AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಪುನೀತ್ ಕಾಣಿಸಿಕೊಂಡಿದ್ದ ‘ಗಂಧದ ಗುಡಿ’ ಬಿಡುಗಡೆ ಯಾವಾಗ?; ಇಲ್ಲಿದೆ ಮಾಹಿತಿ

ನಟ ಪುನೀತ್ ರಾಜಕುಮಾರ್ ಕಾಣಿಸಿಕೊಂಡಿದ್ದ ಗಂಧದ ಗುಡಿಯ ಬಿಡುಗಡೆಗೆ ಯೋಜಿಸಲಾಗುತ್ತಿದೆ. ಈ ಕುರಿತು ಆಪ್ತಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Puneeth Rajkumar: ಪುನೀತ್ ಕಾಣಿಸಿಕೊಂಡಿದ್ದ ‘ಗಂಧದ ಗುಡಿ’ ಬಿಡುಗಡೆ ಯಾವಾಗ?; ಇಲ್ಲಿದೆ ಮಾಹಿತಿ
‘ಗಂಧದ ಗುಡಿ’ಯ ಮೊದಲ ಪೋಸ್ಟರ್
TV9 Web
| Edited By: |

Updated on:Nov 06, 2021 | 1:17 PM

Share

ನಟ ಪುನೀತ್ ರಾಜಕುಮಾರ್ ಕಾಣಿಸಿಕೊಂಡಿದ್ದ ರಾಜ್ಯದ ವನ್ಯಸಂಪತ್ತಿನ ಕುರಿತಾದ ಚಿತ್ರವೊಂದನ್ನು ನವೆಂಬರ್ 1ರಂದು ಬಿಡುಗಡೆ ಮಾಡಲು ಯೋಜಿಸಲಾಗಿತ್ತು. ಆ ಚಿತ್ರಕ್ಕಾಗಿ ಲಾಕ್​ಡೌನ್ ವೇಳೆ 2 ತಿಂಗಳು ಪುನೀತ್ ಕಾಡು ಸುತ್ತಿದ್ದರು. ಆ ಸಮಯದಲ್ಲಿ ಕಾಡಿನಲ್ಲಿ ಕಳೆದ ಕ್ಷಣಗಳನ್ನು ಚಿತ್ರೀಕರಣ ಮಾಡಲಾಗಿತ್ತು. ಅದನ್ನು ನವೆಂಬರ್ 1 ರಂದು ಬಿಡುಗಡೆ ಮಾಡಲು ತೀರ್ಮಾನಿಸಿ, ಒಂದು ಪೋಸ್ಟರ್ ಕೂಡ ಬಿಡುಗಡೆ ಮಾಡಲಾಗಿತ್ತು. ನಮ್ಮ ನಾಡಿನ ಕಾಡುಗಳು, ವನ್ಯಜೀವಿ ಸಂಪತ್ತನ್ನು ಕುರಿತ ಚಿತ್ರ ಅದಾಗಿದ್ದು, ‘ಗಂಧದ ಗುಡಿ’ ಎಂದು ಹೆಸರಿಡಲು ಉದ್ದೇಶಿಸಲಾಗಿತ್ತು. 90 ನಿಮಿಷಗಳ ಆ ಚಿತ್ರವನ್ನು ರಾಜ್ಯೋತ್ಸವದ ದಿನ ಬಿಡುಗಡೆ ಮಾಡುವ ಕನಸನ್ನು ಪುನೀತ್ ಕಂಡಿದ್ದರು. ಆದರೆ ಆ ಕನಸು ನನಸಾಗುವ ಮುನ್ನವೇ ಪುನೀತ್ ನಿಧನ ಹೊಂದಿದ್ದರು. ಇದೀಗ ಪುನೀತ್ ರಾಜಕುಮಾರ್ ಆಪ್ತವಲಯದಿಂದ ಬಂದಿರುವ ಮಾಹಿತಿಯ ಪ್ರಕಾರ, ಅಪ್ಪು ಅವರ 11 ದಿನದ ಕಾರ್ಯ ಮುಗಿದ ನಂತರ ರಿಲೀಸ್​ಗೆ ಚಿಂತನೆ ನಡೆಸಲಾಗಿದೆ. ಪುನೀತ್ ಪತ್ನಿ ಅಶ್ವಿನಿ ಅವರೊಂದಿಗೆ ಚರ್ಚಿಸಿ, ಬಳಿಕ ಬಿಡುಗಡೆ ಕುರಿತು ಯೋಜಿಸಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.

ನಟ ಪುನೀತ್ ಮನೆಗೆ ಪ್ರಿಯಾಮಣಿ ಭೇಟಿ: ನಟ ಪುನೀತ್ ರಾಜ್​ಕುಮಾರ್​ ಮನೆಗೆ ಪ್ರಿಯಾಮಣಿ ಭೇಟಿ ನೀಡಿ ಪತ್ನಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಪ್ರಿಯಾಮಣಿ ಅವರು ಪುನೀತ್ ಜೊತೆ, ರಾಮ್, ಅಣ್ಣಾಬಾಂಡ್ ಸಿನಿಮಾದಲ್ಲಿ ನಟಿಸಿದ್ದರು. ಪುನೀತ್​ ನಿಧನದ ಸುದ್ದಿ ತಿಳಿದು ಪ್ರಿಯಾ ಕಂಬನಿ ಸಾಮಾಜಿಕ ಜಾಲತಾಣದಲ್ಲಿ ಪ್ರಿಯಾಮಣಿ ಕಂಬನಿ ಮಿಡಿದಿದ್ದರು.

Priyamani

ಪುನೀತ್ ನಿವಾಸಕ್ಕೆ ಪ್ರಿಯಾಮಣಿ ಭೇಟಿ, ಶಿವರಾಜ್ ಕುಮಾರ್ ಚಿತ್ರದಲ್ಲಿದ್ದಾರೆ.

ಇದನ್ನೂ ಓದಿ:

Puneeth Rajkumar: ಅನಧಿಕೃತವಾಗಿ ಪುನೀತ್ ಪುತ್ಥಳಿ ಪ್ರತಿಷ್ಠಾಪಿಸಬೇಡಿ, ಅನುಮತಿ ಪಡೆಯಿರಿ: ಅಭಿಮಾನಿಗಳಿಗೆ ಬಿಬಿಎಂಪಿ ಸೂಚನೆ

Puneeth Rajkumar: ಪುನೀತ್​ಗೆ ಪದ್ಮ ಪ್ರಶಸ್ತಿ ನೀಡಲು ಅಭಿಮಾನಿಗಳ ಒತ್ತಾಯ; ಅಗತ್ಯ ಕ್ರಮಕ್ಕೆ ಮುಂದಾದ ಸರ್ಕಾರ

Published On - 1:10 pm, Sat, 6 November 21

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!