AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಠ ಕಲಿಸಿದ ಗುರುಗಳ ಫೋಟೋ ಹುಡುಕುತ್ತಿದೆ ಇಡೀ ಸ್ಯಾಂಡಲ್​ವುಡ್​! ಈ ಟ್ರೆಂಡ್​ಗೆ ಕಾರಣ ಏನು?

ಸೋಶಿಯಲ್​ ಮೀಡಿಯಾದಲ್ಲಿ ಆಗಾಗ ಒಂದಿಲ್ಲೊಂದು ಚಾಲೆಂಜ್​ ಸದ್ದು ಮಾಡುತ್ತಲೇ ಇರುತ್ತದೆ. ಈಗ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ವಿಶೇಷವಾದ ಒಂದು ಟ್ರೆಂಡ್​ ಪ್ರಾರಂಭಿಸಿದ್ದಾರೆ.

ಪಾಠ ಕಲಿಸಿದ ಗುರುಗಳ ಫೋಟೋ ಹುಡುಕುತ್ತಿದೆ ಇಡೀ ಸ್ಯಾಂಡಲ್​ವುಡ್​! ಈ ಟ್ರೆಂಡ್​ಗೆ ಕಾರಣ ಏನು?
ಸಂತೋಷ್​ ಆನಂದ್​ರಾಮ್​, ಪುನೀತ್​ ರಾಜ್​ಕುಮಾರ್, ಧ್ರುವ ಸರ್ಜಾ
Follow us
ರಾಜೇಶ್ ದುಗ್ಗುಮನೆ
|

Updated on: Mar 06, 2021 | 6:36 PM

ಸಿನಿಮಾ ಸೆಲೆಬ್ರಿಟಿಗಳು ಯಾವಾಗಲೂ ತಮ್ಮ ತಮ್ಮ ಫೋಟೋಗಳನ್ನೇ ಸೋಶಿಯಲ್ ಮೀಡಿಯಾದಲ್ಲಿ ಅಪ್​ಲೋಡ್​ ಮಾಡಿಕೊಂಡು ಮಿಂಚುತ್ತಾರೆ. ಆದರೆ ಈಗ ತಮಗೆ ಪಾಠ ಕಲಿಸಿದ ಗುರುಗಳ ಫೋಟೋವನ್ನು ಹುಡುಕಿ ತೆಗೆಯುವಲ್ಲಿ ಸ್ಯಾಂಡಲ್​ವುಡ್​ನ ಹಲವು ಸೆಲೆಬ್ರಿಟಿಗಳು ಬ್ಯುಸಿ ಆಗಿದ್ದಾರೆ. ಅದಕ್ಕೆ ಕಾರಣ ಆಗಿರುವುದು ಪುನೀತ್​ ರಾಜ್​ಕುಮಾರ್​ ನಟನೆಯ ‘ಯುವರತ್ನ’ ಸಿನಿಮಾ!

ಈಗಾಗಲೇ ಸಿಕ್ಕಿರುವ ಸುಳಿವಿನ ಪ್ರಕಾರ ‘ಯುವರತ್ನ’ ಸಿನಿಮಾದಲ್ಲಿ ಗುರು-ಶಿಷ್ಯರ ನಡುವಿನ ಕಥೆ ಇದೆ. ಅದಕ್ಕೆ ಪೂರಕವಾಗಿ ಇತ್ತೀಚೆಗಷ್ಟೇ ‘ಪಾಠಶಾಲಾ…’ ಹಾಡು ಬಿಡುಗಡೆ ಆಗಿ ಜನಮೆಚ್ಚುಗೆ ಗಳಿಸುತ್ತಿದೆ. ಇದರ ನಡುವೆ ಈ ಚಿತ್ರತಂಡದವರು #MyGuruChallenge ಆರಂಭಿಸಿದ್ದಾರೆ. ಬದುಕಿನಲ್ಲಿ ಪಾಠ ಕಲಿಸಿದ ಶಿಕ್ಷಕರು ಅಥವಾ ಗುರುವಿನ ಸ್ಥಾನ ತುಂಬಿದ ವ್ಯಕ್ತಿಯ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗುತ್ತಿದೆ.

‘ಅ ಆ ಇ ಈ ಅಕ್ಷರ ಕಲಿಸಿದ ಕನ್ನಡ ಟೀಚರ್ ಕಮಲ ಮಿಸ್. ನನ್ನ ಗುರು ನನ್ನ ಹೆಮ್ಮೆ. ಮೈ ಗುರು ಚಾಲೆಂಜ್​ ಆರಂಭಿಸಲು ಖುಷಿ ಆಗುತ್ತಿದೆ’ ಎಂದು ಟ್ವೀಟ್​ ಮಾಡಿರುವ ಯುವರತ್ನ ನಿರ್ದೇಶಕ ಸಂತೋಷ್​ ಆನಂದ್​ರಾಮ್​ ಅವರು ‘ಡಾಲಿ’ ಧನಂಜಯ, ಪವನ್​ ಒಡೆಯರ್​, ಕಾರ್ತಿಕ್​ ಗೌಡ ಅವರನ್ನು ನಾಮಿನೇಟ್​ ಮಾಡಿದ್ದಾರೆ. ಸದ್ಯಕ್ಕೆ ಇದು ಟ್ವಿಟರ್​ನಲ್ಲಿ ವೈರಲ್​ ಆಗುತ್ತಿದೆ. ಪವನ್​ ಒಡೆಯರ್​ ಮತ್ತು ಕಾರ್ತಿಕ್​ ಗೌಡ ಪ್ರತಿಕ್ರಿಯಿಸಿ, ಇನ್ನಷ್ಟು ಸೆಲೆಬ್ರಿಟಿಗಳಿಗೆ ಚಾಲೆಂಜ್​​ ದಾಟಿಸಿದ್ದಾರೆ. ಇಂಥ ಒಳ್ಳೆಯ ಚಾಲೆಂಜ್​ ಆರಂಭಿಸಿರುವುದಕ್ಕೆ ನೆಟ್ಟಿಗರು ಕಾಮೆಂಟ್​ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಡಾ. ರಾಜ್​ಕುಮಾರ್​ ಅವರೇ ನಮ್ಮ ಗುರು ಎನ್ನುತ್ತಿದ್ದಾರೆ ಅಣ್ಣಾವ್ರ ಅಭಿಮಾನಿಗಳು. ಲೆಕ್ಕಶಾಸ್ತ್ರ ಕಲಿಸಿದ ಗುರುವಿನ ಫೋಟೋ ಹಾಕಿಕೊಂಡು ಪವನ್​ ಒಡೆಯರ್​ ಖುಷಿಪಟ್ಟಿದ್ದಾರೆ. ಚಿರಂಜೀವಿ ಸರ್ಜಾ ಜೊತೆಗಿನ ಫೋಟೋವನ್ನು ಶೇರ್ ​ಮಾಡಿಕೊಂಡಿರುವ ಧ್ರುವ ಸರ್ಜಾ, ಅಣ್ಣನೇ ನನ್ನ ಗುರು ಎಂದಿದ್ದಾರೆ. ‘ಬಾಳೆಂಬ ಮೊಳಕೆ ಚಿಗುರೊಡೆಯಲು ಮಳೆಯಾದೆ. ಹೂವಾಗಿ ಅರಳಲು ಸ್ಫೂರ್ತಿಯ ಸೂರ್ಯನಾದೆ. ವೃಕ್ಷವಾಗಿ ಬೆಳೆಯಲು ಆಸರೆಯ ಭೂಮಿಯಾದ ನನ್ನ ಅಣ್ಣ ನನ್ನ ಗುರು’ ಎಂದು ಧ್ರುವ ಟ್ವೀಟ್​ ಮಾಡಿದ್ದಾರೆ. ಶಿವರಾಜ್​ಕುಮಾರ್​ ಮತ್ತು ಪುನೀತ್​ ರಾಜ್​ಕುಮಾರ್​ಗೆ ಅವರು ಚಾಲೆಂಜ್​ ದಾಟಿಸಿದ್ದಾರೆ.

ಇದನ್ನೂ ಓದಿ: Paatashaala Song: ಪಾಠಶಾಲಾ ಹಾಡಿಗೆ ತಲೆದೂಗಿದ ಪುನೀತ್​ ರಾಜ್​ಕುಮಾರ್​ ಫ್ಯಾನ್ಸ್​! ನಿಮಗೂ ಇಷ್ಟವಾಯ್ತಾ ಯುವರತ್ನ ಹೊಸ ಗೀತೆ?

Puneeth Rajkumar: ಯುವರತ್ನ ರಿಲೀಸ್​ಗೂ ಮುನ್ನವೇ ಧಾರಾವಾಹಿ ಕಡೆಗೆ ಗಮನ ಹರಿಸಿದ ಪುನೀತ್​ ರಾಜ್​ಕುಮಾರ್​! ಅಭಿಮಾನಿಗಳಿಗೆ ಸರ್ಪ್ರೈಸ್​

ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್