AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಮೊದಲ ಸಿನಿಮಾಕ್ಕೆ ಸಹಾಯ ಮಾಡಿದ್ದ ಪುನೀತ್ ರಾಜ್​ಕುಮಾರ್

ದರ್ಶನ್ ಅಭಿಮಾನಿಗಳು ಸಾಮಾನ್ಯವಾಗಿ ಪುನೀತ್ ರಾಜ್​ಕುಮಾರ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮೂದಲಿಸುತ್ತಿರುತ್ತಾರೆ. ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಕಾರ್ಯದಲ್ಲಿ ನಿರತರಾಗಿರುತ್ತಾರೆ. ಆದರೆ ಪುನೀತ್​​, ದರ್ಶನ್​ರ ಮೊದಲ ಸಿನಿಮಾ ‘ಮೆಜೆಸ್ಟಿಕ್​’ಗೆ ಸಹಾಯ ಮಾಡಿದ್ದರು. ಈ ಬಗ್ಗೆ ಆ ಸಿನಿಮಾದ ನಿರ್ಮಾಪಕ ಹೇಳಿಕೊಂಡಿದ್ದಾರೆ.

ದರ್ಶನ್ ಮೊದಲ ಸಿನಿಮಾಕ್ಕೆ ಸಹಾಯ ಮಾಡಿದ್ದ ಪುನೀತ್ ರಾಜ್​ಕುಮಾರ್
ಮಂಜುನಾಥ ಸಿ.
|

Updated on:Oct 29, 2024 | 10:34 AM

Share

ಅಪ್ಪು ಅಗಲಿ ಇಂದಿಗೆ ಮೂರು ವರ್ಷ. ಈಗಲೂ ಸಹ ಅಭಿಮಾನಿಗಳ ಕಣ್ಣೀರು ಆರಿಲ್ಲ. ಸಾಮಾಜಿಕ ಜಾಲತಾಣ ತೆರೆದರೆ ಇಂದಿಗೂ ಅಪ್ಪು ಅವರ ವಿಡಿಯೋಗಳು ಹರಿದಾಡುತ್ತವೆ. ರಸ್ತೆಯ ಮೇಲೆ ಹೋಗುತ್ತಿದ್ದರೆ ಬದಿಯಲ್ಲಿ ನೂರಾರು ಪುನೀತ್​ರ ಚಿತ್ರಗಳು, ಬ್ಯಾನರ್​ಗಳು ಕಾಣುತ್ತವೆ. ಅಪ್ಪು ಅಗಲಿದ್ದರೂ ಸಹ ಅಭಿಮಾಣಿಗಳ ಎದೆಯಲ್ಲಿ ಇಂದಿಗೂ ಅಮರವಾಗಿದ್ದಾರೆ. ಆದರೆ ಕೆಲವರು ಅಪ್ಪು ಹೆಸರಿಗೆ ಮಸಿ ಬಳಿಯುವ ಪ್ರಯತ್ನವನ್ನು ಮಾಡುತ್ತಲೇ ಬಂದಿದ್ದಾರೆ. ಆದರೆ ಯಶಸ್ಸು ಲಭಿಸಿಲ್ಲ, ಮುಂದೆಯೂ ಲಭಿಸುವುದಿಲ್ಲ. ಅಪ್ಪು ವಿಷಯ ಬಂದಾಗ ದರ್ಶನ್ ಅಭಿಮಾನಿಗಳ ಮುಖ ಕೆಂಪಾಗುತ್ತದೆ. ದರ್ಶನ್ ಅಭಿಮಾನಿಗಳು ಪುನೀತ್ ಅವರನ್ನು ವಿರೋಧಿಸುವುದು, ಮೂದಲಿಸುವುದು ಸಾಮಾಜಿಕ ಜಾಲತಾಣದಲ್ಲಿ ಆಗಾಗ್ಗೆ ಕಾಣುತ್ತಿರುತ್ತದೆ.

ಆದರೆ ಅಪ್ಪುಗೆ ಯಾರ ಮೇಲೂ ಬೇಸರವಾಗಲಿ, ಸಿಟ್ಟಾಗಲಿ ಇರಲಿಲ್ಲ. ಯಾರನ್ನೂ ಪ್ರತಿಸ್ಪರ್ಧಿ ಎಂದು ನೋಡದೆ ಎಲ್ಲರನ್ನೂ ಗೆಳೆಯರ ರೀತಿಯಲ್ಲಿಯೇ ನೋಡುತ್ತಿದ್ದರು ಅಪ್ಪು. ಅಂದಹಾಗೆ ದರ್ಶನ್​ ಇಂದು ಸ್ಟಾರ್ ಆಗಿ ಮೆರೆಯಲು ಕಾರಣವಾದ ಅವರ ಮೊದಲ ಸಿನಿಮಾ ‘ಮೆಜೆಸ್ಟಿಕ್’ಗೆ ಸಹ ಪುನೀತ್ ರಾಜ್​ಕುಮಾರ್ ಸಹಾಯ ಮಾಡಿದ್ದರು. ಈ ಬಗ್ಗೆ ಸ್ವತಃ ‘ಮೆಜೆಸ್ಟಿಕ್’ ಸಿನಿಮಾದ ನಿರ್ಮಾಪಕ ಭಾಮಾ ಹರೀಶ್ ಮಾತನಾಡಿದ್ದಾರೆ.

ದರ್ಶನ್​ ಮೊದಲ ಬಾರಿಗೆ ನಾಯಕನಾಗಿ ನಟಿಸಿದ ‘ಮೆಜೆಸ್ಟಿಕ್’ ಸಿನಿಮಾ ನಿರ್ಮಾಣವಾಗಿದ್ದ ಭಾಮಾ ಹರೀಶ್ ಅವರ ಉಲ್ಲಾಸ್ ನಿರ್ಮಾಣ ಸಂಸ್ಥೆಯ ಮೂಲಕ. ಭಾಮಾ ಹರೀಶ್ ಅವರು ಆ ಸಿನಿಮಾದ ಮುಖ್ಯ ನಿರ್ಮಾಪಕರು. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಭಾಮಾ ಹರೀಶ್, ‘ಮೆಜೆಸ್ಟಿಕ್ ಸಿನಿಮಾದ ಚಿತ್ರೀಕರಣಕ್ಕೆ ಪೂರ್ಣಿಮಾ ಸಂಸ್ಥೆಯ ಯುನಿಟ್ ಅನ್ನು ಬಳಸಿಕೊಂಡಿದ್ದೆವು. ಅದು ದೊಡ್ಮನೆಯವರ ಯುನಿಟ್. ಅದನ್ನು ಪುನೀತ್ ಅವರೇ ನೋಡಿಕೊಳ್ಳುತ್ತಿದ್ದರು’ ಎಂದಿದ್ದಾರೆ ಭಾಮಾ ಹರೀಶ್.

ಇದನ್ನೂ ಓದಿ:ಪುನೀತ್ ರಾಜ್​ಕುಮಾರ್ ಹೆಸರಿನ ನಗು ಕಳೆದು ಮೂರು ವರ್ಷ; ಅಂದು ನಡೆದಿದ್ದೇನು?

‘ಪೂರ್ಣಿಮಾ ಯುನಿಟ್ ಬಳಸಿ ಚಿತ್ರೀಕರಣ ಮಾಡಿ ಚಿತ್ರೀಕರಣ ಎಲ್ಲ ಮುಗಿದ ಮೇಲೆ ಹಣ ಸೆಟಲ್​ಮೆಂಟ್ ಮಾಡಲು ನಾನು ಅವರ ಕಚೇರಿಗೆ ಹೋದೆ. ಆಗ ಅಲ್ಲಿ ಪುನೀತ್ ರಾಜ್​ಕುಮಾರ್ ಇದ್ದರು. ಆಗಿನ್ನೂ ಅವರು ಯುವಕರು. ಅವರಿಗೆ, ನಾವು ತೂಗುದೀಪ ಶ್ರೀನಿವಾಸ್ ಅವರ ಮಗನನ್ನು ನಾಯಕನನ್ನಾಗಿ ಹಾಕಿಕೊಂಡು ಸಿನಿಮಾ ಮಾಡಿದ್ದೀವಿ ಎಂದು ಹೇಳಿದೆ. ಅದಕ್ಕೆ ತೂಗುದೀಪ ಅಂಕಲ್ ನಮ್ಮವರು, ನಮ್ಮ ಮನೆ ಸದಸ್ಯರು ಎಂದು ಹೇಳಿ, ನಮ್ಮಿಂದ ಬಹಳ ಕಡಿಮೆ ಹಣ ಪಡೆದುಕೊಂಡರು. ಅಲ್ಲದೆ, ಸಿನಿಮಾಕ್ಕೆ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು’ ಎಂದು ಭಾಮಾ ಹರೀಶ್ ಹೇಳಿದ್ದಾರೆ.

ಅದೇ ಸಂದರ್ಶನದಲ್ಲಿ, ‘ಮೆಜೆಸ್ಟಿಕ್’ ಸಿನಿಮಾ ಮಾಡುವ ಮುಂಚೆ ಆ ಸಿನಿಮಾದ ನಾಯಕನಾಗಿ ನಾನು ಸುದೀಪ್ ಅವರನ್ನು ಹಾಕಿಕೊಂಡಿದ್ದೆ. ಸುದೀಪ್ ಅವರಿಗೆ ಅಡ್ವಾನ್ಸ್ ಸಹ ಕೊಟ್ಟಿದ್ದೆ. ಆದರೆ ಬೇರೆ ಸಿನಿಮಾ ಇದ್ದ ಕಾರಣ ಅವರು ನಟಿಸಲು ಆಗಲಿಲ್ಲ. ಆಗ ಅವರೇ ತೂಗುದೀಪ ಶ್ರೀನಿವಾಸ್ ಮಗ ಚೆನ್ನಾಗಿದ್ದಾನೆ. ಒಳ್ಳೆಯ ಹೈಟ್, ಪರ್ನಾಲಿಟಿ ಇದೆ ಅವರನ್ನು ಹಾಕಿಕೊಳ್ಳಿ ಎಂದು ನನಗೆ ಹೇಳಿದರು’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:32 am, Tue, 29 October 24

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು