AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಷ್ಮಿ ಪಾತ್ರಕ್ಕೆ ರಮ್ಯಾ, ಅಣ್ಣಾವ್ರ ಪಾತ್ರಕ್ಕೆ ಪುನೀತ್​; ನಿಜವಾಗಲಿಲ್ಲ ‘ನಾ ನಿನ್ನ ಮರೆಯಲಾರೆ’ ಕನಸು

Puneeth Rajkumar | Naa Ninna Mareyalare: ‘ನಾ ನಿನ್ನ ಮರೆಯಲಾರೆ’ ಚಿತ್ರವನ್ನು ರೀ-ಕ್ರಿಯೇಟ್​ ಮಾಡುವ ಬಗ್ಗೆ ಪುನೀತ್​ ರಾಜ್​ಕುಮಾರ್​ ಕನಸು ಕಂಡಿದ್ದರು. ಈ ಕುರಿತು ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ.

ಲಕ್ಷ್ಮಿ ಪಾತ್ರಕ್ಕೆ ರಮ್ಯಾ, ಅಣ್ಣಾವ್ರ ಪಾತ್ರಕ್ಕೆ ಪುನೀತ್​; ನಿಜವಾಗಲಿಲ್ಲ ‘ನಾ ನಿನ್ನ ಮರೆಯಲಾರೆ’ ಕನಸು
ರಮ್ಯಾ, ಪುನೀತ್​ ರಾಜ್​ಕುಮಾರ್​
TV9 Web
| Edited By: |

Updated on:Sep 09, 2022 | 8:15 AM

Share

ಕನ್ನಡದ ಸಿನಿಮಾ ಪ್ರೇಕ್ಷಕರು ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಮಿಸ್​ ಮಾಡಿಕೊಳ್ಳದ ದಿನವೇ ಇಲ್ಲ. ಪ್ರತಿ ದಿನ ಒಂದಿಲ್ಲೊಂದು ರೂಪದಲ್ಲಿ ಅಪ್ಪು ಸ್ಮರಣೆ ಮಾಡಲಾಗುತ್ತದೆ. ಎಲ್ಲ ಸಿನಿಮಾ ಕಾರ್ಯಕ್ರಮಗಳಲ್ಲೂ ‘ಪವರ್​ ಸ್ಟಾರ್​’ ಹೆಸರು ಬಂದೇ ಬರುತ್ತದೆ. ಕಳೆದ ವರ್ಷ ಹೃದಯಾಘಾತದಿಂದ ಪುನೀತ್ ರಾಜ್​ಕುಮಾರ್​ ಅವರನ್ನು ಕಳೆದುಕೊಂಡಿದ್ದು ತೀವ್ರ ನೋವಿನ ಸಂಗತಿ. ನಿಧನಕ್ಕೂ ಮುನ್ನ ಅಪ್ಪು ಅನೇಕ ಕನಸುಗಳನ್ನು ಕಂಡಿದ್ದರು. ಅವುಗಳ ಬಗ್ಗೆ ಈಗ ಒಂದೊಂದಾಗಿಯೇ ತಿಳಿಯುತ್ತಿದೆ. ಅಚ್ಚರಿ ಎಂದರೆ, ನಟಿ ರಮ್ಯಾ (Ramya Divya Spandana) ಜೊತೆ ‘ನಾ ನಿನ್ನ ಮರೆಯಲಾರೆ’ (Naa Ninna Mareyalare) ಸಿನಿಮಾವನ್ನು ರೀ-ಕ್ರಿಯೇಟ್​ ಮಾಡುವ ಆಸೆ ಅವರಿಗೆ ಇತ್ತು. ಆ ಕುರಿತು ಈಗ ವಿಷಯ ಹೊರಬಿದ್ದಿದೆ. ಆದರೆ ಕಾಲ ಮಿಂಚಿ ಹೋಗಿದೆ.

ಡಾ. ರಾಜ್​ಕುಮಾರ್​ ಅಭಿನಯದ ‘ನಾ ನಿನ್ನ ಮರೆಯಲಾರೆ’ ಸಿನಿಮಾ 1976ರಲ್ಲಿ ಬಿಡುಗಡೆ ಆಯಿತು. ನಾಯಕಿಯಾಗಿ ಲಕ್ಷ್ಮಿ ನಟಿಸಿದ್ದರು. ಪ್ರೇಕ್ಷಕರ ಫೇವರಿಟ್​ ಸಿನಿಮಾಗಳ ಪಟ್ಟಿಯಲ್ಲಿ ಈ ಚಿತ್ರಕ್ಕೆ ಇಂದಿಗೂ ಸ್ಥಾನವಿದೆ. ಈ ಸಿನಿಮಾವನ್ನು ಈಗಿನ ಕಾಲಕ್ಕೆ ತಕ್ಕಂತೆ ರೀಕ್ರಿಯೇಟ್​ ಮಾಡಬೇಕು ಎಂಬುದು ಪುನೀತ್​ ರಾಜ್​ಕುಮಾರ್​ ಅವರ ಆಸೆ ಆಗಿತ್ತು. ಲಕ್ಷ್ಮಿ ಮಾಡಿದ್ದ ಪಾತ್ರಕ್ಕೆ ರಮ್ಯಾ, ಅಣ್ಣಾವ್ರ ಪಾತ್ರಕ್ಕೆ ಪುನೀತ್​ ಬಣ್ಣ ಹಚ್ಚಬೇಕಿತ್ತು. ಆದರೆ ಆ ಕನಸು ಕನಸಾಗಿಯೇ ಉಳಿಯುವಂತಾಗಿದ್ದು ಬೇಸರದ ಸಂಗತಿ.

ಇದನ್ನೂ ಓದಿ
Image
‘ಲಕ್ಕಿ ಮ್ಯಾನ್​​ ಸಿನಿಮಾವನ್ನು ಎಲ್ಲರೂ ತಬ್ಬಿಕೊಳ್ಳಿ,​ ಮತ್ತೆ ಬೇಕು ಅಂದ್ರೂ ಇದು ಸಿಗಲ್ಲ’; ಕಿಚ್ಚ ಸುದೀಪ್​
Image
‘ದೇವರ ಪಾತ್ರದಲ್ಲಿ ದೇವ್ರನ್ನೇ ನೋಡಲು ಕಾಯ್ತಿದೀನಿ’: ಪುನೀತ್​ ಬಗ್ಗೆ ಯುವ ರಾಜ್​ಕುಮಾರ್​ ಭಾವುಕ ನುಡಿ
Image
ಪುನೀತ್ ನಟನೆಯ ‘ಲಕ್ಕಿ ಮ್ಯಾನ್​’ ಚಿತ್ರದ ಆಡಿಯೋ ರಿಲೀಸ್ ಲೈವ್ ನೋಡಿ
Image
Puneeth Rajkumar: ‘ಲಕ್ಕಿ ಮ್ಯಾನ್​’ ಚಿತ್ರದಲ್ಲಿನ ಪುನೀತ್​ ಪೋಟೋಗಳು; ‘ನಮ್ಮ ಬಾಸ್​ ಸೂಪರ್​’ ಎಂದ ಫ್ಯಾನ್ಸ್​

ಪುನೀತ್​ ರಾಜ್​ಕುಮಾರ್​ ಅವರು ‘ಲಕ್ಕಿ ಮ್ಯಾನ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಡಾರ್ಲಿಂಗ್​ ಕೃಷ್ಣ ಹೀರೋ. ಚಿತ್ರದ ಬಿಡುಗಡೆ ಹೊಸ್ತಿಲಿನಲ್ಲಿ ‘ಸಿನಿಮಾ ಎಕ್ಸ್​ಪ್ರೆಸ್​’ಗೆ ನೀಡಿದ ಸಂದರ್ಶನದಲ್ಲಿ ಅವರು ‘ನಾ ನಿನ್ನ ಮರೆಯಲಾರೆ’ ರೀ-ಕ್ರಿಯೇಟ್​ ವಿಚಾರದ ಬಗ್ಗೆ ಹೇಳಿದ್ದಾರೆ. ಅಪ್ಪು ಅವರು ಈ ರೀತಿ ಕನಸು ಕಂಡಿದ್ದರು ಎಂಬುದನ್ನು ಕೃಷ್ಣ ತಿಳಿಸಿದ್ದಾರೆ.

ಈ ವಿಚಾರದ ಕುರಿತು ರಮ್ಯಾ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ‘ಇದು ನಿಜ. ಅಪ್ಪು ಮತ್ತು ನಾನು ಈ ವಿಷಯದ ಬಗ್ಗೆ ಮಾತನಾಡಿದ್ದೆವು. ಅವರನ್ನು ನಾವು ತುಂಬ ಮಿಸ್​ ಮಾಡಿಕೊಳ್ಳುತ್ತೇವೆ’ ಎಂದು ರಮ್ಯಾ ಟ್ವೀಟ್​ ಮಾಡಿದ್ದಾರೆ. ಅಲ್ಲದೇ, ‘ಲಕ್ಕಿ ಮ್ಯಾನ್​’ ಚಿತ್ರತಂಡಕ್ಕೆ ಹಾಗೂ ಡಾರ್ಲಿಂಗ್​ ಕೃಷ್ಣ ಅವರಿಗೆ ರಮ್ಯಾ ಶುಭ ಹಾರೈಸಿದ್ದಾರೆ. ‘ಅಭಿ’, ‘ಅರಸು’, ‘ಆಕಾಶ್​’ ಸಿನಿಮಾದಲ್ಲಿ ರಮ್ಯಾ ಮತ್ತು ಪುನೀತ್​ ಜೊತೆಯಾಗಿ ನಟಿಸಿದ್ದರು. ಇಬ್ಬರ ನಡುವೆ ಉತ್ತಮ ಸ್ನೇಹ ಮನೆ ಮಾಡಿತ್ತು. ರಮ್ಯಾ ಮತ್ತೆ ಚಿತ್ರರಂಗದಲ್ಲಿ ಸಕ್ರಿಯವಾಗಲಿ ಎಂದು ಪುನೀತ್​ ಬಯಸಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:14 am, Fri, 9 September 22

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ