶ ಇಲ್ಲ. ಇನ್ನೂ ಮೂರು ದಿನ ಕಳೆದ ಬಳಿಕ ಅವಕಾಶ ಮಾಡಿಕೊಡುತ್ತೇವೆ. ಮಂಗಳವಾರ (ನ.2) ಹಾಲು-ತುಪ್ಪ ಕಾರ್ಯ ಇದೆ. ಮಕ್ಕಳು ಮತ್ತು ಮನೆಯವರಿಂದ ಅದನ್ನು ಮಾಡಿಸಬೇಕು. ಅದೊಂದು ಕಾರ್ಯ ಮುಗಿಸಿದ ಬಳಿಕವೇ ಬೇರೆಯವರಿಗೆ ಅನುಮತಿ ನೀಡೋಣ ಅಂತ ತೀರ್ಮಾನಿಸಿದ್ದೇವೆ’ ಎಂದು ರಾಘಣ್ಣ ಹೇಳಿದ್ದಾರೆ.

ಇದನ್ನೂ ಓದಿ:

Puneeth Rajkumar: ಅಶ್ಲೀಲ ಪದಗಳಿಂದ ಪುನೀತ್​ಗೆ ಅವಮಾನ; ಜನರಿಗೆ ಮನುಷ್ಯತ್ವ ಇಲ್ವಾ? ಸುದೀಪ್​ ಪುತ್ರಿ ಸಾನ್ವಿ ಗರಂ

Karnataka Rajyotsava 2021: ‘ಜೀವ ಕನ್ನಡ, ದೇಹ ಕನ್ನಡ..’ ಎನ್ನುತ್ತ ‘ವೀರ ಕನ್ನಡಿಗ’ ಆಗಿದ್ದ ಪುನೀತ್​; ರಾಜ್ಯೋತ್ಸವದಲ್ಲಿ ಕಾಡುವ ನೆನಪು

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ