AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಫರೆಂಟ್​ ಪಾತ್ರದಲ್ಲಿ ಪುನೀತ್​; ‘ಮಿಷನ್​ ಕೊಲಂಬಸ್​’ ಚಿತ್ರಕ್ಕಾಗಿ ಮಂಸೋರೆ ಕಂಡಿದ್ದ ಕನಸು ಭಗ್ನ

Puneeth Rajkumar: ಒಂದು ವೇಳೆ ಈ ಸಿನಿಮಾ ಸೆಟ್ಟೇರಿದ್ದರೆ ಕನ್ನಡ ಚಿತ್ರರಂಗ ಮಾತ್ರವಲ್ಲದೇ ಇಡೀ ದೇಶವೇ ತಿರುಗಿ ನೋಡುವಂತಹ ಸಿನಿಮಾ ಆಗುತ್ತಿತ್ತು ಎಂಬುದರಲ್ಲಿ ಅನುಮಾನವೇ ಬೇಡ. ಆದರೆ ಅಂಥ ಕನಸು ಕೈಗೂಡುವ ಮುನ್ನವೇ ಸಾವಿನ ಊರಿಗೆ ಪುನೀತ್​ ರಾಜ್​ಕುಮಾರ್​ ಪ್ರಯಾಣ ಬೆಳೆಸಿರುವುದು ದುರಂತ.

ಡಿಫರೆಂಟ್​ ಪಾತ್ರದಲ್ಲಿ ಪುನೀತ್​; ‘ಮಿಷನ್​ ಕೊಲಂಬಸ್​’ ಚಿತ್ರಕ್ಕಾಗಿ ಮಂಸೋರೆ ಕಂಡಿದ್ದ ಕನಸು ಭಗ್ನ
‘ಮಿಷನ್ ಕೊಲಂಬಸ್’ ಸಿನಿಮಾ ಪೋಸ್ಟರ್​ನಲ್ಲಿ ಪುನೀತ್​
TV9 Web
| Updated By: ಮದನ್​ ಕುಮಾರ್​|

Updated on: Oct 31, 2021 | 2:40 PM

Share

ಪುನೀತ್​ ರಾಜ್​ಕುಮಾರ್​ ಅವರು ನಿರ್ದೇಶಕರ ನಟ ಆಗಿದ್ದರು. ಅವರ ಜೊತೆ ಕೆಲಸ ಮಾಡಬೇಕು ಎಂಬುದು ಅನೇಕ ನಿರ್ದೇಶಕರ ಕನಸಾಗಿತ್ತು. ಅಪ್ಪು ಅವರಿಗೋಸ್ಕರವೇ ಹಲವಾರು ಪ್ರತಿಭಾವಂತ ಡೈರೆಕ್ಟರ್​ಗಳು ಕಥೆ ಸಿದ್ಧಪಡಿಸಿಕೊಂಡಿದ್ದರು. ಜೀವನದಲ್ಲಿ ಒಮ್ಮೆಯಾದರೂ ಪುನೀತ್​ ಜೊತೆ ಕೆಲಸ ಮಾಡಬೇಕು ಎಂದುಕೊಂಡಿದ್ದ ಎಲ್ಲರ ಕನಸು ಈಗ ಭಗ್ನವಾಗಿದೆ. ಕನ್ನಡದ ಖ್ಯಾತ ನಿರ್ದೇಶಕ ಮಂಸೋರೆ ಕೂಡ ‘ಪವರ್​ ಸ್ಟಾರ್​’ ಜೊತೆ ಕೆಲಸ ಮಾಡಲು ಬಯಸಿದ್ದರು. ಅಷ್ಟೇ ಅಲ್ಲ, ಅದಕ್ಕಾಗಿ ಅವರು ಸೂಕ್ತ ತಯಾರಿಯನ್ನೂ ಮಾಡಿಕೊಳ್ಳುತ್ತಿದ್ದರು. ಆದರೆ ಆ ಕನಸು ನನಸಾಗುವ ಮುನ್ನವೇ ಅಪ್ಪು ಇಹಲೋಕ ತ್ಯಜಿಸಿರುವುದು ವಿಪರ್ಯಾಸ.

‘ಹರಿವು’, ‘ನಾತಿಚರಾಮಿ’, ‘ಆ್ಯಕ್ಟ್​ 1978’ ಸಿನಿಮಾಗಳ ಮೂಲಕ ಗುರುತಿಸಿಕೊಂಡವರು ನಿರ್ದೇಶಕ ಮಂಸೋರೆ. ಸಂವೇದನಾಶೀಲ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಕನ್ನಡ ಚಿತ್ರರಂಗಕ್ಕೆ ಅವರು ಒಳ್ಳೆಯ ಸಿನಿಮಾಗಳನ್ನು ನೀಡಿದ್ದಾರೆ. ಪುನೀತ್​ ರಾಜ್​ಕುಮಾರ್ ಜೊತೆ ಸಿನಿಮಾ ಮಾಡಬೇಕು ಎಂದು ಅವರು ಹಲವು ವರ್ಷಗಳಿಂದ ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಆ ವಿಚಾರವನ್ನು ಈಗ ಅವರು ಭಾರದ ಮನಸ್ಸಿನಿಂದ ಹಂಚಿಕೊಂಡಿದ್ದಾರೆ.

ಪುನೀತ್​ಗೆ ನಿರ್ದೇಶನ ಮಾಡಬೇಕು ಎಂದುಕೊಂಡಿದ್ದ ಸಿನಿಮಾಗೆ ಮಂಸೋರೆ ‘ಮಿಷನ್​ ಕೊಲಂಬಸ್​’ ಎಂದು ಶೀರ್ಷಿಕೆ ಇಟ್ಟಿದ್ದರು. ತಮ್ಮ ಸ್ನೇಹಿತರಾದ ಟಿಕೆ ದಯಾನಂದ್​ ಮತ್ತು ವೀರೇಂದ್ರ ಮಲ್ಲಣ್ಣ ಜೊತೆಗೂಡಿ ಅದರ ಕಾನ್ಸೆಪ್ಟ್​ ಮತ್ತು ಸ್ಕ್ರಿಪ್ಟ್​ ಬಗ್ಗೆ ಚರ್ಚೆ ನಡೆಸುತ್ತಿದ್ದರು. ಅಷ್ಟೇ ಅಲ್ಲದೇ, ಪುನೀತ್​ ಅವರ ಲುಕ್​ ಹೇಗಿರಬೇಕು ಎಂಬುದನ್ನೂ ಅವರು ಕಲ್ಪಿಸಿಕೊಂಡಿದ್ದರು. ಅದಕ್ಕೆ ತಕ್ಕಂತೆ ಕಲಾವಿದ ಸರವಣ ಕುಮಾರ್ ಅವರಿಂದ ವಿಶೇಷವಾದ ಪೋಸ್ಟರ್​ ಕೂಡ ಸಿದ್ಧಪಡಿಸಲಾಗಿತ್ತು. ಆ ಪೋಸ್ಟರ್​ ಅನ್ನು ಈಗ ಮಂಸೋರೆ ಹಂಚಿಕೊಂಡಿದ್ದಾರೆ.

ಮಾಸಿದ ಗಡ್ಡ ಮತ್ತು ಕೂದಲಿನ ಗೆಟಪ್​ನೊಂದಿಗೆ, ಕೊಲಂಬಸ್​​ ಪಾತ್ರದಲ್ಲಿ ಪುನೀತ್​ ಅವರನ್ನು ಕಲ್ಪಿಸಿಕೊಳ್ಳಲಾಗಿತ್ತು. ಪೋಸ್ಟರ್​ ಹಿನ್ನೆಲೆಯಲ್ಲಿ ಹಡಗು ಗಮನ ಸೆಳೆಯುತ್ತಿದೆ. ಒಂದು ವೇಳೆ ಈ ಸಿನಿಮಾ ಸೆಟ್ಟೇರಿದ್ದರೆ ಕನ್ನಡ ಚಿತ್ರರಂಗ ಮಾತ್ರವಲ್ಲದೇ ಇಡೀ ದೇಶವೇ ತಿರುಗಿ ನೋಡುವಂತಹ ಸಿನಿಮಾ ಆಗುತ್ತಿತ್ತು ಎಂಬುದರಲ್ಲಿ ಅನುಮಾನವೇ ಬೇಡ. ಆದರೆ ಅಂಥ ಕನಸು ಕೈಗೂಡುವ ಮುನ್ನವೇ ಸಾವಿನ ಊರಿಗೆ ಪುನೀತ್​ ಪ್ರಯಾಣ ಬೆಳೆಸಿರುವುದು ದುರಂತ.

ಕೊನೆಯುಸಿರು ಎಳೆಯುವುದಕ್ಕೂ ಮುನ್ನ ಪುನೀತ್​ ಅವರು ಹಲವು ಪ್ರಾಜೆಕ್ಟ್​ಗಳಲ್ಲಿ ತೊಡಗಿಕೊಂಡಿದ್ದರು. ಆ ಪೈಕಿ ‘ಜೇಮ್ಸ್​’ ಮತ್ತು ‘ದ್ವಿತ್ವ’ ಚಿತ್ರಗಳ ಮೇಲೆ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದರು. ‘ಜೇಮ್ಸ್​’ ಚಿತ್ರಕ್ಕೆ ಬಹುತೇಕ ಶೂಟಿಂಗ್​ ಮುಗಿದಿದ್ದು, ಡಬ್ಬಿಂಗ್​ ಮತ್ತು ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿ ಉಳಿದುಕೊಂಡಿತ್ತು. ಆದರೂ ಆ ಸಿನಿಮಾವನ್ನು ಬಿಡುಗಡೆ ಮಾಡುವುದಾಗಿ ನಿರ್ದೇಶಕ ಚೇತನ್​ ಕುಮಾರ್​ ಭರಸವೆ ನೀಡಿದ್ದಾರೆ.

ಇದನ್ನೂ ಓದಿ:

Puneeth Rajkumar Funeral: ಅಪ್ಪನ ಸಮಾಧಿಗೆ ಪುನೀತ್ ಪುತ್ರಿಯರಿಂದ ಪೂಜೆ; ಕಂಠೀರವ ಸ್ಟುಡಿಯೋದಲ್ಲಿ ಕಣ್ಣೀರ ವಿದಾಯ

Puneeth Rajkumar Last Rites: ಪುನೀತ್ ಅಂತ್ಯಕ್ರಿಯೆ ವೇಳೆ ಶಿವಣ್ಣ ಆಕ್ರಂದನ; ಅಭಿಮಾನಿಗಳ ಕರುಳು ಹಿಂಡುವಂತಿತ್ತು ಆ ನೋವಿನ ಕ್ಷಣ

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ