ಲಕ್ಷ್ಮಿ ಪಾತ್ರಕ್ಕೆ ರಮ್ಯಾ, ಅಣ್ಣಾವ್ರ ಪಾತ್ರಕ್ಕೆ ಪುನೀತ್​; ನಿಜವಾಗಲಿಲ್ಲ ‘ನಾ ನಿನ್ನ ಮರೆಯಲಾರೆ’ ಕನಸು

Puneeth Rajkumar | Naa Ninna Mareyalare: ‘ನಾ ನಿನ್ನ ಮರೆಯಲಾರೆ’ ಚಿತ್ರವನ್ನು ರೀ-ಕ್ರಿಯೇಟ್​ ಮಾಡುವ ಬಗ್ಗೆ ಪುನೀತ್​ ರಾಜ್​ಕುಮಾರ್​ ಕನಸು ಕಂಡಿದ್ದರು. ಈ ಕುರಿತು ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ.

ಲಕ್ಷ್ಮಿ ಪಾತ್ರಕ್ಕೆ ರಮ್ಯಾ, ಅಣ್ಣಾವ್ರ ಪಾತ್ರಕ್ಕೆ ಪುನೀತ್​; ನಿಜವಾಗಲಿಲ್ಲ ‘ನಾ ನಿನ್ನ ಮರೆಯಲಾರೆ’ ಕನಸು
ರಮ್ಯಾ, ಪುನೀತ್​ ರಾಜ್​ಕುಮಾರ್​
Follow us
| Updated By: ಮದನ್​ ಕುಮಾರ್​

Updated on:Sep 09, 2022 | 8:15 AM

ಕನ್ನಡದ ಸಿನಿಮಾ ಪ್ರೇಕ್ಷಕರು ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಮಿಸ್​ ಮಾಡಿಕೊಳ್ಳದ ದಿನವೇ ಇಲ್ಲ. ಪ್ರತಿ ದಿನ ಒಂದಿಲ್ಲೊಂದು ರೂಪದಲ್ಲಿ ಅಪ್ಪು ಸ್ಮರಣೆ ಮಾಡಲಾಗುತ್ತದೆ. ಎಲ್ಲ ಸಿನಿಮಾ ಕಾರ್ಯಕ್ರಮಗಳಲ್ಲೂ ‘ಪವರ್​ ಸ್ಟಾರ್​’ ಹೆಸರು ಬಂದೇ ಬರುತ್ತದೆ. ಕಳೆದ ವರ್ಷ ಹೃದಯಾಘಾತದಿಂದ ಪುನೀತ್ ರಾಜ್​ಕುಮಾರ್​ ಅವರನ್ನು ಕಳೆದುಕೊಂಡಿದ್ದು ತೀವ್ರ ನೋವಿನ ಸಂಗತಿ. ನಿಧನಕ್ಕೂ ಮುನ್ನ ಅಪ್ಪು ಅನೇಕ ಕನಸುಗಳನ್ನು ಕಂಡಿದ್ದರು. ಅವುಗಳ ಬಗ್ಗೆ ಈಗ ಒಂದೊಂದಾಗಿಯೇ ತಿಳಿಯುತ್ತಿದೆ. ಅಚ್ಚರಿ ಎಂದರೆ, ನಟಿ ರಮ್ಯಾ (Ramya Divya Spandana) ಜೊತೆ ‘ನಾ ನಿನ್ನ ಮರೆಯಲಾರೆ’ (Naa Ninna Mareyalare) ಸಿನಿಮಾವನ್ನು ರೀ-ಕ್ರಿಯೇಟ್​ ಮಾಡುವ ಆಸೆ ಅವರಿಗೆ ಇತ್ತು. ಆ ಕುರಿತು ಈಗ ವಿಷಯ ಹೊರಬಿದ್ದಿದೆ. ಆದರೆ ಕಾಲ ಮಿಂಚಿ ಹೋಗಿದೆ.

ಡಾ. ರಾಜ್​ಕುಮಾರ್​ ಅಭಿನಯದ ‘ನಾ ನಿನ್ನ ಮರೆಯಲಾರೆ’ ಸಿನಿಮಾ 1976ರಲ್ಲಿ ಬಿಡುಗಡೆ ಆಯಿತು. ನಾಯಕಿಯಾಗಿ ಲಕ್ಷ್ಮಿ ನಟಿಸಿದ್ದರು. ಪ್ರೇಕ್ಷಕರ ಫೇವರಿಟ್​ ಸಿನಿಮಾಗಳ ಪಟ್ಟಿಯಲ್ಲಿ ಈ ಚಿತ್ರಕ್ಕೆ ಇಂದಿಗೂ ಸ್ಥಾನವಿದೆ. ಈ ಸಿನಿಮಾವನ್ನು ಈಗಿನ ಕಾಲಕ್ಕೆ ತಕ್ಕಂತೆ ರೀಕ್ರಿಯೇಟ್​ ಮಾಡಬೇಕು ಎಂಬುದು ಪುನೀತ್​ ರಾಜ್​ಕುಮಾರ್​ ಅವರ ಆಸೆ ಆಗಿತ್ತು. ಲಕ್ಷ್ಮಿ ಮಾಡಿದ್ದ ಪಾತ್ರಕ್ಕೆ ರಮ್ಯಾ, ಅಣ್ಣಾವ್ರ ಪಾತ್ರಕ್ಕೆ ಪುನೀತ್​ ಬಣ್ಣ ಹಚ್ಚಬೇಕಿತ್ತು. ಆದರೆ ಆ ಕನಸು ಕನಸಾಗಿಯೇ ಉಳಿಯುವಂತಾಗಿದ್ದು ಬೇಸರದ ಸಂಗತಿ.

ಇದನ್ನೂ ಓದಿ
Image
‘ಲಕ್ಕಿ ಮ್ಯಾನ್​​ ಸಿನಿಮಾವನ್ನು ಎಲ್ಲರೂ ತಬ್ಬಿಕೊಳ್ಳಿ,​ ಮತ್ತೆ ಬೇಕು ಅಂದ್ರೂ ಇದು ಸಿಗಲ್ಲ’; ಕಿಚ್ಚ ಸುದೀಪ್​
Image
‘ದೇವರ ಪಾತ್ರದಲ್ಲಿ ದೇವ್ರನ್ನೇ ನೋಡಲು ಕಾಯ್ತಿದೀನಿ’: ಪುನೀತ್​ ಬಗ್ಗೆ ಯುವ ರಾಜ್​ಕುಮಾರ್​ ಭಾವುಕ ನುಡಿ
Image
ಪುನೀತ್ ನಟನೆಯ ‘ಲಕ್ಕಿ ಮ್ಯಾನ್​’ ಚಿತ್ರದ ಆಡಿಯೋ ರಿಲೀಸ್ ಲೈವ್ ನೋಡಿ
Image
Puneeth Rajkumar: ‘ಲಕ್ಕಿ ಮ್ಯಾನ್​’ ಚಿತ್ರದಲ್ಲಿನ ಪುನೀತ್​ ಪೋಟೋಗಳು; ‘ನಮ್ಮ ಬಾಸ್​ ಸೂಪರ್​’ ಎಂದ ಫ್ಯಾನ್ಸ್​

ಪುನೀತ್​ ರಾಜ್​ಕುಮಾರ್​ ಅವರು ‘ಲಕ್ಕಿ ಮ್ಯಾನ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಡಾರ್ಲಿಂಗ್​ ಕೃಷ್ಣ ಹೀರೋ. ಚಿತ್ರದ ಬಿಡುಗಡೆ ಹೊಸ್ತಿಲಿನಲ್ಲಿ ‘ಸಿನಿಮಾ ಎಕ್ಸ್​ಪ್ರೆಸ್​’ಗೆ ನೀಡಿದ ಸಂದರ್ಶನದಲ್ಲಿ ಅವರು ‘ನಾ ನಿನ್ನ ಮರೆಯಲಾರೆ’ ರೀ-ಕ್ರಿಯೇಟ್​ ವಿಚಾರದ ಬಗ್ಗೆ ಹೇಳಿದ್ದಾರೆ. ಅಪ್ಪು ಅವರು ಈ ರೀತಿ ಕನಸು ಕಂಡಿದ್ದರು ಎಂಬುದನ್ನು ಕೃಷ್ಣ ತಿಳಿಸಿದ್ದಾರೆ.

ಈ ವಿಚಾರದ ಕುರಿತು ರಮ್ಯಾ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ‘ಇದು ನಿಜ. ಅಪ್ಪು ಮತ್ತು ನಾನು ಈ ವಿಷಯದ ಬಗ್ಗೆ ಮಾತನಾಡಿದ್ದೆವು. ಅವರನ್ನು ನಾವು ತುಂಬ ಮಿಸ್​ ಮಾಡಿಕೊಳ್ಳುತ್ತೇವೆ’ ಎಂದು ರಮ್ಯಾ ಟ್ವೀಟ್​ ಮಾಡಿದ್ದಾರೆ. ಅಲ್ಲದೇ, ‘ಲಕ್ಕಿ ಮ್ಯಾನ್​’ ಚಿತ್ರತಂಡಕ್ಕೆ ಹಾಗೂ ಡಾರ್ಲಿಂಗ್​ ಕೃಷ್ಣ ಅವರಿಗೆ ರಮ್ಯಾ ಶುಭ ಹಾರೈಸಿದ್ದಾರೆ. ‘ಅಭಿ’, ‘ಅರಸು’, ‘ಆಕಾಶ್​’ ಸಿನಿಮಾದಲ್ಲಿ ರಮ್ಯಾ ಮತ್ತು ಪುನೀತ್​ ಜೊತೆಯಾಗಿ ನಟಿಸಿದ್ದರು. ಇಬ್ಬರ ನಡುವೆ ಉತ್ತಮ ಸ್ನೇಹ ಮನೆ ಮಾಡಿತ್ತು. ರಮ್ಯಾ ಮತ್ತೆ ಚಿತ್ರರಂಗದಲ್ಲಿ ಸಕ್ರಿಯವಾಗಲಿ ಎಂದು ಪುನೀತ್​ ಬಯಸಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:14 am, Fri, 9 September 22

ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್