AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ಅವರ ಈ ಅಪರೂಪದ ವಿಡಿಯೋನ ಎಲ್ಲಾದರೂ ನೋಡಿದ್ರಾ?

ಸಾಧು ಕೋಕಿಲ ಹಾಗೂ ಪುನೀತ್ ಮಧ್ಯೆ ಒಳ್ಳೆಯ ಬಾಂಧವ್ಯ ಇತ್ತು. ಇಬ್ಬರೂ ಹಲವು ಕಡೆಗಳಲ್ಲಿ ಒಟ್ಟಾಗಿ ಸಾಗಿದ್ದು ಇದೆ. ಅದೇ ರೀತಿ ಕೊವಿಡ್ ಸಂದರ್ಭದಲ್ಲಿ ಪುನೀತ್ ಹಾಗೂ ಸಾಧು ಕೋಕಿಲ ಅವರು ಒಟ್ಟಾಗಿ ಕಾರಿನಲ್ಲಿ ಪ್ರಯಾಣ ಮಾಡಿದ್ದರು. ‘ಎಂಥ ಸೌಂದರ್ಯ ಕಂಡೆ..’ ಹಾಡನ್ನು ಪುನೀತ್ ಹಾಡಿದ್ದರು.

ಪುನೀತ್ ಅವರ ಈ ಅಪರೂಪದ ವಿಡಿಯೋನ ಎಲ್ಲಾದರೂ ನೋಡಿದ್ರಾ?
ಪುನೀತ್
ರಾಜೇಶ್ ದುಗ್ಗುಮನೆ
|

Updated on: Dec 04, 2024 | 7:35 AM

Share

ಪುನೀತ್ ರಾಜ್​ಕುಮಾರ್ ನಮ್ಮ ಜೊತೆ ಇಲ್ಲ ಎಂಬುದನ್ನು ಎಲ್ಲರೂ ಒಪ್ಪಲೇ ಬೇಕು. ಅವರ ಮನಸ್ಸು ತುಂಬಾನೇ ದೊಡ್ಡದಿತ್ತು. ಅವರು ಉದಾರತೆ ಮೆರೆಯುತ್ತಿದ್ದರು. ಅವರ ಅಪರೂಪದ ವಿಡಿಯೋಗಳು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಾ ಇರುತ್ತವೆ. ಅವರು ಇಲ್ಲದಿದ್ದರೂ ಫ್ಯಾನ್ಸ್ ಇದನ್ನು ನೆನಪಿಸಿಕೊಳ್ಳುತ್ತಾ ಇರುತ್ತಾರೆ. ಈಗ ಪುನೀತ್ ರಾಜ್​ಕುಮಾರ್ ಅವರಿಗೆ ಸಂಬಂಧಿಸಿದ ವಿಡಿಯೋ ಒಂದು ವೈರಲ್ ಆಗಿದೆ. ಆ ವಿಡಿಯೋದಲ್ಲಿ ಪುನೀತ್ ಅವರು ಹಾಡಿರೋದು ಇದೆ.

ಸಾಧು ಕೋಕಿಲ ಹಾಗೂ ಪುನೀತ್ ಮಧ್ಯೆ ಒಳ್ಳೆಯ ಬಾಂಧವ್ಯ ಇತ್ತು. ಇಬ್ಬರೂ ಹಲವು ಕಡೆಗಳಲ್ಲಿ ಒಟ್ಟಾಗಿ ಸಾಗಿದ್ದು ಇದೆ. ಅದೇ ರೀತಿ ಕೊವಿಡ್ ಸಂದರ್ಭದಲ್ಲಿ ಪುನೀತ್ ಹಾಗೂ ಸಾಧು ಕೋಕಿಲ ಅವರು ಒಟ್ಟಾಗಿ ಕಾರಿನಲ್ಲಿ ಪ್ರಯಾಣ ಮಾಡಿದ್ದರು. ‘ಎಂಥ ಸೌಂದರ್ಯ ಕಂಡೆ..’ ಹಾಡನ್ನು ಪುನೀತ್ ಹಾಡಿದ್ದರು. ಇದನ್ನು ಖುಷಿ ಖುಷಿಯಿಂದ ಪುನೀತ್ ಹಾಡಿದ್ದರು.

ಪುನೀತ್ ರಾಜ್​ಕುಮಾರ್ ಅವರು ಹೀರೋ ಆಗಿ ಮಾತ್ರವಲ್ಲದೆ ಗಾಯಕನಾಗಿಯೂ ಗುರುತಿಸಿಕೊಂಡವರು. ಅವರು ಹಲವು ಸೂಪರ್ ಹಿಟ್ ಗೀತೆಗಳನ್ನು ಹಾಡಿದ್ದಾರೆ. ಈ ಹಾಡುಗಳನ್ನು ಅವರು ಸಖತ್ ಇಷ್ಟಪಟ್ಟು ಹಾಡುತ್ತಿದ್ದರು. ಅದೇ ರೀತಿ ಪುನೀತ್ ಅವರು ಈ ರೀತಿ ಕಾರಿನಲ್ಲಿ ಡ್ರೈವ್ ಮಾಡಿಕೊಂಡು ಹೋಗುವಾಗಲೂ ಹಾಡನ್ನು ಹಾಡುತ್ತಿದ್ದರು.

ಪುನೀತ್ ಅವರಿಗೆ ರೋಡ್ ಟ್ರಿಪ್ ಎಂದರೆ ಸಖತ್ ಇಷ್ಟ. ಅವರು ಆಗಾಗ ರೋಡ್ ಟ್ರಿಪ್ ಮಾಡುತ್ತಾ ಇರುತ್ತಿದ್ದರು. ಬೇರೆ ಬೇರೆ ಕಡೆಯ ಆಹಾರ ಸವಿಯುವುದು ಕೂಡ ಅವರಿಗೆ ಸಾಕಷ್ಟು ಇಷ್ಟದ ಕೆಲಸಗಳಲ್ಲಿ ಒಂದಾಗಿತ್ತು. ಆದರೆ, ಈಗ ಅವರು ನಮ್ಮ ಜೊತೆ ಇಲ್ಲ.

View this post on Instagram

A post shared by Sagar Manasu (@sagar_manasu)

ಇದನ್ನೂ ಓದಿ: ‘ಪುನೀತ್​ಗೆ ಕನ್ನಡ ಬರಲ್ಲ ಅಂತ ಹೇಳಿದ್ದ’: ಗುರುಪ್ರಸಾದ್ ವರ್ತನೆಗೆ ಜಗ್ಗೇಶ್ ಅಸಮಾಧಾನ 

ಪುನೀತ್ ರಾಜ್​ಕುಮಾರ್ ನಿಧನ ಹೊಂದಿದ ಬಳಿಕ ಅನೇಕ ರಸ್ತೆಗಳಿಗೆ ಅವರ ಹೆಸರನ್ನು ಇಡಲಾಗಿದೆ. ಈ ಮೂಲಕ ಅವರಿಗೆ ಗೌರವ ಸಲ್ಲಿಸೋ ಕೆಲಸ ಆಗಿದೆ. ಪುನೀತ್ ಅವರು ಹೀರೋ ಆಗಿ ನಟಿಸಿದ ಕೊನೆಯ ಚಿತ್ರ ‘ಜೇಮ್ಸ್’. 2021ರ ಅಕ್ಟೋಬರ್ 28ರಂದು ಹೃದಯಾಘಾತದಿಂದ ಪುನೀತ್ ನಿಧನ ಹೊಂದಿದ್ದರು. ಅವರು ಇಲ್ಲ ಎಂಬ ನೋವು ಬಹುವಾಗಿ ಕಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ