AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಠ ಕಲಿಸಿದ ಗುರುಗಳ ಫೋಟೋ ಹುಡುಕುತ್ತಿದೆ ಇಡೀ ಸ್ಯಾಂಡಲ್​ವುಡ್​! ಈ ಟ್ರೆಂಡ್​ಗೆ ಕಾರಣ ಏನು?

ಸೋಶಿಯಲ್​ ಮೀಡಿಯಾದಲ್ಲಿ ಆಗಾಗ ಒಂದಿಲ್ಲೊಂದು ಚಾಲೆಂಜ್​ ಸದ್ದು ಮಾಡುತ್ತಲೇ ಇರುತ್ತದೆ. ಈಗ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ವಿಶೇಷವಾದ ಒಂದು ಟ್ರೆಂಡ್​ ಪ್ರಾರಂಭಿಸಿದ್ದಾರೆ.

ಪಾಠ ಕಲಿಸಿದ ಗುರುಗಳ ಫೋಟೋ ಹುಡುಕುತ್ತಿದೆ ಇಡೀ ಸ್ಯಾಂಡಲ್​ವುಡ್​! ಈ ಟ್ರೆಂಡ್​ಗೆ ಕಾರಣ ಏನು?
ಸಂತೋಷ್​ ಆನಂದ್​ರಾಮ್​, ಪುನೀತ್​ ರಾಜ್​ಕುಮಾರ್, ಧ್ರುವ ಸರ್ಜಾ
ರಾಜೇಶ್ ದುಗ್ಗುಮನೆ
|

Updated on: Mar 06, 2021 | 6:36 PM

Share

ಸಿನಿಮಾ ಸೆಲೆಬ್ರಿಟಿಗಳು ಯಾವಾಗಲೂ ತಮ್ಮ ತಮ್ಮ ಫೋಟೋಗಳನ್ನೇ ಸೋಶಿಯಲ್ ಮೀಡಿಯಾದಲ್ಲಿ ಅಪ್​ಲೋಡ್​ ಮಾಡಿಕೊಂಡು ಮಿಂಚುತ್ತಾರೆ. ಆದರೆ ಈಗ ತಮಗೆ ಪಾಠ ಕಲಿಸಿದ ಗುರುಗಳ ಫೋಟೋವನ್ನು ಹುಡುಕಿ ತೆಗೆಯುವಲ್ಲಿ ಸ್ಯಾಂಡಲ್​ವುಡ್​ನ ಹಲವು ಸೆಲೆಬ್ರಿಟಿಗಳು ಬ್ಯುಸಿ ಆಗಿದ್ದಾರೆ. ಅದಕ್ಕೆ ಕಾರಣ ಆಗಿರುವುದು ಪುನೀತ್​ ರಾಜ್​ಕುಮಾರ್​ ನಟನೆಯ ‘ಯುವರತ್ನ’ ಸಿನಿಮಾ!

ಈಗಾಗಲೇ ಸಿಕ್ಕಿರುವ ಸುಳಿವಿನ ಪ್ರಕಾರ ‘ಯುವರತ್ನ’ ಸಿನಿಮಾದಲ್ಲಿ ಗುರು-ಶಿಷ್ಯರ ನಡುವಿನ ಕಥೆ ಇದೆ. ಅದಕ್ಕೆ ಪೂರಕವಾಗಿ ಇತ್ತೀಚೆಗಷ್ಟೇ ‘ಪಾಠಶಾಲಾ…’ ಹಾಡು ಬಿಡುಗಡೆ ಆಗಿ ಜನಮೆಚ್ಚುಗೆ ಗಳಿಸುತ್ತಿದೆ. ಇದರ ನಡುವೆ ಈ ಚಿತ್ರತಂಡದವರು #MyGuruChallenge ಆರಂಭಿಸಿದ್ದಾರೆ. ಬದುಕಿನಲ್ಲಿ ಪಾಠ ಕಲಿಸಿದ ಶಿಕ್ಷಕರು ಅಥವಾ ಗುರುವಿನ ಸ್ಥಾನ ತುಂಬಿದ ವ್ಯಕ್ತಿಯ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗುತ್ತಿದೆ.

‘ಅ ಆ ಇ ಈ ಅಕ್ಷರ ಕಲಿಸಿದ ಕನ್ನಡ ಟೀಚರ್ ಕಮಲ ಮಿಸ್. ನನ್ನ ಗುರು ನನ್ನ ಹೆಮ್ಮೆ. ಮೈ ಗುರು ಚಾಲೆಂಜ್​ ಆರಂಭಿಸಲು ಖುಷಿ ಆಗುತ್ತಿದೆ’ ಎಂದು ಟ್ವೀಟ್​ ಮಾಡಿರುವ ಯುವರತ್ನ ನಿರ್ದೇಶಕ ಸಂತೋಷ್​ ಆನಂದ್​ರಾಮ್​ ಅವರು ‘ಡಾಲಿ’ ಧನಂಜಯ, ಪವನ್​ ಒಡೆಯರ್​, ಕಾರ್ತಿಕ್​ ಗೌಡ ಅವರನ್ನು ನಾಮಿನೇಟ್​ ಮಾಡಿದ್ದಾರೆ. ಸದ್ಯಕ್ಕೆ ಇದು ಟ್ವಿಟರ್​ನಲ್ಲಿ ವೈರಲ್​ ಆಗುತ್ತಿದೆ. ಪವನ್​ ಒಡೆಯರ್​ ಮತ್ತು ಕಾರ್ತಿಕ್​ ಗೌಡ ಪ್ರತಿಕ್ರಿಯಿಸಿ, ಇನ್ನಷ್ಟು ಸೆಲೆಬ್ರಿಟಿಗಳಿಗೆ ಚಾಲೆಂಜ್​​ ದಾಟಿಸಿದ್ದಾರೆ. ಇಂಥ ಒಳ್ಳೆಯ ಚಾಲೆಂಜ್​ ಆರಂಭಿಸಿರುವುದಕ್ಕೆ ನೆಟ್ಟಿಗರು ಕಾಮೆಂಟ್​ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಡಾ. ರಾಜ್​ಕುಮಾರ್​ ಅವರೇ ನಮ್ಮ ಗುರು ಎನ್ನುತ್ತಿದ್ದಾರೆ ಅಣ್ಣಾವ್ರ ಅಭಿಮಾನಿಗಳು. ಲೆಕ್ಕಶಾಸ್ತ್ರ ಕಲಿಸಿದ ಗುರುವಿನ ಫೋಟೋ ಹಾಕಿಕೊಂಡು ಪವನ್​ ಒಡೆಯರ್​ ಖುಷಿಪಟ್ಟಿದ್ದಾರೆ. ಚಿರಂಜೀವಿ ಸರ್ಜಾ ಜೊತೆಗಿನ ಫೋಟೋವನ್ನು ಶೇರ್ ​ಮಾಡಿಕೊಂಡಿರುವ ಧ್ರುವ ಸರ್ಜಾ, ಅಣ್ಣನೇ ನನ್ನ ಗುರು ಎಂದಿದ್ದಾರೆ. ‘ಬಾಳೆಂಬ ಮೊಳಕೆ ಚಿಗುರೊಡೆಯಲು ಮಳೆಯಾದೆ. ಹೂವಾಗಿ ಅರಳಲು ಸ್ಫೂರ್ತಿಯ ಸೂರ್ಯನಾದೆ. ವೃಕ್ಷವಾಗಿ ಬೆಳೆಯಲು ಆಸರೆಯ ಭೂಮಿಯಾದ ನನ್ನ ಅಣ್ಣ ನನ್ನ ಗುರು’ ಎಂದು ಧ್ರುವ ಟ್ವೀಟ್​ ಮಾಡಿದ್ದಾರೆ. ಶಿವರಾಜ್​ಕುಮಾರ್​ ಮತ್ತು ಪುನೀತ್​ ರಾಜ್​ಕುಮಾರ್​ಗೆ ಅವರು ಚಾಲೆಂಜ್​ ದಾಟಿಸಿದ್ದಾರೆ.

ಇದನ್ನೂ ಓದಿ: Paatashaala Song: ಪಾಠಶಾಲಾ ಹಾಡಿಗೆ ತಲೆದೂಗಿದ ಪುನೀತ್​ ರಾಜ್​ಕುಮಾರ್​ ಫ್ಯಾನ್ಸ್​! ನಿಮಗೂ ಇಷ್ಟವಾಯ್ತಾ ಯುವರತ್ನ ಹೊಸ ಗೀತೆ?

Puneeth Rajkumar: ಯುವರತ್ನ ರಿಲೀಸ್​ಗೂ ಮುನ್ನವೇ ಧಾರಾವಾಹಿ ಕಡೆಗೆ ಗಮನ ಹರಿಸಿದ ಪುನೀತ್​ ರಾಜ್​ಕುಮಾರ್​! ಅಭಿಮಾನಿಗಳಿಗೆ ಸರ್ಪ್ರೈಸ್​

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ